ಗದಗ : ಮೂರು ದಿನಗಳಿಂದ ಬಾವಿಯಲ್ಲಿ ಸಿಲುಕಿ ನರಳುತ್ತಿದ್ದ ಬೆಕ್ಕಿನ ಪ್ರಾಣ ರೈತರೊಬ್ಬರು ಉಳಿಸಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಾವಿಯ ಪೊದೆಯಲ್ಲಿ ಬೆಕ್ಕು ಸಿಲುಕಿಕೊಂಡಿತ್ತು. ಮೂರು ದಿನಗಳಿಂದ ಬಾವಿಯಲ್ಲಿ ಸಿಲುಕಿ ನರಳುತ್ತಿದ್ದ ಬೆಕ್ಕಿನ ಧ್ವನಿ ಕೇಳಿ ರೈತ ಮಹಾಂತೇಶ ಬೆಕ್ಕನ್ನು ಕಾಪಾಡಿ ಮಾನವೀಯತೆ ಮೆರೆದಿದ್ದಾರೆ. ಮೂರು ದಿನಗಳಿಂದ ಬಾವಿಯಲ್ಲಿ ಬಿದ್ದಿರುವ ಬೆಕ್ಕು ಸಾವು ಬದಕಿನ ಮಧ್ಯೆ ಹೊರಾಟ ನಡೆಸುತ್ತಿತ್ತು. ಬಾವಿಯ ಒಳಗಿರುವ ಪೊದೆಗೆ …
Read More »Monthly Archives: ನವೆಂಬರ್ 2020
ಕಾರುಚಾಲಕನಿಂತಿರುವ ಮಹಿಳೆಗೆ ಗುದ್ದಿಪ್ರಶ್ನೆ ಮಾಡಲು ಬಂದಿರುವ ವ್ಯಕ್ತಿ ಬಾನೆಟ್ ಮೇಲೆ ಏರಿದ್ರೂ ಕಾರ್ ನಿಲ್ಲಿಸಿದೇಹೋಗಿರುವ ಘಟನೆ
ಬೆಂಗಳೂರು: ಸ್ಥಳಾವಕಾಶ ಇಲ್ಲದ ಜಾಗದಲ್ಲಿ ಕಾರು ನುಸುಳಿಸಿದ ಚಾಲಕ ರಸ್ತೆಯಲ್ಲಿ ನಿಂತಿರುವ ಮಹಿಳೆಗೆ ಗುದ್ದಿದ್ದಾನೆ. ಪ್ರಶ್ನೆ ಮಾಡಲು ಬಂದಿರುವ ವ್ಯಕ್ತಿ ಬಾನೆಟ್ ಮೇಲೆ ಏರಿದ್ರೂ ಕಾರ್ ನಿಲ್ಲಿಸಿದೇ ಚಲಾಯಿಸಿಕೊಂಡು ಹೋಗಿರುವ ಘಟನೆ ಯಲಹಂಕದ ನಾಒನ್ವೇ ರಸ್ತೆಯಲ್ಲಿ ಕಾರು ಚಲಾಯಿಸಿಕೊಂಡು ಬಂದಿರುವ ಚಾಲಕ ಮಹಿಳೆ ಗುದ್ದಿ, ಬಾನೆಟ್ ಮೇಲೆ ಹತ್ತಿದ ವ್ಯಕ್ತಿಯನ್ನು ಎಳೆದೊಯ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕಾರು ಚಾಲಕನ ವಿರುದ್ಧ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ.ಗೇನಹಳ್ಳಿ …
Read More »ವಧು ಕಲ್ಯಾಣ ಮಂಟಪದಿಂದ ನೇರವಾಗಿ ಮಡಿಕೇರಿಯ ಜ್ಯೂನಿಯರ್ ಕಾಲೇಜಿಗೆ ಆಗಮಿಸಿ ಪರೀಕ್ಷೆಗೆ ಹಾಜರ
ಮಡಿಕೇರಿ: ಧಾರೆ ಮುಹೂರ್ತ ಮುಗಿಸಿದ ವಧು ಕಲ್ಯಾಣ ಮಂಟಪದಿಂದ ನೇರವಾಗಿ ಮಡಿಕೇರಿಮಡಿಕೇರಿಯ ಅಶೋಕಪುರ ನಿವಾಸಿ ಸ್ವಾತಿ ಜೀವನ ಪರೀಕ್ಷೆ ಮುಗಿಸಿಕೊಂಡು ಕಲ್ಯಾಣ ಮಂಟಪದಿಂದ ನೇರವಾಗಿ ನಗರದ ಜೂನಿಯರ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದಾರೆ. ವಿವಾಹ ದಿನಾಂಕಕ್ಕೂ ಮೊದಲು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡಿದ್ದ ಸ್ವಾತಿ ಅವರಿಗೆ ಸುಂಟಿಕೊಪ್ಪದ ಮದುರಮ್ಮ ಪಟ್ಟಣದ ಸುರೇಶ್ ಅವರೊಂದಿಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಮದುವೆ ನಿಶ್ಚಯವಾಗಿತ್ತು.ಯ ಜ್ಯೂನಿಯರ್ ಕಾಲೇಜಿಗೆ ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದಾರೆ.ವಿಪರ್ಯಾಸವೆಂದರೆ ಪರೀಕ್ಷಾ ದಿನದಂದೇ ಧಾರೆ …
Read More »ಬೆಂಗಳೂರು: ಮಗನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕುತ್ತಾ ಮಗನ ಎದುರೇ ತಾಯಿ ಸೆಲ್ಫಿ ವೀಡಿಯೋ ಮಾಡುತ್ತಾ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಮಗನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕುತ್ತಾ ಮಗನ ಎದುರೇ ತಾಯಿ ಸೆಲ್ಫಿ ವೀಡಿಯೋ ಮಾಡುತ್ತಾ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್ ಆರುಂಧತಿ ನಗರದ 11 ನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ನಡೆದಿದೆ. ಫಾತೀಮಾ (30) ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ತಾಯಿ ರಫೀಕಾ ಬೇಗಂ, ಅಣ್ಣ ಜಾಫರ್, ಅತ್ತಿಗೆ ಸಮೀನಾ, ಅಕ್ಕ ಆಯೇಷಾ ಬಾನು, ಆಕೆ ಪುತ್ರ ಸೈಯದ್ ಕಲೀಲ್ ವಿರುದ್ಧ ಹಣ ದುರ್ಬಳಕೆ ಆರೋಪ ಕೇಳಿ ಬಂದಿದೆ. …
Read More »ನಿಖಿಲ್ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆಎಲ್ಲರೂ ಸೇರಿ ನಮ್ಮನ್ನು ಸೋಲಿಸಬೇಕೆಂದು ನಿರ್ಧರಿಸಿಯೇ ಸೋಲಿಸಿದರು.: H.D.K.
ಮಂಡ್ಯ: ಜಿಲ್ಲೆ ಮದ್ದೂರು ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಗನ ಸೋಲನ್ನು ನೆನೆದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಭಾವುಕರಾದ್ದಾರೆ. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ಬೇಸರವಿಲ್ಲ. ರಾಜಕಾರಣಕ್ಕೆ ಬಂದಾಗಿನಿಂದ ಮಂಡ್ಯ ಜನರ ಜೊತೆ ನನ್ನ ಒಡನಾಟವಿದೆ. ಜಿಲ್ಲೆಯ ಜನರು ತುಂಬಾ ಮುಗ್ದರು. ಆದರೆ ಎಲ್ಲರೂ ಸೇರಿಕೊಂಡು ಮುಗಿಸಿ ಬಿಟ್ಟರು ಭಾವಕರಾದರು. ನಿಖಿಲ್ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆ. ಆದರೆ, ಎಲ್ಲರೂ ಸೇರಿ ನಿಖಿಲ್’ನನ್ನು ಚುನಾವಣೆಯಲ್ಲಿ ನಿಲ್ಲಿಸಿದರು. ಎಲ್ಲರೂ …
Read More »ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ.:H.D.K.
ಬೆಂಗಳೂರು: ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ. ಬಿಜೆಪಿ ಚುನಾವಣೆಯ ವಿಧಾನವೇ ಬೇರೆ ಇದೆ. ಅಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದು ಕಷ್ಟ ಎನ್ನುವ ಮೂಲಕ ಯುದ್ಧಕ್ಕೂ ಮೊದಲು ಶಸ್ತ್ರ ತ್ಯಾಗ ಮಾಡಿದಂತಾಗಿದೆ. ನಗರದಲ್ಲಿ ಮಾಧ್ಯಮದವರ ಪ್ರಶ್ನೆ ಪ್ರತಿಕ್ರಿಯಿಸಿ, ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ. ನಿಲ್ಲಿಸಿದರು ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಮುಂದೆ ಗೆಲ್ಲುವುದು ಕಷ್ಠ. ಆದ ಕಾರಣ ಅಭ್ಯರ್ಥಿಗಳನ್ನು ನಿಲ್ಲಿಸುವ ಯೋಚನೆ ಮಾಡಿಲ್ಲ ಎಂದಿದ್ದಾರೆ. ನಮ್ಮ ಅಭಿಪ್ರಾಯದೊಂದಿಗೆ ಪಕ್ಷದ …
Read More »ಶೀಘ್ರದಲ್ಲೇ ಮೀನು ಕ್ವಾರಂಟೈನ್ ಘಟಕ: ಸಿಎಂ ಬಿಎಸ್ವೈ
ಬೆಂಗಳೂರು,ನ.21- ಮೀನುಗಾರಿಕೆ ಕ್ಷೇತ್ರದಲ್ಲಿ ವ್ಯಾವಹಾರಿಕ ಶಿಸ್ತು ಹಾಗೂ ರಫ್ತು ವಹಿವಾಟು ಉತ್ತೇಜಿಸುವ ಉದ್ದೇಶದಿಂದ ಶೀಘ್ರದಲ್ಲಿಯೇ ಬೆಂಗಳೂರು ಸಮೀಪದ ಹೆಸರುಘಟ್ಟ ಮೀನುಮರಿ ಉತ್ಪಾದನಾ ಕೇಂದ್ರದಲ್ಲಿ ಒಂದು ಮಾದರಿ, ಸುಸಜ್ಜಿತ ಕ್ವಾರಂಟೇನ್ ಘಟಕವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಉದ್ಘಾಟಿಸಿಮಾತನಾಡಿದ ಅವರು, ರಾಜ್ಯದಲ್ಲಿ ಅಲಂಕಾರಿಕ ಮೀನು ಉತ್ಪಾದನೆ ಹಾಗೂ ಮಾರಾಟ ಚಟುವಟಿಕೆಯು ಇತ್ತೀಚೆಗೆ ಪ್ರವರ್ಧಮಾನಕ್ಕೆ ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. …
Read More »ಮಹಿಳಾ ಕಂಡಕ್ಟರ್ಗಳಿಗೆ ಸ್ವರಕ್ಷಣಾ ತರಬೇತಿ ನೀಡಲು ಬಿಎಂಟಿಸಿ ಮುಂದಾಗಿದೆ.
ಬೆಂಗಳೂರು: ಮಹಿಳಾ ಕಂಡಕ್ಟರ್ಗಳಿಗೆ ಸ್ವರಕ್ಷಣಾ ತರಬೇತಿ ನೀಡಲು ಬಿಎಂಟಿಸಿ ಮುಂದಾಗಿದೆ. ಇನ್ನು ಮುಂದೆ ಮಾರ್ಷಲ್ ಆಟ್ರ್ಸ್, ಕರಾಟೆಯನ್ನು ಲೇಡಿ ಕಂಡಕ್ಟರ್ಗಳು ಕಲಿಯಲಿದ್ದಾರೆ. ಬಿಎಂಟಿಸಿ ಲೇಡಿ ಕಂಡಕ್ಟರ್ ತಂಟೆಗೆ ಬರೋ ಮುನ್ನ ಹುಷಾರ್ ಆಗಿರಬೇಕು. ಬಸ್ಗಳಲ್ಲಿ ಬೇಕಾ ಬಿಟ್ಟಿಯಾಗಿ ವರ್ತಿಸುವ ಮುನ್ನ ಎಚ್ಚರಿಕೆ ವಹಿಸುವುದು ಒಳ್ಳೆಯದು. ಯಾಕೆಂದರೆ ಮಾರ್ಷಲ್ ಆಟ್ರ್ಸ್, ಕರಾಟೆ, ಸಮರ ಕಲೆಗಳಲ್ಲಿ ಬಿಎಂಟಿಸಿಯ ಲೇಡಿ ಕಂಡಕ್ಟರ್ ಎಕ್ಸ್ ಪರ್ಟ್ಸ್ ಆಗಲಿದ್ದಾರೆ. ಮಹಿಳಾ ಕಂಡಕ್ಟರ್ ಗಳಿಗೆ ಸ್ವರಕ್ಷಣೆ ತರಬೇತಿ ನೀಡಲು …
Read More »ಈ ಬಾರಿ ಆನ್ಲೈನ್ನಲ್ಲಿ ಚಿತ್ರಸಂತೆ
ಬೆಂಗಳೂರು, ನ.21- ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅನೇಕ ನಿರ್ಬಂಧ ಗಳಿರುವುದರಿಂದ 18ನೇ ಚಿತ್ರಸಂತೆಯನ್ನು ಆನ್ಲೈನ್ ಮೂಲಕ ನಡೆಸಲಾಗುವುದು ಎಂದು ಕರ್ನಾಟಕ ಚಿತ್ರಕಲಾ ಪರಿಷತ್ನ ಅಧ್ಯಕ್ಷ ಬಿ.ಎಲ್.ಶಂಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 3ರಂದು ಆನ್ಲೈನ್ ಮೂಲಕ ಚಿತ್ರಸಂತೆ ಉದ್ಘಾಟಿಸಲಾಗುವುದು. ಚಿತ್ರಕಲಾ ಪರಿಷತ್ ಸ್ಥಾಪನೆಯಾಗಿ 60 ವರ್ಷವಾಗಿರುವ ಹಿನ್ನೆಲೆಯಲ್ಲಿ ವಜ್ರಮಹೋತ್ಸವದ ವರ್ಷಾಚರಣೆಯ ಅಂಗವಾಗಿ ಕಲೆಗೆ ಸಂಬಂಸಿದಂತೆ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುವುದು ಎಂದರು. 18ನೇ ಚಿತ್ರಸಂತೆಯನ್ನು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, …
Read More »ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಧಾರವಾಡ ಉಪನಗರ ಠಾಣೆಗೆ ಬೆಳಗ್ಗೆ 11 ಗಂಟೆಗೆ ಆಗಮಿಸಿದ್ದ ವಿಜಯ್ ಕುಲಕರ್ಣಿ, ಸಂಜೆ 7 ಗಂಟೆಗೆ ವಿಚಾರಣೆ ಎದುರಿಸಿ ಠಾಣೆಯಿಂದ ಹೊರ ಬಂದರು. ಈ ವೇಳೆ ಮಾಧ್ಯಮದವರು ಪ್ರಶ್ನೆ ಕೇಳಲು ಮುಂದಾದಾಗ ಕೊಲೆ ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ಹೇಳಿ …
Read More »