Breaking News

Monthly Archives: ನವೆಂಬರ್ 2020

ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಕೆಎಲ್‌ ರಾಹುಲ್‌ ಅವರಿಗೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್‌ ಫಿಂಚ್‌ ಅವರು ಕೈಯಿಂದ ಪಂಚ್‌ ಮಾಡಿದ್ದಾರೆ.

ಸಿಡ್ನಿ: ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಕೆಎಲ್‌ ರಾಹುಲ್‌ ಅವರಿಗೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್‌ ಫಿಂಚ್‌ ಅವರು ಕೈಯಿಂದ ಪಂಚ್‌ ಮಾಡಿದ್ದಾರೆ. ಎರಡನೇ ಪಂದ್ಯದಲ್ಲಿ ನವದೀಪ್‌ ಸೈನಿ 12ನೇ ಓವರ್‌ ಬೌಲ್‌ ಮಾಡುತ್ತಿದ್ದರು. ಗಂಟೆಗೆ 146 ಕಿ.ಮೀ ವೇಗದಲ್ಲಿ ಎಸೆದ 5ನೇ ಎಸೆತವನ್ನು ಹೊಡೆಯಲು ಫಿಂಚ್‌ ಪ್ರಯತ್ನ ಪಟ್ಟಿದ್ದರು. ಆದರೆ ಬಾಲ್‌ ಬ್ಯಾಟ್‌ಗೆ ಸಿಗದೇ ಹೊಟ್ಟೆಗೆ ಬಡಿಯಿತು. ಫುಲ್‌ ಟಾಸ್‌ ಆಗಿದ್ದ ಕಾರಣ ಅಂಪೈರ್‌ ನೋಬಾಲ್‌ ನೀಡಿದರು. ಬಳಿಕ …

Read More »

ಮರಾಠ ಸಮುದಾಯಕ್ಕೆ ‘ 2ಎ ‘ ಮೀಸಲಾತಿ ನೀಡಬೇಕು. ಇಲ್ಲದಿದ್ರೆ ಬೆಳಗಾವಿ ಉಪಚುನಾವಣೆ ಅಷ್ಟೇ ಅಲ್ಲ ಮುಂದಿನ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ: ಅಂಜಲಿ ನಿಂಬಾಳ್ಕರ್

ಧಾರವಾಡ : ಮರಾಠ ಸಮುದಾಯಕ್ಕೆ ‘ 2ಎ ‘ ಮೀಸಲಾತಿ ನೀಡಬೇಕು. ಇಲ್ಲದಿದ್ರೆ ಬೆಳಗಾವಿ ಉಪಚುನಾವಣೆ ಅಷ್ಟೇ ಅಲ್ಲ ಮುಂದಿನ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಎಚ್ಚರಿಸಿದ್ದಾರೆ. ಧಾರವಾಡದ ಮರಾಠ ಕ್ರಾಂತಿ ಮೋರ್ಚಾ ಸಭೆಯಲ್ಲಿ ಮಾತನಾಡಿದ ಅವರು, ನಮಗೆ ಮರಾಠ ಪ್ರಾಧಿಕಾರ ಬೇಡ, ಅಷ್ಟೊಂದು ಮರಾಠರ ಮೇಲೆ ಬಿ.ಎಸ್.ಯಡಿಯೂರಪ್ಪ ನವರಿಗೆ  ಕಾಳಜಿ ಇದ್ದರೆ. ‘2ಎ’ ಗೆ ಸೇರಿಸಿ ಎಂದು ಆಗ್ರಹಿಸಿದ್ದಾರೆ. 7 ದಿನಗಳಲ್ಲಿ ಮರಾಠ …

Read More »

ಬೆಳಗಾವಿ ನಗರದಲ್ಲಿ ಎರಡು ಕಡೆ ಸಿಐಡಿ ದಾಳಿ ಬೈಕ್, ಅಪಾರ ಪ್ರಮಾಣದ ಗಾಂಜಾ ಜಪ್ತು

ಬೆಳಗಾವಿ ನಗರದಲ್ಲಿ ಎರಡು ಕಡೆ ದಾಳಿ ನಡೆಸಿರುವ ಸಿಐಡಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿ ಎರಡು ಬೈಕ್ ಗಳನ್ನು ವಶಕ್ಕೆ ಪಡೆದು ಅಪಾರ ಪ್ರಮಾಣದ ಗಾಂಜಾ ಜಪ್ತು ಮಾಡಿದ್ದಾರೆ. ಸಿಐಡಿ ಬೆಳಗಾವಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ .ಎಸ್.ಕೆ.ಕುರಗೊಡಿ, ರವರಿಗೆ ಬಂದ ಮಾಹಿತಿ ಮೇರೆಗೆ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣಾ ಸರಹದ್ದಿನ ಅಯೋಧ್ಯ ನಗರದಲ್ಲಿರುವ ಯು.ಕೆ.27 ಹೋಟೆಲ್ ಹತ್ತಿರ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆಕೀಬ್ ಜಾವೀದ್ ದುನಿಯಾರ್ ತಂದೆ ಜಾವೀದ್ …

Read More »

ಮನ್ನಿಕೇರಿಯಲ್ಲಿ ಗುರುದೇವ ದತ್ತ ಯೋಗ ಫೌಂಡೇಷನ್ ಆಶ್ರಯದಲ್ಲಿ ನಿರ್ಮಾಣವಾಗುತ್ತಿರುವ ಎಸ್‌ಎಸ್‌ವಾಯ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ ೬ ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್‌ಎಸ್‌ವಾಯ್) …

Read More »

ಬೆಳಗಾವಿಗೆ ನಾಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ

ಬೆಳಗಾವಿ : ರಾಜ್ಯ ಗೃಹ ಸಚಿವ ಹಾಗೂ ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ನ.30ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಮೂರು ದಿನಗಳ ಕಾಲ ಧಾರವಾಡ, ಗದಗ, ಹಾವೇರಿ, ಬೆಳಗಾವಿ ಪ್ರವಾಸ ಕೈಗೊಂಡಿರುವ ಸಚಿವರು ನಾಳೆ ಬೆಳಗಾವಿಗೆ ರಾತ್ರಿ 10 ಗಂಟೆಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಡಿಸೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ಕೆಎಸ್ ಆರ್ ಪಿ 6ನೇ ತಂಡದ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ, …

Read More »

ರೈತರ ಹೋರಾಟದಲ್ಲಿ ಕಾರಿಗೆ ಬೆಂಕಿ : ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನ

ಹೊಸದಿಲ್ಲಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರೈತರಿಗೆ ಸಹಾಯ ಮಾಡಲೆಂದು ತೆರಳಿದ ವ್ಯಕ್ತಿ ದಾರುಣ ಸಾವಿಗೀಡಾಗಿದ್ದಾನೆ. ಕಾರಿನಲ್ಲಿ ಮಲಗಿದ್ದ ಸಮಯದಲ್ಲಿ ಕಾರಿಗೆ ಬೆಂಕಿ ತಗುಲಿದ್ದು, ಆತನ ಸಜೀವ ದಹನವಾಗಿದೆ. ಪಂಜಾಬ್ ನ ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ಜನಕರಾಜ್ (55) ಮೃತ ವ್ಯಕ್ತಿ. ರೈತ ಹೋರಾಟಕ್ಕೆಂದು ಅಲ್ಲಿಂದ ದೆಹಲಿಗೆ ಬಂದಿದ್ದ. ಟ್ರ್ಯಾಕ್ಟರ್​ ಮೆಕಾನಿಕ್​ ಆಗಿದ್ದ ಆತನನ್ನು ಹೋರಾಟ ನಿರತ ರೈತರ ಟ್ರ್ಯಾಕ್ಟರ್​ಗಳನ್ನು ಸರಿ ಮಾಡಲೆಂದೇ ಕರೆಸಿಕೊಳ್ಳಲಾಗಿತ್ತು. ಶನಿವಾರ ರಾತ್ರಿ …

Read More »

ಬೆಳಗಾವಿ ವಿಭಜನೆಗೆ ತಾಂತ್ರಿಕ ತೊಂದರೆ : ಡಿಸಿಎಂ ಲಕ್ಷ್ಮಣ ಸವದಿ

ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪಕ್ಷದ 17 ಜನರು ಬಿಜೆಪಿ ಪಕ್ಷಕ್ಕೆ ಬಂದ ಕಾರಣದಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ಅವರ ಬಗ್ಗೆ ಗೌರವವಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನರು ಕಾರಣ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಕ್ಷ ತೀರ್ಮಾನ ಮಾಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಫೈನಲ್ …

Read More »

ಬೆಳಗಾವಿಯಲ್ಲಿ ನ.30ರಂದು ಮಹತ್ವದ ಸಭೆ ನಡೆಸಲಿರುವ ರಮೇಶ್ ಜಾರಕಿಹೊಳಿ

ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವರ ಸಭೆ ನಡೆಸಲಿದ್ದಾರೆ. ಕಳಸಾ ಬಂಡೂರ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಸೇರಿ ಇತರೆ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಉನ್ನತ ಮಟ್ಟದ ಸಭೆ ಹಮ್ಮಿಕೊಂಡಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ, ಜಲಸಂಪನ್ಮೂಲ ಮತ್ತು ಅರಣ್ಯ ಇಲಾಖೆಯ …

Read More »

ಸೋತವರನ್ನು ಮಂತ್ರಿ ಮಾಡಲು ಹೊರಟವರು ಸ್ಥಾನ ತ್ಯಾಗ ಮಾಡಲಿ”: ಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ. ರೇಣುಕಾಚಾರ್ಯ

ಬೆಂಗಳೂರು, ನ.29- ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಕೊಡಿಸಲು ಪ್ರಯತ್ನಿಸುವವರು ಸಾಧ್ಯವಾದರೆ ತಮ್ಮ ಸ್ಥಾನವನ್ನೇ ತ್ಯಾಗ ಮಾಡಿ ಮಂತ್ರಿ ಮಾಡಿಸಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಪರೋಕ್ಷವಾಗಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ. ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಪರಾಭವಗೊಂಡವರನ್ನು ಮಂತ್ರಿ ಮಾಡುವುದಾದರೆ ಜನರಿಂದ ಆಯ್ಕೆ ಆದವರು ಏನು ಮಾಡಬೇಕು? ಗೆದ್ದವರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು ಸರಿ. ಸೋತವರನ್ನು ಮಂತ್ರಿ ಮಾಡಲು ಹೊರಟವರು ಮೊದಲು …

Read More »

ಹೊರಗಡೆ ಗಣೇಶನ ಚಿತ್ರ, ಒಳಗಡೆ 16 ಲಕ್ಷದ ಕೆನಡಾ ಡ್ರಗ್ಸ್ –

ಆನೇಕಲ್: ಕೆನಡಾದಿಂದ ಲೈಸರ್ಜಿಕ್ ಡೈಥಲಾಮೈಡ್ (ಎಲ್‍ಎಸ್‍ಡಿ) ಡ್ರಗ್ಸ್ ತರಿಸಿದ್ದ ಖಾಸಗಿ ಆಸ್ಪತ್ರೆ ಸಿಬ್ಬಂದಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ ಹೆಬ್ಬಗೋಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಅರುಣ್ ಆಂತೋಣಿ(22) ಎಂದು ಗುರುತಿಸಲಾಗಿದೆ. ಈತ ಮೂಲತಃ ಕೇರಳದ ಪೆರಂಬಾಡಿ ಚೇರಾ ಹೌಸ್‍ನ ಕೊಟ್ಟಾಯಂ ನಿವಾಸಿಯಾಗಿದ್ದಾನೆ. ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿನ ಸ್ಪರ್ಶ ಆಸ್ಪತ್ರೆಯ ಎಕ್ಸ್-ರೇ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದನು.   ಕೆನಡಾದಲ್ಲಿ ಸಿಗುವ ಎಲ್‍ಎಸ್‍ಡಿ ಡ್ರಗ್ಸ್ ಅನ್ನು …

Read More »