Breaking News

Monthly Archives: ನವೆಂಬರ್ 2020

ಬಕೆಟ್ ಹಿಡಿಯುವ ರಾಜಕಾರಣಿಯಾಗಿದ್ರೆ ಬಹಳ ಹಿಂದೆಯೇ ಮಂತ್ರಿಯಾಗ್ತಿದ್ದೆ : ಸಚಿವ ಸಿ.ಟಿ.ರವಿ

ಚಿಕ್ಕಮಗಳೂರು: ಹೊಗಳಿಕೊಂಡು, ಬಕೆಟ್ ಹಿಡಿಯುವ ರಾಜಕಾರಣಿಯಾಗಿದ್ದರೆ ನಾನು ಮಂತ್ರಿಯಾಗಲು 2012ರವರೆಗೆ ಕಾಯಬೇಕಿರಲಿಲ್ಲ. ಬಹಳ ಮುಂಚೆಯೇ ಮಂತ್ರಿ ಆಗುತ್ತಿದ್ದೆ. ನನಗೆ ಅಧಿಕಾರ ಮತ್ತು ಜವಾಬ್ದಾರಿ ಎಂದು ಬಂದಾಗ ಜವಾಬ್ದಾರಿ ತೆಗೆದುಕೊಳ್ಳಲು ಉತ್ಸುಕನಾಗಿರುತ್ತೇನೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಎಐಟಿ ಕಾಲೇಜು ಬಳಿ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಬಳಿಕ ಮಾತನಾಡಿದ ಅವರು, ಅಧಿಕಾರಕ್ಕೆ ಅಂಟಿಕೊಳ್ಳುವ ಜಾಯಮಾನ ನನ್ನದ್ದಲ್ಲ. ಮಂತ್ರಿಸ್ಥಾನ ನನಗೆ ಸಿಕ್ಕಿರುವ ಅಧಿಕಾರ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ …

Read More »

ತಾಯಿ ಮೂಕಾಂಬಿಕೆ ಕೊಟ್ಟ ಉಡುಗೊರೆ ನೀನು – ಮಗನ ಹುಟ್ಟುಹಬ್ಬಕ್ಕೆ ರಕ್ಷಿತಾ ವಿಶ್

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ಗಳು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುವುದು ಕಾಮನ್. ಅದೇ ರೀತಿಯಾಗಿ ಸ್ಟಾರ್ ಮಕ್ಕಳು ಕೂಡ ಬರ್ತ್ ಡೇಯನ್ನು ಅಷ್ಟೇ ಸ್ಪೇಷಲ್ ಆಗಿ ಸೆಲೆಬ್ರೇಟ್ ಮಾಡೋದು ಟ್ರೇಂಡ್ ಆಗಿದೆ. ಕ್ರೇಜಿ ಕ್ವೀನ್ ರಕ್ಷಿತಾ ಮತ್ತು ಜೋಗಿ ಪ್ರೇಮ್ ದಂಪತಿಯ ಮುದ್ದಾದ ಮಗ ಸೂರ್ಯ 12ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಮಗನ ಹುಟ್ಟುಹಬ್ಬಕ್ಕೆ ತಾಯಿ ರಕ್ಷಿತಾ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯ ಮೂಲಕವಾಗಿ ವಿಶ್ ಮಾಡಿದ್ದಾರೆ. ಇನ್‍ಸ್ಟಾದಲ್ಲಿ ರಕ್ಷಿತಾ ಬರೆದುಕೊಂಡಿದ್ದೇನು?: ನೀನು …

Read More »

ಅತ್ತೆ-ಸೊಸೆ, ತಾಯಿ-ಮಗಳಂತೆ ಚೆನ್ನಾಗಿರಲಿ: ಸಿ.ಟಿ ರವಿ

ಚಿಕ್ಕಮಗಳೂರು: ಕಾಂಗ್ರೆಸ್ಸಿನಂತಹ ಜನರನ್ನು ನೀವು ಎಲ್ಲೂ ನೋಡಿರಲು ಸಾಧ್ಯವಿಲ್ಲ. ಏಕೆಂದರೆ ಅವರು ಚುನಾವಣೆಯಲ್ಲಿ ಗೆದ್ದರೆ ಜನಾದೇಶ ಅಂತಾರೆ, ಸೋತರೆ ಇವಿಎಂ ಮೇಲೆ ಆರೋಪಿಸುತ್ತಾರೆ. ಈ ರೀತಿಯ ಜನರನ್ನು ನೀವೆಲ್ಲೂ ನೋಡಲು ಆಗುವುದಿಲ್ಲ ಎಂದು ಸಚಿವ ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಎಐಟಿ ಕಾಲೇಜು ಬಳಿ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಬಳಿಕ ಮಾತನಾಡಿದ ಅವರು, ಆರ್.ಆರ್.ನಗರದಲ್ಲಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಹಾಗೂ …

Read More »

ಡಿಸಿಸಿ ಬ್ಯಾಂಕ ಚುನಾವಣೆ ವಿಷಯದಲ್ಲಿ ಒಂದಾದಂತೆ ಜಿಲ್ಲೆಯ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಶಕ್ತಿ ಪ್ರದರ್ಶಿಸುವ ಮೂಲಕ ಚಿಕ್ಕೋಡಿ ಜಿಲ್ಲೆ ಮಾಡಿಸಲು ಮುಂದಾಗಬೇಕು:

ಚಿಕ್ಕೋಡಿ : ಬೆಳಗಾವಿ ಡಿಸಿಸಿ ಬ್ಯಾಂಕ ಚುನಾವಣೆ ವಿಷಯದಲ್ಲಿ ಒಂದಾದಂತೆ ಜಿಲ್ಲೆಯ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಶಕ್ತಿ ಪ್ರದರ್ಶಿಸುವ ಮೂಲಕ ಚಿಕ್ಕೋಡಿ ಜಿಲ್ಲೆ ಮಾಡಿಸಲು ಮುಂದಾಗಬೇಕು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಜಿಲ್ಲೆಗಾಗಿ ಬಹಳ ದಿನಗಳಿಂದ ಹೋರಾಟ ನಡೆಯುತ್ತಿದೆ. ಆದ್ದರಿಂದ ಈ ಭಾಗದ ಜನರ ಹಿತದೃಷ್ಟಿಯಿಂದ ಚಿಕ್ಕೋಡಿ ಜಿಲ್ಲೆ ಮಾಡಬೇಕು. ಚಿಕ್ಕೋಡಿಗೆ ಸರಕಾರಿ …

Read More »

ಸೇತುವೆಯಿಂದ ಬಿದ್ದ ಕಾರು-ಇಬ್ಬರ ಸಾವು

ಕಾರವಾರ: ನಗರದ ಲಂಡನ್ ಬ್ರಿಜ್ ಬಳಿ ಸೇತುವೆಯಿಂದ ಮಂಗಳವಾರ ಬೆಳಗ್ಗೆ ಕಾರೊಂದು ಕೆಳಗೆ ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಿರಣ್ (28) ಹಾಗೂ ರಾಕೇಶ್ ಸಿ.ಆರ್ (28) ಎಂದು ಗುರುತಿಸಲಾಗಿದೆ. ಮೃತರು ಚಿಕ್ಕಮಗಳೂರಿನ ನಿವಾಸಿಗಳೆಂದು ತಿಳಿದು ಬಂದಿದೆ. ಕಾರ್ ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ಅವಘಡ ನಡೆದಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದ …

Read More »

ವೋಟ್ ಮಾಡಿ ಎಲ್ಲೆಂದರಲ್ಲಿ ಗ್ಲೌಸ್ ಬಿಸಾಕಿದ ಮತದಾರ

ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್‍ಆರ್ ನಗರದ ಉಪಚುನಾವಣೆಗೆ ಈಗಾಗಲೇ ಮತದಾನ ಆರಂಭವಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಪೀಣ್ಯ ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಎಲ್ಲೆಂದರಲ್ಲಿ ಬಿಸಾಕಿರುವುದು ಕಂಡು ಬಂದಿದೆ. ಹೌದು. ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಬಿಸಾಡಲಾಗಿದೆ. ಮತದಾನ ಮಾಡಿದ ಬಳಿಕ ಜನ ಎಲ್ಲೆಂದರಲ್ಲಿ ಹಾಕಿಹೋಗಿದ್ದಾರೆ. ಮತದಾನ ಮಾಡಲು ಒಬ್ಬ ವ್ಯಕ್ತಿಗೆ ಒಂದು ಗ್ಲೌಸ್ ವಿತರಣೆ ಮಾಡಲಾಗುತ್ತಿದೆ. ಆದರೆ ಸಿಬ್ಬಂದಿ ಮತದಾರರಲ್ಲಿ ಜಾಗೃತಿ ಮೂಡಿಸಿಲ್ಲ. …

Read More »

ಸಂಸದರ ಆದರ್ಶ ಗ್ರಾಮದ ಮಕ್ಕಳಿಗೆ ಶಾಲೆ ಕಟ್ಟಡನೇ ಇಲ್ಲ!

ಧಾರವಾಡ: ಸಂಸದರ ಆದರ್ಶ ಗ್ರಾಮಗಳು ಈಗಲೂ ಮೊದಲಿನಂತೆಯೇ ಇವೆ. ಅದಕ್ಕೆ ಕಾರಣ ಆ ಗ್ರಾಮ ದತ್ತು ಪಡೆದ ಸಂಸದರು ಅಭಿವೃದ್ಧಿ ಪಡಿಸದೇ ಇರುವುದು. ಹೌದು. ಧಾರವಾಡ ಜಿಲ್ಲೆಯ ಸಂಸದರ ಗ್ರಾಮದ ಸ್ಥಿತಿ ಅದೇ ರೀತಿಯಾಗಿದೆ. ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ ಹಾರೋಬೆಳವಡಿ ಹಾಗೂ ಕಬ್ಬೇನೂರ ಗ್ರಾಮಗಳನ್ನ ದತ್ತು ಪಡೆದಿದ್ದರು. ಕಬ್ಬೇನೂರ ಗ್ರಾಮದಲ್ಲಿ ಶಾಲೆ ಕಟ್ಟಡಕ್ಕೆ ಅಡಿಪಾಯ ಕೂಡ ಹಾಕಲಾಗಿತ್ತು. ಈ ಕಟ್ಟಡ ನಿರ್ಮಾಣ ಆಗಬಹುದು ಎಂದು ಎಲ್ಲರೂ ನೋಡುತ್ತಿದ್ದರೆ, ಅದು …

Read More »

ಓರ್ವನ ಕೊಲೆಗೆ ನೂರು ಜನ ಬಂದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಮುಂಬೈ/ಪುಣೆ: ಓರ್ವನ ಕೊಲೆಗೆ ನೂರು ಜನ ಬಂದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ದುಷ್ಕರ್ಮಿಗಳು ಸಾಲು ಸಾಲು ಬೈಕುಗಳಲ್ಲಿ ಹೋಗುತ್ತಿರೋದನ್ನ ವೀಡಿಯೋದಲ್ಲಿ ಗಮನಿಸಬಹುದು. ಯುವಕನ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಮಹಾರಾಷ್ಟ್ರದ ಪುಣೆಯ ನೆಹರೂ ನಗರದಲ್ಲಿ ಶುಕ್ರವಾರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದೆ. 35 ವರ್ಷದ ನೀಲೇಶ್ ಸುಭಾಷ್ ಜಾಧವ್ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸುಭಾಷ್ …

Read More »

ಐಎಎಸ್ ಅಧಿಕಾರಿಯಾಗಬೇಕು ಎಂಬ ಕನಸು ಕಂಡವಳು ಖಿನ್ನತೆ ಮತ್ತು ಮಾನಸಿಕ ಅಸ್ವಸ್ಥರಾಗಿ ಮನೆಯನ್ನು ತೊರೆದಿದ್ದಾಳೆ

ಹೈದರಾಬಾದ್  : ನಮ್ಮ ದೇಶದಲ್ಲಿ ಹೆಚ್ಚಿನವರು ಐಎಎಸ್ ಅಧಿಕಾರಿ ಅಥವಾ ಇನ್ನಿತರ ಉನ್ನತ ಹುದ್ದೆ ಹೊಂದಬೇಕು ಎಂಬ ಕನಸು ಕಾಣುತ್ತಾರೆ. ಅದಕ್ಕಾಗಿ ಹಲವಾರು ವರ್ಷಗಳನ್ನು ವ್ಯಯಿಸುತ್ತಾರೆ. ಅದರಲ್ಲಿ ಕೆಲವರು ಯಶಸ್ವಿಯಾಗುತ್ತಾರೆ. ಇನ್ನು ಕೆಲವರು ಅದರಲ್ಲಿ ಸೋಲುತ್ತಾರೆ. ಅಂತಹ ಮಹಿಳೆಯ ಸ್ಟೋರಿ ನಿಮಗೆ ನೀಡುತ್ತಿದ್ದೇವೆ. ಹೈದರಾಬಾದ್ ಮೂಲದ ಮಹಿಳೆಯೊಬ್ಬರು ಬಹುರಾಷ್ಟ್ರೀಯ ಕಂಪನಿಯಲ್ಲಿ ಎಚ್‌ಆರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಐಎಎಸ್ ಅಧಿಕಾರಿಯಾಗಬೇಕು ಎಂಬ ಕನಸು ಕಂಡು ಆ ಕೆಲಸವನ್ನು ತೊರೆಯುತ್ತಾರೆ. ಆದರೆ …

Read More »

ಮನೆ ಬಳಿ ನಿಂತಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ್ರು!

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರಗಿ ನದರದ ಕೈಲಾಶ್ ನಗರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವಲಿಂಗಪ್ಪ ಭೂಶೆಟ್ಟಿ(53) ಎಂದು ಗುರುತಿಸಲಾಗಿದೆ. ಆಳಂದ ತಾಲೂಕಿನ ಕಜಗಂಚಿ ಗ್ರಾಮದ ನಿವಾಸಿಯಾಗಿರುವ ಶಿವಲಿಂಗಪ್ಪ ಕಲಬುರಗಿ ನಗರದ ಕೈಲಾಶ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಕಳೆದ ರಾತ್ರಿ ಮನೆ ಬಳಿ ನಿಂತಿದ್ದ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ …

Read More »