ಬೆಂಗಳೂರು(ಡಿ.21): ಶಿಕ್ಷಣ ಇಲಾಖೆ ವಿರುದ್ಧ ಹೋರಾಟಕ್ಕೆ ಮುಂದಾಗಿರುವ ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ, ಇಂದಿನಿಂದ ರುಪ್ಸಾ ಅಡಿಯಲ್ಲಿ ಬರುವ ಎಲ್ಲಾ ಶಾಲೆಗಳ ಆನ್ಲೈನ್ ಮತ್ತು ಆಫ್ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿದೆ. ಜೊತೆಗೆ ಸಂಪೂರ್ಣ ಶೈಕ್ಷಣಿಕ ವರ್ಷವನ್ನು ಸ್ಥಗಿತ ಮಾಡಲು ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ನಿರ್ಧರಿಸಿದೆ. ಸರ್ಕಾರ ಶಾಲೆಗಳನ್ನು ಪುನರಾರಂಭಿಸುವ ಸಮಯದಲ್ಲಿ ಶಾಲೆಗಳನ್ನು ಮುಚ್ಚಲು ಖಾಸಗಿ ಶಿಕ್ಷಣ ಮಂಡಳಿ ಮುಂದಾಗಿದೆ. ಇಂದಿನಿಂದ ರುಪ್ಸಾ ಅಡಿಯ ಖಾಸಗಿ ಶಾಲೆಗಳ ಆನ್ ಲೈನ್ ಕ್ಲಾಸ್ ಬಂದ್ …
Read More »Daily Archives: ಡಿಸೆಂಬರ್ 21, 2020
ಕೊರೊನಾದಿಂದ ಕಳಸ ಪಟ್ಟಣದ ಬ್ಯಾಂಕ್ವೊಂದು ಸೀಲ್ಡೌನ್
ಚಿಕ್ಕಮಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗ್ತಿದೆ. ಇನ್ನೇನು ನಾಳೆ-ನಾಡಿದ್ದು ಅನ್ನುವಷ್ಟರಲ್ಲಿ ಲಸಿಕೆಯೂ ಸಿಗುತ್ತೆ, ಅಬ್ಬಾ… ಈ ಹೆಮ್ಮಾರಿ ತೊಲಗಿತು ಎಂದು ಜನಸಾಮಾನ್ಯರು ನಿಟ್ಟುಸಿರು ಬಿಡುವ ಹೊತ್ತಿಗೆ ಮತ್ತೆ ಕೊರೊನಾದಿಂದ ಕಳಸ ಪಟ್ಟಣದ ಬ್ಯಾಂಕ್ವೊಂದು ಸೀಲ್ಡೌನ್ ಶುಕ್ರವಾರ, ಶನಿವಾರ ಹಾಗೂ ಇಂದು ಭಾನುವಾರವಾದ್ದರಿಂದ ಜನರಿಗೆ ಬ್ಯಾಂಕ್ ಇಲ್ಲದೆ ತೀವ್ರ ಸಮಸ್ಯೆ ಎದುರಾಗಿತ್ತು. ಕಳಸ ಪಟ್ಟಣ ಸುತ್ತಮುತ್ತ ಅಡಿಕೆ, ಕಾಫಿ ತೋಟವೇ ಹೆಚ್ಚಿದ್ದು, ಈ ಭಾಗದಲ್ಲಿ ಕೂಲಿ …
Read More »ಮನೆಯವರು ಮದುವೆಗೆ ತೆರಳಿ ವಾಪಸ ಬರೋದರೊಳಗೆ ಅಪಾರ ಪ್ರಮಾಣದ ಚಿನ್ನಾಭರಣ. ನಗದು ರೇಷ್ಮೆ ಸೀರೆಗಳು ಕಳ್ಳತನ
ಹುಬ್ಬಳ್ಳಿ: ಮನೆಯವರು ಮದುವೆಗೆ ತೆರಳಿ ವಾಪಸ ಬರೋದರೊಳಗೆ ಅಪಾರ ಪ್ರಮಾಣದ ಚಿನ್ನಾಭರಣ. ನಗದು ರೇಷ್ಮೆ ಸೀರೆಗಳು ಕಳ್ಳತನವಾದ ಘಟನೆ ಹುಬ್ಬಳ್ಳಿಯ ಆದರ್ಶನಗರದಲ್ಲಿ ನಡೆದಿದೆ. ನೀರಾವರಿ ಇಲಾಖೆಯ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಹಾದೇವಪ್ಪ ಭೀಮಕ್ಕನವರ ಎಂಬವರ ಮನೆಯಲ್ಲೇ ಕಳ್ಳತನ ನಡೆದಿದೆ. 380 ಗ್ರಾಂ ಚಿನ್ನ, 15 ಕೆಜಿ ಬೆಳ್ಳಿ, 10ಬೆಲೆಬಾಳುವ ರೇಷ್ಮೆ ಸೀರೆ, ಸಾವಿರಾರೂ ರೂಪಾಯಿ ನಗದನ್ನ ದೋಚಿಕೊಂಡು ಪರಾರಿಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಘಟನೆ ನಡೆದಿದ್ದು, ಮದುವೆಗಾಗಿ ಮನೆಯವರು …
Read More »ಡಿ.22 ಹಾಗೂ ಡಿ.27ರಂದು ನಡೆಯುವ ಗ್ರಾ. ಪಂ. ಚುನಾವಣೆ ಮತದಾನ ಮಾಡಲು ಸಾರ್ವತ್ರಿಕ ರಜೆ
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಲು ಸಾರ್ವತ್ರಿಕ ರಜೆ ನೀಡಲಾಗಿದೆ. ಗ್ರಾಪಂಗಳಿಗೆ ಡಿ.22 ಹಾಗೂ ಡಿ.27ರಂದು ನಡೆಯುವ ಸಾರ್ವತ್ರಿಕ ಚುನಾವಣೆ ಸಂಬಂಧ ನಡೆಯುವ ಗ್ರಾಪಂ ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ …
Read More »ಸಲೂನ್ ಮಾಲೀಕರೊಬ್ಬರು ತಮ್ಮ ಕೆನಡಾ ಪ್ರವಾಸ ರದ್ದುಗೊಳಿಸಿ ರೈತರಿಗೆ ಉಚಿತ ಕಟಿಂಗ್ ಶೇವಿಂಗ್ ಮಾಡುತ್ತಿದ್ದಾರೆ
ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ಕೆಲ ವಾರಗಳಿಂದ ರೈತರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ಪಟ್ಟು ಬಿಡದೆ ಹೋರಾಟ ನಡೆಸುತ್ತಿದ್ದಾರೆ. ನಗರದ ಸಿಂಘು ಬಾರ್ಡರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಹಲವರು ಹಲವು ರೀತಿಯ ಸಹಾಯ ಮಾಡಿದ್ದಾರೆ. ಅದೇ ರೀತಿ ಸಲೂನ್ ಮಾಲೀಕರೊಬ್ಬರು ತಮ್ಮ ಕೆನಡಾ ಪ್ರವಾಸ ರದ್ದುಗೊಳಿಸಿ ಉಚಿತ ಸೇವೆ ನೀಡಲು ಮುಂದಾಗಿದ್ದಾರೆ. ಸುಮಾರು 20 ದಿನಗಳಿಂದ ರೈತರು ಸಿಂಘು ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆ ಕಟಿಂಗ್, ಶೇವಿಂಗ್ಗಾಗಿ ಸಾಲಾಗಿ …
Read More »ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವ
ಹಾವೇರಿ: ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜಿಲ್ಲೆಯ ಹಾನಗಲ್ ಪಟ್ಟಣದ ಗರಡಿಮನಿ ಕ್ರಾಸ್ ಬಳಿ ಘಟನೆ ನಡೆದಿದ್ದು, ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡಿದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಗಣಪತಿ ಲಮಾಣಿ 22 ವರ್ಷ ಮೃತ ಬೈಕ್ ಸವಾರ. ಮೃತ ಗಣಪತಿ, ಕಾರವಾರ ಜಿಲ್ಲೆ ಶಿರಸಿ ತಾಲೂಕಿನ …
Read More »ಹೆಚ್ಡಿಕೆ & ಯಡಿಯೂರಪ್ಪ ಅವರ ವಿರುದ್ಧವೂ ಏಕವಚನದಲ್ಲೇ ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ಅದರ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧವೂ ಏಕವಚನದಲ್ಲೇ ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ರೈತ ಹೋರಾಟಗಾರ ಅಂತ ಹಸಿರು ಶಾಲು ಹಾಕಿಕೊಳ್ತಾನೆ. ಬಡವರ ಅಕ್ಕಿಯನ್ನ ಐದು ಕೆ.ಜಿ.ಗೆ ಇಳಿಸಿದ್ದಾನೆ. ಯಾಕೆ ಕಡಿಮೆ ಮಾಡಿದ್ರು, ಏನ್ ಅವರಪ್ಪನ ಮನೆಯಿಂದ ಕೊಡ್ತಿದ್ನಾ.. ಬಡವರ ಪರ ಹೃದಯವೇ ಇಲ್ಲದ ನಿಮ್ಮನ್ನ ಮನುಷ್ಯರು ಅಂತ ಕರೆಯಬೇಕಾ..? ಬಿಎಸ್ವೈ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ …
Read More »ಮೋದಿ ಅವರೇ ಕುಮಾರಸ್ವಾಮಿಗೆ ಕರೆ ಮಾಡಿ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಮಾಡುವ ಪ್ರಸ್ತಾಪ ಮಾಡಿದ್ದರು ಅನ್ನೋ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು: ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಗೆ ಕರೆ ಮಾಡಿ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಮಾಡುವ ಪ್ರಸ್ತಾಪ ಮಾಡಿದ್ದರು ಅನ್ನೋ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ವಿಲೀನ ಆಗುತ್ತಾ ಅನ್ನೋ ಮಾತುಗಳು ಬಿಸಿಬಿಸಿಯಾಗಿ ಚರ್ಚೆಯಾಗುತ್ತಿವೆ. ಈ ಬಗ್ಬಗ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಆಳವಾಗಿ ಮಾತನಾಡಿ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯುವಂತಹ ಪ್ರಯತ್ನ ಮಾಡಿದ್ರು. ಈ ಸಂದರ್ಭದಲ್ಲಿ ಮೋದಿ …
Read More »ಬೆಳಗಾವಿಯ ಯಳ್ಳೂರ ಗ್ರಾಮದ ಹೊರವಲಯದಲ್ಲಿ ರಾಜಹಂಸಗಡ ಕೋಟೆ ಗುಡ್ಡಕ್ಕೆ ಆಕಸ್ಮಿಕ ಬೆಂಕಿ
ಬೆಳಗಾವಿ: ಐತಿಹಾಸಿಕ ರಾಜಹಂಸಗಡ ಕೋಟೆಯ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಆತಂಕ ಮನೆ ಮಾಡಿದೆ. ಬೆಳಗಾವಿಯ ತಾಲೂಕಿನ ಯಳ್ಳೂರ ಗ್ರಾಮದ ಹೊರವಲಯದಲ್ಲಿ ರಾಜಹಂಸಗಡ ಕೋಟೆ ಗುಡ್ಡ ಇದೆ. ಕೋಟೆ ಗುಡ್ಡದ ಅಕ್ಕಪಕ್ಕದಲ್ಲಿರುವ ಒಣಹುಲ್ಲಿಗೆ ಆಕಸ್ಮಿಕ ಬೆಂಕಿ ಆವರಿಸಿಕೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಕಿ ನಂದಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಸಿ ತಾಣವಾಗಿರುವ ಐತಿಹಾಸಿಕ ರಾಜಹಂಸಗಡ ಕೋಟೆಗೆ ತನ್ನದೇ ಆದ ಹೆಸರಿದೆ.
Read More »ಡಿಸೆಂಬರ್ 27ರಂದು ಮನ್ ಕೀ ಬಾತ್ ಮುಗಿಯವ ತನಕ ಮನೆಯಲ್ಲಿ ತಟ್ಟೆ ಬಾರಿಸುವಂತೆ ರೈತರ ಕರೆ
ಡಿಸೆಂಬರ್ 27ರಂದು ಮನ್ ಕೀ ಬಾತ್ ಮುಗಿಯವ ತನಕ ಮನೆಯಲ್ಲಿ ತಟ್ಟೆ ಬಾರಿಸುವಂತೆ ರೈತರ ಕರೆ ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ಜಗಜಿತ್ ಸಿಂಗ್ ದಲೆವಾಲಾ, ಡಿಸೆಂಬರ್ 27 ರಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಊಟದ ತಟ್ಟೆಯನ್ನ ಹಿಡಿದು ಬಾರಿಸುವಂತೆ ಕರೆ ನೀಡುವಂತೆ ಕರೆ ಕೊಡುತ್ತಿದ್ದೇವೆ. ಅವರ ಭಾಷಣ ಮುಗಿಯುವವರೆಗೂ ರೈತರಿಗೆ ಬೆಂಬಲ ನೀಡುವ ಪ್ರತೀ ನಾಗರೀಕರೂ ತಟ್ಟೆಯನ್ನ …
Read More »