Breaking News
Home / 2020 / ಡಿಸೆಂಬರ್ (page 21)

Monthly Archives: ಡಿಸೆಂಬರ್ 2020

ಸ್ಥಾಯಿ ಸಮಿತಿ ಅದ್ಯಕ್ಷರಾಗಿ ಸಾವಂತ ತಳವಾರ ಆಯ್ಕೆ ಶುಭ. ಹಾರೈಸಿದ ಸದಸ್ಯರು

ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯ ವಾರ್ಡ ನಂಬರ 19 ನೆಯ ಸದಸ್ಯರಾದ ಸಾವಂತ ತಳವಾರ ಇವರನ್ನು ಸರ್ವ ಸದಸ್ಯರು ಕೂಡಿಕೊಂಡು ಒಮ್ಮತದಿಂದ. ಕೊಣ್ಣೂರ ಪುರಸಭೆಗೆ ಸ್ಥಾಯಿ ಸಮಿತಿ ಅದ್ಯಕ್ಷರನ್ನಾಗಿ ಆಯ್ಕೆ ಮಾಡಿದರು, ಈ ಸಂದರ್ಭದಲ್ಲಿ ಮುಖ್ಯಾಧಿಕಾರಿಯಾದ. ಶಿವಾನಂದ ಹೀರೆಮಠ ,ಅದಕ್ಷರಾದ ರಜಿಯಾಬೇಗಂ ಹೊರಕೇರಿ ಉಪಾದಕ್ಷರಾದ ಮಲ್ಲಪ್ಪ ಹುಕ್ಕೇರಿ, ಸದಸ್ಯರಾದ ಪ್ರಕಾಶ ಕರನಿಂಗ,ವಿನೋದ ಕರನಿಂಗ, ಅಟಲ್ ಕಡಲಗಿ, ಮಾರುತಿ ಪೂಜೇರಿ,ಗೂಳಪ್ಪ ಅಸೂದೆ,ಅಶೋಕ ಕುಮಾರನಾಯಿಕ,ಕುಮಾರ ಕೊಣ್ಣೂರ, ರಾಮಲಿಂಗ್, ಮಗದುಮ್, ಇಮ್ರಾನ್ ಜಮಾದಾರ ಮಹಿಳಾ …

Read More »

ಸಚಿವ ರಮೇಶ್ ಜಾರಕಿಹೊಳಿ ಪ್ರಯತ್ನ : ಮಾರಿಹಾಳ ಗ್ರಾಪಂ.ಗೆ 5 ಸ್ಥಾನಗಳು ಅವಿರೋಧ ಆಯ್ಕೆ

ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಯತ್ನ ದಿಂದ ಸಮೀಪದ ಮಾರಿಹಾಳ ಗ್ರಾಮ ಪಂಚಾಯತಿಯ 18 ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಅವಿರೋಧ ಆಯ್ಕೆಯಾದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮಗಳ ಅಭ್ಯುದಯಕ್ಕಾಗಿ ಗ್ರಾಮ ಪಂಚಾಯತಿಯಲ್ಲಿ ಸರ್ವ ಸಮ್ಮತ ಅರ್ಹವ್ಯಕ್ತಿಗಳ ಅವಿರೋಧ ಆಯ್ಕೆಯಾಗಬೇಕು ಇದರಿಂದ ಗ್ರಾಮಸ್ಥರಲ್ಲಿ ಒಗ್ಗಟ್ಟು ಹಾಗೂ ನೆಮ್ಮದಿಯ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯ …

Read More »

ವರ್ತೂರು ಕಿಡ್ನಾಪ್ ಕೇಸ್: ಇಬ್ಬರು ವಿದ್ಯಾರ್ಥಿಗಳು ಸೇರಿ 6 ಜನರ ಬಂಧನ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಕಾರಿನಲ್ಲಿ ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನ ಆರು ಮಂದಿಯನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ವಲಯದ ಐಜಿಪಿ ಸೀಮಂತ್‍ಕುಮಾರ್ ಸಿಂಗ್ ತಿಳಿಸಿದರು.   ಮೂಲತಃ ತಮಿಳುನಾಡಿನ ಬೆಂಗಳೂರಿನ ವಿನಾಯಕನಗರದಲ್ಲಿ ವಾಸಿಸುತ್ತಿರುವ ಕವಿರಾಜ್ (43), ಬೆಳ್ಳಂದೂರು-ಸರ್ಜಾಪುರ ರಸ್ತೆಯ ಅರಳೂರು ನಿವಾಸಿ, ಬಿಕಾಂ ವಿದ್ಯಾರ್ಥಿಗಳಾದ ಲಿಖಿತ್ (20), ಉಲ್ಲಾಸ್ (21), …

Read More »

ಬೆಳಗಾವಿಯಲ್ಲಿ ಕೂಡ ನೈಟ್ ಕರ್ಫ್ಯೂ ಜಾರಿ, ನೋ ಓಲ್ಡ ಮ್ಯಾನ್, ನೋ ಕ್ರಿಸ್ಮಸ್, NEW YEAR ಸೆಲೆಬ್ರೇಶನ್…. ಎಲ್ಲದಕ್ಕೂ ಬ್ರೇಕ್ ಹಾಕಿದ ಸರ್ಕಾರ

ಬೆಳಗಾವಿ-ಬೆಳಗಾವಿ ಗಡಿಭಾಗ,ಮಹಾರಾಷ್ಟ್ರ ,ಗೋವಾ ,ಕರ್ನಾಟಕ ರಾಜ್ಯಗಳ ಸಂಸ್ಕೃತಿಯ ಸಂಗಮ.ಕ್ರಿಸ್ ಮಸ್ ಹಬ್ಬ ಶುರುವಾದ್ರೆ ಸಾಕು,ಇಲ್ಲಿ ಸಂಬ್ರಮ ಶುರುವಾಗುತ್ತದೆ. ಕೊರೋನಾ ರೂಪಾಂತರಗೊಂಡ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇವತ್ತಿನಿಂದ ಜನೇವರಿ 2 ರವರೆಗೆ ನೈಟ್ ಕರ್ಫ್ಯು ಜಾರಿ ಮಾಡಿದ್ದು ಕ್ರಿಸ್ ಮಸ್ ,ಹ್ಯಾಪೀ ನ್ಯು ಇಯರ್ ಸಂಬ್ರಮಕ್ಕೆ ಬ್ರೇಕ್ ಬಿದ್ದಿದೆ. ಇವತ್ತಿನಿಂದ ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆಯವರೆಗೆ ನೈಟ್ ಕರ್ಫ್ಯು ಜಾರಿಗೆ ಬರಲಿದೆ. ಹೀಗಾಗಿ ಬಾರ್ ಆ್ಯಂಡ ರೆಸ್ಟೋರೆಂಟ್,ಮತ್ತು ಹೊಟೇಲ್ …

Read More »

ರೈತ ನಾಯಕ ಚೌಧರಿ ಪ್ರಧಾನಿಗೆ ಸ್ಪೂರ್ತಿ, ರೈತರಿಗೆ ಅನ್ಯಾಯವಾಗಲು ಬಿಡಲ್ಲ : ರಾಜನಾಥ್ ಸಿಂಗ್

ನವದೆಹಲಿ,ಡಿ.23- ರೈತರ ದಿನಾಚರಣೆಯ ಹಿನ್ನೆಲೆಯಲ್ಲಿ ಭಾರತದ 5ನೇ ಪ್ರಧಾನಮಂತ್ರಿಯಾಗಿದ್ದ ಚರಣ್‍ಸಿಂಗ್ ಚೌಧರಿ ಅವರನ್ನು ಸ್ಮರಿಸಿರುವ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್, ಚೌಧರಿ ಅವರಿಂದ ಪ್ರಭಾವಿತ(ಸ್ಪೂರ್ತಿ)ರಾಗಿರುವ ಪ್ರಧಾನಿ ನರೇಂದ್ರಮೋದಿ ಅವರು ಎಂದಿಗೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇಂದು ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್, ರೈತ ನಾಯಕ ಹಾಗೂ ಮಾಜಿ ಪ್ರಧಾನಿ ಚರಣ್ ಸಿಂಗ್ ಚೌಧರಿ ಅವರು ತಮ್ಮ ಜೀವಾತವಧಿಯವರೆಗೂ ರೈತರ ಪರ ಧ್ವನಿ ಎತ್ತಿದ್ದರು. ಕೃಷಿಕರ ಸಮಸ್ಯೆಗಳ ಪರಿಹಾರಕ್ಕೆ …

Read More »

ಕೊರೊನಾ ಸೋಂಕಿನ ಆತಂಕದ ನಡುವೆಯೂ ಜಲ್ಲಿಕಟ್ಟು ಕ್ರೀಡೆಗೆ ಷರತ್ತು ಬದ್ಧ ಅನುಮತಿ

ಚೆನೈ, ಡಿ.23-ಕೊರೊನಾ ಸೋಂಕಿನ ಆತಂಕದ ನಡುವೆಯೂ ತಮಿಳುನಾಡು ಸರ್ಕಾರ ಸಾಂಪ್ರದಾಯಿಕ ಜಲ್ಲಿಕಟ್ಟು ಕ್ರೀಡೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಕ್ರೀಡೆಯಲ್ಲಿ 150 ಮಂದಿಗಿಂತ ಹೆಚ್ಚಿನ ಜನ ಸೇರಬಾರದು, ಕ್ರೀಡೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ಸರ್ಟಿಫಿಕೆಟ್ ಹೊಂದಿರಬೇಕು ಎಂದು ಸೂಚಿಸಲಾಗಿದೆ. ಕ್ರೀಡೆಯನ್ನು ನೋಡಲು ಆಗಮಿಸುವ ಪ್ರೇಕ್ಷಕರ ಸಂಖ್ಯೆ ಶೇ.50ಕ್ಕಿಂತ ಮೀರಿರಬಾರದು ಎಂದು ತಾಕೀತು ಮಾಡಲಾಗಿದೆ. ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಜಲ್ಲಿಕಟ್ಟು ಬೇಡ ಎಂದು ಕೆಲವರು ವಾದಿಸಿದ್ದರು. ಕ್ರೀಡೆಯಲ್ಲಿ ಸಾಮಾಜಿಕ …

Read More »

ಭಾರತದಲ್ಲಿ ಯಾವುದೇ ಸಂದರ್ಭದಲ್ಲಿ ವ್ಯಾಕ್ಸಿನ್ ಹಂಚಿಕೆ ಆರಂಭ

ನವದೆಹಲಿ,ಡಿ.23-ದೇಶದಲ್ಲಿ ಕೊರೊನಾ ಲಸಿಕೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಲಸಿಕೆ ಹಂಚಿಕೆ ಕಾರ್ಯ ಆರಂಭಗೊಳ್ಳುವ ಸಾಧ್ಯತೆಗಳಿವೆ. ಈಗಾಗಲೇ ದೆಹಲಿ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಯಾವುದೇ ಸಂದರ್ಭದಲ್ಲಿ ಲಸಿಕೆ ಆಸ್ಪತ್ರೆಗೆ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ 90ಕ್ಕೂ ಹೆಚ್ಚು ಫ್ರೀಜರ್‍ಗಳು ಬಂದಿದ್ದು, ಕೆಲ ಫ್ರೀಜರ್‍ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಆಸ್ಪತ್ರೆಯ ನೆಲಮಹಡಿ ಮತ್ತು ಮೊದಲ ಮಹಡಿಯಲ್ಲಿ ಸ್ಥಾಪಿಸಿರುವ 4,700 ಚದುರಡಿ ಸುತ್ತಳತೆಯ ಶೀತಾಗಾರದಲ್ಲಿ ಲಸಿಕೆ …

Read More »

ಮುಂದಿನ ವರ್ಷದಿಂದ ಪ್ರತಿವಾರ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆ ಮಾಡಲು ತೈಲ ಕಂಪೆನಿಗಳು ನಿರ್ಧರಿಸಿವೆ.

ನವದೆಹಲಿ, ಡಿ.23- ಮುಂದಿನ ವರ್ಷದಿಂದ ಪ್ರತಿವಾರ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆ ಮಾಡಲು ತೈಲ ಕಂಪೆನಿಗಳು ನಿರ್ಧರಿಸಿವೆ. ಪೆಟ್ರೋಲ್, ಡಿಸೇಲ್ ಬೆಲೆಯನ್ನು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪರಿಷ್ಕರಣೆ ಮಾಡಲಾಗುತ್ತದೆ. ಆಯಾ ದಿನದ ಆರು ಗಂಟೆ ಬಳಿಕ ಪರಿಷ್ಕರಣೆಯಾಗುವ ದರವನ್ನು ಗ್ರಾಹಕರು ನೀಡಬೇಕಿದೆ. ಗ್ಯಾಸ್ ಸಿಲಿಂಡರ್‍ಗಳ ಬೆಲೆಯನ್ನು ಪ್ರತಿ ತಿಂಗಳಿಗೊಮ್ಮೆ ಪರಿಷ್ಕರಣೆ ಮಾಡುವ ಪದ್ಧತಿ ಜಾರಿಯಲ್ಲಿದೆ. ಒಂದು ವೇಳೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದರೆ ಅದರಿಂದಾಗುವ ನಷ್ಟವನ್ನು ತೈಲ …

Read More »

ಜೆಡಿಎಸ್ – ಬಿಜೆಪಿ ಹೊಂದಾಣಿಕೆ ವಿಚಾರ ಅದು ಅವರವರ ಪಕ್ಷಗಳಿಗೆ ಬಿಟ್ಟ ವಿಚಾರ, ಯಾರು ಯಾರ ಜೊತೆಯಾದರೂ ಹೋಗಬಹುದು:ಡಿಕೆಶಿ

ರಾಮನಗರ(ಡಿಸೆಂಬರ್​. 22): ಜೆಡಿಎಸ್ – ಬಿಜೆಪಿ ಹೊಂದಾಣಿಕೆ ವಿಚಾರ ಅದು ಅವರವರ ಪಕ್ಷಗಳಿಗೆ ಬಿಟ್ಟ ವಿಚಾರ, ಯಾರು ಯಾರ ಜೊತೆಯಾದರೂ ಹೋಗಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಹೆಂಡತಿ ಉಷಾ ಜೊತೆಗೆ ಗ್ರಾ.ಪಂ ಚುನಾವಣೆ ಹಿನ್ನೆಲೆ ಮತದಾನ ಮಾಡಲು ಕನಕಪುರದ ಹುಟ್ಟೂರು ದೊಡ್ಡಾಲಹಳ್ಳಿಗೆ ಆಗಮಿಸಿದ್ದ ಡಿಕೆಶಿ ಮತಗಟ್ಟೆ ಸಂಖ್ಯೆ 3 ರಲ್ಲಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜಕೀಯ ಅಂದ್ರೆ ಸಾಧ್ಯತೆಗಳ ಕಲೆ, …

Read More »

ಬಾಲಕಿಗೆ ಪ್ರೀತಿಸುವಂತೆ ಕಿರುಕುಳ : ಮೆಸ್ಕಾಂ ಸಿಬ್ಬಂದಿ ಪೊಲೀಸರ ವಶಕ್ಕೆ

ಪುತ್ತೂರು(ಡಿಸೆಂಬರ್​. 22): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಸವಣೂರು ಸಮೀಪದ‌ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಆರೋಪದ ಮೇರೆಗೆ ಸವಣೂರಿನ‌ ಮೆಸ್ಕಾಂ ಸಿಬ್ಬಂದಿಯೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಪೋಷಕರ ದೂರಿನ ಹಿನ್ನಲೆಯಲ್ಲಿ ಪೊಲೀಸರು ಮೆಸ್ಕಾಂ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಎಂಬಾತನನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಇನ್​​ಸ್ಟಾಗ್ರಾಂ ಮೂಲಕ ಪ್ರೀತಿಸುವಂತೆ ಕಿರುಕುಳ ಕೊಡುತ್ತಿರುವುದಲ್ಲದೆ, ಬಾಲಕಿಗೆ ಅಸಭ್ಯವಾಗಿ ಸಂದೇಶ …

Read More »