ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ನಿರ್ಧಾರದಿಂದ ಹಿಂದೆ ಸರಿಯದ ಕರ್ನಾಟಕ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ಗೆ ರಾಜಧಾನಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ರಸ್ತೆಯಲ್ಲಿ ಎಂದಿನಂತೆ ಜನರು ಸಂಚರಿಸುತ್ತಿದ್ದು, ಬಿಎಂಟಿಸಿ ಬಸ್ಸುಗಳು ರಸ್ತೆಗೆ ಇಳಿದಿದೆ. ಕೆ.ಆರ್. ಮಾರುಕಟ್ಟೆಗೆ ಜನರು ಆಗಮಿಸಿ ಖರೀದಿಯಲ್ಲಿ ತೊಡಗಿದ್ದಾರೆ. ಅಂಗಡಿ, ಹೋಟೆಲ್ಗಳು ತೆರೆದಿದ್ದು ಗ್ರಾಹಕರು ಆಗಮಿಸುತ್ತಿದ್ದಾರೆ. ಕರ್ನಾಟಕ ಬಂದ್ಗೆ ಯಾವುದೇ ಅನುಮತಿ ಪಡೆದಿಲ್ಲ. ಹೀಗಾಗಿ ಯಾರೇ ಚೇಷ್ಟೆ ಮಾಡಿದರೂ ಕ್ರಮ …
Read More »Monthly Archives: ಡಿಸೆಂಬರ್ 2020
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಬಂದ್
ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ನಲ್ಲಿರುವ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ನೆರಳೆ ಮತ್ತು ಹಸಿರು ಮಾರ್ಗಗಳನ್ನು ಜೋಡಿಸುವ ಕಂಪೇಗೌಡ ನಿಲ್ದಾಣದಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಸುತ್ತಾರೆ. ಆದರೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈ ನಿಲ್ದಾಣವನ್ನು ಬಂದ್ ಮಾಡಲಾಗಿದೆ.ಮೇಲಾಧಿಕಾರಿಗಳ ಸೂಚನೆ ಮೇರೆಗೆ ಬಂದ್ ಮಾಡುತ್ತಿರುವುದಾಗಿ ಸಿಬ್ಬಂದಿ ತಿಳಿಸಿದ್ದಾರೆ. ಬಂದ್ ಆದ ಹಿನ್ನೆಲೆಯಲ್ಲಿ ಪ್ರಯಾಣಕ್ಕೆ ಬಂದ ಪ್ರಯಾಣಿಕರು ವಾಪಸ್ ತೆರಳುತ್ತಿದ್ದಾರೆ.
Read More »ವಾಶಿಂಗ್ ಮಷಿನ್ ರಿಪೇರಿ ನೆಪದಲ್ಲಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ: ವಾಶಿಂಗ್ ಮಷಿನ್ ರಿಪೇರಿ ಮಾಡುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕಂಗ್ರಾಳಿ ಕೆ.ಎಚ್. ವಿಶಾಲ ಗಲ್ಲಿಯ ಮಾರುತಿ ಪರಶುರಾಮ ಜಾಧವ (೨೬), ವೈಭವ ನಗರದ ಶುಭಂ ರಾಜು ಬಾತಖಂಡೆ (೨೫) ಬಂಧಿತರು. ನ. 30 ರಂದು ರಾತ್ರಿ 9 ಗಂಟೆಗೆ ಶಿವಾಜಿ ನಗರದ ಶೋಭಾ ಗುರುರಾವ್ ಕಾಥವಟೆ ಎಂಬುವವರ ಮನೆಗೆ ವಾಶಿಂಗ್ ಮಶಿನ್ ರಿಪೇರಿ …
Read More »ಬಾಲಕಿ ಬೇರೊಬ್ಬನೊಂದಿಗೆ ವಿವಾಹವಾಗಲು ಮುಂದಾಗಿರುವ ವಿಷಯ ತಿಳಿದು ಆಕೆಯನ್ನು ಕಣಕುಂಬಿ ಅರಣ್ಯಕ್ಕೆ ಬೈಕ್ ನಲ್ಲಿ ಕರೆದೊಯ್ದು ಕೊಲೆ
ಬೆಳಗಾವಿ – 2019ರ ನವೆಂಬರ್ ತಿಂಗಳಲ್ಲಿ ಅಪಹರಣವಾಗಿದ್ದ ಅಪ್ರಾಪ್ತ ಬಾಲಕಿಯನ್ನು ನಂತರದಲ್ಲಿ ಕತ್ತು ಸೀಳಿ, ಕೊಲೆ ಮಾಡಿ ಕಣಕುಂಬಿ ಅರಣ್ಯದಲ್ಲಿ ಹೂತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಅಪಹರಿಸಲಾಗಿತ್ತು. ಈ ಕುರಿತು ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದರು. ಹಿಡಕಲ್ ಗ್ರಾಮದ ಆದರ್ಶ ದತ್ತು ಪಾರ್ಥನಹಳ್ಳಿ ಎಂಬಾತ ಬಾಲಕಿಯೊಂದಿಗೆ ಸಲುಗೆಯಿಂದಿದ್ದ ಮಾಹಿತಿ ಅರಿತ ಪೊಲೀಸರು ತೀವ್ರ ತನಿಖೆ ನಡೆಸಿದಾಗ ಸಂಪೂರ್ಣ ವಿವರ ಹೊರಬಿದ್ದಿದೆ. …
Read More »ಬಿ.ಎಸ್.ಯಡಿಯೂರಪ್ಪ ಸಭಾಭವನದ ಉದ್ಘಾಟನೆ ನೆರವೇರಿಸಿದ ವಿಜಯೇಂದ್ರ
ಬೆಳಗಾವಿ: ಬೆಳಗಾವಿಯ ಆಟೋನಗರದ ಗುರು ರೋಡ್ ಲೈನ್ಸ್ ಕಚೇರಿ ಆವರಣದಲ್ಲಿ ಗುರು ರೋಡ್ ಲೈನ್ಸ್ ಸಂಸ್ಥಾಪಕರಾದ ಗುರುದೇವ ಪಾಟೀಲ ಅವರ ಇಚ್ಚಾಶಕ್ತಿಯಿಂದ ನೂತನವಾಗಿ ನಿರ್ಮಿಸಲಾದ ಬಿ.ಎಸ್.ಯಡಿಯೂರಪ್ಪ ಸಭಾಭವನದ ಉದ್ಘಾಟನೆಯನ್ನು ಬಿ.ವೈ.ವಿಜಯೇಂದ್ರ ಅವರು ನೆರವೇರಿಸಿದರು. ಉದ್ಘಾಟನಾಪರ ಮಾತನಾಡಿದ ಅವರು,”ಪಕ್ಷದ ಕಾರ್ಯಕರ್ತ, ಅಪ್ಪಟ ಅಭಿಮಾನಿಯಾದ ಗುರುದೇವ ಪಾಟೀಲ ಅವರ ಸಂಕಲ್ಪಶಕ್ತಿಯಿಂದ ತಮ್ಮ ಸ್ವಂತ ಜಾಗದಲ್ಲಿ, ಸ್ವಂತ ಖರ್ಚಿನಲ್ಲಿ ತಂದೆಯವರ ಹೆಸರಿನಲ್ಲಿ ಸಭಾಭವನ ನಿರ್ಮಿಸಿದ್ದು ವೈಯಕ್ತಿಕವಾಗಿ ನನಗೆ ಅಭಿಮಾನ ತಂದಿದೆ ಎಂದರು. ರಾಜ್ಯದಲ್ಲಿ ರಾಜಕಾರಣಿಯಾಗಿ, …
Read More »ಸಚಿವ ಸಂಪುಟ ಬಗ್ಗೆ ಯಾವುದೇ ಮಾತುಕತೆ ಇಲ್ಲ, ಶಾಸಕರಿಗೆ ಬಹಿರಂಗ ಹೇಳಿಕೆ ಕೊಡಲು ಅವಕಾಶ ಇಲ್ಲ,
ಬೆಳಗಾವಿ – ಬೆಳಗಾವಿಯಲ್ಲಿ ಶುಕ್ರವಾರ ನಡೆಯಲಿರುವ ಭಾರತೀಯ ಜನತಾಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಕೋರ್ ಕಮಿಟಿ ಸಭೆ ನಡೆಯಿತು. ಕರ್ನಾಟಕ ಉಸ್ತುವಾರಿ ಅರುಣ ಸಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಸೇರಿದಂತೆ ಕೋರ್ ಕಮಿಟಿ 14 ಸದಸ್ಯರು ಭಾಗವಹಿಸಿದ್ದರು. ಸಭೆಯ ಬಳಿಕ ಅರವಿಂದ ಲಿಂಬಾವಳಿ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ಶನಿವಾರ ನಡೆಯಲಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲವ್ ಜಿಹಾದ್ ಸಂಬಂಧ ಚರ್ಚಿಸಿ, ಲವ್ …
Read More »ಕನ್ನಡ ಪರ ಸಂಘಟನೆಗಳ ಆಯೋಜಕರಿಗೆ ಹೈಕೋರ್ಟ್ ಶಾಕ್ ಬಂದ್ ನಿಂದ ಆಗುವ ನಷ್ಟಕ್ಕೆ ಆಯೋಜಕರೇ ಹೊಣೆ
ಬೆಂಗಳೂರು : ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳ ಆಯೋಜಕರಿಗೆ ಹೈಕೋರ್ಟ್ ಶಾಕ್ ನೀಡಿದೆ. ಬಂದ್ ನಿಂದ ಆಗುವ ನಷ್ಟಕ್ಕೆ ಆಯೋಜಕರೇ ಹೊಣೆ ಎಂದಿದೆ. ಪ್ರತಿಭಟನಾ ಮೆರವಣಿಗೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ …
Read More »ಚಿಕ್ಕೋಡಿ ಜಿಲ್ಲೆ ಮಾಡಿ ಎಂದು ಸಾಹುಕಾರ ರೀಗೆ ಚಿಕ್ಕೋಡಿ ಶ್ರೀ ಗಳು ಹಾಗೂ ಹೋರಾಟ ಸಮಿತಿಯಿಂದ ಮನವಿ
ಚಿಕ್ಕೋಡಿ: ಚಿಕ್ಕೋಡಿ ಜಿಲ್ಲೆ ರಚೆನೆಗೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಶುಕ್ರವಾರ ಚಿಕ್ಕೋಡಿ ಹೋರಾಟ ಸಮಿತಿಯವರು ಚಿಂಚಣಿ ಹಾಗೂ ಚಿಕ್ಕೋಡಿ ಶ್ರೀಗಳ ಮುಂದಾಳತ್ವದಲ್ಲಿ ಮನವಿ ಸಲ್ಲಿಸಿದರು. ಚಿಂಚಣಿಯ ಅಲ್ಲಮಪ್ರಭು ಮಹಾಸ್ವಾಮಿಗಳು ಮಾತನಾಡಿ, ಕಳೆದ 25 ವರ್ಷಗಳಿಂದ ಚಿಕ್ಕೋಡಿ ಹಾಗೂ ಗೋಕಾಕ ಜಿಲ್ಲೆಗಾಗಿ ಹೋರಾಟ ನಡೆದಿದೆ. ಜಿಲ್ಲೆಯಾಗುವುದರಿಂದ ಈ ಭಾಗದ ಹಳ್ಳಿಗಳಿಗೆ ಮರು ಜೀವ ಬರುತ್ತದೆ. ಆದ್ದರಿಂದ ಈ ಭಾಗದ ಜನಪ್ರತಿನಿಧಿಗಳು ಸರಕಾರದ ಮೇಲೆ ಒತ್ತಡ ತಂದು …
Read More »(ಡಿ.6) ಆಚರಿಸಲಾಗುವ “ಮೌಢ್ಯ ವಿರೋಧಿ ಪರಿವರ್ತನಾ ದಿನ” ಕಾರ್ಯಕ್ರಮ
ಗೋಕಾಕ: ಸನ್ಮಾನ್ಯ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷ ನಡೆಯುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು (ಡಿ.6) ಆಚರಿಸಲಾಗುವ “ಮೌಢ್ಯ ವಿರೋಧಿ ಪರಿವರ್ತನಾ ದಿನ” ಕಾರ್ಯಕ್ರಮವನ್ನು ಗೋಕಾಕನ ಮರಾಠ ಸಮಾಜದ ಸ್ಮಶಾನ ಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯಾದ್ಯಂತ ಜನ ಸಮುದಾಯಲ್ಲಿ ವೈಚಾರಿಕ ಜಾಗೃತಿ ಮತ್ತು …
Read More »ಅರುಣ ಸಿಂಗ್ ಬಂದ ಮೇಲೆ ಚರ್ಚಿಸಿಸಂಪುಟ ವಿಸ್ತರಣೆತೀರ್ಮಾನ.:BSY
ಬೆಳಗಾವಿ :ಅರುಣ ಸಿಂಗ್ ಬಂದ ಮೇಲೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅವರ ಸಂದೇಶ ನೋಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಸಂಪುಟ ವಿಸ್ತರಣೆ ಸಂಬಂದ ಅರುಣ ಸಿಂಗ್ ಸಂದೇಶ ತಂದಿದ್ದಾರೆ.ಅವರ ಸಂದೇಶ ಏನಿದೆ ನೋಡಿ ವಿಸ್ತರಣೆ, ಪುನರ್ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ರಾಜ್ಯದ ಅಧ್ಯಕ್ಷರ ನೇತೃತ್ವದಲ್ಲಿ ಎಲ್ಲಾ ವಿಚಾರ ಚರ್ಚೆ ಮಾಡುತ್ತೇವೆ. ಬಿಬಿಎಂಪಿ ಚುನಾವಣಾ ಬಗ್ಗೆ ಹೈಕೋರ್ಟ್ ತೀರ್ಮಾನ. ಈ ಬಗ್ಗೆ ಮಾಹಿತಿ ಸಿಕ್ಕಿದೆ ನೋಡೊಣ ಎಂದು ಬೆಳಗಾವಿ ವಿಮಾನ …
Read More »