ಉಡುಪಿ: ಶ್ರೀ ಕೃಷ್ಣ ಮಠದ ಬೋರ್ಡ್ ಬದಲಾವಣೆ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಬೋರ್ಡ್ ನಲ್ಲಿ ಕನ್ನಡ ಕಾಣೆಯಾಗಿರುವ ಬಗ್ಗೆ ಕನ್ನಡಪರ ಸಂಘಟನೆಗಳು ಮಠದ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಷ್ಟಾಗುತ್ತಲ್ಲೇ ಪರ್ಯಾಯ ಅದಮಾರು ಮಠದಿಂದ ಸ್ಪಷ್ಟನೆ ನೀಡಿದೆ.ಕೃಷ್ಣ ಮಠದ ಪುನಶ್ಚೇತನಗೊಳಿಸುವ ಜವಾಬ್ದಾರಿ ಹೊತ್ತಿರುವ ಕಲಾವಿದ ಪುರುಷೋತ್ತಮ ಅಡ್ವೆ ಮಾತನಾಡಿದ್ದಾರೆ. ಉಡುಪಿ ಕೃಷ್ಣ ಮಠವನ್ನು ಪುನಶ್ಚೇತನಗೊಳಿಸಲಾಗುತ್ತಿದೆ. ಪುನಶ್ಚೇತನದ ಸಂದರ್ಭ ಮಖ್ಯದ್ವಾರದ ಪ್ಲಾಸ್ಟಿಕ್ ಬೋರ್ಡ್ ತೆಗೆಯಲಾಗಿದೆ. ಮರದಲ್ಲಿ ತಯಾರಿಸಿ ಬೋರ್ಡ್ ಅಳವಡಿಸುವ ಯೋಜನೆ …
Read More »Monthly Archives: ಡಿಸೆಂಬರ್ 2020
ಟ್ರ್ಯಾಕ್ಟರ್- ಆಟೋ ಡಿಕ್ಕಿ- ಇಬ್ಬರು ಕೂಲಿ ಕಾರ್ಮಿಕರು ಸಾವು, ಐವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಆಟೋ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಲಿ ಕೆಲಸಕ್ಕಾಗಿ ಆಟೋದಲ್ಲಿ ತೆರಳುತ್ತಿದ್ದ ಎಂಟು ಜನರ ಪೈಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಮೃತರ ವಿವರ ಇನ್ನು ತಿಳಿದುಬಂದಿಲ್ಲ.ಟ್ರ್ಯಾಕ್ಟರ್ ಟಂಟಂಗೆ ಡಿಕ್ಕಿ ಹೊಡೆದ ರಭಸಕ್ಕೆ ಗಾಯಾಳುಗಳೆಲ್ಲ …
Read More »ದೇವಸ್ಥಾನ ಜಮೀನು ವಿವಾದ: ಬೆಳಗಾವಿಯಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಚಿಂತಾಜನಕ
ಬೆಳಗಾವಿ : ತಾಲ್ಲೂಕಿನ ಗೌಂಡವಾಡ ಗ್ರಾಮದ ಕಾಳಬೈರವನಾಥ್ ದೇವಸ್ಥಾನದ ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಐದು ಜನರ ಗುಂಪು ಓರ್ವ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಗೌಂಡವಾಡ ಗ್ರಾಮದ ಸತೀಶ್ ಪಾಟೀಲ(34) ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿದೆ. ನಿನ್ನೆ ರಾತ್ರಿ 9.30 ರ ಸುಮಾರಿಗೆ ಬೆಳಗಾವಿ ನಗರದ ಮರಾಠ ಮಂಡಳ ಕಾಲೇಜ್ ಸಮೀಪವಿರುವ ತಮ್ಮ ಅಂಗಡಿಯನ್ನು ಬಂದ್ ಮಾಡಿಕೊಂಡು ಮನೆಗೆ …
Read More »ರಾಜಕಾರಣದಲ್ಲಿ ಯಾವ ಶಾಪವೂ ತಟ್ಟುವುದಿಲ್ಲ: ಸಾರಾ ಮಹೇಶ್ ಗೆ ಸಚಿವ ರಮೇಶ್ ತಿರುಗೇಟು
ಬೆಳಗಾವಿ : ಎಚ್.ವಿಶ್ವನಾಥ್ ಅವರಿಗೆ ಚಾಮುಂಡೇಶ್ವರಿ ಶಾಪ ತಟ್ಟಿದೆ ಎಂದು ಸಾ.ರಾ ಮಹೇಶ್ ಹೇಳಿಕೆಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ತಿರುಗೇಟು ನೀಡಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದೇ ಶಾಪ ತಟ್ಟುವುದಿಲ್ಲ. ಎಚ್.ವಿಶ್ವನಾಥ್ ಅವರ ಹೈಕೋರ್ಟ್ ಆದೇಶದ ಕುರಿತು ಸುಪ್ರೀಂ ಕೋರ್ಟ್ ಅಪೀಲು ಸಲ್ಲಿಸುತ್ತೇವೆ ಎಂದಿದ್ದಾರೆ. ವಿಶ್ವನಾಥ್ ಅವರ ಜೊತೆಗೆ ನೂರಕ್ಕೆ ನೂರರಷ್ಟು 17 ಜನರು ಜೊತೆಗಿದ್ದೇವೆ. ಸುಪ್ರೀಂ ಕೋರ್ಟ್ ಬಾಗಿಲು ತಟ್ಟುತ್ತೇವೆ ಎನ್ನುವ …
Read More »ಆಶಿಕಿ ನಟ ರಾಹುಲ್ರಾಯ್ ಗೆ ಬ್ರೇನ್ ಸ್ಟ್ರೋಕ್ ಆಗಿದೆ
ಮುಂಬೈ,- ಎಲ್ ಎ ಸಿ- ಲಿವ್ ದಿ ಬ್ಯಾಟಲ್ ಇನ್ ದಿ ಕಾರ್ಗಿಲ್ ಎಂಬ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ನಟ ರಾಹುಲ್ ರಾಯ್ಗೆ ಬ್ರೇನ್ ಸ್ಟ್ರೋಕ್ ಆಗಿದ್ದು ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಶಿಕಿ ಚಿತ್ರದ ನಂತರ ಹೆಂಗಳೆಯರ ದಿಲ್ ಗೆದ್ದಿದ್ದ ರಾಹುಲ್ರಾಯ್ ನಂತರ ಜುನೂನ್, ಗೂಮ್ರಾ, ಅಗ್ರಾ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದು ಪ್ರಸ್ತುತ ಎಲ್ಎಸಿ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಎಲ್ಎಸಿ ಚಿತ್ರದ ಚಿತ್ರೀಕರಣವು ಕಾರ್ಗಿಲ್ನಲ್ಲಿ ನಡೆಯುತ್ತಿದ್ದು …
Read More »ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಇನ್ನಷ್ಟು ವಿಳಂಬ
ಬೆಂಗಳೂರು, – ಗ್ರಾಮ ಪಂಚಾಯ್ತಿ ಚುನಾವಣೆಗೆ ಆಯೋಗ ಮುಹೂರ್ತ ನಿಗದಿಪಡಿಸಿರುವುದರಿಂದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮತ್ತೆ ನೆನೆಗುದಿಗೆ ಬಿದ್ದಿದೆ. ವೈದ್ಯ ಹೇಳಿದ್ದೂ ಅದನ್ನೇ ರೋಗಿ ಬಯಸಿದ್ದೂ ಅದನ್ನೇ ಎಂಬಂತೆ ಗ್ರಾಮ ಪಂಚಾಯ್ತಿ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ. ಈ ವಾರದಲ್ಲಿ ಸಚಿವರಾಗುತ್ತೇವೆಂದು ಮನಸ್ಸಿನಲ್ಲೇ ಮಂಡಕ್ಕಿ ಮೇಯ್ದಿದ್ದ ಆಕಾಂಕ್ಷಿಗಳು ಜನವರಿ ವರೆಗೂ ಕಾಯಲೇಬೇಕು. ಆ ವೇಳೆಗೆ ಕೇಂದ್ರ ಚುನಾವಣಾ ಆಯೋಗವೇನಾದರೂ …
Read More »ಒಳ ಜಗಳದಿಂದಾಗಿ ಬಿಜೆಪಿ2013ರಲ್ಲಿ ಹೊಡೆದು ಹೋಳಾದಂತೆ ಮುಂದಿನ ದಿನಗಳಲ್ಲಿ ಮತ್ತೆ ಇಬ್ಬಾಗವಾಗಲಿದೆ:ರಾಮಲಿಂಗಾರೆಡ್ಡಿ
ಬೆಂಗಳೂರು, – ಒಳ ಜಗಳದಿಂದಾಗಿ ಬಿಜೆಪಿ 2013ರಲ್ಲಿ ಹೊಡೆದು ಹೋಳಾದಂತೆ ಮುಂದಿನ ದಿನಗಳಲ್ಲಿ ಮತ್ತೆ ಇಬ್ಬಾಗವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಭವಿಷ್ಯ ನುಡಿದಿದ್ದಾರೆ. ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ಗೆ ಸೋಲಾಗಿರಬಹುದು. ಬಿಜೆಪಿ ಗೆದ್ದಿರಬಹುದು. ಆದರೆ, ಪರಿಸ್ಥಿತಿ ಹೀಗೆ ಇರುದಿಲ್ಲ ಎಂದು ಹೇಳಿದರು. ಕಾಂಗ್ರೆಸ್ನಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. ಆದರೆ ಅವು ಸರಿ ಹೋಗುತ್ತವೆ. …
Read More »ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಯುಜುವೇಂದ್ರ ಚಹಲ್ ಭಾವಿ ಬಾಳ ಸಂಗಾತಿಯನ್ನ ಮಿಸ್ ಮಾಡಿಕೊಳ್ಳುತ್ತಿದ್ದಾರೆ.
ನವದೆಹಲಿ: ಕ್ರಿಕೆಟಿಗ ಯುಜುವೇಂದ್ರ ಚಹಲ್ ಭಾವಿ ಪತ್ನಿ ಧನಶ್ರೀ ಜೊತೆ ಕ್ಲಿಕ್ಕಿಸಿಕೊಂಡಿರುವ ಸೆಲ್ಫಿ ಫೋಟೋ ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಯುಜುವೇಂದ್ರ ಚಹಲ್ ಭಾವಿ ಬಾಳ ಸಂಗಾತಿಯನ್ನ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಫೋಟೋ ಶೇರ್ ಮಾಡಿಕೊಂಡಿರುವ ಚಹಲ್, ಕ್ಯಾಪ್ಷನ್ ನೀಡಿಲ್ಲ. ಆದ್ರೆ ಧನಶ್ರೀ, ವಾಟ್ ಎ ಸೆಲ್ಫಿ, ಸಚ್ ಎ ಪ್ರೋ ಎಂದು ಬರೆದು ಎಮೋಜಿ ಹಾಕಿ ಕಮೆಂಟ್ ಮಾಡಿದ್ದಾರೆ. https://www.instagram.com/p/CIMz3GZBIG-/?utm_source=ig_embed
Read More »ಸಚಿವರಾಗಲು ಎಚ್.ವಿಶ್ವನಾಥ್ ಅನರ್ಹ ಎಂದು ಹೈಕೋರ್ಟ್ ತೀರ್ಪು ದುರದೃಷ್ಟಕರ: ಆರ್.ಅಶೋಕ್
ಚಾಮರಾಜನಗರ: ಸಚಿವರಾಗಲು ಎಚ್.ವಿಶ್ವನಾಥ್ ಅನರ್ಹ ಎಂದು ಹೈಕೋರ್ಟ್ ತೀರ್ಪು ನೀಡಿರುವುದು ದುರದೃಷ್ಟಕರವಾಗಿದ್ದು, ಮುಂದೆ ವಿಶ್ವನಾಥ್ ಪರ ಕಾನೂನು ಹೋರಾಟ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವನಾಥ್ ಪರ ಬ್ಯಾಟಿಂಗ್ ಮಾಡಿದರು.ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಾತನಾಡಿದ ಅವರು, ಎಚ್.ವಿಶ್ವನಾಥ್ ಪರ ಕಾನೂನು ಹೋರಾಟ ಮಾಡುತ್ತೇವೆ. ಅವರ ಪರವಾಗಿ ಪಕ್ಷ ಕೂಡ ನಿಲ್ಲುತ್ತದೆ. ವಿಶ್ವನಾಥ್ ಪರ ತೀರ್ಪು ಬರುತ್ತೆದೆ ಎಂಬ ಭರವಸೆ ಇತ್ತು ಎಂದು ತಿಳಿಸಿದರು. ಹೋರಾಟ ನಡೆಸಲು …
Read More »ಮಂಗಳಮುಖಿಯರಿಬ್ಬರು ಹಣಕ್ಕಾಗಿ ಅಪರಿಚಿತ ವ್ಯಕ್ತಿಯೊಂದಿಗೆ ಓರಲ್ ಸೆಕ್ಸ್ ಮಾಡುವಂತೆ 14 ವರ್ಷದ ಬಾಲಕನಿಗೆ ಕಿರುಕುಳ
ಚೆನ್ನೈ: ಮಂಗಳಮುಖಿಯರಿಬ್ಬರು ಹಣಕ್ಕಾಗಿ ಅಪರಿಚಿತ ವ್ಯಕ್ತಿಯೊಂದಿಗೆ ಓರಲ್ ಸೆಕ್ಸ್ ಮಾಡುವಂತೆ 14 ವರ್ಷದ ಬಾಲಕನಿಗೆ ಕಿರುಕುಳ ನೀಡಿ ವಿಕೃತಿ ಮೆರೆದಿದ್ದಾರೆ.ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಅಪರ್ಣ(32) ಹಾಗೂ ಸತ್ಯ(30) ಎಂದು ಗುರುತಿಸಲಾಗಿದೆ. ಇಬ್ಬರೂ ಕೂತೂರು ಮೂಲದವರಾಗಿದ್ದಾರೆ. ಬಾಲಕ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಅಲ್ಪಸಂಖ್ಯಾತ ಹುಡುಗ ಒಂದು ವಾರದ ಹಿಂದೆ ದಿಂಡಿಗಲ್ನ ಬಸ್ ನಿಲ್ದಾಣದಲ್ಲಿ ಅಪರ್ಣ ಹಾಗೂ ಸತ್ಯ ಅವರನ್ನು ಭೇಟಿಯಾಗಿದ್ದ. …
Read More »