Breaking News

Yearly Archives: 2020

ಗ್ರಾಮೀಣ ಕ್ಷೇತ್ರದಲ್ಲಿ ಕಮಲ ಅರಳಿಸಲು ನೂತನ ಕ್ಯಾಲೇಂಡರ್ ವಿತರಿಸಿದ ರಮೇಶ ಜಾರಕಿಹೊಳಿ

ಬೆಳಗಾವಿ- ಗ್ರಾಮೀಣ ಕ್ಷೇತ್ರದಲ್ಲಿ ಕಮಲ ಅರಳಿಸಲು ನೂತನ ಕ್ಯಾಲೇಂಡರ್ ವಿತರಿಸಿದ ರಮೇಶ ಜಾರಕಿಹೊಳಿ ಪೃಥ್ವಿ ಫೌಂಡೇಶನ್ ವತಿಯಿಂದ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕೊರೊನಾ ವಾರಿಯರ್ಸ್‍ಗೆ ಸತ್ಕಾರ ಮಾಡಿ ಬಳಿಕ ತಮ್ಮ ಭಾವಚಿತ್ರದ ಹೊಸ ವರ್ಷದ ಕ್ಯಾಲೇಂಡರ್‍ನ್ನು ಬಿಡುಗಡೆಗೊಳಿಸಿದರು. ಈ ವೇಳೆ ಪೃಥ್ವಿ ಸಿಂಗ್ ಮಾತನಾಡಿ ಸುಮಾರು 10 ಸಾವಿರ ಕ್ಯಾಲೇಂಡರ್‍ಗಳನ್ನು ಗ್ರಾಮೀಣ ಕ್ಷೇತ್ರದಲ್ಲಿ ವಿತರಿಸುತ್ತಿದ್ದೇವೆ. ಅದೇ ರೀತಿ ಗ್ರಾಮೀಣ ಕ್ಷೇತ್ರದಲ್ಲಿ …

Read More »

ಲಕ್ಷ್ಮೀ ಹೆಬ್ಬಾಳ್ಕರ್ ವರಿಷ್ಠರು ಹೇಳುವಷ್ಟು ದೊಡ್ಡ ಲೀಡರ್ ಅಲ್ಲ..ರಮೇಶ ಜಾರಕಿಹೊಳಿ

  ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ವಾಗ್ದಾಳಿ ಮುಂದುವರಿಸಿದ್ದಾರೆ. ಆಕೆ ವರಿಷ್ಠರು ಹೇಳುವಷ್ಟು ದೊಡ್ಡ ಲೀಡರ್ ಅಲ್ಲ. ನನ್ನ ಹಿತೈಷಿಗಳು ಆಕೆಯ ಬಗ್ಗೆ ಮಾತನಾಡಬೇಡ ಎಂದಿದ್ದಕ್ಕೆ ಮಾತನಾಡುವುದನ್ನು ಬಿಟ್ಟಿದ್ದೇನೆ ಎಂದು ಹೇಳುವ ಮೂಲಕ ಮತ್ತೆ ತಿರುಗೇಟು ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತನಾಡಬೇಡ ಎಂದು ವರಿಷ್ಠರು ಹೇಳುವಷ್ಟು ಆಕೆ ದೊಡ್ಡ …

Read More »

ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ

ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …

Read More »

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಿಭಾಗದ ವತಿಯಿಂದ ಚಿಗುರು ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಿಭಾಗದ ವತಿಯಿಂದ ಚಿಗುರು ಕಾರ್ಯಕ್ರಮ -2020 ನ್ನು ಆಯೋಜಿಸಲಾಗಿತ್ತು. ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಈ ಚಿಣ್ಣರ ಹಬ್ಬವನ್ನು ಬಸವರಾಜ ಕಟ್ಟಿಮನಿ ಸಭಾಗೃಹದಲ್ಲಿ ಆಯೋಜನೆ ಮಾಡಲಾಗಿತ್ತು. ವೇದಿಕೆಯ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ,ಉತ್ತರ ವಿಭಾಗದ ಶಾಸಕ ಅನಿಲ ಬೆನಕೆ, ವೇಣುಧ್ವನಿ ಬಾನುಲಿಯ ಸುನಿತಾ ದೇಸಾಯಿ,ಪತ್ರಕರ್ತ್ ಮಹೇಶ ವಿಜಾಪುರ & ಗಣ್ಯರು ಆಸಿನರಾಗಿದ್ದರು. ದೀಪ ಬೆಳಗಿಸುವ …

Read More »

ಬ್ರಿಟನ್‍ನಿಂದ ರಾಜ್ಯಕ್ಕೆ 1638 ಜನರು ಹಿಂತಿರುಗಿದ್ದಾರೆ. ಇದರಲ್ಲಿ 14 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು,ಡಿ.26- ಬ್ರಿಟನ್ ದೇಶವನ್ನೇ ತಲ್ಲಣ್ಣಗೊಳಿಸಿರುವ ರೂಪಾಂತರಗೊಂಡ ಹೊಸ ಮಾದರಿಯ ಕೊರೊನಾ ಸೋಂಕು ಕರ್ನಾಟಕಕ್ಕೂ ಕಾಲಿಟ್ಟಿದೆಯೇ ಇಲ್ಲವೇ ಎಂಬುದು ನಾಳೆ ಬಹಿರಂಗಗೊಳ್ಳಲಿದೆ.  ಬ್ರಿಟನ್‍ನಿಂದ ಸ್ವದೇಶಕ್ಕೆ ಆಗಮಿಸಿರುವ 1638 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ನಾಳೆ ವರದಿ ಬಹಿರಂಗಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್‍ನಿಂದ ರಾಜ್ಯಕ್ಕೆ 1638 ಜನರು ಹಿಂತಿರುಗಿದ್ದಾರೆ. ಇದರಲ್ಲಿ 14 ಜನರಿಗೆ …

Read More »

ಕಾರಿಗೆ ಲಾರಿ ಡಿಕ್ಕಿಕಾರು ನುಜ್ಜುಗುಜ್ಜಾಗಿದ್ದು, ಬೆಂಗಳೂರು ಮೂಲದ ನಂಬರಿನ ಕಾರು ಎಂಬುದು ತಿಳಿದು ಬಂದಿದೆ.

ಅಮರಾವತಿ: ತಿರುಪತಿಯಿಂದ ಬರುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತಿರುಪತಿಯ ಚಂದ್ರಗಿರಿ ಮಂಡಲದ ನೇಂಡ್ರಗುಂಟನಲ್ಲಿ ನಡೆದಿದೆ. ಮೃತ ಮಹಿಳೆಯರಲ್ಲಿ ಇಬ್ಬರು ಕರ್ನಾಟಕದ ನಂಗಿಲಿ ಪ್ರದೇಶವದವರೆಂದು ಗುರುತಿಸಲಾಗಿದೆ. ಇನ್ನೋರ್ವ ಮಹಿಳೆ ಬಂಗಾರುಪಾಲೆಂನ ನಿವಾಸಿಯಾಗಿದ್ದಾರೆ. ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಅತಘಾದಲ್ಲಿ ಈ ಮೂವರು ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು ತಿರುಮಲ ವೆಂಕಟೇಶ್ವರನ ದರ್ಶನ ಪಡೆದು ಕಾರಿನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಮೃತ …

Read More »

ಬೆಂಗಳೂರು ಸೇಫ್ ಸಿಟಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮಂಜೂರು ಮಾಡಿರುವ 619 ಕೋಟಿ ಹಗರಣ ಪ್ರಕರಣ ಹೊಸ ತಿರುವು

ಬೆಂಗಳೂರು: ಬೆಂಗಳೂರು ಸೇಫ್ ಸಿಟಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮಂಜೂರು ಮಾಡಿರುವ 619 ಕೋಟಿ ಹಗರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ವಿಚಾರದಲ್ಲಿ ಹಸ್ತಕ್ಷೇಪ ಆರೋಪ ಎದುರಿಸುತ್ತಿರೋ ಐಪಿಎಸ್ ಅಧಿಕಾರಿ ಡಿ.ರೂಪಾ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ಪ್ರತಿಕ್ರಿಯೆ ನೀಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ, ಜನರ ಹಣ ಮತ್ತು ಸರ್ಕಾರದ ಹಣ ಪೋಲಾಗಬಾರದೆಂದು ಕರೆಮಾಡಿದ್ದು ನಿಜ. ಇದರಲ್ಲಿ ಯಾವುದೇ ಹಿತಾಸಕ್ತಿಯೂ ಇರಲಿಲ್ಲ. ಕೆಲವೊಂದು ದಾಖಲೆಯ …

Read More »

ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದಜೊತೆ ಮಾತನಾಡಿದ ಅನಿರುದ್ಧ್, ಪ್ರತಿಷ್ಠಾಪನೆಯಾಗಿರುವ ಮೂರ್ತಿಯನ್ನ ರಾತ್ರೋ ರಾತ್ರಿ ಯಾರಿಗೂ ಹೇಳದೇ ತೆಗೆಯುವುದು ಎಷ್ಟು ಸೂಕ್ತ. ಈ ರೀತಿಯ ಕೆಲಸಗಳಿಂದ ಹಿರಿಯ ವ್ಯಕ್ತಿಗೆ ಅವಮಾನ ಮಾಡಿದಂತೆ ಆಗಲ್ವಾ? ಇದರಿಂದ ಅಭಿಮಾನಿಗಳಿಗೆ ದುಃಖ ಆಗುತ್ತೆ. ವಿಷ್ಣುವರ್ಧನ್ ಅಪ್ಪಾಜಿ ಪ್ರತಿಮೆಯನ್ನ ಯಾರು ತೆಗೆದ್ರು ಮತ್ತು ಯಾಕೆ ತೆಗೆದರು ಎಂದು ಬೇಸರ ವ್ಯಕ್ತಪಡಿಸಿದರು. : …

Read More »

ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ.

ಬೆಂಗಳೂರು: ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮುನ್ನೇಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಟೋಲ್‍ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ …

Read More »

ತಾಯಿಯೇ ಮಗಳನ್ನು ಅಪಹರಿಸಿ ಪರಾರಿ

ಕಾರವಾರ: ತನಗೆ ಇಷ್ಟವಿಲ್ಲದೇ ಪ್ರೀತಿಸಿ ಮದುವೆಯಾಗಿದ್ದಕ್ಕೆ ತಾಯಿಯೇ ಮಗಳನ್ನು ಅಪಹರಿಸಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು ವರದಿಯಾಗಿದೆ. ತಾಯಿಯಿಂದ ಅಪಹರಣಕ್ಕೊಳಗಾದ ಯುವತಿಯನ್ನು ರುತಿಕಾ ಎಂದು ಗುರುತಿಸಲಾಗಿದೆ. ಈಕೆಯ ತಾಯಿ ರೂಪ ಶಿರ್ಸಿಕರ್ ಆಗಿದ್ದು, ಶಿರಸಿ ನಗರದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದಳು. ರುತಿಕಾ ಶಿರಸಿಯ ಬಸವೇಶ್ವರ ನಗರದ ಮಣಿಕಂಠ ಎಂಬ ಯುವಕನನ್ನು ಪ್ರೀತಿಸಿ ಕೆಲವು ದಿನದ ಹಿಂದೆ ವಿವಾಹವಾಗಿದ್ದಳು. ಈ ಬಗ್ಗೆ ತಾಯಿ ರೂಪ ಶಿರ್ಸಿಕರ್‍ಗೆ ಇಷ್ಟವಿರಲಿಲ್ಲ. ಮಗಳು ತನ್ನ …

Read More »