ಬೆಂಗಳೂರು: ನಟಿ ಮಯೂರಿ ದೀಪಾವಳಿ ದಿನದಂದೇ ಗುಡ್ ನ್ಯೂಸ್ ಒಂದನ್ನು ಬಹಿರಂಗಪಡಿಸಿದ್ದಾರೆ. ಮದುವೆ ಬಗ್ಗೆಯೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದ ಮಯೂರಿ, ಇದೀಗ ತಾನು ತಾಯಿಯಾಗುತ್ತಿರುವ ವಿಚಾರ ಕೂಡ ತಿಳಿಸಿದ್ದಾರೆ. ಈಗಾಗಲೇ ಪ್ರೆಗ್ನೆನ್ಸಿ ಫೋಟೋಶೂಟ್ ಮಾಡಿಕೊಂಡಿದ್ದು, ಆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಈ ಶುಭದಿನದಂದು ನಾವು ಪುಟ್ಟ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.ಇದೇ ವರ್ಷ ಜೂನ್ 12ರಂದು ತನ್ನ ಬಹುಕಾಲದ ಗೆಳೆಯ ಅರುಣ್ …
Read More »Yearly Archives: 2020
ಗೆಳೆಯರಿಬ್ಬರ ಹಳೇ ವೈಷಮ್ಯ ಮುಖಕ್ಕೆ ಆ್ಯಸಿಡ್ ಅಂಶವಿರುವ ಕೆಮಿಕಲ್ ಎರಚುವ ಮಟ್ಟಕ್ಕೆ ತಲುಪಿ ಗಲಾಟೆ
ಕಾರವಾರ: ಕುಚುಕು ಗೆಳೆಯರಿಬ್ಬರಲ್ಲಿ ಗಣಪತಿ ವಿಸರ್ಜನೆ ವೇಳೆ ಉಂಟಾದ ಬಿನ್ನಾಭಿಪ್ರಾಯ ದೀಪಾವಳಿಯಲ್ಲಿ ಸಿಡಿದಿದೆ. ಗೆಳೆಯರಿಬ್ಬರ ಹಳೇ ವೈಷಮ್ಯ ಮುಖಕ್ಕೆ ಆ್ಯಸಿಡ್ ಅಂಶವಿರುವ ಕೆಮಿಕಲ್ ಎರಚುವ ಮಟ್ಟಕ್ಕೆ ತಲುಪಿ ಗಲಾಟೆಯಾಗಿದೆ. ಇಂದು ರಾತ್ರಿ ಕಾರವಾರದ ಗ್ರೀನ್ ಸ್ಟ್ರೀಟ್ ಬಳಿ ಈ ಘಟನೆ ನಡೆದಿದೆ. ಕಾರವಾರದ ಮಾಜಾಳಿಯ ಹರೀಶ್ ಮತ್ತು ನಿತೇಶ್ ನಾಯ್ಕ ಇಬ್ಬರೂ ಮೊದಲು ಸ್ನೇಹಿತರಾಗಿದ್ದರು. ಹಳೇ ದ್ವೇಷದ ಹಿನ್ನೆಲೆಯಲ್ಲಿ ನಿತೇಶ್ ನಾಯ್ಕಗೆ ಹರೀಶ್ ಗ್ರೀನ್ ಸ್ಟ್ರೀಟ್ ಬಳಿ ಆಸಿಡ್ ಅಂಶವಿರುವ …
Read More »ಹಬ್ಬಕ್ಕೆ ಸಾಲು ಸಾಲು ರಜೆ – ಮೆಜೆಸ್ಟಿಕ್ KSRTC ಬಸ್ ನಿಲ್ದಾಣದಲ್ಲಿ ಜನಜಾತ್ರೆ
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿನ ಮಂದಿ ಊರುಗಳತ್ತ ಪ್ರಯಾಣಿಸುತ್ತಿದ್ದು, ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಜಾತ್ರೆಯಂತಾಗಿದೆ. ಇಂದು ಮಧ್ಯಾಹ್ನದಿಂದಲೇ ಬೆಂಗಳೂರು ನಗರದ ಬಹುತೇಕ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಜನ ಮಳೆ ಮತ್ತು ಕೊರೊನಾ ಸಹ ಲೆಕ್ಕಿಸದೇ ಊರುಗಳತ್ತ ಹೊರಟು ನಿಂತಿದ್ದಾರೆ. ಹಬ್ಬದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಸ್ ನಿಲ್ದಾಣದತ್ತ ಆಗಮಿಸಿದ್ದರಿಂದ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿದೆ. ತುಮಕೂರು, ಬಳ್ಳಾರಿ, ಮೈಸೂರು …
Read More »ಬೆಳಗಾವಿ ದೇಸೂರು ಬಳಿ ಓವರ್ಟೆಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿ ಅಕ್ಕ, ತಮ್ಮ ಸ್ಥಳದಲ್ಲೇ ಸಾವ
ಬೆಳಗಾವಿ: ಲಾರಿ ಡಿಕ್ಕಿಯಾಕಿ ಬೈಕಿನಲ್ಲಿ ತೆರಳುತ್ತಿದ್ದ ಅಕ್ಕ, ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ದೇಸೂರು ಬಳಿ ನಡೆದಿದೆ. ರೇಣುಕಾ ತೇಗೂರ್(25), ಕಲ್ಮೇಶ್ ಕೊಳವಿ(19) ಮೃತ ದುರ್ದೈವಿಗಳು. ದೇಸೂರ್ನಿಂದ ಕಮಲ್ ನಗರದತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಓವರ್ಟೆಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿ ಚಕ್ರದಡಿ ಸಿಲುಕಿ ಅಕ್ಕ-ತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿತ್ತು. ಬೆಳಗಾವಿ ಗ್ರಾಮೀಣ …
Read More »ಚಾಮರಾಜನಗರದ ರಾಯಭಾರಿಯಾಗಲು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ:ಪುನೀತ್ ರಾಜ್ಕುಮಾರ್
ಚಾಮರಾಜನಗರ: ನಮ್ಮ ಚಾಮರಾಜನಗರದ ರಾಯಭಾರಿಯಾಗಲು ನಾನು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ ಎಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಹೇಳಿದ್ದಾರೆ. ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಜಿಲ್ಲಾಡಳಿತ ಸಿದ್ಧಪಡಿಸಿರುವ ನಾಲ್ಕು ನಿಮಿಷದ ವಿಡಿಯೋವನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ವಚ್ರ್ಯುವಲ್ ಮೂಲಕ ಕಾರ್ಯಕ್ರಮದಲ್ಲಿ ಮಾತನಾಡಿದ ಪುನೀತ್, ಚಾಮರಾಜನಗರದ ರಾಯಭಾರಿಯಾಗಲು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ. ನನ್ನ ತಂದೆಯ ಊರಾದ ಚಾಮರಾಜನಗರದ ಅಭಿವೃದ್ಧಿಗೆ ಸದಾ ಸಿದ್ಧ. ನಮ್ಮ …
Read More »ಅದ್ಯಕ್ಷ ಉಪಾದ್ಯಕ್ಷರ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು ಅದ್ಯಕ್ಷ ಉಪಾದ್ಯಕ್ಷರ ಹೆಸರುಗಳನ್ನು ಇವತ್ತೇ ರಾತ್ರಿ ಹತ್ತು ಗಂಟೆಗೆ ಡಿಕ್ಲೇರ್ ಮಾಡುತ್ತೇವೆ: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ಅದ್ಯಕ್ಷ ಉಪಾದ್ಯಕ್ಷರ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು ಅದ್ಯಕ್ಷ ಉಪಾದ್ಯಕ್ಷರ ಹೆಸರುಗಳನ್ನು ಇವತ್ತೇ ರಾತ್ರಿ ಹತ್ತು ಗಂಟೆಗೆ ಡಿಕ್ಲೇರ್ ಮಾಡುತ್ತೇವೆ ಎಂದು ಕೆಏಂಎಫ್ ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯ ಸಂಕಮ್ ಹೊಟೇಲ್ ನಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಅದ್ಯಕ್ಷ ಆಗಬೇಕೆನ್ನುವ ಆಕಾಂಕ್ಷೆ ಎಲ್ಲರಿಗೂ ಇರುತ್ತದೆ ಲಕ್ಷ್ಮಣ ಸವದಿ,ರಮೇಶ್ ಜಾರಕಿಹೊಳಿ,ಮತ್ತು ಉಮೇಶ್ ಕತ್ತಿ ಮತ್ತು ಇನ್ನುಳಿದ …
Read More »ರಮೇಶ್ ಕತ್ತಿ ನನ್ನ ಬಾಲ್ಯದ ಸ್ನೇಹಿತ ಅವರೇ ಅದ್ಯಕ್ಷ ರಾಗಬೇಕು:ರಮೇಶ್ ಜಾರಕಿಹೊಳಿ
ಬೆಳಗಾವಿ-ಡಿಸಿಸಿ ಬ್ಯಾಂಕ್ ಅದ್ಯಕ್ಷ ಉಪಾದ್ಯಕ್ಷರ ಚುನಾವಣೆ ನಾಳೆ ನಡೆಯಲಿದ್ದು ಈಗ ಬೆಳಗಾವಿಯ ಸರ್ಕ್ಯುಟ್ ಹೌಸ್ ನಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಕೆಲವು ನಿರ್ದೇಶಕರು ರಮೇಶ್ ಕತ್ತಿ ಅವರ ಪುನರಾಯ್ಕೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಹಿರಿಯ ನಾಯಕರು, ಬೆಳಗಾವಿಯಲ್ಲಿ ಸಭೆ ಸೇರಿದ್ದಾರೆ ಸಭೆಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ, ಮಾಜಿ ಸಚಿವ ಉಮೇಶ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ಸಂಸದ …
Read More »ಹೊಸಗುಡ್ಡದಹಳ್ಳಿ ದುರಂತದದಲ್ಲಿ ಬೆಂಕಿಗಾಹುತಿಯಾಯ್ತು ಬದುಕು..!
# ಶಿವಣ್ಣ ಬೆಂಗಳೂರು, ನ.13- ಸುಟ್ಟು ಹೋದ ಕಟ್ಟಡ, ಬೆಂದು ಹೋದ ಮರ, ಸುಟ್ಟು ಕರಕಲಾಗಿರುವ ವಸ್ತುಗಳು, ಬೆಂಕಿಗೆ ಆಹುತಿಯಾಗಿರುವ ಬ್ಯಾರೆಲ್ಗಳು… ಇವು ಕಂಡುಬಂದಿದ್ದು ನಗರದ ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯಲ್ಲಿ. ನವೆಂಬರ್ 10ರಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ರಾಸಾಯನಿಕ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿ ನಲ್ಲಿ ಬೆಂಕಿ ಕಾಣಿಸಿಕೊಂಡು ಗೋದಾಮಿನಲ್ಲಿದ್ದ ರಾಸಾಯನಿಕ ವಸ್ತುಗಳೆಲ್ಲ ಆಹುತಿಯಾಗಿರುವುದಲ್ಲದೆ ಇಡೀ ಕಟ್ಟಡವನ್ನೇ ಆಪೋಷನ ತೆಗೆದು ಕೊಂಡಿದೆ. ಕಟ್ಟಡದ ಮುಂದಿದ್ದ ಎರಡು ವಿದ್ಯುತ್ ಕಂಬದ ಕೇಬಲ್ಗಳು, ಕಾರು, …
Read More »ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆಗೂ ಅಭಿಮಾನಿ ಸಂಸ್ಥೆಗೂ ಅವಿನಾಭಾವ ಸಂಬಂಧ.
ಬೆಂಗಳೂರು, ನ.13- ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆಗೂ ಅಭಿಮಾನಿ ಸಂಸ್ಥೆಗೂ ಅವಿನಾಭಾವ ಸಂಬಂಧ. ಉಪನ್ಯಾಸಕ ವೃತ್ತಿ ತೊರೆದು 1987ರಲ್ಲಿ ಬೆಂಗಳೂರಿಗೆ ಬಂದಾಗ ಅವರು ಡಾ.ರಾಜ್ಕುಮಾರ್ ರಸ್ತೆಯ ಅಭಿಮಾನಿ ಪ್ರಕಾಶನದ ಬಳಿ ನಿಂತಿದ್ದರು. ಇಲ್ಲಿ ತಮ್ಮ ಪತ್ರಕರ್ತ ಜೀವನ ವೃತ್ತಿ ಕಟ್ಟಿಕೊಳ್ಳಲು ಭಾರೀ ಕನಸು ಕಂಡಿದ್ದರು. ಆಗ ಅಭಿಮಾನಿ ಪ್ರಕಾಶನ ವತಿಯಿಂದ ಹೊರತರಲಾಗುತ್ತಿದ್ದ ಪೊಲೀಸ್ ಫೈಲ್ ಹಾಗೂ ಹಲವು ನಿಯತಾಲಿಕೆಗಳು ಪ್ರಕಟಗೊಳ್ಳುತ್ತಿದ್ದವು. ಇಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರು ರವಿಬೆಳಗೆರೆ …
Read More »KAS ಅಧಿಕಾರಿ ಸುಧಾಗೆ ಮುಂದಿದೆ ಮಾರಿಹಬ್ಬ..!
ಬೆಂಗಳೂರು,ನ.13- ಅಕ್ರಮ ಆಸ್ತಿ ಸಂಪಾದನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದಿಂದ ದಾಳಿಗೊಳಗಾಗಿರುವ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿ ಬಿ.ಸುಧಾಗೆ ಇನ್ನಷ್ಟು ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಎಸಿಬಿ ದಾಳಿ ಸಂದರ್ಭದಲ್ಲಿ ಸುಮಾರು ನೂರು ಕೋಟಿಗೂ ಅಧಿಕ ಆಕ್ರಮ ಆಸ್ತಿ ಸಂಪಾದನೆ ಮಾಡಿರುವುದು ಕಂಡು ಬಂದಿರುವ ಕಾರಣ ಜಾರಿ ನಿದೇರ್ಶನಾಲಯ(ಇಡಿ) ಹಾಗೂ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ತನಿಖೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ಐದು ಕೋಟಿಗೂ ಹೆಚ್ಚಿನ ಭ್ರಷ್ಟಾಚಾರದ …
Read More »