ಬೆಂಗಳೂರು : ರಾಜ್ಯ ಸರ್ಕಾರ ಆನ್ಲೈನ್ ಮೂಲಕ ಮನೆ ಬಾಗಿಲಿಗೆ ಮದ್ಯ ತಲುಪಿಸುವ ಬಗ್ಗೆ ಮತ್ತೆ ಗಂಭೀರ ಚಿಂತನೆ ನಡೆಸಿದ್ದು, ಈ ಕುರಿತು ಅಧ್ಯಯನ ನಡೆಸಲು ಹಿರಿಯ ಅಬಕಾರಿ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಖುದ್ದು ಅಬಕಾರಿ ಸಚಿವ ಎಚ್.ನಾಗೇಶ್ ಅವರೇ ಈ ವಿಷಯ ತಿಳಿಸಿದ್ದಾರೆ. ಕಳೆದ ವರ್ಷ ನಾಗೇಶ್ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹೊಸ್ತಿಲಲ್ಲೇ ಈ ಬಗ್ಗೆ ಹೇಳಿಕೆ ನೀಡಿದ್ದರು. ಅದರ ಬಗ್ಗೆ ಸಾಕಷ್ಟುಟೀಕೆ ಟಿಪ್ಪಣಿ ಕೇಳಿಬಂದಿದ್ದರಿಂದ …
Read More »Yearly Archives: 2020
ಭಯ ಬೇಡ, ಮುನ್ನೆಚ್ಚರಿಕೆ ವಹಿಸಿ
ಬೆಳಗಾವಿ: ಕೊರೊನಾ ಬಗ್ಗೆ ಭಯ ಬೇಡ. ಆದರೆ, ಮುಂಜಾಗ್ರತೆ ವಹಿಸಬೇಕು. ಸೋಂಕು ಬಂತೆಂದರೂ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ. – ಕೋವಿಡ್ನಿಂದ ಗುಣಮುಖರಾದ ರಾಮದುರ್ಗ ತಾಲ್ಲೂಕು ಕಟಕೋಳದ ಯುವಕ ಆನಂದ ಸಿದ್ನಾಳ ಅವರ ಸಲಹೆ ಇದು. ಕೋವಿಡ್ ಗೆದ್ದ ಕಥೆಯನ್ನು ಅವರು ‘ಪ್ರಜಾವಾಣಿ’ಯೊಂದಿಗೆ ಹಂಚಿಕೊಂಡರು. ‘ನಾನು ಚಾಲಕ. ಟ್ರಕ್ ಇದೆ. ಲಾಕ್ಡೌನ್ ಆದ ಸಮಯದಲ್ಲಿ ಕೆಲಸ ಇಲ್ಲದೆ ಜೀವನ ನಡೆಸುವುದು ಕಷ್ಟವಾಗಿತ್ತು. ಲಾಕ್ಡೌನ್ ತೆರವಾದ ನಂತರ ಕೆಲವು ದಿನ ಊರು ಸುತ್ತಿದೆ. ಹೋದ ಕಡೆಯಲ್ಲಿ …
Read More »ಯುವ ಬ್ರಿಗೇಡ್ ವತಿಯಿಂದ ಕಟ್ಟಿಸಿದ ‘ನಮ್ಮನೆ’ ಪ್ರವೇಶಿಸಿದ ಮೀರಮ್ಮ
ಹುಕ್ಕೇರಿ: ‘ನಂದು ಮನೆ ಪೂರಾ ಬಿದ್ದು ಹೋಗಿತ್ರಿ. ಮಲಗಾಕ ಬಹಳ ತೊಂದರೆ ಇತ್ತು. ಚಕ್ರವರ್ತಿ ಸೂಲಿಬೆಲೆ ಹಾಗೂ ಯುವ ಬ್ರಿಗೇಡ್ ಸದಸ್ಯರು ಹೊಸ ಮನೆ ಕಟ್ಟಿ ಕೊಟ್ಟಾರು. ನಾನು ಬಡುವಿ ಅದಿನಿ ಅಂತ. ವಾಸ್ತು ಅವ್ರ ಮಾಡ್ಯಾರು. ನಾನು ಆರಾಮ ಅದನ್ರಿ. ನನಗ ಎಲ್ಲ ವ್ಯವಸ್ಥ ಮಾಡ್ಯಾರು. ದೇವರು ಅವರನ್ನು ತಂಪಾಗಿ ಇಟ್ಟಿರಲಿ’ ಎಂದು ಮನ ಮಿಡಿಯುವ ಮಾತುಗಳು ಕೇಳಿ ಬಂದಿದ್ದು, ತಾಲ್ಲೂಕಿನ ಹೊಸೂರ ಗ್ರಾಮದ ಮೀರಮ್ಮ ಬಾಗವಾನ್ ಅವರಿಂದ. ಇದು …
Read More »ಯುವಕರಿಗೆ ಪುಸ್ತಕ ಕೊಡಿಸಿದ ಪಿಎಸ್ಐ
ಕೌಜಲಗಿ: ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಎಸ್ಐ ಎಚ್.ಕೆ. ನೇರಳೆ ಅವರು ಗ್ರಾಮದ ಯುವಕರಿಗೆ ವೈಯಕ್ತಿಕವಾಗಿ ₹ 10ಸಾವಿರ ಮೌಲ್ಯದ ಪುಸ್ತಕಗಳನ್ನು ಕೊಡಿಸಿ ನೆರವಾಗಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಪೂರಕವಾದ ಪುಸ್ತಕಗಳನ್ನು ಅವರು ನೀಡಿ ಗಮನಸೆಳೆದಿದ್ದಾರೆ. ಗ್ರಾಮದಲ್ಲಿ ಎಸ್ಡಿಎ, ಎಫ್ಡಿಎ, ಪಿಎಸ್ಐ, ಕೆಪಿಎಸ್ಸಿ ಹಾಗೂ ಯುಪಿಎಸ್ಸಿ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ನೆರವಾಗಿದ್ದಾರೆ. ಈ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ ಎಂದು ಯುವಕರು ತಿಳಿಸಿದರು.
Read More »ಕಾಶ್ಮೀರ ಎಲ್’ಒಸಿ ಉದ್ದಕ್ಕೂ ಅನೇಕ ಅಡಗುತಾಣಗಳನ್ನು ಪತ್ತೆ ಹಚ್ಚಿದ ಭಾರತೀಯ ಸೇನೆ
ಬಾರಾಮುಲ್ಲಾ, : ಭಾರತೀಯ ಸೇನೆಯು ಕಾಶ್ಮೀರ ನಿಯಂತ್ರಣ ರೇಖೆಯ (ಎಲ್ಒಸಿ) ಉದ್ದಕ್ಕೂ ಅನೇಕ ಅಡಗುತಾಣಗಳನ್ನು ಪತ್ತೆ ಹಚ್ಚಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶ ಪಡಿಸಿಕೊಂಡಿದೆ. ಆಗಸ್ಟ್ 30 ರಂದು ಬಾರಾಮುಲ್ಲಾ ಜಿಲ್ಲೆಯ ರಾಂಪುರ್ ಸೆಕ್ಟರ್ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನವನ್ನು ಪತ್ತೆ ಮಾಡಿದೆ ಎಂದು ಸೇನಾಧಿಕಾರಿಗಳ ಪ್ರಕಟನೆ ತಿಳಿಸಿದೆ. ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಸೇನೆ ಎಲ್ ಒಸಿಯ ರಾಂಪುರ್ ಸೆಕ್ಟರ್ ಸಮೀಪವಿರುವ ಹಳ್ಳಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿತ್ತು. …
Read More »ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ……….
ಬೆಂಗಳೂರು: ಸಿಲಿಕಾನ್ ಸಿಟಿಯ ಸದಾಶಿವನಗರದಲ್ಲಿ ನಡೆಯುತ್ತಿದ್ದ ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸಮ್ಮರ್ ಸ್ಪಾ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಯುವತಿಯರು ಮತ್ತು ಮಾಲೀಕನನ್ನ ಬಂಧಿಸಿದ್ದಾರೆ. ಕೊರೊನಾ ಲಾಕ್ಡೌನ್ ನಿಂದ ಸ್ಪಾಗಳನ್ನನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದ್ರೂ ಸ್ಪಾಗಳ ಹೆಸರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರಿಂದ ದಾಳಿ ನಡೆದಿದೆ. ಈ …
Read More »KSRTCಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ವಿದ್ಯಾರ್ಥಿಗಳಿಗೆ ಹಳೇ ‘ಬಸ್ ಪಾಸ್’ ಬಳಸಿ ಪರೀಕ್ಷೆಗೆ ಹಾಜರಾಗಲು ಅನುಮತಿ
ಬೆಂಗಳೂರು : ಕೊರೋನಾ ಭೀತಿಯಿಂದಾಗಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿಲ್ಲ. ಆದ್ರೇ ಕೊರೋನಾ ಭೀತಿಯ ನಡುವೆಯೂ ಪದವಿ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿಪರ ಪರೀಕ್ಷೆಗಳೂ ನಡೆಸೋದಕ್ಕೆ ನಿರ್ಧರಿಸಲಾಗಿದೆ. ಆದ್ರೆ ಕೆ ಎಸ್ ಆರ್ ಟಿ ಸಿ ವಿದ್ಯಾರ್ಥಿಗಳ ಬಸ್ ಪಾಸ್ ಅವದಿ ಮುಕ್ತಾಯಗೊಂಡಿತ್ತು. ಹೀಗಾಗಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿದ್ದರ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿ ಬಸ್ ಪಾಸ್ ಬಳಸಿಕೊಂಡು ಒಡಾಟಕ್ಕೆ ಅನುಮತಿ …
Read More »ಸುದೀಪ್ ಹುಟ್ಟುಹಬ್ಬ ಅಭಿಮಾನಿಗಳ ಹಿತಕ್ಕಾಗಿ ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ
ಬೆಂಗಳೂರು: ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಕಿಚ್ಚ ಸುದೀಪ್ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಕೊರೊನಾ ಹಿನ್ನೆಲೆ ಅಭಿಮಾನಿಗಳ ಹಿತಕ್ಕಾಗಿ ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ಹುಟ್ಟುಹಬ್ಬಕ್ಕೂ ಮುನ್ನವೇ ಅಭಿಮಾನಿಗಳಿಗೆ ಮನೆಯ ಬಳಿ ಬಾರದಂತೆ ಮನವಿ ಮಾಡಿಕೊಂಡಿದ್ದರು. ಆದರೂ ಅಭಿಮಾನಿಗಳು ಅವರ ಮನೆಯ ಬಳಿ ಗುಂಪು ಸೇರಿದ್ದರು.ಮಂಗಳವಾರ ಮಧ್ಯರಾತ್ರಿ ಅಭಿಮಾನಿಗಳು ಕಿಚ್ಚನ ಪುಟ್ಟೇನಹಳ್ಳಿ ನಿವಾಸ ಬಳಿ ಗುಂಪು ಸೇರಿದ್ದರು. ಹೀಗಾಗಿ …
Read More »ರಾಜ್ಯದ ಭಕ್ತರಿಗೆ ಗುಡ್ ನ್ಯೂಸ್: ದೇವಸ್ಥಾನಗಳ ಎಲ್ಲ ಬಗೆಯ ಧಾರ್ಮಿಕ ಸೇವೆಗಳ ಪುನರಾರಂಭಕ್ಕೆ ಅನುಮತಿ
ಬೆಂಗಳೂರು : ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಸೆ.1 ರಿಂದಲೇ ಸೇವೆಗಳನ್ನು ಪುನರ್ ಆರಂಭಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ” ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಪೂಜಾ ವಿಧಿ ವಿಧಾನಗಳು/ಪೂಜಾ ಕೈಂಕರ್ಯಗಳು. ತೀರ್ಥ ವಿತರಣೆ ಹಾಗೂ ಜನಸಂದಣಿ ಸೇರುವ ಕಾರ್ಯಕ್ರಮ ರದ್ದು ಮಾಡಲಾಗಿತ್ತು. ಇದೀಗ ದೇವಾಲಯಗಳಲ್ಲಿ ಸೇವೆಗಳನ್ನು ಪುನರ್ ಆರಂಭಿಸುವಂತೆ ರಾಜ್ಯ ಸರ್ಕಾರ ಆದೇಶ …
Read More »ಸಾಲ ಮರುಪಾವತಿ 2 ವರ್ಷ ವಿಸ್ತರಣೆ ಸಾಧ್ಯ: ಸುಪ್ರೀಂ ಕೋರ್ಟ್ಗೆ ಆರ್ಬಿಐ ಹೇಳಿಕೆ
ನವದೆಹಲಿ: ಕೋವಿಡ್ ಪಿಡುಗಿನಿಂದಾದ ಆರ್ಥಿಕ ಹಿನ್ನಡೆಗೆ ಪರಿಹಾರವಾಗಿ ಪ್ರಕಟಿಸಲಾದ ಸಾಲ ಮರುಪಾವತಿ ಮುಂದೂಡಿಕೆಯನ್ನು ಎರಡು ವರ್ಷಗಳವರೆಗೆ ವಿಸ್ತರಿಸಲು ಅವಕಾಶ ಇದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತಿಳಿಸಿವೆ. ಆದರೆ, ವಿವಿಧ ಕ್ಷೇತ್ರಗಳು ಎದುರಿಸುತ್ತಿರುವ ಸಮಸ್ಯೆಗಳು ಭಿನ್ನವಾಗಿವೆ. ಹಾಗಾಗಿ, ಏಕರೂಪದ ಪರಿಹಾರವೊಂದನ್ನು ಒದಗಿಸುವುದು ಕೇಂದ್ರ ಸರ್ಕಾರಕ್ಕೆ ಸಾಧ್ಯ ಇಲ್ಲ ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಲಾಗಿದೆ. ಒಟ್ಟು ಆಂತರಿಕ ಉತ್ಪನ್ನವು ಶೇ 23ರಷ್ಟು ಕುಸಿದಿದೆ. ಯಾವ …
Read More »