ಬೆಂಗಳೂರು : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಐದು ದಶಕಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಅವರು ರಕ್ಷಣಾ, ಆರ್ಥಿಕ, ವಿದೇಶಾಂಗ ವ್ಯವಹಾರ ಸಚಿವರಾಗಿ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದರು. ರಾಷ್ಟ್ರಪತಿಗಳಾಗಿ ಅವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದರು. ದೂರದೃಷ್ಟಿಯುಳ್ಳವರಾಗಿದ್ದ ಅವರು ಭಾರತ ಕಂಡ ಅತ್ಯುತ್ತಮ ಸಂಸದ ಹಾಗೂ ಸಮರ್ಥ ರಾಜಕಾರಣಿ . ದೇಶದ …
Read More »Yearly Archives: 2020
ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು.
ಮೂಡಲಗಿ : ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು. ಇಂದು ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ 45 ಲಕ್ಷ ರೂ, ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಹಾಗೂ ಅತಿಶೀಘ್ರದಲ್ಲೇ ಈ ಅಭಿವೃದ್ಧಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. …
Read More »ಅನ್ ಲಾಕ್ 4.O ಮಾರ್ಗಸೂಚಿ ಬಿಡುಗಡೆ :ಮೆಟ್ರೋ, ಶಾಲಾ-ಕಾಲೇಜಿಗೆ ಗ್ರೀನ್ ಸಿಗ್ನಲ್..!ಷರತ್ತು ಅನ್ವಯ
ಬೆಂಗಳೂರು : ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರ ಅನ್ಲಾಕ್ 4.Oರ ಮಾರ್ಗಸೂಚಿ ಹೊರಡಿಸಿದೆ. ಕಂಟೇನ್ಮೆಂಟ್ ವಲಯ ಹೊರತುಪಡಿಸಿ ಎಲ್ಲಾ ಪ್ರದೇಶಗಳಲ್ಲಿ ಇನ್ನಷ್ಟು ಹೆಚ್ಚಿನ ಕಾರ್ಯಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ತೆರವು 4 ರ ಅವಧಿಯಲ್ಲಿ ಶಾಲೆಗಳು, ಕಾಲೇಜುಗಳು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಮುಚ್ಚಿರಲಿವೆ. ಸೆ.20 ರಿಂದ ಜಾರಿಗೆ ಬರುವಂತೆ ಕಂಟೇನ್ಮೆಂಟ್ ವಲಯಗಳ ಹೊರಗಿನ ಪುದೇಶಗಳಲ್ಲಿ ಮಾತ್ರ ಆನ್ಲೈನ್ ಬೋಧನೆ/ಟೆಲಿ ಸಮಾಲೋಚನೆ …
Read More »ಭಾರತೀಯ ಸೇನೆಗೆ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಚಿತ್ರದುರ್ಗ ಈ ಜಿಲ್ಲೆಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗಾಗಿ ಸೆಪ್ಟೆಂಬರ್ 19 ರಿಂದ 2021 ರ ಮಾರ್ಚ್ 31 ರವರೆಗೆ ನೇಮಕಾತಿ ರ್ಯಾಲಿ ಆಯೋಜಿಸಲಾಗಿದೆ. ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದ ಸರ್ಕಾರದ ಮಾರ್ಗಸೂಚಿಯಂತೆ ನೇಮಕಾತಿ ರ್ಯಾಲಿ ನಡೆಯುವ ದಿನಾಂಕ ಹಾಗೂ ಸ್ಥಳವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ …
Read More »ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು: ದಾಖಲೆ ಸಮೇತ 10 ರಿಂದ 15 ನಟ-ನಟಿಯರ ಬಣ್ಣ ಬಯಲು ಮಾಡಿದ ಇಂದ್ರಜೀತ್..!
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟಿದೆ ಎನ್ನುವ ಹೇಳಿಯ ಕುರಿತು ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ಇಂದ್ರಜೀತ್ ಲಂಕೇಶ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. 10 ರಿಂದ 15 ನಟ ನಟಿಯರ ಹೆಸರುಗಳನ್ನ ದಾಖಲೆ ಸಮೇತ ಅಧಿಕಾರಿಗಳಿಗೆ ನೀಡಿದ್ದೇನೆ ಎಂದಿದ್ದಾರೆ. ಸಿಸಿಬಿ ವಿಚಾರಣೆಯ ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಇಂದ್ರಜೀತ್ ಲಂಕೇಶ್, “ಅಧಿಕಾರಿಗಳಿಗೆ ಡಿಜಿಟಲ್ ಯವಿಡನ್ಸ್ ನೀಡಿದ್ದೇನೆ. ಡ್ರಗ್ಸ್ ಪಾರ್ಟಿ ನಡೆಸಿದ ನಟ-ನಟಿಯರ ಹೆಸರಿನ ಸಮೇತ ಅವ್ರ ಕುರಿತ ಪೂರ್ಣ ದಾಖಲೆಯನ್ನ …
Read More »ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ
ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಮಾಜಿ ರಾಷ್ಟ್ರಪತಿ ಪ್ರಣಬ್ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ. …
Read More »ಈ ವರ್ಷ ಜನಗಣತಿ, NPR ಪರಿಷ್ಕರಣೆ ಇಲ್ಲ
ಹೊಸದಿಲ್ಲಿ: ಕೋವಿಡ್ 19 ಭೀತಿಯಿಂದಾಗಿ ಈ ವರ್ಷ ನಡೆಯಬೇಕಿದ್ದ ಜನಗಣತಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಪರಿಷ್ಕರಣೆಗಳನ್ನು ವರ್ಷದ ಮಟ್ಟಿಗೆ ಮುಂದೂಡಲಾಗಿದೆ. ಕೋವಿಡ್ 19 ಕಾಲದಲ್ಲಿ ಜನಗಣತಿ ಸರಿಯಲ್ಲ. ಗಣತಿ ಒಂದು ವರ್ಷ ತಡವಾಗಿ ನಡೆದರೆ ತೊಂದರೆಯೇನೂ ಇಲ್ಲ ಎಂದು ಕೇಂದ್ರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2021ರಲ್ಲಿ ಯಾವಾಗ ಜನಗಣತಿ ನಡೆಸಲಾಗುತ್ತದೆ ಎಂಬ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಿಲ್ಲ. ಈ ವರ್ಷ ಗಣತಿ ನಡೆಸುವುದು ಬೇಡ ಎಂದಷ್ಟೇ ನಿರ್ಧರಿಸಲಾಗಿದೆ …
Read More »ನೀರಾವರಿ ಯೋಜನೆಗಳ ಶೀಘ್ರ ಜಾರಿಗೆ ಮನವಿ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ 11 ಏತ ನೀರಾವರಿ ಯೋಜನೆ ಜಾರಿಗೆ ಕರ್ನಾಟಕ ನೀರಾವರಿ ನಿಗಮ ಅನುಮತಿ ನೀಡಿದೆ. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಯೋಜನೆಗಳು ಶೀಘ್ರ ಅನುಷ್ಠಾನವಾದರೆ ಇದೊಂದು ಇತಿಹಾಸ ಎಂದು ಹಿರಿಯ ಮುಖಂಡ ಬಿ.ಆರ್.ಸಂಗಪ್ಪಗೋಳ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ 11 ಏತ ನೀರಾವರಿ ಯೋಜನೆಯಿಂದ ಎರಡು ಲಕ್ಷ ಎಕರೆಗೂ ಅಧಿ ಕ ಜಮೀನಿಗೆ ನೀರಾವರಿ ಸೌಲಭ್ಯ ಸಿಗಲಿದೆ. …
Read More »ಸೈನಿಕ ತರಬೇತಿಗೆ ಶೀಘ್ರ ಕೇಂದ್ರ ಸ್ಥಾಪನೆ
ಯಮಕನಮರಡಿ: ಪೊಲೀಸ್, ಸೇನೆ ಸೇರುವ ಇಚ್ಛೆಯುಳ್ಳ ಜಿಲ್ಲೆಯ ಹಾಗೂ ಮತಕ್ಷೇತ್ರದ ಯುವಕರಿಗೆ ಉಚಿತ ತರಬೇತಿ ನೀಡಲು ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ವ್ಯಾಪ್ತಿಯಲ್ಲಿ 10 ಎಕರೆ ಜಮೀನಿನಲ್ಲಿ ಒಂದು ತರಬೇತಿ ಕೇಂದ್ರವನ್ನು ತೆರೆದು ಮಾಜಿ ಸೈನಿಕರಿಂದ ತರಬೇತಿ ನೀಡಲಾಗುವುದು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಅವರು ರವಿವಾರ ಹುಕ್ಕೇರಿ ತಾಲೂಕಿನ ಬರಗನಾಳ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗ್ರಾಮೀಣ ಅಭಿವೃದ್ಧಿ ಸಂಘ ಹಾಗೂ ಶ್ರೀ ಅಕ್ಕಮಹಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ …
Read More »ಸಿಎಸ್ಕೆ ಬದಲು ಐಪಿಎಲ್ ಆರಂಭಿಕ ಪಂದ್ಯದಲ್ಲಿ ಕಣಕ್ಕಿಳಿಯಲಿದ್ಯಾ ಆರ್ಸಿಬಿ?
ಅಬುಧಾಬಿ: ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ವಾಡಿಕೆಯಂತೆ ಕಳೆದ ಐಪಿಎಲ್ನ ಫೈನಲ್ನಲ್ಲಿ ಮುಖಾಮುಖಿಯಾಗಿದ್ದ ಸಿಎಸ್ಕೆ ಮತ್ತು ಮುಂಬೈ ತಂಡದ ಈ ಟೂರ್ನಿಯ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಸಿಎಸ್ಕೆ ತಂಡದ ಕೆಲ ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಆಟಗಾರರಿಗೆ ಕೊರೊನಾ ಬಂದ ಕಾರಣ ಚೆನ್ನೈ ತಂಡ ಮೊದಲ ಪಂದ್ಯವನ್ನು …
Read More »