ನವದೆಹಲಿ : ದಾಖಲೆ ಪ್ರಮಾಣದಲ್ಲಿ ನಡೆಯುತ್ತಿರುವ ಪರೀಕ್ಷೆ ಹಾಗೂ ಜನಜೀವನ ಸಹಜ ಸ್ಥಿತಿಯತ್ತ ದಾಪುಗಾಲು ಹಾಕುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ವೈರಸ್ ಪೀಡಿತರ ಸಂಖ್ಯೆ ದೇಶದಲ್ಲಿ ಮತ್ತೊಂದು ಹೊಸ ದಾಖಲೆ ನಿರ್ಮಿಸಿದೆ. ಭಾನುವಾರ ಒಂದೇ ದಿನ ದೇಶದಲ್ಲಿ ಬರೋಬ್ಬರಿ 80 ಸಾವಿರ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಕೊರೋನಾ ಹಾವಳಿ ಆರಂಭವಾದಾಗಿನಿಂದ ವಿಶ್ವದ ಯಾವುದೇ ದೇಶದಲ್ಲೂ ಒಂದೇ ದಿನ ಇಷ್ಟೊಂದು ಸಂಖ್ಯೆಯ ಕೊರೋನಾ ಪ್ರಕರಣಗಳು ಪತ್ತೆಯಾದ ನಿದರ್ಶನವೇ ಇಲ್ಲ. ಭಾನುವಾರ 80,078 ಮಂದಿಗೆ …
Read More »Yearly Archives: 2020
ಕ್ಯಾಬಿನೇಟ್ ದರ್ಜೆಯ ಸ್ಥಾನಮಾನದೊಂದಿಗೆ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ಆದೇಶ ಹೊರಡಿಸಿದೆ.:ಶಂಕರಗೌಡ ಪಾಟೀಲ
ಬೆಳಗಾವಿ-:ಬೆಳಗಾವಿ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರು ಬಿಜೆಪಿ ಸರ್ಕಾರದಲ್ಲಿ ಲಾಟ್ರಿ ಮೇಲೆ ಲಾಟ್ರಿ ಹೊಡೆಯುತ್ತಲೇ ಬಂದಿದ್ದು,ಇವರಿಗೆ ಸರ್ಕಾರ ಉನ್ನತ ಹುದ್ದೆ ನೀಡಿ ಇಂದು ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಬೆಳಗಾವಿಯ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರನ್ನು ಸರ್ಕಾರ ಇಂದು ಕ್ಯಾಬಿನೇಟ್ ದರ್ಜೆಯ ಸ್ಥಾನಮಾನದೊಂದಿಗೆ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಹೊರಡಿಸಿದ ಆದೇಶವನ್ನು ಹಿಂದಕ್ಕೆ ಪಡೆದು ಇಂದು ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ …
Read More »ಮುಂದಿನ ಮೂರು ದಿನ ರಾಜ್ಯಾದ್ಯಂತ ಭಾರೀ ಮಳೆ; ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು : ಈ ಬಾರಿಯ ಮಾನ್ಸೂನ್ ಅಂದುಕೊಂಡ ಮಟ್ಟಿಗೆ ಮಳೆ ನೀಡಿಲ್ಲ. ಜೂನ್-ಜುಲೈನಲ್ಲಿ ಕೊಂಚ ತಗ್ಗಿದ್ದ ಮಳೆ ಆಗಸ್ಟ್ನಲ್ಲಿ ಉತ್ತಮವಾಗಿ ಸುರಿದಿತ್ತು. ಈಗ ಸೆಪ್ಟೆಂಬರ್ ಆರಂಭದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಲ್ಲದೆ. ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗಲಿದೆ. ಕುಮಟಾ, ಹೊನ್ನಾವರ, ಕುಂದಾಪುರ, ಉಡುಪಿ, ಮಂಗಳೂರು ಭಾಗದಲ್ಲಿ ನಿರಂತರವಾಗಿ ಮಳೆ …
Read More »ಸೆ.17ಕ್ಕೆ 70 ವಸಂತಗಳನ್ನು ಪೂರೈಸಲಿರುವ ಪ್ರಧಾನಿ ನರೇಂದ್ರ ಮೋದಿ: ಬಿಜೆಪಿಯಿಂದ ಸೇವಾ ಸಪ್ತಾಹ ಆಚರಣೆ
ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ 17ಕ್ಕೆ 70 ವರ್ಷಗಳನ್ನು ಪೂರೈಸಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಅಂದು ವಿಶೇಷ ದಿನ. ಈ ದಿನವನ್ನು ವಿಶೇಷವಾಗಿ ಮಹತ್ವಪೂರ್ಣವಾಗಿ ಆಚರಿಸಲು ಉದ್ದೇಶಿಸಿರುವ ಭಾರತೀಯ ಜನತಾ ಪಾರ್ಟಿ ಸೆಪ್ಟೆಂಬರ್ 14ರಿಂದ 20ರವರೆಗೆ ಸೇವಾ ಸಪ್ತಾಹವನ್ನು ಆಚರಿಸಲು ನಿರ್ಧರಿಸಿದೆ. ನರೇಂದ್ರ ದಾಮೋದರದಾಸ್ ಮೋದಿ ಸೆಪ್ಟೆಂಬರ್ 17, 1950ರಂದು ಗುಜರಾತ್ ನ ವಡಾನಗರದಲ್ಲಿ ಜನಿಸಿದ್ದರು. ಆ ಸಮಯದಲ್ಲಿ ಅದು ಬಾಂಬೆ ಪ್ರಾಂತ್ಯಕ್ಕೆ ಸೇರಿತ್ತು. ನಂತರ …
Read More »ಬೆಳಗಾವಿಯಲ್ಲಿ 12ಸಾವಿರದ ಗಡಿ ದಾಡಿದ ಸೋಂಕಿತರ ಸಂಖ್ಯೆ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 357 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ, ಇಲ್ಲಿನ ಸೋಂಕಿತರ ಸಂಖ್ಯೆ 12ಸಾವಿರದ (12,090) ಗಡಿ ದಾಡಿದೆ. ತಾಲ್ಲೂಕಿನ ಸಾಂಬ್ರಾ ಏರ್ಮನ್ ತರಬೇತಿ ಶಾಲೆ (ಎಟಿಎಸ್)ಯಲ್ಲಿ ಒಂದೇ ದಿನ 69 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು (ರಾಮದುರ್ಗ, ಬೈಲಹೊಂಗಲ, ಹುಕ್ಕೇರಿ ಮತ್ತು ಬೆಳಗಾವಿ ತಾಲ್ಲೂಕಿನ ತಲಾ ಒಬ್ಬರು) ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ …
Read More »ಮಟಮಟ ಮಧ್ಯಾಹ್ನ ಬರ್ತಾರೆ – ಫೇಕ್ ದಾಖಲೆ ಹಿಡಿದು ಮನೆ ಧ್ವಂಸ ಮಾಡ್ತಾರೆ
ಬೆಂಗಳೂರು: ಕೊರೊನಾ ಸಮಯದಲ್ಲಿಯೇ ಡೆಡ್ಲಿ ಗ್ಯಾಂಗ್ ಒಂದು ಸಿಲಿಕಾನ್ ಸಿಟಿಗೆ ಎಂಟ್ರಿಯಾಗಿದೆ. ಸುಳ್ಳು ದಾಖಲೆ ಸೃಷ್ಟಿಸಿ ಮನೆ ಧ್ವಂಸ ಮಾಡಿದ ಘಟನೆ ಬೆಂಗಳೂರಿನ ಪ್ಯಾಲೇಸ್ ಗುಟ್ಟಹಳ್ಳಿ ಮುನೇಶ್ವರ ಟೆಂಪಲ್ ಬಳಿ ನಡೆದಿದೆ. ಹೌದು. ಖದೀಮರ ತಂಡವೊಂದು ಮಟಮಟ ಮಧ್ಯಾಹ್ನವೇ ಬಂದು ಜೆಸಿಬಿ ಮೂಲಕ ಮನೆ ಕೆಡವಿ ಮನೆಯಲ್ಲಿದ್ದ ಹಣ, ಒಡವೆ, ವಸ್ತುಗಳನ್ನ ಕದ್ದೊಯ್ದಿದೆ. ಈ ವೇಳೆ ಪ್ರಶ್ನೆ ಮಾಡಿದ ಮನೆಯಲ್ಲಿದ್ದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಸಿದ್ದಲ್ಲದೆ, ಹಲ್ಲೆ ಮಾಡಿದ ಆರೋಪ …
Read More »ಮುಖ್ಯಮಂತ್ರಿಯಿಂದ ‘ಪ್ರಕೃತಿ ವಂದನಾ’
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ನಿವಾಸ ‘ಕಾವೇರಿ’ಯಲ್ಲಿ ಭಾನುವಾರ ಬೆಳಿಗ್ಗೆ ಪ್ರಕೃತಿ ವಂದನಾ ಕಾರ್ಯಕ್ರಮ ನಡೆಯಿತು. ಯಡಿಯೂರಪ್ಪ ಅವರು ಬಿಲ್ವ ಸಸಿ ನೆಟ್ಟು ಪೂಜೆ ಸಲ್ಲಿಸಿದರು. ಬಳಿಕ ವೃಕ್ಷಕ್ಕೆ ರಾಖಿ ಕಟ್ಟಿದರು. ಪ್ರಕೃತಿಯನ್ನು ಪೂಜಿಸುವ ಅಭಿಯಾನಕ್ಕೆ ಶುಭ ಹಾರೈಸಿ ಮಾತನಾಡಿದ ಯಡಿಯೂರಪ್ಪ, ‘ಮನೆ ಮನೆಗಳಲ್ಲಿ ಹಿತ್ತಲಲ್ಲಿ ಸಸಿ ನೆಟ್ಟು ರಕ್ಷಣೆ ಮಾಡಬೇಕು’ ಎಂದು ನಾಡಿನ ಜನರಿಗೆ ಮನವಿ ಮಾಡಿದರು. ಈ ವೇಳೆ ಉಪಸ್ಥಿತರಿದ್ದ ಕರ್ನಾಟಕ ಜೀವ ವೈವಿಧ್ಯ ಮಂಡಳಿ …
Read More »ಮಹಿಳಾ ಪೊಲೀಸ್ ಪೇದೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆ
ಕಲಬುರಗಿ: ಮಹಿಳಾ ಪೊಲೀಸ್ ಪೇದೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಸುಂಬಡ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಸುರೇಖಾ ಬಾವಿಯಲ್ಲಿ ಶವವಾಗಿ ಪತ್ತೆಯಾದ ಮಹಿಳಾ ಪೇದೆ. ಮೃತ ಸುರೇಖಾ ಕಲಬುರಗಿ ನಗರದಲ್ಲಿ ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಭಾನುವಾರ ಸಂಜೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೆಲ ತಿಂಗಳ ಹಿಂದೆ ಸುರೇಖಾ ಪತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದರು. ಇದೀಗ ಮಹಿಳಾ ಪೇದೆ ಸುರೇಖಾ ಕೂಡ ಸಾವನ್ನಪ್ಪಿದ್ದಾರೆ. …
Read More »ಭಿಕ್ಷೆ ಬೇಡುತ್ತಾ ತಮ್ಮ ಜೀವನ ಸಾಗಿಸುವ ಮಂಗಳಮುಖಿ ಕೊಲೆ
ಚಿತ್ರದುರ್ಗ: ಭಿಕ್ಷೆ ಬೇಡುತ್ತಾ ತಮ್ಮ ಜೀವನ ಸಾಗಿಸುವ ಮಂಗಳಮುಖಿ ನಡುವೇ ಅಪರೂಪದ ವ್ಯಕ್ತಿತ್ವ ಎನಿಸಿದ್ದ ಚಿತ್ರದುರ್ಗದ ಮಂಗಳಮುಖಿಯೊಬ್ಬರು ಯಾರಿಗೂ ಬಾರವಾಗದೇ ತನ್ನಲ್ಲಿದ್ದ ಕಲೆಯನ್ನು ಬಂಡವಾಳವಾಗಿಸಿಕೊಂಡು ಬದುಕು ಕಟ್ಟಿಕೊಂಡಿದ್ದರು. ಆದರೆ ಅವರ ಏಳಿಗೆಯನ್ನು ಸಹಿಸದ ಯಾರೋ ದುಷ್ಕರ್ಮಿಗಳು ಮಂಗಳಮುಖಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಅಂಜಲಿ (34) ಕೊಲೆಯಾದ ಮಂಗಳಮುಖಿ. ಚಿತ್ರದುರ್ಗದ ಗಾಂಧಿ ನಗರದಲ್ಲೊಂದು ಬಾಡಿಗೆ ಮನೆಮಾಡಿಕೊಂಡಿದ್ದರು. ದೈನಂದಿನ ಜೀವನಕ್ಕಾಗಿ ತನ್ನಲ್ಲಿದ್ದ ನೃತ್ಯ, ಕರಗ ಹಾಗೂ ನಟನೆಯ ಕಲೆಯನ್ನೇ ಬಂಡವಾಳವನ್ನಾಗಿಸಿಕೊಂಡು ಬದುಕು ಕಟ್ಟಿಕೊಂಡಿದ್ದರು. …
Read More »ರ್ಯಾಪಿಡ್ ಆಂಟಿಜನ್ ಟೆಸ್ಟ್ ವರದಿಪಾಸಿಟಿವ್ ಆರ್ಟಿಪಿಸಿಆರ್ ನಲ್ಲಿ ನೆಗೆಟಿವ್ : ಶಾಸಕ ಎಸ್.ಎ ರವೀಂದ್ರನಾಥ್ ಅವರ ರ್ಯಾಪಿಡ್ ಆಂಟಿಜನ್ ಟೆಸ್ಟ್
ದಾವಣಗೆರೆ: ಬಿಜೆಪಿ ಶಾಸಕರ ಕೊರೊನಾ ವೈರಸ್ ಟೆಸ್ಟ್ ವರದಿಯಲ್ಲಿ ಗೊಂದಲ ಉಂಟಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಉತ್ತರ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಅವರ ರ್ಯಾಪಿಡ್ ಆಂಟಿಜನ್ ಟೆಸ್ಟ್ ನಲ್ಲಿ ಪಾಸಿಟಿವ್ ಎಂದು ಬಂದಿತ್ತು. ಆದರೆ ಮರುದಿನವೇ ಆರ್ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ. ಈ ಮೂಲಕ ಶಾಸಕರ ಕೋವಿಡ್ ಟೆಸ್ಟ್ ವರದಿಯಲ್ಲಿಯೇ ಗೊಂದಲ ಮೂಡಿದೆ. ರಾಜ್ಯ ಬುಲೆಟಿನ್ ನಲ್ಲಿ ಕೂಡ ಶಾಸಕರ ಪೇಷಂಟ್ ನಂಬರ್ …
Read More »