ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ತನ್ನ ಕ್ಷೇತ್ರದ ಜನರ ಬಳಿ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ. ಇಂದು ಪುಂಡರ ಕೃತ್ಯಕ್ಕೆ ಬಲಿಯಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಯನ್ನು ಮಹಜರ್ ಮಾಡಲು ಪೊಲೀಸರು ಆಗಮಿಸಿದ್ದರು. ಜೊತೆಗೆ ಸುಟ್ಟ ವಾಹನಗಳು ಹಾನಿಯಾಗಿರುವ ಸಾರ್ವಜನಿಕ ಆಸ್ತಿಪಾಸ್ತಿಗಳ ವೀಕ್ಷಣೆ ಮಾಡಿದರು. ಈ ವೇಳೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಖಂಡ ಶ್ರೀನಿವಾಸ್ ಅವರು ಮನೆ ನೋಡಲು ಬಂದಿದ್ದರು. ಈ ವೇಳೆ …
Read More »Yearly Archives: 2020
ಗಲಭೆಯ 7ನೇ ಆರೋಪಿ ಸಚಿವ ಕೆಜೆ ಜಾರ್ಜ್ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯ
ಬೆಂಗಳೂರು: ಎಫ್ಬಿ ಪೋಸ್ಟ್ನಿಂದ ಹೊತ್ತಿ ಉರಿದ ಬೆಂಗಳೂರು ಪ್ರಕರಣದ ಮುಖ್ಯ ಆರೋಪಿಯೊಬ್ಬ ಮಾಜಿ ಗೃಹ ಸಚಿವ ಕೆಜೆ ಜಾರ್ಜ್ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯವಾಗಿದೆ.ಹೌದು. ನಾಗವಾರ ವಾರ್ಡ್ನ ಕಾಂಗ್ರೆಸ್ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಬೆಂಗಳೂರು ಗಲಭೆಯ 7ನೇ ಆರೋಪಿಯಾಗಿದ್ದಾನೆ. ಗಲಾಟೆ ನಡೆದ ರಾತ್ರಿ ಈತನ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಈತ ಮನೆಯಲ್ಲಿ ಇರಲಿಲ್ಲ. ಆದರೆ ಖಲೀಂ ಜಾರ್ಜ್ ಜೊತೆ …
Read More »ನಾವು ಮನುಷ್ಯರ ಪರ ಅಂತಾ ಟಾಂಗ್ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದಲಿತರ ಪರವೋ ಅಥವಾ ಭಯೋತ್ಪಾದಕರ ಪರವೋ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ನಾವು ಮನುಷ್ಯರ ಪರ ಅಂತಾ ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರೋ ವಿಪಕ್ಷ ನಾಯಕ ಸಿದ್ದರಾಮಯ್ಯ.. ಕಟೀಲ್ ಅವರೇ, ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ …
Read More »ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದ ಪಿಡಿಒಗೆ ಕೊರೊನಾ ಸೋಂಕು
ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದ ಪಿಡಿಒಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ರಾಜ್ಯದಲ್ಲಿಯೇ ಸುದ್ದಿಯಾಗಿದ್ದ ಮಣಗುತ್ತಿ ಗ್ರಾಮದಲ್ಲಿಯೇ ಪಿಡಿಒಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಇವರು ಈ ಹಿಂದೆ ವಂಟಮೂರಿ ಗ್ರಾಮ ಪಂಚಾಯಿತಿ ಕಾರ್ಯ ನಿರ್ವಹಿಸುತ್ತದ್ದ ಸಂದರ್ಭದಲ್ಲಿ ಕೊರೊನಾ ಸೋಂಕಿತ ಕುಟುಂಬದವರು ಹಲ್ಲೆ ಮಾಡಿದ್ದರು. ಇವರು ತಿಂಗಳ ಹಿಂದಷ್ಟೇ ಮಣಗುತ್ತಿ ಪಂಚಾಯಿತಿಗೆ ವರ್ಗಾವಣೆಗೊಂಡಿದ್ದರು. ಸೋಂಕಿತ ಪಿಡಿಒ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
Read More »ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ
ಬೆಂಗಳೂರು: ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶುಭ ಕೋರಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ , ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಚಿವ ಗೋಪಾಲಯ್ಯ ಸೇರಿದಂತೆ ಇತರರು ಇದ್ದರು.
Read More »ವಿದ್ಯಾರ್ಥಿಗಳ ಆನ್ಲೈನ್ ಕ್ಲಾಸ್ಪ ಪವರ್ ಹಾಗೂ ಟವರ್ ಎರಡರದ್ದು ಸಮಸ್ಯೆ
ಶಿವಮೊಗ್ಗ : ಆನ್ಲೈನ್ ಶಿಕ್ಷಣಕ್ಕೆ ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಸಮಸ್ಯೆ ಎದುರಾಗಿದೆ. ಆನ್ಲೈನ್ ಶಿಕ್ಷಣಕ್ಕೆ ಪವರ್ ಹಾಗೂ ಟವರ್ ಈ ಎರಡೂ ಅತೀ ಮುಖ್ಯವಾಗಿದೆ. ಆದ್ರೆ ಮಲೆನಾಡಿನಲ್ಲಿ ಪವರ್ ಹಾಗೂ ಟವರ್ ಎರಡರದ್ದು ಸಮಸ್ಯೆ ಇದೆ. ಹೀಗಾಗಿ ಇಲ್ಲಿನ ವಿದ್ಯಾರ್ಥಿಗಳು ಆನ್ಲೈನ್ ಕ್ಲಾಸ್ ಬಗ್ಗೆ ಒಲವು ತೋರುತ್ತಿಲ್ಲ. ನೆಟ್ ವರ್ಕ್ ಸಿಗಬೇಕು ಅಂದ್ರೆ ಊರಿಂದ ಆಚೆ ಹೋಗಬೇಕಿದೆ. ದೇಶದೆಲ್ಲೆಡೆ ಕೊರೊನಾ ಮಹಾಮಾರಿ ಎಲ್ಲಾ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಈ ಮಹಾಮಾರಿಯಿಂದ …
Read More »ಪ್ರೀತಿಸಿದ ಯುವತಿಯನ್ನು ಹಾಡಹಗಲೇಸಿನಿಮಾ ಸ್ಟೈಲ್ ನಲ್ಲಿ ಕಿಡ್ನಾಪ್
ಕೋಲಾರ: ಪ್ರೀತಿಸಿದ ಯುವತಿಯನ್ನು ಹಾಡಹಗಲೇ ನಡುರಸ್ತೆಯಲ್ಲಿ ಯುವಕ ಅಪಹರಿಸಿದ ಘಟನೆ ಇಂದು ಕೋಲಾರದಲ್ಲಿ ನಡೆದಿದೆ.ಶಿವ ಯುವತಿಯನ್ನು ಅಪಹರಿಸಿದ ಯುವಕ. ಪ್ರೀತಿಸಿ ಇನ್ನೇನು ಮದುವೆಯಾಗಬೇಕು ಎಂದುಕೊಂಡಿದ್ದ ವೇಳೆ ಯುವತಿಯ ಕುಟುಂಬಸ್ಥರು ನಿರಾಕರಿಸಿದ್ದರು. ಈ ಹಿನ್ನೆಲೆ ಸಿನಿಮಾ ಸ್ಟೈಲ್ನಲ್ಲಿ ಪ್ರಿಯಕರ ತನ್ನ ಪ್ರಿಯತಮೆಯನ್ನ ಕಿಡ್ನಾಪ್ ಮಾಡಿದ್ದಾನೆ. ಜನ ನಿಬಿಡ ಪ್ರದೇಶದಲ್ಲಿ ಹಾಡ ಹಗಲೆ ಪ್ರೀತಿಸಿದ ಯುವತಿಯನ್ನ ಕಿಡ್ನಾಪ್ ಮಾಡಿದ ಯುವಕನ ಕೈ ಚಳಕಕ್ಕೆ ಈಡೀ ಕೋಲಾರ ನಗರ ಬೆಚ್ಚಿ ಬಿದ್ದಿದೆ. ಕೋಲಾರ ನಗರದ …
Read More »“ಡಿ.ಜೆ.ಹಳ್ಳಿ ಗಲಭೆಗೆ ಕಾರಣನಾದ ನವೀನ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದ”
ಬೆಂಗಳೂರು: ನಗರದ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಮತ್ತು ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆ ಸದ್ಯಕ್ಕೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ ಎಂದಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಫೇಸ್ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಯುವಕ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದರು. ಬೆಂಗಳೂರಿನಲ್ಲಿ ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಬಗ್ಗೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿರುವ ಕಾಂಗ್ರೆಸ್ಸಿಗರ ನಡೆ ಸರಿ ಇಲ್ಲ. ನವೀನ್ ಬಿಜೆಪಿ …
Read More »ರಾಜ್ಯದ ನಾಲ್ವರು ಪೊಲೀಸರಿಗೆ ಕೇಂದ್ರ ಗೃಹ ಸಚಿವರ ಪದಕ
ಬೆಂಗಳೂರು, ಆ.13- ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪೊಲೀಸರಿಗೆ ನೀಡುವ ಗಣ್ಯ ಪ್ರಶಸ್ತಿಗೆ ರಾಜ್ಯದ ನಾಲ್ವರು ಅಕಾರಿಗಳು ಪಾತ್ರರಾಗಿದ್ದಾರೆ. ಉತ್ತಮ ತನಿಖೆಗಾಗಿ ಕೇಂದ್ರ ಗೃಹ ಸಚಿವರ ಗೌರವಾನ್ವಿತ ಪ್ರಶಸ್ತಿಗೆ ಡಿವೈಎಸ್ಪಿ ದರ್ಜೆಯ ಇಬ್ಬರು ಅಕಾರಿಗಳು ಸೇರಿದಂತೆ ನಾಲ್ವರಿಗೆ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಮೈಕೋ ಲೇಔಟ್ ಎಸಿಪಿ ಸುದೀರ್ ಎಂ ಹೆಗಡೆ, ರೈಲ್ವೆ ಉಪವಿಭಾಗದ ಡಿವೈಎಸ್ಪಿ ಡಿ.ಅಶೋಕ್, ಬೆಂಗಳೂರು ಸಿಸಿಬಿಯ ಪೊಲೀಸ್ ಇನ್ಸ್ಪೆಕ್ಟರ್ ಡಿ.ಎಂ.ಪ್ರಶಾಂತ್ ಬಾಬು, ಅಶೋಕ್ನಗರ ಪೊಲೀಸ್ ಠಾಣೆಯ ಸಿಎಚ್ಸಿ …
Read More »ಆರ್ ಎಸ್ ಎಸ್, ಸಂಘ ಪರಿವಾರ ಎಸ್ಡಿಪಿಐ ಎಲ್ಲವೂ ಒಂದೇಹೆಡ್, ಟೈಲ್ ಎರಡೂ ಅವರೇ ಆಗಿದ್ದಾರೆ:ರಾಮಲಿಂಗಾ ರೆಡ್ಡಿ
ಬೆಂಗಳೂರು: ಆರ್ ಎಸ್ ಎಸ್, ಸಂಘ ಪರಿವಾರ ಎಸ್ಡಿಪಿಐ ಎಲ್ಲವೂ ಒಂದೇ. ಅವರು ಒಂದೇ ನಾಣ್ಯದ ಮುಖಗಳಿದ್ದಂತೆ. ಹೆಡ್, ಟೈಲ್ ಎರಡೂ ಅವರೇ ಆಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಏನ್ಮಾಡಿದ್ದರು. ಬೆಂಗಳೂರಿನಲ್ಲಿ ಏನು ಮಾಡುತ್ತಿದ್ದಾರೆಂದು ನಮಗೂ ತಿಳಿದಿದೆ. ನಾನು ಸಹ ರಾಜ್ಯದ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ತಮಗೂ ಇದರ ಬಗ್ಗೆ ಮಾಹಿತಿ ಇದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
Read More »