Breaking News

Yearly Archives: 2020

ಸಿಬ್ಬಂದಿ ಆಸ್ಪತ್ರೆಗೆ ಅಂಬುಲೆನ್ಸ್‌ನಲ್ಲಿ ಕರ್ಕೊಂಡು ಬಂದ್ರೆ ವ್ಯಕ್ತಿ ಮರುದಿನವೇ ಬಸ್ ಹತ್ತಿ ಹೋದ!

ಧಾರವಾಡ: ಕೊರೊನಾ ಸೋಂಕಿತ ಎಂದು ವ್ಯಕ್ತಿಯೋರ್ವನನ್ನು ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ಮರುದಿನವೇ ಆತ ಏಕಾಂಗಿಯಾಗಿ ಬಸ್ ಏರಿ ತನ್ನೂರು ಸೇರಿಕೊಂಡಿರುವ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ.ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನಿಯಮಿತವಾಗಿ ಡಯಾಲಿಸಿಸ್ ಒಳಗಾಗುತ್ತಿದ್ದ ಅಳ್ನಾವರ ತಾಲೂಕಿನ ಡೋರಿ ಗ್ರಾಮದ ವ್ಯಕ್ತಿಯೋರ್ವನಿಗೆ ಆಂಟಿಜನ್ ಟೆಸ್ಟಿನಲ್ಲಿ ನೆಗಟಿವ್ ರಿಪೋರ್ಟ್ ಬಂದಿದೆ. ಆದರೂ ಮುಂದೆ ಸ್ವ್ಯಾಬ್ ಟೆಸ್ಟಿನಲ್ಲಿ ಆತನಿಗೆ ಪಾಸಿಟಿವ್ ಬರುತ್ತೆ ಎಂದು ಅಂದಾಜಿಸಿಕೊಂಡ ಸ್ಥಳಿಯ ಆರೋಗ್ಯ ಇಲಾಖೆ ಸಿಬ್ಬಂದಿ, …

Read More »

73ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆಗಳೇ ಬಂದಿತ್ತು ಎಲ್ಲರಿಗೂ ಧನ್ಯವಾದ: ಸಿದ್ದರಾಮಯ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 73ನೇ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆಗಳೇ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ತನಗೆ ಶುಭಕೋರಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಹುಟ್ಟುಹಬ್ಬಕ್ಕೆ ರಾಜ್ಯದಾದ್ಯಂತ ಹಿರಿಯ-ಕಿರಿಯ ಸ್ನೇಹಿತರು, ಹಿತೈಷಿಗಳು ಶುಭಾಶಯ ಕೋರಿದ್ದಾರೆ. ಅವರೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಹಾರೈಕೆ ಜನರ ಸೇವೆ ಮಾಡುವ ನನ್ನ ಮನೋಬಲವನ್ನು ಹೆಚ್ಚಿಸಿದೆ. ನಿಮ್ಮ ಸೇವೆಯ ಮೂಲಕವೇ ನಿಮ್ಮ ಪ್ರೀತಿಯ ಋಣ ತೀರಿಸಲು …

Read More »

ಬೆಂಗಳೂರು ಗಲಭೆಯ ಹಿಂದೆ ಮೂವರ ಕೈವಾಡ

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್‌ ಮೇಲೆ ದಾಳಿಗೆ ಹಿಂದೆಯೇ ಪ್ಲಾನ್‌ ಮಾಡಲಾಗಿತ್ತು. ಆದರೆ ಅವಕಾಶಕ್ಕಾಗಿ ಹುಡುಕುಲಾಗುತ್ತಿತ್ತು. ಈ ಅವಕಾಶ ನಿನ್ನೆ ಸಿಕ್ಕಿತ್ತು ಎಂಬ ಮಾತುಗಳು ಈಗ ಕೇಳಿ ಬಂದಿದೆ.ಈ ಮಾತಿಗೆ ಪುಷ್ಟಿಎನ್ನುವಂತೆ ಕಂದಾಯ ಸಚಿವ ಅಶೋಕ್‌ ಹೇಳಿಕೆ ನೀಡಿದ್ದು ಈಗ ಭಾರೀ ಸಂಚಲನ ಮೂಡಿಸಿದೆ.ವಿಧಾನಸೌಧದಲ್ಲಿ ಕಂದಾಯ ಸಚಿವರನ್ನು ಅಖಂಡ ಶ್ರೀನಿವಾಸ ಮೂರ್ತಿ ಭೇಟಿ ಮಾಡಿ ರಾತ್ರಿಯ ಘಟನೆಯನ್ನು ವಿವರಿಸಿದರು. ಈ ವೇಳೆ ಸಿಎಂಗೆ ಕರೆ ಮಾಡಿದ ಸಚಿವರು, ಗಲಭೆಯಲ್ಲಿ ಮೂವರು …

Read More »

2ನೇ ಮಗುವಿಗೆ ತಾಯಿಯಾಗುತ್ತಿದ್ದಾರೆ ಕರೀನಾ

ಮುಂಬೈ: ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ಸಂತಸದ ಸುದ್ದಿಯನ್ನ ಹಂಚಿಕೊಂಡಿದ್ದು, ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿರುವ ಕುರಿತು ತಿಳಿಸಿದ್ದಾರೆ.ಈ ಕುರಿತು ದಂಪತಿ ಹೇಳಿಕೆ ನೀಡಿದ್ದು, ನಮ್ಮ ಕುಟುಂಬಕ್ಕೆ ಮತ್ತೊಬ್ಬ ಸದಸ್ಯನ ಆಗಮನದ ನಿರೀಕ್ಷೆಯಲ್ಲಿರುವುದು ಸಂತಸ ತಂದಿದೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ, ಬೆಂಬಲಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಡಿಸೆಂಬರ್ ರಲ್ಲಿ ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ದಂಪತಿಗೆ ತೈಮುರ್ ಅಲಿ ಖಾನ್ ಜನಸಿದ್ದಾನೆ. ಈ ಜೋಡಿಯು …

Read More »

ಒಂದು ರಾತ್ರಿಯ ಬೆಂಗಳೂರು ದಂಗೆ – ಎಷ್ಟು ಕೋಟಿ ನಷ್ಟ?

ಬೆಂಗಳೂರು: ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದೇ ಮೊದಲ ಬಾರಿಗೆ ಸಾರ್ವಜನಿಕ ಆಸ್ತಿಪಾಸ್ತಿಗೆ ಮಾಡಿರುವ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ತೀರ್ಮಾನ ತೆಗೆದುಕೊಂಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಈ ಸಂಬಂಧ ಪ್ರತಿಕ್ರಿಯೆ ನೀಡಿದ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಈ ರೀತಿಯ ದಂಗೆಗಳಾದಾಗ ಆಗಿರುವ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಈ ಕೂಡಲೇ ಪ್ರಕ್ರಿಯೆ …

Read More »

ವೈದ್ಯ, ವಾರಿಯರ್ ಬಳಿಕ ಕೊರೊನಾ ಕಿಲ್ಲರ್ ಆದ ಗಣೇಶ!

ಗಾಂಧಿನಗರ: ವೈದ್ಯ, ಕೊರೊನಾ ವಾರಿಯರ್ಸ್ ಬಳಿಕ ಇದೀಗ ಸೂರತ್ ಮೂಲದ ವ್ಯಕ್ತಿಯೊಬ್ಬರು ಕೊರೊನಾ ಕಿಲ್ಲರ್ ಗಣೇಶನ ಮೂರ್ತಿ ತಯಾರಿಸಿದ್ದಾರೆ.ಹೌದು. ಕೊರೊನಾ ಮಹಾಮಾರಿಯಿಂದ ಈ ಬಾರಿ ಎಲ್ಲಾ ಹಬ್ಬಗಳು ತುಂಬಾನೆ ಆಚರಿಸಲಾಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಬರಲಿದ್ದು, ಪ್ರತಿ ಬಾರಿಯೂ ಈ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಚೀನಿ ವೈರಸ್ ಕಾಟದಿಂದ ಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸುವ ಸಾಧ್ಯತೆ ಇದೆ. ಇತ್ತ ಗಣೇಶನ …

Read More »

ಅನಂತಕುಮಾರ್ ಹೆಗಡೆಯವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ- ಕೈ ಕಾರ್ಯಕರ್ತರಿಂದ ಪ್ರತಿಭಟನೆ

ಶಿವಮೊಗ್ಗ: ಬಿಎಸ್‍ಎನ್‍ಎಲ್ ನ್ನು ಖಾಸಗೀಕರಣಗೊಳಿಸಿ, ಬಿಎಸ್‍ಎನ್‍ಎಲ್‍ನ ಎಲ್ಲ ನೌಕರರನ್ನು ವಜಾಗೊಳಿಸಲಾಗುವುದು ಎಂಬ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ, ಅನಂತ್ ಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗಿದರು. ಬಿಎಸ್‍ಎನ್‍ಎಲ್ ಖಾಸಗೀಕರಣ ಮಾಡುವುದು ಹಾಗೂ ನೌಕರರನ್ನು ಕೆಲಸದಿಂದ ವಜಾ ಮಾಡುವ ಕುರಿತು ಹೇಳಿಕೆ ನೀಡಿದ್ದಾರೆ. ಅಲ್ಲದೆ ನೌಕರರನ್ನು ದೇಶದ್ರೋಹಿಗಳೆಂದು ಕರೆದಿದ್ದಾರೆ. ಹೀಗಾಗಿ ಅನಂತ ಕುಮಾರ್ …

Read More »

ಬೆಳಗಾವಿ ಜಿಲ್ಲೆಯಲ್ಲಿ 313ಜನರಿಗೆ ಸೋಂಕು ಪತ್ತೆ,,,,,,,,,

ಬೆಂಗಳೂರು – ರಾಜ್ಯದಲ್ಲಿ ಇಂದು 7883 ಜನರಿಗೆ ಕೊರೆನಾ ಸೋಂಕು ದೃಢಪಟ್ಟಿದ್ದು, 113 ಜನರು ಸಾವಿಗೀಡಾಗಿದ್ದಾರೆ. ಇದೇ ವೇಳ 7034 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 313ಜನರಿಗೆ ಸೋಂಕು ಪತ್ತೆಯಾಗಿದೆ. ಸಮಗ್ರ ಮಾಹಿತಿ ಇಲ್ಲಿದೆ. –

Read More »

ಆಕ್ಸಿಜನ್ ಯಂತ್ರಗಳ ಖರೀಧಿಗೆ ಶಾಸಕ ಅಭಯ ಪಾಟೀಲ ಭೀಮ್ಸ್ ಆಸ್ಪತ್ರೆಗೆ ವಿಶೇಷ ಅನುದಾನ

ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವೀಡ್ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತಿದ್ದು,ರೋಗಿಗಳಿಗೆ ಸುಧಾರಿತ ಆಕ್ಸಿಜನ್ ಯಂತ್ರಗಳ ಖರೀಧಿಗೆ ಶಾಸಕ ಅಭಯ ಪಾಟೀಲ ಭೀಮ್ಸ್ ಆಸ್ಪತ್ರೆಗೆ ವಿಶೇಷ ಅನುದಾನ ನೀಡಿದ್ದಾರೆ. ಭೀಮ್ಸ್ ಆಸ್ಪತ್ರೆಯಲ್ಲಿ high flow nasal canuala oxygenation ಯಂತ್ರಗಳ ಖರೀಧಿಗೆ ಶಾಸಕರ ಅನುದಾನ ನೀಡುವಂತೆ ಭೀಮ್ಸ್ ನಿರ್ದೇಶಕರು ಶಾಸಕ ಅಭಯ ಪಾಟೀಲರಿಗೆ ಪತ್ರ ಬರೆದಿದ್ದರು ಭೀಮ್ಸ್ ಮನವಿಗೆ ತಕ್ಷಣ ಸ್ಪಂದಿಸಿರುವ ಶಾಸಕ ಅಭಯ ಪಾಟೀಲ ಉಪ ವಿಭಾಗಾಧಿಕಾರಿಗಳಿಗೆ ಪತ್ರ …

Read More »

ಮೆರವಣಿಗೆ ಪಟಾಕಿ ಏನೂ ಇಲ್ಲಈ ಬಾರಿಯ ಗಣೇಶ ಉತ್ಸವ…..!ಜಿಲ್ಲಾಧಿಕಾರಿಗಳು

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೋವೀಡ್ ಹಾವಳಿ ಹೆಚ್ಚಾಗಿರುವದರಿಂದ ಈ ಬಾರಿಯ ಗಣೇಶ ಉತ್ಸವವನ್ನು ಕಟ್ಟುನಿಟ್ಟಾಗಿ ಆಚರಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಬಾರಿಯ ಸಾರ್ವಜನಿಕ ಗಣೇಶ ಮಂಡಳಿಗಳು ಮಂಟಪದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡದೇ ಸಮೀಪದ ಮಂದಿರಗಳಲ್ಲಿ ಪ್ರತಿಷ್ಠಾಪನೆ ಮಾಡಬೇಕು,ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶನ ಮೂರ್ತಿ 4 ಫೂಟ್ ಗಿಂತ ಎತ್ತರ ಇರಬಾರದು ಮನೆಯಲ್ಲಿ ಪ್ರತಿಷ್ಠಾಪನೆ ಮಾಡುವ ಗಣೇಶನ ಮೂರ್ತಿ ಎರಡು ಪೂಟ್ ಗಿಂತ ಎತ್ತರ ಇರಬಾರದು,ಗಣೇಶ ಮೂರ್ತಿಯನ್ನು …

Read More »