ಬೆಳಗಾವಿ: ಮನಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ಕುರಿತು ನಡೆದ ಘಟನೆ ಸತ್ಯವನ್ನು ತಿಳಿಯದೆ ರಾಜ್ಯ ಸರ್ಕಾರದ ವಿರುದ್ಧ ಟ್ವಿಟ್ ಮಾಡಿದ್ದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇಲ್ಲಿನ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ರ್ಯಾಲಿ ನಡೆಸಿ ಶಾಸಕಿ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ರಾಜ್ಯ ಸರ್ಕಾರ ಗಡಿಭಾಗದಲ್ಲಿ ಶಿವಾಜಿ ಮಹಾರಾಜರ ಮೂರ್ತಿ …
Read More »Yearly Archives: 2020
ಅಖಂಡ ಶ್ರೀನಿವಾಸ ಮೂರ್ತಿ ಬದುಕು ಅಕ್ಷರಶಃ ಬೀದಿಗೆ
ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ಮೂರ್ತಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಂದೂ ವಸ್ತು ಉಳಿದಿಲ್ಲ. ಬಟ್ಟೆ ಸೇರಿ ಎಲ್ಲವೂ ಸುಟ್ಟು ಕರಕಲಾಗಿದೆ. ಈ ಹಿನ್ನೆಲೆ ಶಾಸಕರು ಇಂದು ಬೆಳಗ್ಗೆ ಬಟ್ಟೆ ಖರೀದಿಸಿದ್ದಾರೆ. ಇಂದು ಬೆಳಗ್ಗೆ ಅವರ ಸ್ನೇಹಿತರು ಪ್ಯಾಂಟ್, ಶರ್ಟ್ ತಂದು ಕೊಟ್ಟಿದ್ದಾರೆ. ನಿನ್ನೆ ಮನೆಯಿಂದ ಹೊರಹೋಗುವಾಗ ಹಾಕಿದ್ದ ಪ್ಯಾಂಟ್ ಶರ್ಟ್ ಬಿಟ್ಟರೆ ಮನೆಯಲ್ಲಿದ್ದ ಬೇರೆ ಎಲ್ಲ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅವರ ಪತ್ನಿ, ಮಕ್ಕಳು ಸಹ ಇಂದು ಹೊಸದಾಗಿ …
Read More »ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಅತ್ಯಂತ ಖಂಡನೀಯ:ಪ್ರಹ್ಲಾದ್ ಜೋಶಿ
ನವದೆಹಲಿ: ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಅತ್ಯಂತ ಖಂಡನೀಯ ಮತ್ತು ಇದೊಂದು ಪೂರ್ವ ನಿಯೋಜಿತ ದಾಳಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಮಂಗಳವಾರ ರಾತ್ರಿ ಕಾವಲಬೈರಸಂದ್ರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡುತ್ತಾ ಘಟನೆಯನ್ನು ವಿರೋಧಿಸಿದರು. ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕಾನೂನು ಅಡಿ ದೂರು ದಾಖಲಿಸಬೇಕಿತ್ತು ಆದರೆ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದರು.ಪೊಲೀಸ್ ಠಾಣೆಯಿಂದ …
Read More »ವಿವಾದಿತ ಪೋಸ್ಟ್ ಹಾಕಿ ನಂತ್ರ ಫೇಸ್ಬುಕ್ ಹ್ಯಾಕ್ ಆಗಿದೆ ಅಂತ ಹೇಳ್ತಾರೆ
ಹಾಸನ: ವಿವಾದಿತ ಪೋಸ್ಟ್ ಹಾಕಿ ನಂತ್ರ ಫೇಸ್ಬುಕ್ ಹ್ಯಾಕ್ ಆಗಿದೆ ಅಂತ ಹೇಳ್ತಾರೆ ಎಂದು ಬೆಂಗಳೂರ ಗಲಾಟೆಯ ಬಗ್ಗೆ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದಾರೆ.ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಸಮಸ್ಯೆ ಇದ್ದಾಗ ಪೊಲೀಸರು, ಶಾಸಕರ ಜೊತೆ ಕುಳಿತು ಮಾತನಾಡಬೇಕು. ಯಾರೂ ಕೂಡ ಕಾನೂನನ್ನು ಕೈಗೆತ್ತಿಗೊಳ್ಳಬಾರದು. ವಿವಾದಿತ ಪೋಸ್ಟ್ ಹಾಕಲು ಫೇಸ್ ಬುಕ್ ಹ್ಯಾಕ್ ಆಗಿದೆ ಅಂತಿದ್ದಾರೆ. ಅದನ್ನು ನಾನು ಮಾಧ್ಯಮದಲ್ಲಿ ನೋಡಿದ್ದೇನೆ. ಯಾರೇ ಜನರು ಕಾನೂನು ಕೈಗೆತ್ತಿಕೊಳ್ಳಬಾರದು. …
Read More »ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಫೇಲವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ…
ಸುರಪುರ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಫೇಲಾದ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಹುಣಸಗಿ ತಾಲೂಕಿನ ಮಾರಲಬಾವಿ ಗ್ರಾಮದ ಸುಮತಿ ನಿಂಗಣ್ಣ ಕಲ್ಯಾಣಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ರಾಜನಕೊಳೂರ ಬಳಿಯ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು, ಹತ್ತೆನೇ ತರಗತಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ಸಾಮಾಜಿಕ ವಿಜ್ಞಾನ ಪರೀಕ್ಷೆಯಲ್ಲಿ ಫೇಲಾಗಿದ್ದರಿಂದ ಮನನೊಂದು ಮನೆಯಲ್ಲಿ ವಿಷ ಸೇವಿಸಿದ್ಧಾಳೆ. ತೀವ್ರ ಅಸ್ವಸ್ಥಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗ …
Read More »ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.91ರಷ್ಟು ಫಲಿತಾಂಶ
ಆಳಂದ: ಪಟ್ಟಣದ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಮಾತೋಶ್ರೀ ಭೀಮಬಾಯಿ ಹಣಮಯ್ಯ ಗುತ್ತೇದಾರ ಸ್ಮಾರಕ ಪ್ರೌಢಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.91ರಷ್ಟು ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತಿದ್ದ 88 ವಿದ್ಯಾರ್ಥಿಗಳಲ್ಲಿ 81 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು. 20 ವಿದ್ಯಾರ್ಥಿಗಳು ಡಿಸ್ಟಿಂಕ್ಷನನಲ್ಲಿ, 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಶಾಲೆಯ ಕು. ಪ್ರಿಯಾಂಕಾ ವಾಮನರಾವ 97.12% ಪಡೆಯುವುದರ ಮೂಲಕ ತಾಲೂಕಿಗೆ ತೃತೀಯ …
Read More »‘ಬೆಳೆ ಸಮೀಕ್ಷೆಗೆ ಮೊಬೈಲ್ ಆಯಪ್ ಬಳಸಿ’
ಬೆಳಗಾವಿ: ‘ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆಯಪ್ ಮೂಲಕ ದಾಖಲಿಸುವ ವಿನೂತನ ಯೋಜನೆಯನ್ನು ಸರ್ಕಾರದಿಂದ ಪ್ರಾರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ. ‘ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖ್ಯಿಕ ಇಲಾಖೆ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದೆ. ಸಂಗ್ರಹವಾದ ಬೆಳೆಗಳ ಮಾಹಿತಿಯನ್ನು ತಾಲ್ಲೂಕು ಆಡಳಿತದಿಂದ ಪರಿಶೀಲಿಸಲಾಗುವುದು’. ‘ರೈತರು ಸ್ಮಾರ್ಟ್ ಮೊಬೈಲ್ ಫೋನ್ನಲ್ಲಿ ಬೆಳೆ ಸಮೀಕ್ಷೆ ಆಯಪ್ ಅನ್ನು …
Read More »ಬೌರಿಂಗ್ ಆಸ್ಪತ್ರೆ ಎದುರು ಮೃತರ ಸಂಬಂಧಿಕರಿಂದ ಹೈಡ್ರಾಮಾ
ಬೆಂಗಳೂರು, ಆ.12- ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದ ನಂತರ ಶಿವಾಜಿನಗರ ಮತ್ತು ಸುತ್ತಮುತ್ತಲ ಪ್ರದೇಶಗಳು ಸ್ತಬ್ಧಗೊಂಡಿವೆ. ಶಿವಾಜಿನಗರದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು, ಇಡೀ ಪ್ರದೇಶ ಬಿಕೋ ಎನ್ನುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.ಗಲಭೆ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳ ಮೇಲೆ ನಿಗಾ ಇಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ …
Read More »ಡಿ.ಜೆ. ಹಳ್ಳಿ ಗಲಭೆ ಖಂಡನೀಯ, ಸರ್ಕಾರ ಕಾನೂನಿನ ಕ್ರಮ ಕೈಗೊಳ್ಳಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ಡಿ.ಜೆ. ಹಳ್ಳಿ ಘಟನೆಯನ್ನು ನಾನು ಖಂಡಿಸುತ್ತೇನೆ. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಬುಧವಾರ ಬೆಳಗ್ಗೆ ಸದಾಶಿವನಗರದ ನಿವಾಸದ ಬಳಿ ಬೆಂಗಳೂರಿನ ಡಿ.ಜೆ. ಹಳ್ಳಿ ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಇದು ಸಮಾಜಘಾತುಕ ಕೃತ್ಯ. ಶಾಸಕರ ಆಸ್ತಿಯಾಗಲಿ, ಸಾಮಾನ್ಯ ಜನರ ಆಸ್ತಿಯೇ ಆಗಿರಲಿ, ಪೊಲೀಸ್ ಠಾಣೆಯಾಗಿರಲಿ ಯಾವುದನ್ನು ಹಾನಿ ಮಾಡುವುದು ಸರಿಯಲ್ಲ. ಇದನ್ನು ನಾವ್ಯಾರೂ ಒಪ್ಪಲು ಸಾಧ್ಯವಿಲ್ಲ ಎಂದರು. …
Read More »ಡಿಜೆ ಹಳ್ಳಿ ಘಟನೆ| ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು: ಸುರೇಶ ಅಂಗಡಿ
ಬೆಳಗಾವಿ: ‘ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿ, ಸಮಾಜದಲ್ಲಿ ಶಾಂತಿ ಕದಡಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಒತ್ತಾಯಿಸಿದರು. ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಲಾಟೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಈ ಹಿಂದೆ ಇಲ್ಲಿನ ಬಿಮ್ಸ್ ಆಸ್ಪತ್ರೆ ಎದುರು ನಿಂತಿದ್ದ ಆಂಬುಲೆನ್ಸ್ಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿತ್ತು. ಇಂತಹ ಘಟನೆಗಳು ಅತ್ಯಂತ ಖಂಡನೀಯ. ಇವೆಲ್ಲವೂ ದೇಶದ್ರೋಹಿಗಳು ಮಾಡುವ …
Read More »