Breaking News

Yearly Archives: 2020

ಪ್ರಣಬ್ ಮುಖರ್ಜಿ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು

ಹೊಸದಿಲ್ಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪುರಸ್ಕೃತ ಪ್ರಣಬ್ ಮುಖರ್ಜಿ ಅವರಿಗೆ ಮಾರಕ ಕೊರೊನಾ ವೈರಸ್ ಸೋಂಕು ತಗುಲಿದೆ. ಈ ಕುರಿತು ಖುದ್ದು ಮಾಹಿತಿ ನೀಡಿರುವ ಪ್ರಣಬ್ ಮುಖರ್ಜಿ, ನಿಯಮಿತ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಭೇಟಿ ನೀಡಿದಾಗ ತಮಗೆ ಕೊರೊನಾ ಸೋಂಕು ತಗುಲಿದೆ ಎಂಬುದು ದೃಢಪಟ್ಟಿದೆ ಎಂದು ಟ್ವೀಟ್ ಮಾಡಿದ್ದಾರೆ. ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವುದನ್ನು ವೈದ್ಯರು ದೃಢಪಡಿಸಿದ್ದು, ನನ್ನ ಸಂಪರ್ಕಕ್ಕೆ ಬಂದ …

Read More »

ಯಡಿಯೂರಪ್ಪ ಮತ್ತು ಸಿದ್ಧರಾಮಯ್ಯ ಅವರು ರಾಜಕೀಯವಾಗಿ  ಒಗ್ಗಟ್ಟಾಗುತ್ತಿದ್ದಾರೆ……..?:ಸತೀಶ ಜಾರಕಿಹೊಳಿ

ಬೆಳಗಾವಿ: ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಸಿದ್ಧರಾಮಯ್ಯ ಅವರು ರಾಜಕೀಯವಾಗಿ  ಒಗ್ಗಟ್ಟಾಗುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಅದು ಅಸಾಧ್ಯದ ಮಾತು ಎಂದು ಹೇಳಿದ್ದಾರೆ. ರಾಜಕೀಯವಾಗಿ ಅವರ ಸಿದ್ಧಾಂತಗಳು, ವಿಚಾರ, ಹೋರಾಟವೇ ಬೇರೆಯಾಗಿದೆ.ಅವ್ರು ಹಾಸ್ಪಿಟಲ್ ನಲ್ಲಿ ಒಂದಾಗಬಹದು ಆದ್ರೆ ರಾಜಕೀಯವಾಗಿ ಅದು ಅಸಾಧ್ಯದ ಮಾತು ಎಂದು ವ್ಯಂಗ್ಯವಾಡಿದ ಅವರು ರಾಜಕೀಯವಾಗಿ ಯಾವಾಗಲೂ ಕೂಡಲು ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ರಾಜಕೀಯವಾಗಿ 24 …

Read More »

ರೌಡಿಗಳ ಚಳಿ ಬಿಡಿಸಿದ ರವಿ ಚೆನ್ನಣ್ಣನವರ್

ಬೆಂಗಳೂರು: ಹವಾ ಮಾಡ್ತೀವಿ, ರೌಡಿಸಂ ಮಾಡ್ತೀವಿ, ಹೆಸರು ಮಾಡ್ತೀವಿ, ನಂದೆ ಹವಾ ಇರ್ಬೇಕು ಎಂದು ಓಡಾಡುತ್ತಿದ್ದವರಿಗೆ ಆನೇಕಲ್ ಉಪ ವಿಭಾಗದ ಪೊಲೀಸರು ಚಳಿ ಬಿಡಿಸಿದ್ದು, ಖಡಕ್ ವಾರ್ನಿಂಗ್ ನೀಡಿದ್ದಾರೆ. ಆನೇಕಲ್ ಉಪವಿಭಾಗದ ಏಳು ಠಾಣೆಯ ಪೋಲಿಸರು ಭಾನುವಾರ ಸ್ಪೆಷಲ್ ಡ್ರೈವ್ ಮಾಡಿ ರೌಡಿ ಶೀಟರ್ಸ್ ಗಳ ಮನೆಗಳಿಗೆ ತೆರಳಿ ರೈಡ್ ಮಾಡಿ ಸುಮಾರು ನೂರಕ್ಕು ಹೆಚ್ಚು ರೌಡಿ ಶೀಟರ್ ಗಳನ್ನು ಠಾಣೆಗೆ ಕರೆಸಿದ್ದಾರೆ. ಇಂದು ಎಸ್‍ಪಿ ರವಿ.ಡಿ.ಚೆನ್ನಣ್ಣನವರ್ ನೇತೃತ್ವದಲ್ಲಿ ಎಲ್ಲ …

Read More »

ಅತಿವೃಷ್ಟಿಯಿಂದ ಬಾಧಿತವಾಗಿರುವ ರಾಜ್ಯಕ್ಕೆ 4 ಸಾವಿರ ಕೋಟಿ ರೂ ಪ್ಯಾಕೇಜ್: ಪ್ರಧಾನಿ ಮೋದಿ

ಬೆಂಗಳೂರು: ಅತಿವೃಷ್ಟಿಯಿಂದ ಬಾಧಿತವಾಗಿರುವ ರಾಜ್ಯಕ್ಕೆ 4 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಬೇಕೆಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ಇಂದು ಪ್ರಧಾನಿ ಮೋದಿ ಜೊತೆ ನಡೆದ 15 ನಿಮಿಷಗಳ ವಿಡಿಯೋ ಕಾನ್ಫೆರೆನ್ಸ್​ನಲ್ಲಿ ರಾಜ್ಯ ಸರ್ಕಾರ ತನ್ನ ರಾಜ್ಯದ 12 ಜಿಲ್ಲೆಗಳಲ್ಲಿನ ಅತಿವೃಷ್ಟಿ ಪರಿಸ್ಥಿತಿಯನ್ನು ವಿವರಿಸಿತು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ವಿವಿಧ ಅಧಿಕಾರಿಗಳು ರಾಜ್ಯದ ಪರವಾಗಿ ಪಾಲ್ಗೊಂಡಿದ್ದ ಈ ಕಾನ್ಫೆರೆನ್ಸ್​ನಲ್ಲಿ ಕೇಂದ್ರ ಸರ್ಕಾರಕ್ಕೆ ವಿವಿಧ ಬೇಡಿಕೆಗಳನ್ನ ಮುಂದಿಟ್ಟರು. …

Read More »

ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಖಾಸಗಿಕರಣ ಎಪಿಎಂಸಿ ಕಾನೂನು ತಿದ್ದುಪಡಿ

ಅಥಣಿ: ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಖಾಸಗಿಕರಣ ಎಪಿಎಂಸಿ ಕಾನೂನು ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪಟ್ಟಣದಲ್ಲಿ  ಪ್ರತಿಭಟನೆ ನಡೆಸಿದರು. ಇಲ್ಲಿನ ಮಿನಿ ವಿಧಾನಸೌಧದ ಎದುರು ಸೇರಿದ ರೈತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ  ಆಕ್ರೋಶ ವ್ಯಕ್ತಪಡಿಸಿದರು. ಬಳಿಕ  ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಾಸಕ  ಮಹೇಶ ಕುಮಟಳ್ಳಿ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘ ಹಾಗೂ …

Read More »

ಸರ್ಕಾರ ವಿಧವಾ, ಅಂಗ್ಯವಿಕಲ, ವೃದ್ಯಾಪ್ಯ ವೇತನ ನೀಡದಿರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ತಕ್ಷಣ ಪರಿಹಾರ ಕೊಡಿಸುವಂತೆ ಅಗಸಗಿ ಗ್ರಾಮಸ್ಥರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ: ಕಳೆದ 10 ತಿಂಗಳಿನಿಂದ  ಸರ್ಕಾರ  ವಿಧವಾ, ಅಂಗ್ಯವಿಕಲ, ವೃದ್ಯಾಪ್ಯ ವೇತನ ನೀಡದಿರುವುದರಿಂದ ಜೀವನ ನಡೆಸುವುದು  ಕಷ್ಟವಾಗಿದೆ. ತಕ್ಷಣ ಪರಿಹಾರ ಕೊಡಿಸುವಂತೆ ಅಗಸಗಿ ಗ್ರಾಮಸ್ಥರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ  ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.  ಇಲ್ಲಿನ ಕಾಂಗ್ರೆಸ್ ನೂತನ ಕಚೇರಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಗ್ರಾಮಸ್ಥರು ತಮ್ಮ ಅಳಲುತೋಡಿಕೊಂಡರು. ಕೊರೊನಾ ಲಾಕ್ ಡೌನ್ ನಿಂದಾಗಿ  ಸಾಕಷ್ಟು ತೊಂದರೆಯಾಗಿದೆ. ಜೀವನಕ್ಕೆ ಆಧಾರವಾಗಿದ್ದ ಪಿಂಚಣಿ ಹಣ ಕಳೆದ …

Read More »

ಹಿಡಕಲ್ ಡ್ಯಾಂ ಶೇ 95 ರಷ್ಟು ಭರ್ತಿ:

ಬೆಳಗಾವಿ:  ಹಿಡಕಲ್ ಜಲಾಶಯ ಭಾಗಶಃ ಶೇ. 95 ರಷ್ಟು ಭರ್ತಿಯಾದ ಹಿನ್ನೆಲೆಯಲ್ಲಿ 10 ಕ್ರಸ್ಟ್ ಗೇಟ್ ಗಳ ಮೂಲಕ 5 ಸಾವಿ ಕ್ಯೂಸೆಕ್ ನೀರು ಘಟಪ್ರಭಾ ನದಿಗೆ ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕ ಜಲಾಯನ ಪ್ರದೇಶದಲ್ಲಿ  ಮತ್ತೆ ಮಳೆ ಆರಂಭವಾದ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ಒಳ ಹರಿವು ಹೆಚ್ಚಳವಾಗಿದೆ.  ಘಟಪ್ರಭಾ ನದಿಯ ಗೋಕಾಕ ಹಾಗೂ ಹುಕ್ಕೇರಿ ತಾಲೂಕಿನ ಗ್ರಾಮದ ನದಿ ಪಾತ್ರದ ಜನರಿಗೆ ಸುರಕ್ಷಿತ ಇರುವಂತೆ ಸೂಚನೆ ನೀಡಲಾಗಿದೆ. …

Read More »

ಮತ್ತೆ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು

ಬೆಂಗಳೂರು:  ವರ್ಷ ಕೊರೋನಾ ಭೀತಿಯ ನಡುವೆಯೂ ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿತ್ತು. ಪರೀಕ್ಷೆಯನ್ನು ಯಶಸ್ವಿಯಾಗಿಯೂ ನಡೆಸಿತ್ತು. ಆದರೆ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಫಲಿತಾಂಶ ಕಡಿಮೆಯಾಗಿದೆ.  ಕಳೆದ ವರ್ಷ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಶೇ.73.70ರಷ್ಟು ಫಲಿತಾಂಶ ಬಂದಿತ್ತು. ಆದರೆ, ಈ ವರ್ಷ ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಹೆದರಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಆಗಮಿಸಿರಲಿಲ್ಲ. ಅಲ್ಲದೆ, ಕೆಲವು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ. ಪರಿಣಾಮ …

Read More »

ಎಸ್ಎಸ್ಎಲ್ ಸಿ ಫಲಿತಾಂಶ: ಚಿಕ್ಕೋಡಿ 30, ಬೆಳಗಾವಿಗೆ 31 ನೇ ಸ್ಥಾನ

ಬೆಳಗಾವಿ:  ಬಹುನಿರೀಕ್ಷಿತ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 30 ನೇ ಸ್ಥಾನ ಲಭಿಸಿದರೆ, ಬೆಳಗಾವಿ ಜಿಲ್ಲೆಗೆ 31 ನೇ ಸ್ಥಾನ ಪಡೆದಿದೆ.  ಕೊರೊನಾ ಸೋಂಕು ಭೀತಿಯ ಮಧ್ಯೆಯೂ ವಿದ್ಯಾರ್ಥಿಗಳು  ಎಸ್ಎಸ್ ಎಲ್ ಸಿ ಪರೀಕ್ಷೆ ಎದುರಿಸಿದ್ದರು.  ಚಿಕ್ಕೋಡಿಯ ಎಂ.ಕೆ. ಕವಟಗಿಮಠ ಕನ್ನಡ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡರ,  ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಘಟಪ್ರಭಾದ ಕೆ.ಆರ್. ಹುಕ್ಕೇರಿ ಪ್ರೌಢಶಾಲೆಯ ಶ್ರುತಿ ಬಸಗೌಡ ಪಾಟೀಲ …

Read More »

ಕಲಾವಿದರೊಬ್ಬರು ಗಣೇಶನನ್ನು ಕೊರೊನಾ ವಾರಿಯರ್ ಆಗಿ ರೂಪಿಸಿದ್ದಾರೆ

ಚೆನ್ನೈ: ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಚತುರ್ಥಿ ಹಬ್ಬ ಬರಲಿದ್ದು, ಈ ಬಾರಿ ಕೊರೊನಾ ವೈರಸ್ ಕಾಟದಿಂದ ಜನ ಹಬ್ಬಗಳನ್ನು ಸರಳವಾಗಿ ಆಚರಿಸುತ್ತಿದ್ದಾರೆ. ಅಂತೆಯೇ ಈ ಬಾರಿ ಮೂರ್ತಿ ತಯಾರಕರು ಕೂಡ ಗಣೇಶನನ್ನು ಸ್ವಲ್ಪ ವಿಭಿನ್ನವಾಗಿ ರೂಪಿಸುತ್ತಿದ್ದಾರೆ. ಹೌದು. ಕೊಯಂಬತ್ತೂರು ಮೂಲದ ಕಲಾವಿದರೊಬ್ಬರು ಗಣೇಶನನ್ನು ಕೊರೊನಾ ವಾರಿಯರ್ ಆಗಿ ರೂಪಿಸಿದ್ದಾರೆ. ಗಣೇಶ ಬಂದು ಕೊರೊನಾವನ್ನು ಹೊಡೆದು ಸಾಯಿಸುವಂತೆ ಮೂರ್ತಿಯನ್ನು ತಯಾರಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ರಾಜಾ, ಮಹಾಮಾರಿ ಕೋವಿಡ್ 19 …

Read More »