ಬೆಂಗಳೂರು : ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ನಡೆಸಲಾಗಿದ್ದು,17 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿಶೇಷ ಎಂದರೆ,ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಹಲವರಿಗೆ ಕೊರೋನಾ ದೃಢಪಟ್ಟಿದ್ದು ಅವರೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲೇ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗೃಹ ಇಲಾಖೆಯ ಕಾರ್ಯದರ್ಶಿ ಆಗಿದ್ದ ಎಡಿಜಿಪಿ ಉಮೇಶ್ಕುಮಾರ್ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಡಿ.ರೂಪಾ ಅವರು ವರ್ಗವಾಗಿದ್ದಾರೆ. ಕಲಬುರ್ಗಿ …
Read More »Yearly Archives: 2020
ವೀಕೆಂಡ್ ಬಂತು ಅಂದ್ರೆ ಈ ಏರಿಯಾದಲ್ಲಿ ನೈಟ್ ಪಾರ್ಟಿ; ನೈಜೀರಿಯಾ ಪ್ರಜೆಗಳಿಂದ ಬೇಸತ್ತು ಹೋಗಿರುವ ಜನ
ಬೆಂಗಳೂರು(): ವಿದೇಶಗಳಿಂದ ಭಾರತಕ್ಕೆ ಯಾರೇ ಬಂದ್ರೂ ಅತಿಥಿ ದೇವೋ ಭವ ಅಂತ ನಮ್ಮವರು ನಡೆಸಿಕೊಳ್ತಾರೆ. ಅದರಲ್ಲೂ ಕರ್ನಾಟಕದ ಮಂದಿ ಬಂದವರ ಜೊತೆ ಬೆರೆತು ಹೋಗ್ತಾರೆ. ಅಂತಹ ಕನ್ನಡಿಗರ ಕಣ್ಣಿಗೆ ಒಂದಷ್ಟು ವಿದೇಶಿಯರು ಈಗ ವಿಲನ್ಗಳಾಗಿದ್ದಾರೆ. ಅರೇ ಯಾರವರು ಅಂತೀರಾ ಸ್ಟೋರಿ ಓದಿ. ಹೌದು, ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನೈಜಿರಿಯನ್ ಪ್ರಜೆಗಳ ಕಿರಿಕ್ ಇದೇನು ಮೊದಲೇನಲ್ಲ. ಸದಾ ಒಂದಿಲ್ಲೊಂದು ಕಿರಿಕ್ ಮಾಡ್ತಾನೆ ಇರ್ತಾರೆ. ಆದ್ರೆ ಇವ್ರ ಕಿರಿಕ್ ನ್ನು ಪದೇ ಪದೇ …
Read More »ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಸಿದ್ದರಾಮಯ್ಯ
ಬೆಂಗಳೂರು(ಆ. 04): ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರಕೋಶ ಸೋಂಕಿನ ಹಿನ್ನೆಲೆಯಲ್ಲಿ ರಾತ್ರಿ 3:30ರ ಸುಮಾರಿಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. 15 ದಿನಗಳ ಹಿಂದೆ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ …
Read More »ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಾರ್ಮಾಡಿ ಘಾಟಿಯ ಮಲಯ ಮಾರುತದ ಬಳಿ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ ಎದುರಾಗಿದೆ. ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಸದ್ಯ ಭಾರೀ ಮಳೆಯಿಂದ ಅಲ್ಲಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ವಾಹನ ಸವಾರರ ಆತಂಕ ಕೂಡ …
Read More »ಡ್ರೋನ್ ಪ್ರತಾಪ್ ಮೇಲೆ ಮತ್ತೊಂದು ಕೇಸ್ –
ಬೆಂಗಳೂರು: ಕ್ವಾರಂಟೈನ್ನಲ್ಲಿ ಇದ್ದರು ನಿಯಮ ಉಲ್ಲಂಘನೆ ಮಾಡಿದಕ್ಕೆ ಡ್ರೋನ್ ಪ್ರತಾಪನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು, ಅಶೋಕ ನಗರ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಕ್ವಾರಂಟೈನ್ನಲ್ಲಿ ಇರಬೇಕು ಎಂದು ಅಧಿಕಾರಿಗಳು ಹೇಳಿದ್ದರು ಪ್ರತಾಪ್ ನಿಯಮ ಉಲ್ಲಂಘನೆ ಮಾಡಿದ್ದ. ಆದ್ದರಿಂದ ಆತನ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಆತನನ್ನು ವಶಕ್ಕೆ ಪಡೆದು ಬೆಂಗಳೂರಿನ ಖಾಸಗಿ ಹೋಟೆಲ್ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇಂದಿಗೆ ಪ್ರತಾಪ್ ಕ್ವಾರಂಟೈನ್ ಅವಧಿ …
Read More »ಬುದ್ಧಿ ಹೇಳೋಕೆ ಬಂದಿದ್ವಿ – ಆನಂದ್ ಪ್ರಸಾದ್ ಭೇಟಿ ಮಾಡಿದ ಹ್ಯಾರಿಸ್, ನಲ್ಪಾಡ್
ಬೆಂಗಳೂರು: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿ ಅರೆಸ್ಟ್ ಆಗಿರುವ ಕೆಪಿಸಿಸಿ ಸೋಶಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್ನನ್ನು ಶಾಂತಿನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ ಮಹಮ್ಮದ್ ನಲ್ಪಾಡ್ ಅವರು ಭೇಟಿಯಾಗಿದ್ದಾರೆ. ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದರು. ಟ್ವಿಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆನಂದ್ ಪ್ರಸಾದ್ …
Read More »ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಮೂಡಲಗಿ : ಶಾಲಾ ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಇಲ್ಲಿಗೆ ಸಮೀಪದ ಸುಣಧೋಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹಾಯಕ ನಿಂಗಪ್ಪ ಕುರಬೇಟ ಗುದ್ದಲಿ ಪೂಜೆ ನೆರವೇರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದಾಗಿ ನಬಾರ್ಡ ಯೋಜನೆಯಡಿ ನೂತನ ಶಾಲಾ ಕೊಠಡಿಗಳಿಗೆ 1.04 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶಿಕ್ಷಣದ ಸರ್ವಾಂಗೀಣ ಅಭಿವೃದ್ಧಿಗಾಗಿ …
Read More »ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752,ಬೆಳಗಾವಿ ಜಿಲ್ಲೆಯಲ್ಲಿ ಇಂದು 60
ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752. ಒಟ್ಟೂ ಮೃತರ ಸಂಖ್ಯೆ 98. 4776 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 139571, ಗುಣಮುಖರಾದವರ ಸಂಖ್ಯೆ 62,500. ಒಟ್ಟೂ ಸಾವಿಗೀಡಾದವರ ಸಂಖ್ಯೆ 2594. ಬೆಂಗಳೂರಿನಲ್ಲಿ 1497 ಜನರಿಗೆ ಇಂದು ಸೋಂಕು ಪತ್ತೆಯಾಗಿದೆ. ಇಂದು 27 ಜನರು ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೇವಲ 60 ಹೊಸ ಪ್ರಕರಣ ಪತ್ತೆಯಾಗಿದೆ. ಆದರೆ ಒಂದೇ …
Read More »ಕೋವಿಡ್-19 ನಿರ್ವಹಣೆಯ ಹೆಸರಿನಲ್ಲಿಎರಡು ಸಾವಿರ ಕೋಟಿಗೂ ಹೆಚ್ಚು ಹಣ ಲೂಟಿ
ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಛೇರಿಯಲ್ಲಿ ಇವತ್ತು ಕರ್ನಾಟಕದ ಬಿಜೆಪಿ ಸರ್ಕಾರ ಕೋವಿಡ್-19 ನಿರ್ವಹಣೆಯ ಹೆಸರಿನಲ್ಲಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಎರಡು ಸಾವಿರ ಕೋಟಿಗೂ ಹೆಚ್ಚು ಹಣವನ್ನು ಲೂಟಿ ಹೊಡೆದಿದ್ದು, ಸತ್ಯಾಸತ್ಯತೆ ಪರಿಶೀಲನೆಗೆ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಖೆ ಮಾಡಿಸಬೇಕು ಹಾಗೂ ಇದರ ಬಗ್ಗೆ ಚರ್ಚಿಸಲು ಕೂಡಲೇ ವಿಧಾನಮಂಡಲದ ಅಧಿವೇಶನವನ್ನು ಕರೆಯಬೇಕು ಎನ್ನುವುದರ ಸಲುವಾಗಿ ಇವತ್ತು ಕೇಂದ್ರದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ …
Read More »ಕೊರೋನಾ ಚಿಕಿತ್ಸೆ: ಸಿಎಂ, ಕೇಂದ್ರ ಸಚಿವರಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆಯಿಲ್ಲವೇ?
ನವದೆಹಲಿ: ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ಸಹ ವ್ಯಕ್ತವಾಗುತ್ತಿದೆ. ಸೋಂಕು ದೃಢಪಟ್ಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ …
Read More »