ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ಹೆಸರಲ್ಲಿ ನಕಲಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಮೀರ್ ಉಲ್ಲಾ ಬಂಧಿತ ಆರೋಪಿ. ಫೇಸ್ಬುಕ್ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡ ಹಿನ್ನೆಲೆಯಲ್ಲಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿ ಸಮೀರ್ ಉಲ್ಲಾ ಸಿನಿಮಾ ಇಂಡಸ್ಟ್ರೀಸ್ ನಲ್ಲಿ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ನಾಯಕರೊಂದಿಗೆ ಗುರುತಿಸಿಕೊಂಡಿರುವ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ. ಈ ವಿಡಿಯೋವನ್ನು ಪರಿಶೀಲಿಸಿದ ಸಿಸಿಬಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ನಕಲಿ ವಿಡಿಯೋವನ್ನು …
Read More »Yearly Archives: 2020
ಬಾಲಕಿಗೆ ಕೊರೊನಾ ವರದಿ ನೆಗೆಟಿವ್ ಬಂದ್ರೂ ಗ್ರಾಮ ಸೀಲ್ಡೌನ್
ಮಡಿಕೇರಿ: ಬಾಲಕಿಗೆ ಕೊರೊನಾ ವರದಿ ನೆಗೆಟಿವ್ ಬಂದ್ರೂ ಗ್ರಾಮ ಸೀಲ್ಡೌನ್ ಮಾಡಿದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಜನತಾ ಕಾಲೋನಿಯನ್ನು ಸೀಲ್ಡೌನ್ ಮಾಡಿ ಮೂರು ದಿನಗಳ ಕಳೆದಿವೆ. ಜನತಾ ಕಾಲೋನಿಯ 17 ವರ್ಷದ ಯುವತಿಗೆ ಕೊರೊನಾ ಸೋಂಕು ಇದೆ ಎಂದು ಶಂಕಿಸಲಾಗಿತ್ತು. ಆದ್ರೆ ಪರೀಕ್ಷೆಗೆ ಒಳಪಡಿಸಿದಾಗ ವರದಿಯಲ್ಲಿ ನೆಗೆಟಿವ್ ಬಂದಿದೆ. ಇಂದಿಗೂ ಸೀಲ್ಡೌನ್ ಮಾಡಿರುವ ಗ್ರಾಮವನ್ನು ತೆರವು ಮಾಡದೇ ಇರುವುದರಿಂದ ಗ್ರಾಮಸ್ಥರು ಅಧಿಕಾರಿಗಳ …
Read More »ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರಿಗೆ ಗಂಭೀರ ಗಾಯ: ಮಾನವೀಯತೆ ಮರೆತು ವಿಡಿಯೋ ಮಾಡಿದ ಜನ
ಯಾದಗಿರಿ ಜಿಲ್ಲೆ ಅಲ್ಲೀಪುರ ತಾಂಡಾದ ಬಳಿ ಬೈಕ್, ಟಿಪ್ಪರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಗೂರು ಗ್ರಾಮದ ತಾಯಿ, ಮಗ, ಮಗಳು ಗಾಯಗೊಂಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ್ದಾರೆ. ಜನ ನೀರು ಕೊಡದೇ ಅಮಾನವೀಯವಾಗಿ ವರ್ತಿಸಿದ್ದಾರೆ. ಗಾಯಗೊಂಡವರು ನರಳಾಡುತ್ತಾ ಸಹಾಯಕ್ಕಾಗಿ ಗೋಗರೆದರೂ ನೆರವಾಗದೇ ವಿಡಿಯೋ ಮಾಡಿಕೊಂಡು ಅಮಾನವೀಯ ವರ್ತನೆ ತೋರಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಇದೇ ಮಾರ್ಗವಾಗಿ ಬರುವಾಗ ಗಾಯಾಳುಗಳನ್ನು ಗಮನಿಸಿದ್ದು ಆಂಬುಲೆನ್ಸ್ ಗೆ ಕರೆ ಮಾಡಿ …
Read More »ಚಿಕ್ಕಮಗಳೂರು ಜಿಲ್ಲೆಯ ಮೂರು ಪೊಲೀಸ್ ಠಾಣೆ ಸೀಲ್ ಡೌನ್: ಹೆಚ್ಚಿದ ಆತಂಕ
ಚಿಕ್ಕಮಗಳೂರು: ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ, ಅಜ್ಜಂಪುರ ಹಾಗೂ ಯಗಟಿ ಪೊಲೀಸ್ ಠಾಣೆಗಳನ್ನು ಸೀಲ್ಡೌನ್ ಮಾಡಿ ಸೋಂಕಿತ ಪೊಲೀಸ್ ಪೇದೆಗಳನ್ನು ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಲ್ಲಿಯವರೆಗೆ 250 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
Read More »ಬೆಳಗಾವಿಯಲ್ಲಿ ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಚಿಕಿತ್ಸೆ ಸಿಗದೇ 30 ವರ್ಷದ ಯುವತಿ ಸಾವು
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರಿಂದ ಸಾವನ್ನಪ್ಪುವವರ ಸಂಖ್ಯೆಯೂ ಕೂಡ ಹೆಚ್ಚಿದೆ. ಇದುವರೆಗೂ ಬೆಳಗಾವಿ ಜಿಲ್ಲೆಯಾದ್ಯಂತ 932 ಜನರಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಅದರಲ್ಲಿ 435 ಜನರು ಗುಣಮುಖರಾಗಿದ್ದರೆ, 24 ಜನರ ಸಾವನ್ನಪ್ಪಿದ್ದಾರೆ. ಇನ್ನು, 473 ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಒಂದರ ಹಿಂದೆ ಇನ್ನೊಂದು …
Read More »ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು; ತನಿಖೆಗೆ ಆದೇಶಿಸಿದ ಬೆಳಗಾವಿ ಡಿಸಿ
ಬೆಳಗಾವಿ : ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ 65 ವರ್ಷದ ವೃದ್ಧರೊಬ್ಬರು ನರಳಾಡಿ ಸಾವನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮದಲ್ಲಿ ಸುದ್ಧಿ ಬಿತ್ತರವಾದ ಹಿನ್ನಲೆಯಲ್ಲಿ, ಎಚ್ಚೆತ್ತುಕೊಂಡ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಮ್ಸ್ ನಿರ್ದೇಶಕರಿಗೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಸಿ ಹಿರೇಮಠ ಅವರು, ಬಿಮ್ಸ್ ನಿರ್ದೇಶಕರಿಗೆ …
Read More »ಮೂಡಲಗಿ ಪೊಲೀಸ್ ಪೇದೆಗೆ ಕೊರೋನಾ ಸೋಂಕು ತಗಲಿರುವುದು ದೃಢ.
ಮೂಡಲಗಿ : ಮೂಡಲಗಿ ಪಟ್ಟಣದಲ್ಲಿರುವ ಪೊಲೀಸ್ ಠಾಣೆ ಹಾಗೂ ಸಿಪಿಐ ಠಾಣೆಯ ಎಲ್ಲ ಸಿಬ್ಬಂದಿಗಳನ್ನು ಕೂಡಲೇ ಗಂಟಲು ದ್ರವ ಪರೀಕ್ಷೆ ಮಾಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮೂಡಲಗಿ ಪಟ್ಟಣ ಮತ್ತು ತಾಲೂಕಿನಲ್ಲಿ ಈಗಾಗಲೇ ಕೊರನ ಸೋಂಕುಗಳು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿ ಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಆದಕಾರಣ ಜನತೆಯಲ್ಲಿ ಶಾಂತಯ್ಯ ನಿವಾರಿಸಲು ಶೀಘ್ರವೇ ಪೋಲಿಸ್ ಠಾಣೆಯ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷೆ ಮಾಡುವುದು ಅವಶ್ಯವಿದೆ. …
Read More »ಮಹೇಶ ಕುಮಟಳ್ಳಿ, ಅಧ್ಯಕ್ಷರು, ಕೊಳಗೇರಿ ಅಭಿವೃದ್ದಿ ನಿಗಮ ಮಂಡಳಿಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ
ಅಥಣಿ: ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ ಮಾಡಲಾಗುವುದು, ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೊಳಗೇಡಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಮಾಹಿತಿ ನೀಡಿದರು. ಅಥಣಿ ಪ್ರವಾಸಿ ಮಂದಿರದಲ್ಲಿ ಮಾದ್ಯಮದವವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಹಿತಿ ನೀಡಿದ ಅವರು, 5.5 ಲಕ್ಷ ವೆಚ್ಚದ 91734 ಮನೆಗಳನ್ನು ಶೀಘ್ರ ನಿರ್ಮಾಣ ಮಾಡಲಾಗುವುದು. ಈ ಕಾರ್ಯಕ್ಕೆ 6500 ಕೋಟಿ ರೂ. …
Read More »ಕೊರೋನಾ ಭಯವಿಲ್ಲದೆ ಬೆಳ್ಳಂಬೆಳಗ್ಗೆ ಮಾಂಸ ಖರೀದಿಗೆ ಮುಗಿಬಿದ್ದ ಜನ..!
ಬೆಂಗಳೂರು, : ನಾಳೆ ಸೋಮವಾರ… ಮಂಗಳವಾರ ಶ್ರಾವಣ ಪ್ರಾರಂಭ… ನಾನ್ವೆಚ್ ತಿನ್ನಂಗಿಲ್ಲ… ಏನೇ ಆದ್ರೂ ಇವತ್ತು ತಿನ್ನಲೇಬೇಕು… ಕೊರೊನಾ ಒಂದು ಕಡೆ ಇರಲಿ ಎಂಬಂತೆ ನಾನ್ವೆಜ್ ಪ್ರಿಯರು ಇಂದು ಬೆಳ್ಳಂಬೆಳಗ್ಗೆ ಮಾಂಸ ಖರೀದಿಗಾಗಿ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತಿದ್ದ ದೃಶ್ಯಗಳು ನಗರದಲ್ಲಿ ಕಂಡುಬಂದವು. ಮಹಾಮಾರಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದ್ದರೂ ಸಹ ನಾನ್ವೆಜ್ ಪ್ರಿಯರು ಬೆಳ್ಳಂಬೆಳಗ್ಗೆ ಚಿಕನ್, ಮಟನ್ ಹಾಗೂ ಫಿಷ್ ಖರೀದಿಸಲು ಅಂಗಡಿಗಳ ಮುಂದೆ ಸಾಲು ಸಾಲಾಗಿ ನಿಂತಿದ್ದರು. …
Read More »ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆ ಈ ವಷ೯ರದ್ದು
ಮೂಡಲಗಿ: ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಈ ಬಾರಿಯ ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆಯನ್ನು , ಪ್ರಾಥನೆಯನ್ನು ಎಲ್ಲರೂ ತಮ್ಮ ಮನೆಗಳಲ್ಲಿಯೇ ಸರಳವಾಗಿ ಆಚರಿಸಬೇಕು ಎಂದು ಭಜನಾ ಮಂಡಳಿ ಸದಸ್ಯ ಬಸವರಾಜ ರಂಗಾಪೂರ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಜನಾ ಕಾಯ೯ಕ್ರಮವು ಪ್ರತಿ ವಷ೯ ಈ ವಷ೯ವೂ ಅದ್ಧೂರಿಯಾಗಿ ಆಚರಿಸಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಕೋವಿಡ್ 19 ವೈರಸ್ದಿಂದಾಗಿ ಸಾರ್ವಜನಿಕವಾಗಿ ಆಚರಣೆ ರದ್ದುಪಡಿಸಲಾಗಿದೆ …
Read More »