Breaking News

Yearly Archives: 2020

ಏಳು ದಿನಗಳ ಕಾಲ ಲಾಕ್ ಡೌನ್ ಸಂಪೂರ್ಣ ವಿಭಿನ್ನ ಹಾಗೂ ಕಠಿಣವಾಗಿರುತ್ತೆ:ಬಸವರಾಜ ಬೊಮ್ಮಾಯಿ

ಬೆಂಗಳೂರು: ಲಾಕ್‍ಡೌನ್‍ನಿಂದ ಯಾರಿಗೂ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾಳೆ ಮತ್ತು ನಾಡಿದ್ದು ಸಂಜೆಯವರೆಗೂ ಬೆಂಗಳೂರು ಮಂದಿಗೆ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲು, ಊರಿಗೆ ಹೋಗೋರಿದ್ರೆ ಹೋಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಬೆಂಗಳೂರಿಗೆ ಬರೋರಿಗೆ, ಬೆಂಗಳೂರಿಂದ ಹೋಗೋರಿಗೆ ಯಾವುದೇ ಅಡ್ಡಿ ಮಾಡಲ್ಲ. ಆದರೆ ಲಾಕ್‍ಡೌನ್ ಶುರುವಾದ ನಂತರ ಓಡಾಟ ಇರಬಾರದು. ಜನ ಮನೆಯಲ್ಲೇ ಇರಬೇಕು ಎಂದು ಸಚಿವ ಅಶೋಕ್ ಸರ್ಕಾರದ ಪರವಾಗಿ ಮನವಿ ಮಾಡಿಕೊಂಡಿದ್ದಾರೆ. ನಾಳೆ ಸಂಜೆ ಹೊತ್ತಿಗೆ ಲಾಕ್‍ಡೌನ್ ಮಾರ್ಗಸೂಚಿಯನ್ನು …

Read More »

ಕೊರೊನಾ ಬಂದ ವ್ಯಕ್ತಿಗಳನ್ನ ಕೀಳಾಗಿ ಕಾಣಬೇಡಿ- ಪುಟ್ಟ ಬಾಲಕಿ ಮನವಿ

ಹಾವೇರಿ: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿತರನ್ನ ನೋಡುವ ದೃಷ್ಟಿಕೋನ ಬೇರೆಯಾಗಿದೆ. ಆದರೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಅಕ್ಕಿಆಲೂರಿನ ಪುಟ್ಟ ಬಾಲಕಿಯೊಬ್ಬಳು ಮಹಾಮಾರಿ ಕೊರೊನಾ ಸೋಂಕಿನ ಬಗ್ಗೆ ಮನಮುಟ್ಟುವ ಸಂದೇಶವನ್ನು ನೀಡಿದ್ದಾಳೆ. ಅಕ್ಕಿಆಲೂರು ಗ್ರಾಮದ ಬಾಲಕಿ ವಚನಾ ಚಿಲ್ಲೂರಮಠ ಜೈನ್ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಕೊರೊನಾ ಕುರಿತು ಮಾನವೀಯ ಸಂದೇಶವನ್ನು ಸಾರಿದ್ದಾಳೆ.ಗ್ರಾಮದ ಕೊರೊನಾ ವ್ಯಕ್ತಿಗಳನ್ನು ಸಮಾಜದಲ್ಲಿ ನೋಡುವ ದೃಷ್ಟಿ ಬದಲಾಗಿದೆ. ಕೊರೊನಾ ಬಂದ …

Read More »

ಸಂಡೇ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಊರುಗಳತ್ತ ಜನ- ಬೆಳ್ಳಂಬೆಳಗ್ಗೆ ಟ್ರಾಫಿಕ್

                                   ಸಂಡೇ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಊರುಗಳತ್ತ   ಜನ-  ಟ್ರಾಫಿಕ್   ಬೆಂಗಳೂರು: ಬೆಂಗಳೂರು ಲಾಕ್‍ಡೌನ್‍ಗೆ ಇನ್ನೊಂದು ದಿನ ಮಾತ್ರ ಬಾಕಿ ಇದೆ.  ಮಂಗಳವಾರ ರಾತ್ರಿ 8 ಗಂಟೆಯಿಂದ 7 ದಿನ ಕಾಲ ಲಾಕ್‍ಡೌನ್ ಜಾರಿಯಾಗಲಿದೆ. ಈ ವೇಳೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‍ಗಳ ಸಂಚಾರ ಸಂಪೂರ್ಣ ಸ್ಥಬ್ಧವಾಗಲಿದೆ. ಹೀಗಾಗಿ ಜನರು ಸಂಡೇ ಲಾಕ್‍ಡೌನ್ ಮುಗಿಯುತ್ತಿದ್ದಂತೆ ತಮ್ಮ ತಮ್ಮ ಗ್ರಾಮಗಳತ್ತ ಹೋಗುತ್ತಿದ್ದಾರೆ. ಸಂಡೇ ಲಾಕ್‍ಡೌನ್ ಸಮಯ ಮುಗಿದ ತಕ್ಷಣ ಬೈಕ್ ಮತ್ತು …

Read More »

ಮೌಢ್ಯ ವಿರೋಧಿ ದಿನ ನೂತನ ವಾಹನ ಚಾಲನಾ ಸಮಾರಂಭಕ್ಕೆ ಆನಂದಪೂರ ಗ್ರಾಮದಿಂದ ಬೆಳಗಾವಿ ಸದಾಶಿವ ನಗರದ ಸ್ಮಶಾನದ ವರೆಗೆ ಪಾದಯಾತ್ರೆ

ಬೆಳಗಾವಿ :ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅಭಿಮಾನಿಗಳ ಬಳಗ ಹಾಗೂ ಆನಂದಪೂರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆನಂದಪೂರ-ಹತ್ತರಗಿ ಸೋಮವಾರ ದಿನಾಂಕ:13-07-2020 ರಂದು ಮೌಢ್ಯ ವಿರೋಧಿ ದಿನ ನೂತನ ವಾಹನ ಚಾಲನಾ ಸಮಾರಂಭಕ್ಕೆ ಆನಂದಪೂರ ಗ್ರಾಮದಿಂದ ಬೆಳಗಾವಿ ಸದಾಶಿವ ನಗರದ ಸ್ಮಶಾನದ ವರೆಗೆ ಪಾದಯಾತ್ರೆ ಕೈಗೊಂಡಿರುವ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅಭಿಮಾನಿಗಳು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಆದ ವಿನಾಯಕ ಹಳ್ಳಿ ಮತ್ತು ಗೌಸ ಐನಾಪೂರಿ ಪಾದಯಾತ್ರೆಗೆ ಚಾಲನೆ ನೀಡಿ …

Read More »

ರಾಜ್ಯದಲ್ಲಿಂದು 2,627 ಕೊರೊನ ಪ್ರಕರಣಗಳು, ಬೆಳಗಾವಿಯಲ್ಲಿ 2 ಪ್ರಕರಣಗಳು ಮಹಾಮಾರಿ ವೈರಸ್ ಮೂವರ ಬಲಿ …….

ಬೆಂಗಳೂರು: ರಾಜ್ಯದಲ್ಲಿಂದು ಸಹ ಮಹಾಮಾರಿ ಕೊರೊನಾ ವೈರಸ್ ತನ್ನು ರುದ್ರ ನರ್ತನವನ್ನು ಮುಂದುವರಿಸಿದೆ. ಇಂದು ಒಂದೇ ದಿನ 2,627 ಕೊರೊನ ಪ್ರಕರಣಗಳು ಕರುನಾಡಿನಲ್ಲಿ ವರದಿಯಾಗಿವೆ. ಇಂದು 71 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು 1,525 ಜನರಲ್ಲಿ ಸೋಂಕು ಸೇರಿಕೊಂಡಿದೆ. ಇಂದು ಬೆಂಗಳೂರಿನಲ್ಲಿ 206 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ರೆ ನಗರದಲ್ಲಿ 14,067 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ ಒಂದೇ ದಿನ 45 …

Read More »

ಅನುಪಮ್ ಖೇರ್ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು

ಮುಂಬೈ: ಬಾಲಿವುಡ್ ನಟ ಅನುಪಮ್ ಖೇರ್ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಅನುಪಮ್ ಖೇರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನನ್ನ ತಾಯಿಗೆ ಕೊರೊನಾ ಸೋಂಕು ತಗುಲಿದೆ. ಹಾಗೇ ನನ್ನ ಸೋದರ, ಅತ್ತಿಗೆ ಮತ್ತು ಸಂಬಂಧಿಗೂ ಕೊರೊನಾ ತಗುಲಿದೆ. ಅನುಪಮ್ ಖೇರ್ ಅವರ ತಾಯಿಯನ್ನು ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ಮೂವರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.ಕುಟುಂಬಸ್ಥರಿಗೆ ಪಾಸಿಟಿವ್ ದೃಢಪಟ್ಟಿದ್ದರಿಂದ ಅನುಪಮ್ ಮತ್ತು ಇತರೆ …

Read More »

ಮಯೂರಿ ಬರ್ತ್‍ಡೇ ಸಂಭ್ರಮಕ್ಕೆ ಕಿಕ್ಕೇರಿಸಿತು ‘ಆದ್ಯಂತ’ ಫಸ್ಟ್ ಲುಕ್!

ಕಿರುತೆಯಿಂದ ಕಲಾಯಾನ ಆರಂಭಿಸಿ ಹಿರಿತೆರೆಯಲ್ಲೂ ಯಶಸ್ವಿ ನಾಯಕಿಯಾಗಿ ನೆಲೆ ಕಂಡುಕೊಂಡಿರುವವರು ಮಯೂರಿ ಕ್ಯಾತರಿ. ಪ್ರಬುದ್ಧವಾದ ನಿರ್ಧಾರಗಳ ಮೂಲಕ ಚೆಂದದ ಪಾತ್ರಗಳನ್ನ ಆಯ್ಕೆ ಮಾಡಿಕೊಳ್ಳುತ್ತಿರೋ ಮಯೂರಿ ಇತ್ತೀಚೆಗಷ್ಟೇ ಸಾಂಸಾರಿಕ ಜೀವನಕ್ಕೆ ಅಡಿಯಿರಿಸಿದ್ದಾರೆ. ಆ ಖುಷಿಯಲ್ಲಿರೋ ಅವರ ಪಾಲಿಗೆ ಈ ಬಾರಿಯ ಹುಟ್ಟುಹಬ್ಬ ನಿಜಕ್ಕೂ ಸ್ಪೆಷಲ್ಲು. ಅದನ್ನು ಮತ್ತೂ ಕಳೆಗಟ್ಟಿಸುಯವಂತೆ ‘ಆದ್ಯಂತ’ ಚಿತ್ರದ ಚೆಂದದ ಫಸ್ಟ್ ಲುಕ್ ಬಿಡುಗಡೆಗೊಂಡಿದೆ.   ಆದ್ಯಂತ ಮಯೂರಿ ನಾಯಕಿಯಾಗಿ ನಟಿಸಿರೋ ಚಿತ್ರ. ಅವರ ಪಾಲಿಗಿದು ಮಹತ್ವಾಕಾಕ್ಷೆಯ ಮೈಲಿಗಲ್ಲು. …

Read More »

ಆನ್ ಲೈನ್ ನಲ್ಲಿ ಪುಸ್ತಕ ಲೋಕಾರ್ಪಣೆ

ಬೆಂಗಳೂರು, ಜು.12- ಹಿರಿಯ ಸಾಹಿತಿ ಡಾ.ಜಿ.ಕೃಷ್ಣಪ್ಪ ಅವರು ರಚಿಸಿರುವ ಕುವೆಂಪು ಹನುಮದ್ದರ್ಶನ(ಶ್ರೀ ರಾಮಾಯಣ ದರ್ಶನಂ-ಒಂದು ಚಿತ್ರಣ) ಗ್ರಂಥ ವನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಲೋಕಾರ್ಪಣೆ ಮಾಡಿದರು. https://youtu.be/I1U-UG-NHuk ನಗರದಲ್ಲಿಂದು ತಮ್ಮ ನಿವಾಸದಲ್ಲಿ ಆನ್ ಲೈನ್ ಮೂಲಕವೇ ಬಿಡುಗಡೆ ಮಾಡಿದ ಅವರು, ಶ್ರೀ ರಾಮಾಯಣ ದರ್ಶನಂ ವಿಶೇಷ ಗ್ರಂಥವಾಗಿದ್ದು, ಡಾ.ಜಿ.ಕೃಷ್ಣಪ್ಪ ಅವರು ಹನುಮದ್ದರ್ಶನ ಕುರಿತು ಹೆಚ್ಚಿನ ಮಾಹಿತಿ ಬೆಳಕು ಚೆಲ್ಲಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಮಹಮದೀಯರ ಕನ್ನಡ …

Read More »

ದಾವಣಗೆರೆ ಮೂದಲ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ಖಬರಸ್ತಾನ್ ನಲ್ಲಿ ಪಿಎಫ್‍ಐ ಯುವಕರ ತಂಡ ನಡೆಸಿದೆ.

ಉಡುಪಿ: ಕೊರೊನಾದಿಂದ ಸಾವನ್ನಪ್ಪಿದ ದಾವಣಗೆರೆ ಮೂದಲ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ಖಬರಸ್ತಾನ್ ನಲ್ಲಿ ಪಿಎಫ್‍ಐ ಯುವಕರ ತಂಡ ನಡೆಸಿದೆ. ದಾವಣಗೆರೆ ಮೂಲದ ವ್ಯಕ್ತಿ ಉಡುಪಿಯಲ್ಲಿ ಮೃತಪಟ್ಟಿದ್ದು ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ 72 ವರ್ಷದ ವೃದ್ಧ ಮಣಿಪಾಲ ಕೆಎಂಸಿಗೆ ಭೇಟಿ ಕೊಟ್ಟಿದ್ದರು. ಚಿಕಿತ್ಸಾ ಸಂದರ್ಭ ಅವರಲ್ಲಿ ಕೊರೊನಾದ ಲಕ್ಷಣಗಳು ಕಂಡು ಬಂದಿತ್ತು. ರೋಗಿಯನ್ನು ಕೂಡಲೇ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ವ್ಯಕ್ತಿಯನ್ನು ಶಿಫ್ಟ್ ಮಾಡಲಾಗಿತ್ತು. ಉಸಿರಾಟದ …

Read More »

ಡೆತ್ ನೋಟ್ ಬರೆದಿಟ್ಟು ನಿರ್ಮಾಪಕ ಆತ್ಮಹತ್ಯೆ………

ಉಡುಪಿ: ಡೆತ್ ನೋಟ್ ಬರೆದಿಟ್ಟು ನಿರ್ಮಾಪಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ನಾಗೇಶ್ ಕುಮಾರ್ (64) ನೇಣಿಗೆ ಶರಣಾದ ನಿರ್ಮಾಪಕ. ಮೃತ ನಾಗೇಶ್ ಕುಮಾರ್ ಚಲನಚಿತ್ರ ನಿರ್ದೇಶನಕ್ಕೆ 28 ಲಕ್ಷ ಹಣ ಹೂಡಿದ್ದರು. ‘ಭೂಮಿಕ ಪ್ರೊಡಕ್ಷನ್’ ಹೆಸರಿನ ಭರತ್ ನಾವುಂದ ನಿರ್ದೇಶನದ ಚಲನಚಿತ್ರಕ್ಕೆ ಹಣ ಹೂಡಿಕೆ ಮಾಡಿದ್ದರು. ಆದರೆ ಹಣ ವಾಪಸ್ ಬಾರದ ಹಿನ್ನೆಲೆಯಲ್ಲಿ ನಿರ್ಮಾಪಕ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀಜಾಡಿ ಗ್ರಾಮದ …

Read More »