ಗೋಕಾಕ ತಾಲೂಕಿನ ಜನತೆಯನ್ನು ಗೋಕಾಕ ಲಕ್ಷ್ಮಿ ದೇವಿಯೇ ಕಾಪಾಡಬೇಕು… ಗೋಕಾಕ: ಮಹಾಮಾರಿ ಕ ರೋ ನಾ ವೈರಸ್ ಇಂದು ಗೋಕಾಕ ತಾಲೂಕಿನ ಐದು ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ , ಗೋಕಾಕ ತಾಲೂಕಿನ ಗ್ರಾಮ ಗಳಾದ ಗುಜನಾಳ, ಖನಗಾವ್, ಶಿಂದಿ ಕುರಬೆಟ್, ಹಾಗೂ ಗೋಕಾಕ ನಗರದಲ್ಲಿ ಕೂಡ ಇಂದು ಒಂದೇ ದಿನ ಐದು ಪಾಸಿಟಿವ್ ಕೆಸಗಳು ಬಂದಿವೆ . ಹಾಗೆ ಪಾಸಿಟಿವ್ ಬಂದಿರುವ ವ್ಯಕ್ತಿಗಳನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ, ಹಾಗೂ …
Read More »Yearly Archives: 2020
ಟ್ರೋಲ್ಗಳಿಂದ ಬೇಸತ್ತು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ ಕರಣ್ ಜೋಹರ್
ನವದೆಹಲಿ: ಬಾಲಿವುಡ್ನ ಹೆಸರಾಂತ ನಿರ್ಮಾಪಕ ಕರಣ್ ಜೋಹರ್ ಟ್ರೋಲ್ಗೆ ಒಳಗಾಗಿರುವುದು, ಅವರ ವಿರುದ್ಧ ಟೀಕಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಅನೇಕ ಬಾರಿ ಈ ರೀತಿಯ ಘಟನೆಗಳು ನಡೆದಿದೆ. ಇದಾವುದಕ್ಕೂ ಕರಣ್ ಜೋಹರ್ ತಲೆ ಕೆಡಿಸಿಕೊಂಡವರಲ್ಲ. ಯಾವುದೇ ಟ್ರೋಲ್ಗಳಿಗೆ ಕಿವಿಗೊಡದೆ ತಮ್ಮ ಕೆಲಸದ ಕಡೆ ಚಿತ್ತ ಹರಿಸುತ್ತಿದ್ದರು. ಆದರೆ ಇದೀಗ ಅವರು ತುಂಬಾ ನೊಂದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರಂತೆ. ಹೌದು ಇತ್ತೀಚೆಗೆ ಅವರ ವಿರುದ್ಧ ವಿಪರೀತ ದಾಳಿ ನಡೆಯುತ್ತಿದ್ದು, ಇದರಿಂದಾಗಿ …
Read More »ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ:ರಮೇಶ್ ಜಾರಕಿಹೊಳಿ
ಬೆಳಗಾವಿ: ಬುಡಾ ಮೆಂಬರ್ ಮಾಡುವಂತೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಕಾಲಿಗೆ ಬಿದ್ದಿದ್ದು ನಿಜ. ಲಿಂಗಾಯತ ಸಮಾಜದ ಮಹಿಳೆ ಬೆಳೆಯಲಿ ಅಂತಾ ನಾನೇ ಸಹಾಯ ಮಾಡಿದ್ದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವ್ಯಕ್ತಿತ್ವ ಏನು ಎಂಬುವುದು ಬೆಳಗಾವಿಯ ಮೂಲೆ ಮೂಲೆಗೂ ಗೊತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲು ಹೋಗಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ಕೊಡಲಿದ್ದೇವೆ. ಕುಕ್ಕರ್ ವಿಷಯದಲ್ಲಿ ನನ್ನಿಂದ ಸಹಾಯ ಪಡೆದಿಲ್ಲ …
Read More »ಸತತ ಮಳೆ: ನೂರು ಅಡಿ ತಲುಪಿದ KRS ನೀರಿನ ಮಟ್ಟ..!
ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟನೂರು ಅಡಿ ತಲುಪಿದೆ. ಕಳೆದೊಂದು ತಿಂಗಳಲ್ಲಿ ಜಲಾಶಯಕ್ಕೆ 8 ಅಡಿಗಳಷ್ಟುನೀರು ಹರಿದುಬಂದಿದೆ. ಅಣೆಕಟ್ಟು ನೂರರ ಗಡಿ ತಲುಪಿರುವುದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ ಬಿರುಸುಗೊಂಡಿದೆ. ಮುಂಗಾರು ಹಂಗಾಮಿಗೆ ನೀರು ಸಿಗುವ ಆಶಾಭಾವನೆಯೂ ರೈತ ಸಮುದಾಯದಲ್ಲಿ ವ್ಯಕ್ತವಾಗಿದೆ. ಜೂ.7ರಂದು ಅಣೆಕಟ್ಟೆಯ ನೀರಿನ ಮಟ್ಟ92.20 ಅಡಿ ದಾಖಲಾಗಿತ್ತು. ಅಂದು ಜಲಾಶಯಕ್ಕೆ 837 ಕ್ಯುಸೆಕ್ ನೀರು ಹರಿದುಬರುತ್ತಿದ್ದು, 415 ಕ್ಯುಸೆಕ್ ನೀರನ್ನು ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿತ್ತು. …
Read More »ರಾಜ್ಯದ ಗ್ರೀನ್ಜೋನ್ಗಳಲ್ಲಿ ಶಾಲೆ ಪುನರಾರಂಭ?; ಸರ್ಕಾರಕ್ಕೆ ತಜ್ಞರ ಸಮಿತಿ ಮಾಡಿದ ಶಿಫಾರಸಿನ ವಿವರ ಇಲ್ಲಿದೆ
ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ಅಟ್ಟಹಾಸ ಮಿತಿಮೀರುತ್ತಿದೆ. ಇದರಿಂದಾಗಿ ಹಳ್ಳಿಹಳ್ಳಿಗಳಲ್ಲೂ ಜನರು ಮನೆಯಿಂದ ಹೊರಗೆ ಬರಲು ಆತಂಕ ಪಡುವಂತಾಗಿದೆ. ಈ ಆತಂಕದ ನಡುವೆಯೇ ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ಮಾಡಿ ಮುಗಿಸಿದೆ. ಇದೀಗ ಹಸಿರು ವಲಯಗಳಲ್ಲಿ ಮೊದಲು ಶಾಲೆ ಆರಂಭಿಸಿ, ನಂತರ ಕಂಟೋನ್ಮೆಂಟ್ ವಲಯವನ್ನು ಹೊರತುಪಡಿಸಿ, ಉಳಿದೆಡೆ ಶಾಲೆಗಳನ್ನು ತೆರೆಯಬಹುದು ಎಂದು ತಜ್ಞರ ತಂಡ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ರಾಜ್ಯ ಸರ್ಕಾರ ತಜ್ಞರ …
Read More »ಸುಮಲತಾ ಅವರು ಮಾಸ್ಕ್ ಧರಿಸದೇ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಕಂಡುಬಂದಿದೆ.ಜನಪ್ರತಿನಿಧಿಗಳು, ಬೆಂಬಲಿಗರು ಸೇರಿದಂತೆ ಸಾರ್ವಜನಿಕರಿಗೂ ಆತಂಕ
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ತಮಗೆ ಕರೊನಾ ಸೋಂಕು ತಗುಲಿರುವ ಬಗ್ಗೆ ನಿನ್ನೆಯಷ್ಟೇ ದೃಢಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದ ಅವರು, ತಾವು ಶೀಘ್ರದಲ್ಲಿ ಗುಣಮುಖರಾಗಿ ಬರುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದರು. ಆದರೆ ಇದೀಗ ಅನೇಕ ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯರಿಗೆ ಆತಂಕ ಎದುರಾಗಿದೆ. ಇದಕ್ಕೆ ಕಾರಣ ಇಷ್ಟೇ. ಇದೇ 4ರಂದು ಮಂಡ್ಯದ ರೈತ ಸಭಾಂಗಣದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸುಮಲತಾ ಭಾಗವಹಿಸಿದ್ದರು. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ …
Read More »ಕೊರೊನಾ ಹಬ್ಬಿಸಿಲು ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆಯೋಜಿಸಿದ್ದಾರೆ……….?
ವಾಷಿಂಗ್ಟನ್: ಆತಂಕ ಮೂಡಿಸಿರುವ ಕೊರೊನಾ ತಡೆಗಟ್ಟಲು ರಾಷ್ಟ್ರಗಳು ಲಾಕ್ಡೌನ್ ಜಾರಿ ಮಾಡಿ ಸಾಮಾಜಿಕ ಅಂತ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ ಎಂದು ಸೂಚನೆ ನೀಡುತ್ತಿವೆ. ಆದರೆ ಅಮೆರಿಕದಲ್ಲಿ ಕೊರೊನಾ ಹಬ್ಬಿಸಿಲು ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆಯೋಜಿಸಿದ್ದಾರೆ. ʼಯಾರಿಗೆ ಮೊದಲು ಕೊರೊನಾ ಬರುತ್ತದೆ?ʼ ಎಂಬ ಸ್ಪರ್ಧೆಯ ಪಾರ್ಟಿಯನ್ನು ಅಮೆರಿಕ ಅಲಬಾಮಾದ ಟಸ್ಕಲೂಸಾ ಎಂಬಲ್ಲಿ ಆಯೋಜಿಸಲಾಗಿತ್ತು. ಈ ಹುಚ್ಚಾಟದ ಸ್ಪರ್ಧೆಗೆ ಕೊರೊನಾ ಪಾಸಿಟಿವ್ ಬಂದವರನ್ನು ಉದ್ದೇಶಪೂರ್ವಕವಾಗಿ ಕರೆಸಲಾಗಿತ್ತು. ಕೊರೊನಾ ಬಾರದವರನ್ನು ಆಹ್ವಾನಿಸಲಾಗಿತ್ತು. ಕೊರೊನಾ ಬಾರದವರು ಪಾಸಿಟಿವ್ …
Read More »59 ಅಪ್ಲಿಕೇಶನ್ ನಿಷೇಧಿಸಿ ಡಿಜಿಟಲ್ ಸ್ಟ್ರೈಕ್ ಮಾಡಿದ ಬೆನ್ನಲ್ಲೇ ಭಾರತ ಚೀನಾಗೆ ಮತ್ತೊಂದು ಬಲವಾದ ಹೊಡೆತ ನೀಡಲು ಮುಂದಾಗುತ್ತಿದೆ.
ನವದೆಹಲಿ: 59 ಅಪ್ಲಿಕೇಶನ್ ನಿಷೇಧಿಸಿ ಡಿಜಿಟಲ್ ಸ್ಟ್ರೈಕ್ ಮಾಡಿದ ಬೆನ್ನಲ್ಲೇ ಭಾರತ ಚೀನಾಗೆ ಮತ್ತೊಂದು ಬಲವಾದ ಹೊಡೆತ ನೀಡಲು ಮುಂದಾಗುತ್ತಿದೆ. ಎರಡು ದೇಶಗಳ ವ್ಯಾಪಾರ ವಿಚಾರದಲ್ಲಿ ಭಾರತ ರಫ್ತು ಮಾಡುವುದಕ್ಕಿಂತ ಹೆಚ್ಚಾಗಿ ಚೀನಾದಿಂದ ಆಮದು ಜಾಸ್ತಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಈಗ ಭಾರತ ಚೀನಾದಿಂದ ಆಮದು ಆಗುವ ವಸ್ತುಗಳ ಮೇಲೆ ಭಾರೀ ಪ್ರಮಾಣದಲ್ಲಿ ಆಮದು ಸುಂಕ ಏರಿಸಲು ಸಿದ್ಧತೆ ನಡೆಸುತ್ತಿದೆ. ಕೇಂದ್ರ ಸರ್ಕಾರ ಈಗಾಗಲೇ ಭಾರತದಲ್ಲಿ ತಯಾರಾಗುವ ವಸ್ತುಗಳು ಮತ್ತು …
Read More »ಒಂದು ವರ್ಷದಲ್ಲಿ 10 ಕೆಜಿ ತೂಕ ಇಳಿಸಿಕೊಂಡು ನಟಿ ಶೆರಿನ್………..
ಹೈದರಾಬಾದ್: ಒಂದು ವರ್ಷದಲ್ಲಿ 10 ಕೆಜಿ ತೂಕ ಇಳಿಸಿಕೊಂಡು ನಟಿ ಶೆರಿನ್ ಶೃಂಗಾರ್ ಅವರು ತಮ್ಮನ್ನು ಟ್ರೋಲ್ ಮಾಡುತ್ತಿದ್ದವರಿಗೆ ಟಾಂಗ್ ಕೊಟ್ಟಿದ್ದಾರೆ. ಕನ್ನಡದಲ್ಲಿ ದರ್ಶನ್ ಅವರ ಜೊತೆ ದ್ರುವ ಮತ್ತು ಭೂಪತಿ ಸಿನಿಮಾದಲ್ಲಿ ನಟಿಸಿ ಕನ್ನಡಿಗರ ಮೆಚ್ಚುಗೆ ಪಾತ್ರರಾಗಿದ್ದ ನಟಿ ಶೆರಿನ್, ನಂತರದ ದಿನದಲ್ಲಿ ಸ್ವಲ್ಪ ದಪ್ಪ ಆಗಿದ್ದರು. ತನ್ನ ತೆಳ್ಳಗಿನ ಮೈಮಾಟದ ಮೂಲಕ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದ ಶೆರಿನ್, ನಂತರ ತನ್ನ ದಪ್ಪಗಿನ ದೇಹದ ಮೂಲಕವೇ ಬಹಳ …
Read More »ಬಯಲು ಸೀಮೆ ಕೋಲಾರದಲ್ಲಿ ನೀರಿನ ಜೊತೆಗೆ ರಕ್ತಕ್ಕೂ ಬರ..
ಕೋಲಾರ: ಮಹಾಮಾರಿ ಕೊರೊನಾ ತಡೆಗಟ್ಟಲು ಸರ್ಕಾರ ಮುನ್ನಚ್ಚರಿಕೆ ಕ್ರಮವಾಗಿ ಮಾಡಿದ ಲಾಕ್ಡೌನ್ ಎಫೆಕ್ಟ್ ಸಾಕಷ್ಟು ಕ್ಷೇತಗಳಿಗೆ ಹೊಡೆತ ಬಿದ್ದಿದೆ. ಬರದನಾಡು ಕೋಲಾರ ಜಿಲ್ಲೆಯಲ್ಲಿ ಲಾಕ್ಡೌನ್ ಎಫೆಕ್ಟ್ ನಿಂದ ರಕ್ತಕ್ಕೂ ಬರ ಬಂದಿದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದ ಪರಿಣಾಮ ರಾಜ್ಯದ ಜನರು ಆರ್ಥಿಕತೆ, ನಿರುದ್ಯೋಗ, ಆಹಾರ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಕಾಣಬೇಕಾಯಿತು. ಇದರೊಂದಿಗೆ ರಕ್ತದ ಕೊರತೆಯೂ ಎದುರಾಗಿದೆ. ರಾಜ್ಯ ಸರ್ಕಾರ ಮಾ.23 ರಿಂದ ಲಾಕ್ಡೌನ್ …
Read More »