ಬೆಂಗಳೂರು, ಜೂ.11- ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಆನ್ಲೈನ್ ತರಗತಿಗಳು ಬೇಡ ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ವಿಧಾನಸೌಧದ ಎದುರು ಇಂದು ವಿನೂತನ ಚಳವಳಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಂಧ್ರ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡಲಾಗಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಫಾರ್ಮಸಿ, ಎಂಜಿನಿಯರಿಂಗ್, …
Read More »Yearly Archives: 2020
ಅಧಿಕ ಶುಲ್ಕ ವಸೂಲಿ ಮಾಡುವ ಶಾಲೆಗಳಿಗೆ ಸುರೇಶ ಕುಮಾರ್ ವಾರ್ನಿಂಗ್………..
ಬೆಂಗಳೂರು, ಜೂ.11- ಯಾವುದೇ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವ ದೂರುಗಳು ಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ಕುಮಾರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಶುಲ್ಕ ಸಂಗ್ರಹ ಮಾಡಬಾರದು ಎಂದು ಶಿಕ್ಷಣ ಇಲಾಖೆ ಒಂದೂವರೆ ತಿಂಗಳ ಹಿಂದೆಯೇ ಆದೇಶ ಹೊರಡಿಸಿದೆ. ಈವರೆಗೂ ಯಾವ ಶಾಲೆಯ ವಿರುದ್ಧವೂ ಪೋಷಕರು ದೂರು ನೀಡಿಲ್ಲ. ಒಂದು ವೇಳೆ ದೂರು ಕೇಳಿ ಬಂದಿದ್ದೇಯಾದರೆ ಸರ್ಕಾರ …
Read More »9 ಪರಿಷತ್ ಸದಸ್ಯ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ನೂರಾರು ಆಕಾಂಕ್ಷಿಗಳ ಲಾಬಿ
ಬೆಂಗಳೂರು,ಜೂ.11- ರಾಜ್ಯಸಭೆ ಚುನಾವಣೆಗೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ ಬೆನ್ನಲ್ಲೇ ಪಕ್ಷದ ಕಚೇರಿ ಬಾಗಿಲು ತಟ್ಟುವವರ ಸಂಖ್ಯೆ ಹೆಚ್ಚಾಗಿದ್ದು, ಜೂ.29ರಂದು ನಡೆಯುವ ಪರಿಷತ್ ಚುನಾವಣೆಗೆ ಆಕಾಂಕ್ಷಿಗಳು ಮುಗಿಬೀಳುತ್ತಿದ್ದಾರೆ. ನಾಮನಿರ್ದೇ ಶನ ಸ್ಥಾನಗಳು ಸೇರಿ ವಿಧಾನಪರಿಷತ್ನ ಒಟ್ಟು 12 ಸದಸ್ಯ ಸ್ಥಾನಗಳು ತೆರವಾಗಲಿದ್ದು, ಬಿಜೆಪಿಗೆ ಸುಲಭವಾಗಿ 9 ಸ್ಥಾನಗಳು ದೊರೆಯಲಿವೆ. 9 ಸದಸ್ಯ ಸ್ಥಾನಕ್ಕಾಗಿ ಸುಮಾರು 100 ಆಕಾಂಕ್ಷಿಗಳು ಲಾಬಿ ನಡೆಸಿದ್ದಾರೆ. ವಿಧಾನಸಭೆಯಲ್ಲಿರುವ ಪಕ್ಷದ ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ …
Read More »ಗೂಗಲ್ ಮ್ಯಾಪ್ನಲ್ಲಿ ಬಿಗ್ಬಿ ಧ್ವನಿ …………..
ಮುಂಬೈ, ಜೂ.11- ಬಾಲಿವುಡ್ನ ಬಿಗ್ ಬಿ ವಾಯ್ಸ್ ಅವರ ಹೆಸರಿನಷ್ಟೇ ಜನಪ್ರಿಯವಾಗಿದ್ದು ಈಗ ಅವರ ಧ್ವನಿಯನ್ನು ಗೂಗಲ್ ಮ್ಯಾಪ್ನಲ್ಲಿ ಅಳವಡಿಸಿಕೊಳ್ಳಲು ಒಪ್ಪಂದಕ್ಕೆ ಮುಂದಾಗಿದೆ. ದೀವಾರ್, ಶೋಲೆ, ಅಮರ್ ಅಕ್ಬರ್ ಅಂಟೋನಿ ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗಳಲ್ಲಿ ನಟಿಸಿ ಬಿಗ್ಟೌನ್ ನಂಬರ್1 ನಟನಾಗಿ ಗುರುತಿಸಿಕೊಂಡಿರುವ ಅಮಿತಾಭ್ಬಚ್ಚನ್ ಅವರ ಧ್ವನಿಯು ಅವರ ಜನಪ್ರಿಯತೆಗೆ ಸಾಥ್ ನೀಡಿದ್ದಾರೆ. ನಟನೆ ಮಾತ್ರವಲ್ಲದೆ ಹಲವು ಸರ್ಕಾರಿ ಹಾಗೂ ಖಾಸಗಿ ಜಾಹೀರಾತಿನಲ್ಲೂ ಗುರುತಿಸಿಕೊಂಡಿರುವ ಅಮಿತಾಭ್ಬಚ್ಚನ್ರ ಧ್ವನಿಯಿಂದಲೇ ತಮ್ಮ ಕಂಪೆನಿಯ …
Read More »ಬಿಎಂಟಿಸಿ ಉದ್ಯೋಗಿಗೆ ಕೊರೊನಾಸೋಂಕುದೃಢ……
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ. ಬಿಎಂಟಿಸಿ ಉದ್ಯೋಗಿಯೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್-19 ಪರೀಕ್ಷೆಯ ರಿಪೋರ್ಟ್ ಪಾಸಿಟಿವ್ ಬರುತ್ತಿದ್ದಂತೆ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದರವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಲು ಆರಂಭಿಸಿದ್ದಾರೆ. ಸೋಂಕಿತ ಬಿಎಂಟಿಸಿ ಉದ್ಯೋಗಿ ಮೂರು ದಿನಗಳ ರಜೆಯಲ್ಲಿದ್ದು, ಸ್ವಯಂ ಪ್ರೇರಿತವಾಗಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡಿದ್ದರು. ಜೂನ್ 10ರಂದು ಬಂದ ರಿಪೋರ್ಟ್ …
Read More »ಮುಂಬೈನಿಂದ ಬೆಳಗಾವಿ, ಬಂದವರನ್ನು ಕ್ವಾರೆಂಟೈನ್ನಲ್ಲಿಟ್ಟು ವರದಿಗೂ ಮುನ್ನವೇ ಮನೆಗೆ ಕಳಿಸುತ್ತಾರೆ.
ಬೆಳಗಾವಿ: ಮುಂಬೈನಿಂದ ಬಂದವರನ್ನು ಕ್ವಾರೆಂಟೈನ್ನಲ್ಲಿಟ್ಟು ವರದಿಗೂ ಮುನ್ನವೇ ಮನೆಗೆ ಕಳಿಸುತ್ತಾರೆ. ಮನೆಗೆ ಹೋದ ಎರಡೇ ದಿನಕ್ಕೆ ಸೋಂಕಿತರು ಅಂತ ಮತ್ತೆ ಕರೆತಂದು ಆಸ್ಪತ್ರೆಗೆ ದಾಖಲಿಸ್ತಾರೆ. ಹೌದು. ಬೆಳಗಾವಿಯ ಅತಿವಾಡ ಗ್ರಾಮದಲ್ಲಿ ಎಲ್ಲವೂ ಅತಿಯಾಗಿದೆ ಎನ್ನಿಸುತ್ತಿದೆ. ಮೇ 25ರಂದು ಮುಂಬೈನಿಂದ 48 ಮಂದಿ ವಾಪಸ್ ಬರುತ್ತಾರೆ. ಬಂದವರೆಲ್ಲರನ್ನೂ ಕ್ವಾರಂಟೈನ್ ಮಾಡ್ತಾರೆ. 14 ದಿನಗಳ ಬಳಿಕ ವರದಿ ಬರುವ ಮುನ್ನವೇ ಎಲ್ಲರನ್ನೂ ಮನೆಗೆ ಕಳುಹಿಸ್ತಾರೆ. ಮನೆಗೆ ಹೋದ 48 ಜನರಲ್ಲಿ 14 ಮಂದಿಗೆ …
Read More »ಚಿತ್ರೀಕರಣದಲ್ಲಿ ಭಾಗಿಯಾಗಲು ಅವಕಾಶ ಕೊಡಿ – ಹಿರಿಯ ಕಲಾವಿದರಿಂದ ಡಿಸಿಎಂಗೆ ಮನವಿ
ಬೆಂಗಳೂರು: ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಸಕ್ರಿಯರಾಗಿರುವ ಹಿರಿಯ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದಕ್ಕೆ ಅವಕಾಶ ಕೊಡಿಸಿ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. ಕಿರುತೆರೆಯ ಒಳಾಂಗಣ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ಕೊಟ್ಟಿದೆ. ಆದರೆ 60 ವರ್ಷ ಮೇಲ್ಪಟ್ಟ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಳ್ಳದಂತೆ ಷರತ್ತು ವಿಧಿಸಿದೆ. ಹೀಗಾಗಿ ಸೀರಿಯಲ್ ತಂಡ ಹಿರಿಯ ಕಲಾವಿದರನ್ನು ಬಿಟ್ಟು ಶೂಟಿಂಗ್ ಮಾಡುವುದರಲ್ಲಿ ನಿರತರಾಗಿದ್ದಾರೆ. ಹಿರಿಯ ಕಲಾವಿದರು ಶೂಟಿಂಗ್ ಇಲ್ಲದೇ, ಸಂಪಾದನೆಗೆ ಬೇರೆ ದಾರಿಯಿಲ್ಲದೇ …
Read More »ಬೆಂಗ್ಳೂರಿನಲ್ಲಿ ಭಿಕ್ಷುಕನಿಗೆ ಕೊರೊನಾ- ಶವ ಪರೀಕ್ಷೆಯಲ್ಲಿ ಸೋಂಕು ಪತ್ತೆ………
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಮಾರಿ ತಾಂಡವಾಡುತ್ತಿದೆ. ಅಂತೆಯೇ ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಗೂ ಕೊರೊನಾ ಸೋಂಕು ಹರಡಿದೆ. ಇಂದು ಬೆಂಗಳೂರಿನಲ್ಲಿ ಕೊರೊನಾಗೆ ನಾಲ್ವರು ಬಲಿಯಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಮಂದಿ ಇಂದು ಮೃತಪಟ್ಟಿದ್ದಾರೆ. ಆದರೆ ಸೋಮವಾರ ಮೃತಪಟ್ಟಿದ್ದ ಅಪರಿಚಿತ ವ್ಯಕ್ತಿಯ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಆಂತಕಕ್ಕೆ ಎಡೆಮಾಡಿಕೊಟ್ಟಿದೆ. ಸೋಮವಾರ ನಾಗರಬಾವಿ ಬ್ರಿಡ್ಜ್ ನಿಂದ ಬಿದ್ದು ಅಪರಿಚಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. …
Read More »ಬೆಂಗ್ಳೂರಲ್ಲಿ ಕೊರೊನಾಗೆ ನಾಲ್ವರು ಬಲಿ?…………..
ಬೆಂಗಳೂರು: ಸಿಲಿಕಾನ್ ಸಿಟಿಗೆ ಬೆಳ್ಳಂಬೆಳಗ್ಗೆ ಕೊರೊನಾ ಶಾಕ್ ನೀಡಿದ್ದು, ಮಾಹಾಮಾರಿಗೆ ಬೆಂಗಳೂರಿನಲ್ಲಿ ನಾಲ್ವರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಅಧಿಕೃತವಾಗಿ ಘೋಷಣೆ ಮಾಡಬೇಕಿದೆ. ಈ ಮೂಲಕ ನಗರದಲ್ಲಿ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ರೋಗಿ 4079 ಗದಗ ಮೂಲದ 54 ವರ್ಷ ವ್ಯಕ್ತಿ ಬೆಂಗಳೂರಿಗೆ ಪ್ರಯಾಣ ಬೆಳೆಸಿರುವ ಟ್ರಾವೆಲ್ ಹಿಸ್ಟರಿಯಿದೆ. ರೋಗಿ 4845- 61 ವರ್ಷದ ವ್ಯಕ್ತಿ, ರೋಗಿ 5340 ಬಳ್ಳಾರಿ ಮೂಲದ 58 ವರ್ಷದ ವ್ಯಕ್ತಿ ಅಂತರ್ ಜಿಲ್ಲೆ …
Read More »ರಾಜ್ಯದ ಕ್ರಿಕೆಟ್ ಮಂಡಳಿಗೆ ಗಂಗೂಲಿ ಪತ್ರ – ಐಸಿಸಿ ಟಿ20 ಕ್ರಿಕೆಟ್ ಮುಂದೂಡಿಕೆ ಸಾಧ್ಯತೆ…….
ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಕ್ರಿಕೆಟ್ನ್ನು ಮುಂದೂಡಲು ಐಸಿಸಿ ಚಿಂತನೆ ನಡೆಸಿದ ಬೆನ್ನಲ್ಲೇ ಬಿಸಿಸಿಐ ಐಪಿಎಲ್ ಆಡಿಸಲು ಮುಂದಾಗುತ್ತಿದೆ. ಹೌದು, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಸಂಬಂಧ ಖಾಲಿ ಸ್ಟೇಡಿಯಂನಲ್ಲಿ ಕ್ರಿಕೆಟ್ ನಡೆಸುವ ಸಂಬಂಧ ರಾಜ್ಯದ ಕ್ರಿಕೆಟ್ ಮಂಡಳಿಗಳಿಗೆ ಪತ್ರ ಬರೆದು ನಿಮ್ಮ ಅಭಿಪ್ರಾಯ ತಿಳಿಸುವಂತೆ ಕೇಳಿಕೊಂಡಿದ್ದಾರೆ. ಈ ವರ್ಷ ಐಪಿಎಲ್ ಆಯೋಜಿಸಲು ಬಿಸಿಸಿಐ ವಿವಿಧ ಆಯ್ಕೆಗಳನ್ನು ಹುಡುಕುತ್ತಿದೆ. ಈ ಸಂಬಂಧ ಖಾಲಿ ಸ್ಟೇಡಿಯಂನಲ್ಲೂ ನಡೆಸುವ ಬಗ್ಗೆ …
Read More »