Yearly Archives: 2020

ನಿರಾಶ್ರಿತರಿಗೆ ನೆರವಿನ ಹಸ್ತ ಚಾಚಿದ ನಟ ಸೋನುಸೂದ್

ಮುಂಬೈ, ಜೂ.5- ತೆರೆಯ ಮೇಲೆ ವಿಲನ್ ಆಗಿರುವ ಸೋನುಸೂದ್ ನಿಜ ಜೀವನದಲ್ಲಿ ಹೀರೋ ಆಗುವ ಮೂಲಕ ಗಮನ ಸೆಳೆಯುತ್ತಿದ್ದಾರೆ.ಇತ್ತೀಚೆಗೆ ಕೊರೊನಾ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ 177 ಯುವತಿಯರನ್ನು ರಕ್ಷಿಸಿ ಅವರ ತವರಿಗೆ ತೆರಳಲು ಸಹಾಯ ಮಾಡಿದ್ದ ಸೋನುಸೂದ್ ಈಗ ಚಂಡಮಾರುತಕ್ಕೆ ಸಿಲುಕಿದ್ದ ಕುಟುಂಬದವರ ನೆರವಿಗೆ ಧಾವಿಸಿದ್ದಾರೆ. ಚಂಡಮಾರುತದ ಆರ್ಭಟಕ್ಕೆ ಸಿಲುಕಿ ಕಂಗಲಾಗಿದ್ದ 28 ಸಾವಿರ ನಿರಾಶ್ರಿತರಿಗೆ ಆಹಾರ, ಆಶ್ರಯದ ವ್ಯವಸ್ಥೆಯನ್ನು ಮಾಡುವ ಮೂಲಕ ಅವರಿಗೆ ನೆರವು ನೀಡಿದ್ದಾರೆ.ಇಂದು ನಾವು ಕಷ್ಟದ …

Read More »

ಲಾಕ್‍ಡೌನ್‍ನಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇನ್‍ಸ್ಟಾಗ್ರಾಮ್‍ನಿಂದ ಕೋಟಿ ಕೋಟಿ ಹಣ ಗಳಿಸಿದ್ದಾರೆ.

ನವದೆಹಲಿ: ಕೊರೊನಾ ಲಾಕ್‍ಡೌನ್‍ನಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇನ್‍ಸ್ಟಾಗ್ರಾಮ್‍ನಿಂದ ಕೋಟಿ ಕೋಟಿ ಹಣ ಗಳಿಸಿದ್ದಾರೆ. ಲಾಕ್‍ಡೌನ್ ಕೆಲವು ಆಟಗಾರರ ಮೇಲೆ ಯಾವುದೇ ಆರ್ಥಿಕ ಪರಿಣಾಮ ಬೀರಿಲ್ಲ. ಇಂತಹ ಪರಿಸ್ಥಿತಿಯಲ್ಲೂ ಪೋರ್ಚುಗಲ್‍ನ ಸ್ಟಾರ್ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಇನ್‍ಸ್ಟಾಗ್ರಾಮ್‍ನಿಂದ ಸುಮಾರು 18 ಕೋಟಿ ರೂ. ಗಳಿಸಿದ್ದಾರೆ. ಈ ಮೂಲಕ ಇನ್‍ಸ್ಟಾದಿಂದ ಹೆಚ್ಚು ಹಣಗಳಿಸಿದವರ ಪಟ್ಟಿಯಲ್ಲಿ ಅವರು ಅಗ್ರಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರನೇ ಸ್ಥಾನದಲ್ಲಿದ್ದು, …

Read More »

ಹಿರೇಬಾಗೇವಾಡಿ ಗ್ರಾಮಸ್ಥರಿಗೆ ರಮೇಶ್ ಜಾರಕಿಹೊಳಿ ಅವರು,ದಿನಸಿ ಕಿಟ್ ಗಳನ್ನು ವಿತರಿಸಿದರು.

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ ದಿನಸಿ ಕಿಟ್ ಗಳನ್ನು ವಿತರಿಸಿದರು. ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ …

Read More »

ಸತ್ತ ಮೇಲೆಯೂ ಕೆಲಸದವರ ಪಾಲಿಗೆ ಮತ್ತಪ್ಪ ರೈ ದಾರಿ ದೀಪವಾಗಿದ್ದಾರೆ.

ಬೆಂಗಳೂರು: ಸತ್ತ ಮೇಲೆಯೂ ಕೆಲಸದವರ ಪಾಲಿಗೆ ಮತ್ತಪ್ಪ ರೈ ದಾರಿ ದೀಪವಾಗಿದ್ದಾರೆ. ಮನೆಗೆಲಸ, ತೋಟ, ಹಾಗೂ ಕಾರು ಚಾಲಕರು, ಗನ್ ಮ್ಯಾನ್ ಗಳಿಗೆ ಸೈಟ್ ಮತ್ತು ಹಣ ನೀಡಿದ್ದಾರೆ. ಮುತ್ತಪ್ಪ ರೈ ನಿಧನರಾದ ಬಳಿಕ ಆಸ್ತಿ ಏನಾಗಬಹುದು ಎಂಬ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗೆ ಮುತ್ತಪ್ಪ ರೈ ಬದುಕಿರುವಾಗಲೇ ವಿಲ್ ಬರೆದು ಉತ್ತರ ನೀಡಿದ್ದಾರೆ. 41 ಪುಟಗಳ ವಿಲ್‍ನಲ್ಲಿ ಯಾರಿಗೆ ಎಷ್ಟು ಆಸ್ತಿ ಕೊಡಬೇಕು? ಸೈಟ್ ಹಾಗೂ ಮನೆಗಳು ಯಾರಿಗೆ …

Read More »

ಮಾಸ್ಕ್ ವಿಚಾರಕ್ಕೆ ವಾಗ್ವಾದ ನಡೆದು ಪೊಲೀಸರ ಮೇಲೆ ಹಲ್ಲೆ…….

ಜೈಪುರ್: ಮಾಸ್ಕ್ ವಿಚಾರಕ್ಕೆ ವಾಗ್ವಾದ ನಡೆದು ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಜೋಧ್‍ಪುರದಲ್ಲಿ ನಡೆದಿದೆ. ಜೋಧ್‍ಪುರದ ಬಾಲ್‍ದೇವ್ ನಗರ ನಿವಾಸಿ ಮುಖೇಶ್ ಕುಮಾರ್ ಪ್ರಜಾಪತ್ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ. ಗುರುವಾರ ಮಧ್ಯಾಹ್ನ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮುಖೇಶ್ ಕುಮಾರ್ ಮಾಸ್ಕ್ ಧರಿಸದೆ ಸಾರ್ವಜನಿಕ ಪ್ರದೇಶದಲ್ಲಿ ಕುಳಿತ್ತಿದ್ದ. ಆತನನ್ನು ಗಮನಿಸಿದ ಪೊಲೀಸರು ಮಾಸ್ಕ್ ಧರಿಸು ಹಾಗೂ ದಂಡ ಪಾವತಿಸು …

Read More »

ದೆಹಲಿ ಮತ್ತು ಮಹಾರಾಷ್ಟ್ರದಿಂದ ಇಡೀ ದೇಶಕ್ಕೆ ಕೊರೊನಾ ಹಬ್ಬಿದೆ.:ಶೋಭಾ ಕರಂದ್ಲಾಜೆ

ಉಡುಪಿ: ದೆಹಲಿ ಮತ್ತು ಮಹಾರಾಷ್ಟ್ರದಿಂದ ಇಡೀ ದೇಶಕ್ಕೆ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಉದ್ದೇಶ ಪೂರ್ವಕವಾಗಿ ಸೋಂಕು ಪಸರಿಸಿದರು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶೋಭಾ ಕರಂದ್ಲಾಜೆ ಮೋದಿ ಸರ್ಕಾರ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಸಾಧನೆಗಳನ್ನು ಹೇಳಿದರು. ಈ ಸಂದರ್ಭದಲ್ಲಿ ಕೊರೊನಾ ಬಗ್ಗೆ ಮಾತನಾಡಿ, ಪಾದರಾಯಣಪುರ, ಸಿದ್ಧಿಕ್ ಲೇಔಟ್‍ನಲ್ಲಿ ಉದ್ದೇಶ ಪೂರ್ವಕವಾಗಿ ಸೋಂಕು ಹಂಚಿದರು. ತಬ್ಲಿಘಿ ನಡತೆ ನೋಡಿದರೆ ಉದ್ದೇಶ ಪೂರ್ವಕವಾಗಿ …

Read More »

ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ್ ಖರ್ಗೆನನ್ನ ಶಿಫಾರಸ್ಸು :ಸಿದ್ದರಾಮಯ್ಯ

ಮೈಸೂರು: ಇನ್ನೂ ಮೂರು ತಿಂಗಳು ಶಾಲೆಗಳನ್ನು ತೆರೆಯಬಾರದು ಇದು ರಾಜ್ಯ ಸರ್ಕಾರಕ್ಕೆ ನನ್ನ ಸಲಹೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.  ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಧ್ಯವಾದರೆ ಎರಡು ಶಿಫ್ಸ್​ನಲ್ಲಿ ಕ್ಲಾಸ್ ಮಾಡಬೇಕು. ಮಕ್ಕಳಿಗೆ ಕೊರೊನಾ ಏನಾದರು ತಗುಲಿದರೆ ಇಡೀ ಕುಟುಂಬಕ್ಕೆ ಹರಡುತ್ತೆ. ಸರ್ಕಾರ ಪೂರ್ವ ಸಿದ್ಧತೆ ಮಾಡಿಕೊಂಡು ಶಾಲೆ ತೆರೆಯಬೇಕು. ಶಿಕ್ಷಣ ಸಚಿವ ಎಸ್​. ಸುರೇಶ್ ಕುಮಾರ್​ ಅವರಿಗೆ ಈ ಬಗ್ಗೆ ಸೂಚನೆ ಕೊಡುತ್ತೇನೆ. ಎಲ್ಲ ರೀತಿಯ …

Read More »

ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿದೆ.

ಬೆಂಗಳೂರು: ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿದೆ. ಮುಂಬೈನ ಡೊಂಗ್ರಿಯಲ್ಲಿ ಜನಿಸಿದ ದಾವೂದ್ ಇಬ್ರಾಹಿಂ ಕಸ್ಕರ್ ಪ್ರಸ್ತುತ ಕರಾಚಿಯಲ್ಲಿ ವಾಸಿಸುತ್ತಿದ್ದಾನೆ ಎನ್ನಲಾಗಿದೆ. ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪದಕರಲ್ಲಿ ದಾವೂದ್ ಇಬ್ರಾಹಿಂ ಕೂಡ ಒಬ್ಬನಾಗಿದ್ದಾನೆ. ದಾವೂದ್ 1993 ರ ಬಾಂಬೆ ಸ್ಫೋಟದ ಆರೋಪಿಯಾಗಿದ್ದು, ಆತನ ವಿರುದ್ಧ ಹಲವಾರು ಇಂಟರ್‌ಪೋಲ್ ನೋಟಿಸ್‌ಗಳಿವೆ. ಸದ್ಯ ದಾವೊದು ಪ್ರಸ್ತುತ ಕರಾಚಿಯ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ …

Read More »

ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ.:ಸತೀಶ ಜಾರಕಿಹೊಳಿ

ಬೆಳಗಾವಿ: ಕೊರೋನಾ ಸೊಂಕೀತರ ತಪಾಸಣೆ ಪ್ರಮಾಣ ಇನ್ನಷ್ಟು ಹೆಚ್ವಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸಲಹೆ ನೀಡಿದರು.  ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೊರೋನಾ ನಿಯಂತ್ರಣ ಹಾಗೂ ನೆರೆಹಾವಳಿ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ  ಸಚಿವರ ಅಧ್ಯಕ್ಷತೆಯಲ್ಲಿ   ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕ್ವಾರಂಟೈನ್ ಇರುವವರನ್ನು ವರದಿ ಬರುವ ಮುಂಚೆಯೇ ಮನೆಗೆ ಕಳಿಸಿದ್ದರಿಂದ ಕೆಲವು ಭಾಗಗಳಲ್ಲಿ ಸೋಂಕು …

Read More »

ರಾಜ್ಯ ಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ  ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ ತಿಳಿಸಿದ್ದೇವೆ:ರಮೇಶ ಜಾರಕಿಹೊಳಿ

ಬೆಳಗಾವಿ:  ಲಾಕ್ ಡೌನ್ ನಿಂದಾಗಿ  ಎಲ್ಲ ಹೋಟೆಲ್ ಗಳು  ಬಂದ್ ಆಗಿವೆ, ಹೀಗಾಗಿ ಉಮೇಶ ಕತ್ತಿ ನಿವಾಸದಲ್ಲಿ ಶಾಸಕರು ಊಟಕ್ಕೆ ಸೇರಿದ್ರು. ಬಿಜೆಪಿಯಲ್ಲಿ  ಯಾವುದೇ ಭಿನ್ನಾಭಿಪ್ರಾಯವಿಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ  ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ  ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ್ದು, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿದ ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದರು.   ರಾಜ್ಯ ಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ  ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ …

Read More »