Breaking News

Yearly Archives: 2020

ಛತ್ರಪತಿ ಶಿವಾಜಿ ಸ್ಟೈಲಲ್ಲಿ ಮೀಸೆ-ಗಡ್ಡ ಬೆಳೆಸಿ ಮೋದಿ ಮಿಂಚಿಂಗ್..!

ನವದೆಹಲಿ, ಜೂ.4-ಅತ್ಯಂತ ಸಂಕಷ್ಟ ಸಂದರ್ಭಗಳಲ್ಲಿ ಅತ್ಯಂತ ಜಣ್ಮೆ ಮತ್ತು ದೂರದೃಷ್ಟಿಯಿಂದ ಬಗೆಹರಿಸುವ ಮಹಾ ಚತುರ ಪ್ರಧಾನಿ ಮೋದಿ ಈಗ ಲೋಕಪ್ರಿಯ ನಾಯಕ. ವಿಶ್ವದ ನಂಬರ್ 1 ಖ್ಯಾತಿಯ ಅಗ್ರಮಾನ್ಯ ಧುರೀಣರಾಗಿದ್ದಾರೆ. ಪಾಕಿಸ್ತಾನ ಮತ್ತು ಚೀನಾದಂಥ ಕುತಂತ್ರಿ ದೇಶಗಳು ಬಾಲ ಮುದುರಿಕೊಳ್ಳುವಂತೆ ಮಾಡಿರುವ ನಮೋ ಈಗ ವಿಶ್ವದ ಅತ್ಯಂತ ಪ್ರಬಲ ದೇಶಗಳ ಪರಮಾಪ್ತ ಮಿತ್ರ ಜಗತಿಕ ವೇದಿಕೆಗಳಲ್ಲಿ ಮೋದಿ ಇರಲೇಬೇಕೆಂಬಷ್ಟು ಮಟ್ಟಿಗೆ ಅವರ ಲೋಕವಿಖ್ಯಾತಿ ಉತ್ತುಂಗಕ್ಕೇರಿದೆ. ಇದು ನರೇಂದ್ರ ಮೋದಿ ಅವರ …

Read More »

ಬೆಂಗಳೂರಿನಲ್ಲಿ ಬೆಳಗಾವಿ ಬಿಜೆಪಿ ನಾಯಕರು ಲಾಬಿಗೆ ಮುಂದಾಗಿದ್ದಾರೆ.

ಬೆಂಗಳೂರು: ರಾಜ್ಯಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಗಾವಿ ಬಿಜೆಪಿ ನಾಯಕರು ಲಾಬಿಗೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ತಮ್ಮ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ಗಾಗಿ ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಯಡಿಯೂರಪ್ಪ ಅವರಿಗೆ ಭೇಟಿಯಾಗಿದ್ದ ಉಮೇಶ ಕತ್ತಿ ಅವರು ಇಂದು ಕೂಡ ಬೆಳ್ಳಂ ಬೆಳಿಗ್ಗೆ ಸಿಎಂ ನಿವಾಸಕ್ಕೆ ತೆರಳಿ ಅರ್ಧ ಗಂಟೆಗೂ ಹೆಚ್ಚು ಕಾಲ ಮತ್ತೆ ಚರ್ಚೆ ನಡೆಸಿದ್ದಾರೆ.  ಯಡಿಯೂರಪ್ಪನವರ ಸರ್ಕಾರಿ ನಿವಾಸ ಕಾವೇರಿಗೆ ತೆರಳಿರುವ …

Read More »

Bengaluru City ಏಕಾಏಕಿ ಕೆಲಸದಿಂದ ವಜಾ- ಕಂಪನಿ ಮುಂದೆ ಕಾರ್ಮಿಕರು ಕಣ್ಣೀರು

ಬೆಂಗಳೂರು: ಲಾಕ್‍ಡೌನ್ ಸಂದರ್ಭದಲ್ಲಿ ಸಿಲಿಕಾನ್ ಸಿಟಿಯ ಕಂಪನಿ ಯಾವುದೇ ಸೂಚನೆ ನೀಡದೆ ಏಕಾಏಕಿ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿರುವ ಆರೋಪ ಕೇಳಿಬಂದಿದ್ದು, ಕಾರ್ಮಿಕರು ಕಣ್ಣೀರಿಡುತ್ತಿದ್ದಾರೆ. ನಗರದ ಟಿ.ದಾಸರಹಳ್ಳಿಯ ಪೀಣ್ಯ ಕೈಗಾರಿಕಾ ಪ್ರದೇಶದ ಎಸ್.ಎ.ಪಿ.ಎಲ್ ಇಂಡಸ್ಟ್ರೀಸ್ ಪ್ರೈ.ಲಿ.ನ 1ನೇ ಯೂನಿಟ್‍ನಿಂದ ಸುಮಾರು 500ರಿಂದ 600 ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿರುವ ಆರೋಪ ಕೇಳಿಬಂದಿದೆ. ಎರಡು ತಿಂಗಳು ಸಂಬಳವನ್ನೂ ನೀಡದೆ ಕೆಲಸದಿಂದ ತೆಗೆದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಸಂಬಳ ನೀಡಬೇಕು ಹಾಗೂ ಮರಳಿ …

Read More »

ರಾಜ್ಯಸಭೆ, ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಜೆಡಿಎಸ್ ಶಾಸಕಾಂಗ ಸಭೆ

ಬೆಂಗಳೂರು, ಜೂ.4-ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಂಸದರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಆಹ್ವಾನ ನೀಡಲಾಗಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಾಳೆ ಮಧ್ಯಾಹ್ನ ಸಭೆ ನಡೆಯಲಿದೆ. ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವುದು, ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ …

Read More »

ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ…ಒತ್ತಾಯ

ಬೆಳಗಾವಿ- ಒಂದು ವಾರದ ಹಿಂದೆ ನೂರಾರು ಜನ ನೇಕಾರ ಕೂಲಿ ಕಾರ್ಮಿಕರು,ಏಕಾ ಏಕಿ ಕೇಂದ್ರ ಸಚಿವ ಸುರೇಶ್ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಆಹಾರ ಸಾಮುಗ್ರಿಗಳ ಕಿಟ್ ಕೊಡುವಂತೆ ಒತ್ತಾಯಿಸಿದ್ದರು. ಸುರೇಶ್ ಅಂಗಡಿ ಅವರು ಆಹಾರ ಸಾಮುಗ್ರಿಗಳ ಕಿಟ್ ಕೊಡುತ್ತಿದ್ದಾರೆ ಎಂಬ ಸುಳ್ಳು ವದಂತಿ ಹರಡಿಸಿದ ಹಿನ್ನಲೆಯಲ್ಲಿ ನೂರಾರು ಜನ ಕಾರ್ಮಿಕರು,ಕಾಡಾ ಕಚೇರಿಯಲ್ಲಿನ ಸುರೇಶ ಅಂಗಡಿಯವರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಆಹಾರದ ಕಿಟ್ ವಿತರಿಸುವಂತೆ ಒತ್ತಾಯ ಮಾಡಿದ್ದರು. ಇದಕ್ಕೆ …

Read More »

ದೇಶದಲ್ಲಿ ಒಂದೇ ದಿನ ಗರಿಷ್ಠ 9,304 ಮಂದಿಗೆ ಕೊರೊನಾ- 260 ಜನ ಸಾವು

ನವದೆಹಲಿ: ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಯಲ್ಲಿ ಗರಿಷ್ಠ 9,304 ಮಂದಿಗೆ ಸೋಂಕು ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದ 9,304 ಮಂದಿಗೆ ಸೋಂಕು ಪತ್ತೆಯಾದರೆ, 260 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2,16,919ಕ್ಕೆ ಏರಿಕೆಯಾದರೆ, ಕೊರೊನಾಗೆ 6,075 ಮಂದಿ ಬಲಿಯಾಗಿದ್ದಾರೆ. …

Read More »

ಶುಕ್ರವಾರ ಸಂಭವಿಸಲಿದೆ ಚಂದ್ರ ಗ್ರಹಣ – ವರ್ಷದ 2ನೇ ಚಂದ್ರಗ್ರಹಣ ಹೇಗಿರಲಿದೆ?

ಬೆಂಗಳೂರು: ಶುಕ್ರವಾರ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ. ಈ ಚಂದ್ರಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದ ಈ ಗ್ರಹಣವು ಭಾರತದಲ್ಲಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಈ ಗ್ರಹಣ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ ಎಂದು ನಂಬಲಾಗುತ್ತಿದ್ದು, ದೇಗುಲ …

Read More »

ರಂಭಾಪುರಿ ಮಠಕ್ಕೆ ನಟ ಜಗ್ಗೇಶ್, ಕೋಮಲ್ ಭೇಟಿ…………..

ಚಿಕ್ಕಮಗಳೂರು: ಸ್ಯಾಂಡಲ್‍ವುಡ್ ನಟರು ಹಾಗೂ ಸಹೋದರರು ಅದ ನಟ ಜಗ್ಗೇಶ್ ಹಾಗೂ ಕೋಮಲ್ ರಂಭಾಪುರಿ ಪೀಠಕ್ಕೆ ಭೇಟಿ ನೀಡಿ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಗ್ರಾಮದ ವಿನಯ್ ಗುರೂಜಿಯ ಭೇಟಿಗೆ ಬಂದು ಸ್ಯಾಂಡಲ್‍ವುಡ್ ಸಹೋದರರು ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಪಂಚಪೀಠಗಳಲ್ಲೇ ಮೊದಲನೇ ಪೀಠ ರಂಭಾಪುರಿ ಭೇಟಿ ನೀಡಿ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.ಮಠದ ಆವರಣದಲ್ಲಿ ಸ್ವಲ್ಪ ಹೊತ್ತು ಕಾಲಕಳೆದ ಚಂದನವನದ ಸಹೋದರರು …

Read More »

ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ

ಬೆಂಗಳೂರು: ಪಿಯುಸಿ ಮೌಲ್ಯಮಾಪನಕ್ಕೂ ಕೊರೊನಾ ಭೀತಿ ತಟ್ಟಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಆಯಾ ಜಿಲ್ಲೆಗಳಲ್ಲಿ ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎಂದು ಈ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಉಪನ್ಯಾಸಕರ ಬೇಡಿಕೆಗೆ ಈಡೇರಿಸದ ಕಾರಣ ನಾಳೆಯಿಂದ ಪ್ರಾರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘದಿಂದ ನಿರ್ಧಾರ …

Read More »

ಸಾಲ ಪಡೆದು ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಶೀಘ್ರದಲ್ಲೇ ಭಾರತಕ್ಕೆ

ನವದೆಹಲಿ: ಭಾರತದ ಬ್ಯಾಂಕ್‍ಗಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು. ರಾಜತಾಂತ್ರಿಕ ರಂಗದಲ್ಲಿ ಭಾರತಕ್ಕೆ ಯಶಸ್ಸು ಸಿಕ್ಕಿದ್ದು, ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವ ಬಗ್ಗೆ ಬ್ರಿಟಿಷ್ ನ್ಯಾಯಾಲಯ ಈಗಾಗಲೇ ಮುದ್ರೆ ಹಾಕಿದೆ. ವಿಜಯ್ ಮಲ್ಯ ಬ್ಯಾಂಕ್ ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಈ ಸಂಬಂಧ ಬ್ರಿಟನ್‍ನಲ್ಲಿ ಎಲ್ಲಾ ಕಾನೂನು ವಿಧಿವಿಧಾನಗಳು ಪೂರ್ಣಗೊಂಡಿವೆ. …

Read More »