ಬೆಂಗಳೂರು, ಮೇ 30- ಸ್ಯಾಂಡಲ್ ವುಡ್ ನ ಕನಸುಗಾರ , ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು 59ನೆ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಲಾಕ್ಡೌನ್ ಹಿನ್ನೆಲೆಯಲ್ಲಿ ನನ್ನ ಅಭಿಮಾನಿಗಳು ಮನೆಯ ಬಳಿ ಬರುವುದು ಬೇಡ, ಎಲ್ಲರೂ ಮನೆಯಲ್ಲೇ ಇರಿ… ಸೇಫ್ ಆಗಿ ಇರಿ… ನಿಮ್ಮ ಆರೋಗ್ಯವೂ ಮುಖ್ಯ ನಿಮ್ಮ ಪ್ರೀತಿ, ವಿಶ್ವಾಸ , ಅಭಿಮಾನ ಸದಾ ನನ್ನ ಮೇಲೆ ಹೀಗೆ ಇರಲಿ ಮುಂದಿನ ವರ್ಷ 60ನೆ ವಸಂತಕ್ಕೆ ಕಾಲಿಡುತ್ತಿದ್ದೇನೆ ಅದ್ಧೂರಿಯಾಗಿ ಆಚರಿಸೋಣ ಎಂದು …
Read More »Yearly Archives: 2020
BREAKING : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು, ಮೇ 30- ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ 30 ಜಿಲ್ಲೆಗಳಲ್ಲಿ ಜಗಿಯುವ ತಂಬಾಕು ಪಾನ್ ಮಸಾಲ ಉತ್ಪನ್ನಗಳನ್ನು ರಾಜ್ಯ ಸರ್ಕಾರ ನಿಷೇಧ ಮಾಡಿದೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಮಾತನಾಡಿ, ಇಂದು ವಿಶ್ವ ತಂಬಾಕು ದಿನವಾಗಿದ್ದು, ಇದರ ಅಂಗವಾಗಿ ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ ತಂಬಾಕು ಜಗಿದು ಉಗಿಯುವುದರಿಂದ ಸೋಂಕು ಹರಡುವ ಸಂಭವ ಹೆಚ್ಚಿದೆ. ಹೀಗಾಗಿ ತಂಬಾಕಿನ ಸಂಬಂಧಪಟ್ಟಂತೆ ಎಲ್ಲಾ ಉತ್ಪನ್ನಗಳನ್ನು ನಿಷೇಸಲಾಗಿದೆ ಎಂದರು. …
Read More »“ಯಡಿಯೂರಪ್ಪ ಒಪ್ಪಿದರೆ ವಿಪಕ್ಷಗಳ 22 ಶಾಸಕರ ರಾಜೀನಾಮೆ ಕೊಡಿಸುತ್ತೇನೆ”
ಬೆಂಗಳೂರು, ಮೇ 30- ಸದ್ಯಕ್ಕೆ ನಮಗೆ ಬಹುಮತವಿದೆ. ನಾವು ವಿಪಕ್ಷಗಳ ಶಾಸಕರ ರಾಜೀನಾಮೆ ಕೆಲಸಕ್ಕೆ ಕೈ ಹಾಕುವುದಿಲ್ಲ. ನಮ್ಮ ಜತೆ ಬರಲು ಸಾಕಷ್ಟು ಶಾಸಕರು ತಯಾರಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿಗೆ ನೀಡಿದರೆ 20 ರಿಂದ 22 ಜನ ಶಾಸಕರನ್ನು ರಾಜೀನಾಮೆ ಕೊಡಿಸುತ್ತೇನೆ. ಸದ್ಯಕ್ಕೆ ಬಹುಮತವಿರುವುದರಿಂದ ಆ ಕೆಲಸಕ್ಕೆ ಕೈ ಹಾಕುವುದಿಲ್ಲ ಬೆಳಗಾವಿ 3, ಬಿಜಾಪುರ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಹೊಸ ಬಾಂಬ್……
ಬೆಳಗಾವಿ- ಉತ್ತರ ಕರ್ನಾಟಕದ ಪ್ರವಾಸದ ಬಳಿಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಹೊಸ ಬಾಂಬ್. ಹಾಕಿದ್ದಾರೆ. ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಹಿರಿಯ ಶಾಸಕ ಉಮೇಶ ಕತ್ತಿ ಔತಣಕೂಟ ವಿಚಾರ. ಇದು ಬಿಜೆಪಿ ಪಕ್ಷದ ಆಂತರಿಕ ವಿಚಾರವಾಗಿದೆ. ವಲಸಿಗರಿಂದ ಮೂಲ ಬಿಜೆಪಿ ಅವ್ಯಾಯವಾಗಿದೆ,ಎಂದು ಸತೀಶ್ ಜಾರಕಿಹೊಳಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನ,ಮಾಡುತ್ತದೆ. ಉತ್ತರ ಕರ್ನಾಟಕ ಭಾಗದ ಶಾಸಕರಿಂದ …
Read More »ಜನರ ಹಿತದೃಷ್ಟಿಯಿಂದ ಭಾನುವಾರದಂದು ಸಂಪೂರ್ಣ ಲಾಕ್ಡೌನ್ ಹಿಂಪಡೆದಿದೆ:B.S.Y.
ಬೆಂಗಳೂರು: ರಾಜ್ಯದ ಜನತೆಯ ಬೇಡಿಕೆ ಹಿನ್ನೆಲೆಯಲ್ಲಿ ಭಾನುವಾರ (ಮೇ 31 2020) ರಂದು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ವೈರಸ್ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರ್ಕಾರ …
Read More »ಜನತೆಗೆ ಆಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ಕೊರೊನಾ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ದೇಶದ ಜನತೆಗೆ ಧೈರ್ಯ ತುಂಬಿದರು
ನವದೆಹಲಿ: ಕೊರೊನಾ ಸೋಂಕನ್ನು ನಾವು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ದೇಶದಲ್ಲಿ ವಲಸೆ ಕಾರ್ಮಿಕರಿಂದ ಕೊಂಚ ತೊಂದರೆಯಾಗಿದೆ. ದುರಂತವಾಗಿ ಪರಿವರ್ತನೆಯಾಗದಂತೆ ನೋಡಿಕೊಳ್ಳಬೇಕು ಹೀಗಾಗಿ ನಿಯಮ, ಮಾರ್ಗಸೂಚಿಗಳನ್ನು ಭಾರತೀಯರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಸತತ ಎರಡನೇ ಬಾರಿ ಅಧಿಕಾರಕ್ಕೆ ಬಂದು ಇಂದಿಗೆ 1 ವರ್ಷ ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ದೇಶದ ಜನತೆಗೆ ಆಡಿಯೋ ಸಂದೇಶ ರವಾನಿಸಿರುವ ಪ್ರಧಾನಿ ಕೊರೊನಾ …
Read More »ಕೊರೊನಾ ಇದ್ರೂ ಮನೆಯಿಂದ ಹೊರ ಬಾರದ ಪಾಷಾ-
ಬೆಂಗಳೂರು: ವಾರ್ಡ್ ನಂಬರ್ 135 ಪಾದರಾಯನಪುರದ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಆದರೂ ಇಮ್ರಾನ್ ಪಾಷಾ ಮನೆಯಿಂದ ಹೊರಬರುತ್ತಿಲ್ಲ. ಇಮ್ರಾನ್ ಪಾಷಾಗೆ 158 ಜನ ಕಾಂಟ್ಯಾಕ್ಟ್ ಇದ್ದು, ಅದರಲ್ಲೂ 75 ಜನ ಪ್ರೈಮರಿ ಕಾಂಟ್ಯಾಕ್ಟ್ ಇದ್ದಾರೆ. ಉಳಿದವರೆಲ್ಲ ಸೆಕೆಂಡರಿ ಕಾಂಟ್ಯಾಕ್ಟ್ ಎಂದು ತಿಳಿದುಬಂದಿದೆ. ಹೀಗಾಗಿ ಶಾಸಕರು, ಅಧಿಕಾರಿಗಳು ಆಪ್ತರೆಲ್ಲ ಕ್ವಾರಂಟೈನ್ ಆಗುವ ಸಾಧ್ಯತೆ ಇದೆ. ಇಮ್ರಾನ್ ಪಾಷಾ ಕೊರೊನಾ ಪಾಸಿಟಿವ್ ಬಂದರೂ ಇನ್ನೂ ವಿಕ್ಟೋರಿಯಾ …
Read More »ಕೊರೊನಾ ಬಗ್ಗೆ ಗಮನ ಕೊಡಿ, ಬಾಕಿ ವಿಚಾರ ನಮಗೆ ಬಿಡಿ- ಬಿಎಸ್ವೈಗೆ ಅಮಿತ್ ಶಾ ಭರವಸೆ
ಬೆಂಗಳೂರು: ಕೊರೊನಾ ಬಗ್ಗೆ ಗಮನ ಕೊಡಿ, ಬಾಕಿ ವಿಚಾರ ನಮಗೆ ಬಿಡಿ ಎಂದು ಸಿಎಂ ಯಡಿಯೂರಪ್ಪನವರಿಗೆ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾರೆ. ಸದ್ಯ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಮಾತು ಜೋರಾಗಿ ಕೇಳಿ ಬರುತ್ತಿದೆ. ಆದರೆ ನೇರವಾಗಿ ಇದನ್ನು ಯಾರೂ ಒಪ್ಪಿಕೊಳ್ಳದಿದ್ದರೂ ಪರೋಕ್ಷವಾಗಿ ಬಂಡಾಯದ ಮಾತುಗಳನ್ನು ಆಡುತ್ತಿದ್ದಾರೆ. ಈ ವಿಚಾರವಾಗಿ ಅಮಿತ್ ಶಾ ಅವರು ಯಡಿಯೂರಪ್ಪನವಿಗೆ ಕರೆ ಮಾಡಿ ಮಾತನಾಡಿದ್ದು, ಈ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ. …
Read More »ಆರೋಗ್ಯ ಇಲಾಖೆ ದಿನನಿತ್ಯ ಎರಡು ಬಾರಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುತ್ತಿತ್ತು. ಆದ್ರೆ ಇನ್ನು ಮುಂದೆ ಸಂಜೆ ಮಾತ್ರ ಸುದ್ದಿಗೋಷ್ಠಿ
ಬೆಂಗಳೂರು: ಕೊರೊನಾ ಸೋಂಕಿತರು, ಗುಣಮುಖರಾದವರ ಬಗ್ಗೆ ಈವರೆಗೂ ರಾಜ್ಯ ಆರೋಗ್ಯ ಇಲಾಖೆ ದಿನನಿತ್ಯ ಎರಡು ಬಾರಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುತ್ತಿತ್ತು. ಆದ್ರೆ ಇನ್ನು ಮುಂದೆ ಸಂಜೆ ಮಾತ್ರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಸುಧಾಕರ್, ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ ಇತರೆ ರಾಜ್ಯಗಳಂತೆಯೇ ಮಧ್ಯಾಹ್ನದ …
Read More »ಶಾಪಿಂಗ್ ಮಾಡಲು ಭಾನುವಾರ ಒಂದೇ ದಿನ ಅವಕಾಶಭಾನುವಾರ ಕರ್ಫ್ಯೂ ತೆಗೆಯಲಾಗಿದೆ
ಬೆಂಗಳೂರು: ಶಾಪಿಂಗ್ ಮಾಡಲು ಭಾನುವಾರ ಒಂದೇ ದಿನ ಅವಕಾಶ ಇರುವುದು. ಹೀಗಾಗಿ ಖರೀದಿಗೆ ಹಾಗೂ ಸ್ನೇಹಿತರನ್ನ ಭೇಟಿಯಾಗಲು ಅವಕಾಶ ಬೇಕಿತ್ತು. ಅದಕ್ಕೆ ಭಾನುವಾರ ಕರ್ಫ್ಯೂ ತೆಗೆಯಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾನುವಾರ ಲಾಕ್ ಡೌನ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಸಿಎಂ ನಿರ್ಧಾರ ಸ್ವಾಗತಾರ್ಹ ಎಂದರು. ದುಡಿಯುವ ವರ್ಗಕ್ಕೆ ರಿಲ್ಯಾಕ್ಸ್ ಮಾಡಿಕೊಡಲು ಅನುಕೂಲವಾಗಿದೆ. ವಾರವೆಲ್ಲ ನೌಕರರು, ಉದ್ದಿಮೆದಾರರು ಕೆಲಸ ಮಾಡಿರುತ್ತಾರೆ. …
Read More »