ಉಡುಪಿ: ಮುಂಬೈನಿಂದ ಬಂದು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರೋದು ಇಂದು ದೃಢಪಟ್ಟಿದೆ. ಸಾವನ್ನಪ್ಪಿದ 54 ವರ್ಷದ ಸೋಂಕಿತ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ನಿವಾಸಿಯಾಗಿದ್ದು, ಮೇ 13ರಂದು ಹೃದಯಾಘಾತವಾಗಿತ್ತು. ಆರಂಭದಲ್ಲಿ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನೋವು ಉಲ್ಬಣಗೊಂಡು ಮಣಿಪಾಲ ಕೆಎಂಸಿಗೆ ಶಿಫ್ಟ್ ಮಾಡಲಾಗಿತ್ತು. ಮೇ 13ರ ರಾತ್ರಿಯೇ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದರು. ಮೇ 14ರ ಬೆಳಗ್ಗೆ ವ್ಯಕ್ತಿ ನಿಧನರಾಗಿದ್ದರು. ವ್ಯಕ್ತಿ ಮುಂಬೈನಿಂದ …
Read More »Yearly Archives: 2020
ರಕ್ಷಣಾ ವಲಯಕ್ಕೆ ಮೇಕ್ ಇನ್ ಇಂಡಿಯಾ ಬಲ- 6 ಏರ್ ಪೋರ್ಟ್ಗಳ ಹರಾಜು……..
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಘೋಷಣೆಯ 20 ಲಕ್ಷ ಕೋಟಿಯ ಪ್ಯಾಕೇಜ್ ನ ನಾಲ್ಕನೇ ಹಂತದ ಪ್ರಕಟನೆಯನ್ನ ಕೇಂದ್ರ ಹಣಕಾಸುವ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸುದ್ದಿಗೋಷ್ಟಿಯಲ್ಲಿ ಮಂಡಿಸಿದರು. ಪಿಎಂ ಮೋದಿ ಸುಧಾರಣೆಯ ಕುರಿತು ಒಳ್ಳೆಯ ರೆಕಾರ್ಡ್ ಹೊಂದಿದ್ದಾರೆ. ನೇರ ವರ್ಗಾವಣೆಯ ಅವಶ್ಯಕತೆ ಹೆಚ್ಚಿದ್ದು, ಈ ಕುರಿತು ಹಲವು ನಿಯಮಗಳನ್ನು ಸರಳೀಕರಣಕೊರಿಸುವ ಬಗ್ಗೆ ಕೇಂದ್ರ ಸಚಿವರು ಆರಂಭದಲ್ಲಿಯೇ ಮಾತನಾಡಿದರು. ಕೈಗಾರಿಕಾ ಮೂಲಭೂತ ಸುಧಾರಣೆಗೆ ಕ್ರಮ, ಉದ್ಯೋಗ ಸೃಷ್ಟಿ, ಉದ್ಯಮಗಳ ಮೇಲೆ …
Read More »ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ತಾಲೂಕಿನಾದ್ಯಂತ ಕಷಾಯ ವಿತರಣೆ
ಉಡುಪಿ: ವಿಶ್ವಾದ್ಯಂತ ಮಹಾಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೋವಿಡ್-19ಗೆ ಇನ್ನೂ ಚುಚ್ಚು ಮದ್ದು ಸಿಕ್ಕಿಲ್ಲ. ವಿಶ್ವದ ಎಲ್ಲಾ ದೇಶಗಳು ಕೊರೊನಾ ಚುಚ್ಚು ಮದ್ದನ್ನು ಕಂಡು ಹುಡುಕುವಲ್ಲಿ ಹಗಲು ರಾತ್ರಿ ಶ್ರಮಿಸುತ್ತಿವೆ. ಈ ನಡುವೆ ಕೊರೊನಾ ವೈರಸ್ ದೇಹಕ್ಕೆ ಬಾಧಿಸದಂತೆ ಆಯುರ್ವೇದದಲ್ಲಿ ಚಿಕಿತ್ಸೆ ಇದೆ ಎಂದು ಆಯುಷ್ ಇಲಾಖೆ ಹೇಳಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಇದನ್ನು ಪ್ರಯೋಗ ಮಾಡಲಾಗುತ್ತಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ತಾಲೂಕಿನಾದ್ಯಂತ ಕಷಾಯ ವಿತರಣೆ …
Read More »ಧಾರವಾಡ:ಪಾಸಿಟಿವ್ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ತಯಾರಿಯಲ್ಲೇ ಅಧಿಕಾರಿಗಳು ಎಡವಟ್ಟು?……..
ಧಾರವಾಡ: ನಗರದಲ್ಲಿ ಇಂದು ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವ್ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ತಯಾರಿಯಲ್ಲೇ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಧಾರವಾಡ ಗಾಂಧಿನಗರದ ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಇವರ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಯದ್ವಾತದ್ವಾ ತಯಾರಿಸಿದ್ದಾರೆ. ಅಧಿಕಾರಿಗಳ ತಪ್ಪು ನೊಡದೆಯೇ ಜಿಲ್ಲಾಧಿಕಾರಿ ಕೂಡ ಸಹಿ ಮಾಡಿ ಮುಂದಿನ ಕ್ರಮಕ್ಕೆ ರವಾನಿಸಿದ್ದಾರೆ. ಅಲ್ಲದೆ ಯಾವ ತಿಂಗಳಲ್ಲಿ ಎಷ್ಟು ದಿನಾಂಕ ಎನ್ನುವ ಪರಿಜ್ಞಾನವೂ ಇಲ್ಲದಂತೆ ಅಧಿಕಾರಿಗಳು …
Read More »ಮೇ ೧೭ ರಂದು ಬೆಳಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ ಘಂಟೆಯವರೆಗೆ ಬೆಳಗಾವಿಯ ಕೆಲವೆಡೆ ವಿದ್ಯುತ್ ನಿಲುಗಡೆ ಆಗಲಿದೆ
ಬೆಳಗಾವಿ -: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ ೧೭ ರಂದು ಬೆಳಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ ಘಂಟೆಯವರೆಗೆ ಬೆಳಗಾವಿಯ ಕೆಲವೆಡೆ ವಿದ್ಯುತ್ ನಿಲುಗಡೆ ಆಗಲಿದೆ. ೩೩ ಕೆ.ವ್ಹಿ. ಆರ್ ಎಮ್-೨ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಮರಾಠಾ ಕಾಲೊನಿ, ಎಸ್.ವ್ಹಿ ಕಾಲೊನಿ, ಎಮ್.ಜಿ. ಕಾಲೊನಿ, ೧ನೇ ಗೇಟ್, ಲೀಲೆ ಗ್ರೌಂಡ್, ಸಾವರ್ಕರ್ ರೋಡ, ಮಹರ್ಷಿ ರೋಡ್, ನೆಹರು ರೋಡ್, ರಾಯ್ …
Read More »ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಹೊಸದಾಗಿ 36 ಜನರಲ್ಲಿ ಸೋಂಕು ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಹೊಸದಾಗಿ 36 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಆಲ್ಖೆ ನೀಡಿದ ಸಂಜೆಯ ಬುಲೆಟಿನ್ ಪ್ರಕಾರ ಇಂದು ರಾಜ್ಯದಲ್ಲಿ 36 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ 16, ಹಾಸನ 3 ಕಲಬುರಗಿ 8, ಶಿವಮೊಗ್ಗ 3, ಮಂಡ್ಯದಲ್ಲಿ 1, ಬಾಗಲಕೋಟೆ, ಬಳ್ಳಾರಿ, ಧಾರವಾಡ, ದಾವಣಗೆರೆ, …
Read More »ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು ಎಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೋಕಾಕ : ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು. ಇದರಲ್ಲಿ ಯಾವುದೇ ಅನುಕಂಪ ತೋರದೇ ಅವರನ್ನು ಕ್ವಾರಂಟೈನ್ಗೆ ಒಳಪಡಿಸಬೇಕೆಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಕೋವಿಡ್-19 ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೂರವಾಣಿ ಮೂಲಕ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ …
Read More »ಗೋಕಾಕ ತಾಲೂಕಿನ NHM ಅಡಿಯಲ್ಲಿ ಕಾರ್ಯನಿವಸುತ್ತಿರುವ ಸಿಬ್ಬಂದಿಗಳು ಮೇಣದ ಬತ್ತಿ ಹಚ್ಚಿ ಮತ್ತು ಕೈಗೆ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟನೆ ಮಾಡಿದರು
ಗೋಕಾಕ:ಗೋಕಾಕ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಒಳಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ NHM ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಸಿಬ್ಬಂದಿಗಳು ಹಾಗೂ ವೈದ್ಯರು ಸರಕಾರಕ್ಕೆ ತಮ್ಮ ಕೂಗು ನಿಲುಕಲಿ ಎಂದು ದಿನದ ಕರ್ತವ್ಯ ನಿಭಾಯಿಸುತ್ತಲೇ ಸಮವಸ್ತ್ರದಲ್ಲಿದ್ದೂ ರಟ್ಟೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿ. ಈ ಮೂಲಕ ಮನವಿ ಕೂಡ ಅರ್ಪಿಸಿದರು. ಸಮಾನ ವೇತನ, ಸೇವಾಭದ್ರತೆ ಹಾಗೂ ಇನ್ನಿತರ ವಿಷಯಗಳನ್ನು ಇಟ್ಟುಕೊಂಡು ಮೇಣದ ಬತ್ತಿ ಹಚ್ಚಿ, ಭಿತ್ತಿಚಿತ್ರ …
Read More »ಕಾರ್ಮಿಕರು ಆತುರಪಡ್ಬೇಡಿ, ನಿಮ್ಮನ್ನ ಕಳಿಸಿಕೊಡೋದು ನಮ್ಮ ಜವಾಬ್ದಾರಿ: ಸುಧಾಕರ್
ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರದಲ್ಲಿ ಎರಡು ಯಂತ್ರಗಳಿದ್ದು, ದಿನದ 24 ಗಂಟೆಯೂ ಈ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಪ್ರತಿದಿನ 80 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಾದರಿಗಳ ಪರೀಕ್ಷೆ ನಡೆಸಲು ಅಗತ್ಯವಾದ ಕ್ರಮಗಳನ್ನ ಕೈಗೊಳ್ಳುವುದಾಗಿ …
Read More »ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ:ಸಚಿವ ಸುರೇಶ್ ಕುಮಾರ್
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಇಂಗ್ಲೀಷ್ ಪತ್ರಿಕೆ ಪರೀಕ್ಷೆ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಕುರಿತು ಮಾಹಿತಿ ನೀಡಿರುವ ಸಚಿವ ಸುರೇಶ್ ಕುಮಾರ್, 10ನೇ ತರಗತಿ ಪರೀಕ್ಷೆಗಳನ್ನು ಶೀಘ್ರದಲ್ಲಿ ನಡೆಸುವ ಸಲುವಾಗಿ ಶಿಕ್ಷಣ ಇಲಾಖೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಸೋಮವಾರ ಈ ಕುರಿತು ಮಹತ್ವದ ಚರ್ಚೆ ನಡೆಯಲಿದ್ದು, ಆನಂತರ …
Read More »