Yearly Archives: 2020

ಎಲ್ಲ ರಾಜ್ಯಗಳನ್ನು ಕೇಂದ್ರ ಸರ್ಕಾರ ಏಕ ರೂಪದಲ್ಲಿ ನೋಡಲಿದ್ದು ಕೊರೊನಾ ಸಂಕಷ್ಟದಿಂದ ಶೀಘ್ರ ಹೊರ ಬರಲು ಪ್ರಯತ್ನಿಸೋಣ

ನವದೆಹಲಿ: ದೇಶದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಹೇರಲಾಗಿರುವ ಲಾಕ್‍ಡೌನ್‍ನಿಂದ ಸಾವಿರಾರು ಜೀವಗಳನ್ನು ರಕ್ಷಿಸಲಾಗಿದೆ ಆದರೆ ಕೊರೊನಾ ವೈರಸ್ ಮುಂದಿನಗಳಲ್ಲೂ ಕಂಡು ಬರುವ ಸಾಧ್ಯತೆಯಿದ್ದು, ಮಾಸ್ಕ್ ಜೀವನದ ಒಂದು ಭಾಗವಾಗಿರಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಸಭೆ ವೇಳೆ ಪ್ರಧಾನಿ ಮೋದಿ ಮಾಸ್ಕ್ ಬಳಕೆಯನ್ನು ಒತ್ತಿ ಹೇಳಿದ್ದಾರೆ.ಸಭೆಯಲ್ಲಿ ಎಲ್ಲ ರಾಜ್ಯದ ಸಿಎಂಗಳಿಗೆ ಎಚ್ಚರಿಕೆ ವಹಿಸಲು ಸೂಚಿಸಿರುವ ಪ್ರಧಾನಿ …

Read More »

1500ಕ್ಕೂ ಹೆಚ್ಚು ನಂದಿನಿ ಪಾರ್ಲರ್ ಬಳಿ ಹಣ್ಣು-ತರಕಾರಿ ಮಾರಾಟಕ್ಕೆ ಅವಕಾಶ

ಬೆಂಗಳೂರು, ಏ.27- ರಾಜ್ಯಾದ್ಯಂತ ಇರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯ ಎಲ್ಲಾ 14 ಜಿಲ್ಲಾ ಹಾಲು ಒಕ್ಕೂಟಗಳ 1500ಕ್ಕೂ ಹೆಚ್ಚು ನಂದಿನಿ ಮಳಿಗೆ, ಶಾಪಿ, ಪಾರ್ಲರ್, ಪ್ರಾಂಚೈಸಿಗಳ ಬಳಿ ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ಬರುವ ರೈತರಿಗೆ ಕೆಎಂಎಫ್ ಹಾಗೂ ಒಕ್ಕೂಟಗಳ ವತಿಯಿಂದ ಉಚಿತವಾಗಿ ದಿನವಹಿ, ಕುಡಿಯುವ ನೀರು, ಮಜ್ಜಿಗೆ, ಸ್ಯಾನಿಟೈಜರ್, ಕೈಗವಚು ಮತ್ತು ಮಾಸ್ಕ್ ಗಳನ್ನು ಒದಗಿಸಲಾಗುವುದು. ರೈತರು …

Read More »

ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಿ: ಕುಮಾರಸ್ವಾಮಿ

ಬೆಂಗಳೂರು:ದೇಶದ ಜಿಡಿಪಿ ಕುಸಿತವಾಗೋ ಮುನ್ಸೂಚನೆ ಹಿನ್ನೆಲೆಯಲ್ಲಿ ಜನ ಸಾಮಾನ್ಯರಿಗೆ ಹಣ ಉಳಿಸುವ ಮಾರ್ಗಗಳನ್ನ ಸರ್ಕಾರ ಹುಡುಕಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯ ಮಾಡಿದ್ದಾರೆ. ಮೊದಲಿಗೆ, “ರಿಸರ್ವ್ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು …

Read More »

ಗ್ರೀನ್‍ಜೋನ್‍ ಯಾದಗಿರಿಗೆ ಕೊರೊನಾ ಆತಂಕ ಎದುರಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಹೀಗಾಗಿ ಗ್ರೀನ್‍ಜೋನ್‍ ಎಂದು ಘೋಷಿಸಾಲಾಗಿತ್ತು. ಇದೀಗ ಯಾದಗಿರಿಗೆ ಕೊರೊನಾ ಆತಂಕ ಎದುರಾಗಿದೆ. ಲಾಕ್‍ಡೌನ್ ಸಡಲಿಕೆ ಎಫೆಕ್ಟ್ ನಿಂದಾಗಿ ಯಾದಿಗಿರಿಗೆ ಬಂದು ಹೋಗಿದ್ದ ಕಲಬುರಗಿ ಸೋಂಕಿತನಿಂದ ಇದೀಗ ಜಿಲ್ಲಾಡಳಿತ ಸಂಕಷ್ಟಕ್ಕೀಡಾಗಿದೆ. ಏಪ್ರಿಲ್ 21 ರಂದು ರೋಗಿ 413 ಕಲಬುರಗಿ ವ್ಯಕ್ತಿಗೆ ಕೊರಾನಾ ದೃಢಪಟ್ಟಿದೆ. ಇತನ ಟ್ರಾವೆಲ್ ಹಿಸ್ಟರಿಯಲ್ಲಿ ಹೊರ ಬಿದ್ದರುವ ಸತ್ಯ ಯಾದಗಿರಿ ಜನರ ನಿದ್ದೆಗೆಡಿಸಿದೆ. ಪಾಸಿಟಿವ್ ಬಂದ ವ್ಯಕ್ತಿಗೆ ಯಾದಗಿರಿ …

Read More »

ಗುಜರಾತ ರಾಜ್ಯಪಾಲರು ಹಾಗು ಗುಜರಾತಿನ ಸಂಸದರ ಮನವಿಗೆ ಕರ್ನಾಟಕ ಸರ್ಕಾರ ತ್ವರಿತವಾಗಿ ಸ್ಪಂದಿಸಿ ಕರ್ನಾಟಕದ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿದ್ದ ನರ್ಸಿಂಗ್ ಸ್ಟುಡೆಂಟ್ ಗಳಿಗೆ ಅಹ್ಮದಾಬಾದ್ ಗೆ ತೆರಳಲು ಅನುಮತಿ

ಬೆಳಗಾವಿ- ಗುಜರಾತ ರಾಜ್ಯಪಾಲರು ಹಾಗು ಗುಜರಾತಿನ ಸಂಸದರ ಮನವಿಗೆ ಕರ್ನಾಟಕ ಸರ್ಕಾರ ತ್ವರಿತವಾಗಿ ಸ್ಪಂದಿಸಿ ಕರ್ನಾಟಕದ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿದ್ದ ನರ್ಸಿಂಗ್ ಸ್ಟುಡೆಂಟ್ ಗಳಿಗೆ ಅಹ್ಮದಾಬಾದ್ ಗೆ ತೆರಳಲು ಅನುಮತಿ ನೀಡಿದೆ‌. ಸಾರಿಗೆ ಸಂಸ್ಥೆಯ ಮೂರು ರಾಜಹಂಸ ಬಸ್ ಗಳಲ್ಲಿ ಸುಮಾರು 45 ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಗುಜರಾತಿಗೆ ತೆರಳಿದ್ದಾರೆ. ನಿನ್ನೆ ಸಂಜೆ ಈ ಮೂರು ಬಸ್ಸು ಗಳು ಬೆಳಗಾವಿಯ ಬಸ್ ನಿಲ್ಧಾಣದಲ್ಲಿ ಡಿಸೈಲ್ ತುಂಬಿಸಿಕೊಂಡು ಮುಂದಕ್ಕೆ ಸಾಗಿವೆ …

Read More »

ಕೊರೊನಾ ಸೋಂಕಿತನೊಬ್ಬ ತುರ್ತು ನಿರ್ಗಮನದ ಕಿಟಕಿಯಿಂದ ಬಿದ್ದು ಆತ್ಮಹತ್ಯೆ

ಬೆಂಗಳೂರು: ಕೊರೊನಾ ಸೋಂಕಿತನೊಬ್ಬ ತುರ್ತು ನಿರ್ಗಮನದ ಕಿಟಕಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. 50 ವರ್ಷದ 466ನೇ ಕೊರೊನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಉಸಿರಾಟದ ತೊಂದಾರೆಯಿಂದ ಬಳಲುತ್ತಿದ್ದರಲ್ಲದೇ ಕಳೆದ ನಾಲ್ಕು ವರ್ಷಗಳಿಂದ ಕಿಡ್ನಿ ವೈಫಲ್ಯ ಸಮಸ್ಯೆಯಿಂದಲೂ ಬಳುತ್ತಿದ್ದರು. ಅವರನ್ನು ಡಯಾಲಿಸಿಸ್ ಗೆ ಒಳಪಡಿಸಲಾಗಿತ್ತು. ಇತ್ತೀಚೆಗೆ ಇವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಿನ್ನೆ …

Read More »

ಕೊರೊನಾಗೆ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಡ್ಡಿ ಮಾಡಿದ್ರೆ 3 ವರ್ಷ ಜೈಲು

ಚೆನ್ನೈ: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ತಮಿಳುನಾಡಿನಲ್ಲಿ 3 ವರ್ಷ ಜೈಲು ಶಿಕ್ಷೆಯಾಗಲಿದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟ ರೋಗಿಗಳ ಅಂತ್ಯಸಂಸ್ಕಾರ ಅಥವಾ ಹೂಳಲು ಜನ ವಿರೋಧ ವ್ಯಕ್ತಿಪಡಿಸಿದರೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಮಾರಣಾಂತಿಕ ಕೋವಿಡ್-19 ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸುವುದು ಕ್ರಿಮಿನಲ್ ಅಪರಾಧ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡು ಸಾರ್ವಜನಿಕ ಕಾಯ್ದೆ 1939ರ ಸೆಕ್ಷನ್ 74ರ ಪ್ರಕಾರ ಅಡ್ಡಿಪಡಿಸಿದರೆ …

Read More »

ರಾಯಚೂರು ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ – ಗರಿಗೆದರಿದ ಕೃಷಿ ಚಟುವಟಿಕೆಗಳು

ರಾಯಚೂರು(ಏ.27): ಕೊರೋನಾ ಸೋಂಕಿನಿಂದ ದೂರವಿರುವ ರಾಯಚೂರು ಜಿಲ್ಲೆಯಲ್ಲಿ ಈಗ ಲಾಕ್ ಡೌನ್ ಸಡಿಲಿಕೆಯಾಗಿದೆ. ಈ ಮಧ್ಯೆ ಗ್ರೀನ್ ಝೋನ್ ನಲ್ಲಿರುವ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇಲ್ಲಿ ಕೃಷಿಕರ ಫಸಲು ಮಾರಾಟಕ್ಕೆ ನೇರವಾಗಿ ಮಿಲ್ ಗಳಿಗೆ ಕಳುಹಿಸಲಾಗುತ್ತಿದೆ.  ಜಗತ್ತನ್ನು ಕಾಡುತ್ತಿರುವ ಮಹಾಮಾರಿ ಕೊರೋನಾ ರಾಯಚೂರು ಜಿಲ್ಲೆಯಲ್ಲಿ ಇಲ್ಲಿಯವರೆಗೂ ಮುಕ್ತವಾಗಿದೆ. ಕೊರೋನಾ ಇಲ್ಲದ ಕಾರಣ ಜಿಲ್ಲೆಯು ಈಗ ಗ್ರೀನ್ ಝೋನ್​  ನಲ್ಲಿದ್ದು, ಈಗ ಲಾಕ್ ಡೌನ್ ಸಡಿಲಿಕೆಯಾಗಿದ್ದು, ಇಲ್ಲಿ ಕೃಷಿ ಚಟುವಟಿಕೆಗೆ …

Read More »

ಕಾಫಿ ತುಂಬಾ ಕಾಸ್ಟ್ ಈಗ ಗ್ರೀನ್ ಟೀ ಮಾತ್ರ ಕುಡಿಯಿರಿ.ಹಾರ್ದಿಕ್ ಪಾಂಡ್ಯ ‘ಕಾಫಿ ವಿಥ್ ಕರಣ್’ ವಿವಾದವನ್ನು ನೆನೆದಿದ್ದಾರೆ.

ಮುಂಬೈ: ಕಾಫಿ ತುಂಬಾ ಕಾಸ್ಟ್ಲಿ ಆಗಿದೆ, ಈಗ ಗ್ರೀನ್ ಟೀ ಮಾತ್ರ ಕುಡಿಯಿರಿ ಎಂದು ಟೀಂ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ‘ಕಾಫಿ ವಿಥ್ ಕರಣ್’ ವಿವಾದವನ್ನು ನೆನೆದಿದ್ದಾರೆ. ಇನ್‍ಸ್ಟಾಗ್ರಾಮ್ ಚಾಟ್ ಶೋನಲ್ಲಿ ಪಾಂಡ್ಯ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರೊಂದಿಗೆ ಮಾತನಾಡುತ್ತಿದ್ದಾಗ 2019ರಲ್ಲಿ ನಡೆದ ಘಟನೆಯನ್ನು ಮೆಲುಕು ಹಾಕಿದ್ದಾರೆ. ಕಾರ್ತಿಕ್ ಅವರು ಕರಣ್ ವಿಥ್ ಕಾಫಿ ಕಾರ್ಯಕ್ರಮ ಪ್ರಸ್ತಾಪಿಸುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಹಾರ್ದಿಕ್, “ಕಾಫಿ ತುಂಬಾ ದುಬಾರಿಯಾಗಿದೆ. ಹೀಗಾಗಿ …

Read More »

ಮಹಿಳೆಯರಿಗೆ ಸಲಹೆಯೊಂದನ್ನು ನೀಡಿದ ನಟಿ ಹರಿಪ್ರಿಯಾ…….

ಬೆಂಗಳೂರು: ಸಿನಿಮಾದಲ್ಲಿ ಬರುವ ಭಯಾನಕ ವಿಲನ್ ಕೂಡ ಜಿರಳೆಯಷ್ಟು ಭಯ ಹುಟ್ಟಿಸುವುದಿಲ್ಲ ಎಂದು ಚಂದನವದ ನಟಿ ಹರಿಪ್ರಿಯಾ ಹೇಳಿದ್ದಾರೆ. ಲಾಕ್‍ಡೌನ್‍ನಿಂದ ಮನೆಯಲ್ಲೇ ಕುಳಿತಿರುವ ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿ ಮುಳುಗಿದ್ದಾರೆ. ಅಂತೆಯೇ ನಟಿ ಹರಿಪ್ರಿಯಾ ಕೂಡ ತಮ್ಮ ಬ್ಲಾಗ್‍ನಲ್ಲಿ ಆಗಾಗ ತಮ್ಮ ಅನುಭವದ ಕಥೆಯನ್ನು ಬರೆದು ಪೋಸ್ಟ್ ಮಾಡುತ್ತಿರುತ್ತಾರೆ. ಈಗ ಜಿರಳೆ ಕಥೆಯೊಂದು ಬರೆದು ತಮ್ಮ ಲೇಡಿ ಫ್ಯಾನ್ಸ್ ಗೆ ಸಲಹೆಯೊಂದನ್ನು ಹೇಳಿದ್ದಾರೆ ಈ ವಿಚಾರವಾಗಿ ತಮ್ಮ ಬ್ಲಾಗ್‍ನಲ್ಲಿ ತಮ್ಮ ಅನುಭವವನ್ನು …

Read More »