Breaking News

Yearly Archives: 2020

ಲಾಕ್ ಡೌನ್ ಮಧ್ಯೆಯೂ ಮಾನವೀಯತೆ ಮೆರೆದ ಚಿಕ್ಕೋಡಿ ತಾಲೂಕ ರೈತ ಸಂಘದ ತಾಲೂಕು ಅಧ್ಯಕ್ಷರು. ಶ್ರೀ ಮಂಜುನಾಥ್ ಪರಗೌಡ್ರು

ಚಿಕ್ಕೋಡಿ: ಅಂಕಲಿ ಯಿಂದ ಚಿಕ್ಕೋಡಿಯ ಸಾರ್ವಜನಿಕ ತಾಲೂಕ ಆಸ್ಪತ್ರೆಗೆ ರೋಗಿಯನ್ನು     ಸಾಗಿಸುತ್ತಿದ ಆಂಬ್ಯುಲೆನ್ಸ್ ವಾಹನ ಕೇರೂರ ಕ್ರಾಸ್ ಬಳಿ ಪಂಚರ ಆಗಿ ನಿಂತಿದ್ದು ಅದನ್ನು ಗಮನಿಸಿದ ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕೋಡಿ ತಾಲೂಕ ಅಧ್ಯಕ್ಷರಾದ ಶ್ರೀ ಮಂಜುನಾಥ್ ಪರಗೌಡ್ರು ತಕ್ಷಣ ಅಲ್ಲಿಗೆ     ಹೋಗಿ ಅಂಬುಲೆನ್ಸ್ ಚಾಲಕರ ಪರಿಸ್ಥಿತಿಯನ್ನು ಗಮನಿಸಿ ಯಾಕೆಂದರೆ ಅಲ್ಲಿ ಪಕ್ಕದಲ್ಲೆಲ್ಲೋ ಪಂಚರ ತೆಗೆಯುವ ಅಂಗಡಿ ಇಲ್ಲದ ಕಾರಣ ಬೇರೆ ಅಂಬುಲೆನ್ಸ್ …

Read More »

ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುತ್ತಿಲ್ಲ,ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ

– ಬೆಂಗ್ಳೂರಿನ 11 ಮಂದಿ, ಬೆಳಗಾವಿಯ 9 ಜನರಿಗೆ – ಬಿಹಾರ ಕಾರ್ಮಿಕನಿಂದ 9 ಜನರಿಗೆ ಕೊರೊನಾ – ಬೆಳಗಾವಿಯಲ್ಲೂ ಒಬ್ಬನಿಂದ 9 ಮಂದಿಗೆ ಸೋಂಕು ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಕಳೆದ 24 ಗಂಟೆಯಲ್ಲಿ ರಾಜ್ಯದ 26 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ ಕಂಡಿದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು 11 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಅದರಲ್ಲೂ ಬಿಹಾರ ಕಾರ್ಮಿಕನಿಂದಲೇ …

Read More »

ಕೊರೊನಾ ಮಹಾಮಾರಿ ಸೋಂಕಿತರನ್ನು ಬಲಿ ಪಡೆಯುತ್ತಿರುವುದರ ಜೊತೆಗೆ ಬಡವರ ಜೀವನವನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ.

ಮಡಿಕೇರಿ: ಇಡೀ ವಿಶ್ವವನ್ನೇ ಆವರಿಸಿರುವ ಕೊರೊನಾ ಮಹಾಮಾರಿ ಸೋಂಕಿತರನ್ನು ಬಲಿ ಪಡೆಯುತ್ತಿರುವುದರ ಜೊತೆಗೆ ಬಡವರ ಜೀವನವನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಕರಿಯಪ್ಪ ಬಡಾವಣೆ ವೃದ್ಧ ದಂಪತಿ ಕೊರೊನಾ ಲಾಕ್‍ಡೌನ್‍ನಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ವಿಲನ್ಸ್ ಮತ್ತು ಜಯಲಕ್ಷ್ಮಿ ದಂಪತಿ ಕನಿಷ್ಠ ಊಟಕ್ಕೂ ಗತಿ ಇಲ್ಲದೆ ಕಣ್ಣೀರು ಇಡುತ್ತಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಅಪಘಾತದಲ್ಲಿ ವಿಲನ್ಸ್ ಅವರ ಕಾಲು ಮುರಿದುಹೋಗಿತ್ತು. ಬಳಿಕ ಅಕ್ಕಪಕ್ಕದ ಮನೆಯವರಿಂದ 40 …

Read More »

ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ನಡೆಯಬೇಕಿದ್ದ ಜಾತ್ರೆ ರದ್ದು……..

ಚಿಕ್ಕೋಡಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ನಡೆಯಬೇಕಿದ್ದ ಜಾತ್ರೆಯನ್ನು ರದ್ದು ಮಾಡಿ ಕೊರೊನಾ ವಾರಿಯರ್ಸ್‍ಗೆ ಅನ್ನ ದಾಸೋಹ ಮಾಡಿ ಹುಕ್ಕೇರಿ ಹಿರೇಮಠ ಮಾದರಿಯಾಗಿದೆ. ಪ್ರತಿ ವರ್ಷ ಏಪ್ರಿಲ್ 24ರಿಂದ ಹುಕ್ಕೇರಿ ಹಿರೇಮಠದಲ್ಲಿ ಗುರುಶಾಂತೇಶ್ವರ ಜಾತ್ರೆ ನಡೆಯಬೇಕಿತ್ತು. ಆದರೆ ಜಾತ್ರೆಯನ್ನು ಈ ಬಾರಿ ರದ್ದು ಮಾಡಲಾಗಿದೆ. ಜಾತ್ರೆ ರದ್ದಾದರೂ ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು, ಪೌರ ಕಾರ್ಮಿಕರು, ಪೊಲೀಸರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಅನ್ನ ದಾಸೋಹವನ್ನು ಆಯೋಜಿಸಲಾಗಿತ್ತು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ …

Read More »

ಪಟ್ಟಣದ ಹಿರಿಯರಾದ ಶಿವಪುತ್ರಪ್ಪ ಶಂಕ್ರಪ್ಪ ಶಿರಕೋಳಿಯವರು ಕೊರೊನಾ ಸೊಂಕನ್ನು ತಡೆಯುವ ನಿಟ್ಟಿ‌ನಲ್ಲಿ ಹಗಲಿರುಳೆನ್ನದೇ

ಸಂಕೇಶ್ವರ ಪಟ್ಟಣದ ಹಿರಿಯರಾದ ಶಿವಪುತ್ರಪ್ಪ ಶಂಕ್ರಪ್ಪ ಶಿರಕೋಳಿಯವರು ಕೊರೊನಾ ಸೊಂಕನ್ನು ತಡೆಯುವ ನಿಟ್ಟಿ‌ನಲ್ಲಿ ಹಗಲಿರುಳೆನ್ನದೇ ಶ್ರಮಿಸುತ್ತಿರುವ ಸಂಕೇಶ್ವರ ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಪಿಪಿ ಕೀಟ್’ನ್ನು ವಿತರಿಸಿ, ಪೋಲಿಸ್ ಸಿಬ್ಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗೋಕಾಕ ಡಿವೈಎಸ್ಪಿ ಶ್ರೀ ಡಿ.ಟಿ.ಪ್ರಭು, ಹುಕ್ಕೇರಿ ಸಿಪಿಆಯ್ ಗುರುರಾಜ ಕಲ್ಯಾಣ ಶೆಟ್ಟಿ, ಪಿಎಸ್ಐ ಗಣಪತಿ ಕೊಗನೊಳಿ, ಸಿಬ್ಬಂದಿಗಳಾದ ಬಿ.ಕೆ.ನಾಗನೂರಿ, ಬಿ.ಎಸ್.ಕಪರಟ್ಟಿ, ಎಸ್.ಆರ್.ರಾಜಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More »

ರಮಾಜಾನ್ ಅವಧಿಯಲ್ಲಿ ಪಾಲಿಸಬೇಕಾದ ವಿಷಯಗಳು ಕುರಿತು ಹಲವಾರು ಮಹತ್ವದ ನಿರ್ಧಾರ

ಬೆಳಗಾವಿ: ಬೆಳಗಾವಿ ಜಿಲ್ಲಾಡಳಿತ ಇತ್ತೀಚೆಗೆ ನಗರದ ಪ್ರವಾಸಿ ಮಂದಿರದಲ್ಲಿ ಮುಸ್ಲೀಂ ಮುಖಂಡರು ,ಜಮಾತಿನ ಪದಾಧಿಕಾರಿಗಳು ಹಾಗೂ ಪ್ರಮುಖ ಮೌಲ್ವಿಗಳ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ರಮಾಜಾನ್ ಅವಧಿಯಲ್ಲಿ ಪಾಲಿಸಬೇಕಾದ ವಿಷಯಗಳು ಕುರಿತು ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ರಮಜಾನ್ ತಿಂಗಳಲ್ಲಿ ಯಾರೊಬ್ಬರು ಮಸೀದಿಯಲ್ಲಿ ನಮಾಜ್ ಮಾಡುವಂತಿಲ್ಲ,ಆಝಾನ್ ಕೊಡುವಂತಿಲ್ಲ,ಆದ್ರೆ ಪವಿತ್ರ ರಮಜಾನ್ ತಿಂಗಳಲ್ಲಿ ಮುಸ್ಲೀಂ ಬಾಂಧವರು ಉಪವಾಸದ ಆಚರಣೆ ಮಾಡುತ್ತಾರೆ ,ಬೆಳಗಿನ ಜಾವ ಸೆಹರಿ ಅಂದ್ರೆ ಉಪವಾಸ ಆರಂಭ ಮಾಡುತ್ತಾರೆ …

Read More »

ಕೋವಿಡ್-೧೯: ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ಪರೀಕ್ಷೆ “ಮಾಧ್ಯಮ ಪ್ರತಿನಿಧಿಗಳು ಮುನ್ನೆಚ್ಚರಿಕೆ ವಹಿಸಲಿ”- ಡಾ.ಮುನ್ಯಾಳ

  ಬೆಳಗಾವಿ, ಏ.೨೫(ಕರ್ನಾಟಕ ವಾರ್ತೆ): ಕೋವಿಡ್-೧೯ ಹರಡುವಿಕೆ ತಡೆಗಟ್ಟುವ ಕುರಿತು ಜನಜಾಗೃತಿ ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿರುವ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ ವರದಿಗಾರರು ಮತ್ತು ಛಾಯಾಗ್ರಾಹಕರು ಸೇರಿದಂತೆ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ “ವಾರ್ತಾಭವನ”ದಲ್ಲಿ ಶನಿವಾರ (ಏ.೨೫) ಕೋವಿಡ್-೧೯ ಗೆ ಸಂಬಂಧಿಸಿದಂತೆ ಆರೋಗ್ಯ ತಪಾಸಣೆ ನಡೆಸಲಾಯಿತು. ಈ …

Read More »

ಬೆಳಗಾವಿ ಜಿಲ್ಲೆಯ ಮತ್ತೆ ಮೂವರಿಗೆ ಸೊಂಕು…..54 ಕ್ಕೇರಿದ ಸೊಂಕಿತರ ಸಂಖ್ಯೆ

ಬೆಳಗಾವಿ ಜಿಲ್ಲೆಯ ಎಂಟು ವರ್ಷದ ಬಾಲಕ ಸೇರಿದಂತೆ ಬೆಳಗಾವಿ ಜಿಲ್ಲೆಯ ಮತ್ತೆ ಮೂವರಿಗೆ ಸೊಂಕು 54 ಕ್ಕೇರಿದ ಸೊಂಕಿತರ ಸಂಖ್ಯೆ ಎಂಟು ವರ್ಷದ   ಬಾಲಕ ಸೇರಿದಂತೆ ಬೆಳಗಾವಿ ಜಿಲ್ಲೆಯ ಮತ್ತೆ ಮೂವರಿಗೆ ಸೊಂಕು 54 ಕ್ಕೇರಿದ ಸೊಂಕಿತರ ಸಂಖ್ಯೆ ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದೆ ಎಂಟು ವರ್ಷದ ಬಾಲಕ ಸೇರಿದಂತೆ ಹಿರೇಬಾಗೇವಾಡಿಯ ಮೂವರಿಗೆ ಸೊಂಕು ತಗುಲಿ ರುವದು ದೃಡವಾಗಿದೆ ಇಂದು ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ …

Read More »

ಮೃತನಿಂದ ದಿನಸಿ ಕಿಟ್ ಪಡೆದಿದ್ದ ಮಹಿಳೆಗೂ ಅಂಟಿತು ಸೋಂಕು..!

ಚಿಕ್ಕಬಳ್ಳಾಪುರ, ಏ.25- ಮೃತ ಸೋಂಕಿತನ ಬಳಿ ದಿನಸಿ ಕಿಟ್ ಪಡೆದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ವಿವಿಧ ವಾರ್ಡ್‍ಗಳ ಜನತೆ ತಲ್ಲಣಗೊಂಡಿದ್ದಾರೆ.ಚಿಕ್ಕಬಳ್ಳಾಪುರ ನಗರದಲ್ಲಿ ಇದೀಗ ಮತ್ತೊರ್ವ 39 ವರ್ಷದ ಮಹಿಳೆಗೆ ಕೊರೊನಾ ಪಾಸಿಟಿವ್ ದೃಢಗೊಂಡ ನಂತರ , ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ ಮಾ.5ರಂದು ಈಕೆ ಕೊರೊನಾ ಸೋಂಕಿಗೆ ಬಲಿಯಾದ ವೃದ್ಧ ರೋಗಿ-250ರ ಮನೆಗೆ ತೆರಳಿ ದಿನಸಿ ಕಿಟ್ ಪಡೆದುಕೊಂಡಿದ್ದರು. ಈಕೆಗೆ ಕೊರೊನಾ ಸೋಂಕು ದೃಢವಾಗಿದ್ದು, …

Read More »

ಒಂದೇ ದಿನ 18 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈನಲ್ಲೇ 11 ಜನರನ್ನು ವೈರಾಣು ಹೊಸಕಿ ಹಾಕಿದೆ.

ಮುಂಬೈ, ಏ.25- ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿನ ಸಾವು ಮತ್ತು ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರ ನಂಬರ್ ಒನ್ ಹಾಟ್‍ಸ್ಪಾಟ್ ರಾಜ್ಯ ಎನಿಸಿದೆ. ರಾಜ್ಯದ ವಿವಿಧೆಡೆ ಕೊರೊನಾ ಹೆಮ್ಮಾರಿಯ ಮರಣ ಮೃದಂಗದ ಮಾರ್ದನಿ ಮುಂದುವರಿದಿದ್ದು, ಒಂದೇ ದಿನ 18 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈನಲ್ಲೇ 11 ಜನರನ್ನು ವೈರಾಣು ಹೊಸಕಿ ಹಾಕಿದೆ. ದೇಶದಲ್ಲಿ ಮಾರಕ ಕೋವಿಡ್-19 ಸೋಂಕಿನಿಂದ 24 ತಾಸುಗಳಲ್ಲಿ ಇಷ್ಟು ರೋಗಿಗಳು ಅಸುನೀಗಿರುವುದು ಇದೇ …

Read More »