ಕೋವಿಡ್ – 19ರ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಿರುವುದರಿಂದ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಜೂನ್ ಒಂದರವರೆಗೂ ಕಾಲಾವಕಾಶ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 4(1)ರ ನಿಯಮಗಳನ್ನು ಸಡಿಲಗೊಳಿಸಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ …
Read More »Yearly Archives: 2020
ಪ್ರತಿನಿತ್ಯ ಊರಿನ ಕಸವನ್ನ ಕೊಂಡೊಯ್ಯುವ ಆಟೋದಲ್ಲಿ ಪಡಿತರ ಅಕ್ಕಿಯನ್ನ ಸಾಗಿಸಿದ್ದಕ್ಕೆ ಆಕ್ರೋಶ
ಚಿಕ್ಕಮಗಳೂರು: ಪ್ರತಿನಿತ್ಯ ಊರಿನ ಕಸವನ್ನ ಕೊಂಡೊಯ್ಯುವ ಆಟೋದಲ್ಲಿ ಪಡಿತರ ಅಕ್ಕಿಯನ್ನ ಸಾಗಿಸಿದ್ದಕ್ಕೆ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ. ಕೊರೊನಾ ವೈರಸ್ ಕಾಟ ಆರಂಭವಾದಾಗಿನಿಂದ ದೇಶ ಸೇರಿದಂತೆ ಜಗತ್ತೇ ತತ್ತರಿಸಿ ಹೋಗಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಇಡೀ ದೇಶವೇ ಲಾಕ್ಡೌನ್ ಆಗಿದೆ. ಈ ಮಧ್ಯೆ ರಾಜ್ಯದಲ್ಲಿ ಜನಸಾಮಾನ್ಯರಿಗೆ ಪಡಿತರ ಸಮಸ್ಯೆ ಉದ್ಭವಿಸದಂತೆ ಸರ್ಕಾರ ಮುಂಗಡವಾಗಿ ಮೂರು ತಿಂಗಳ ಪಡಿತರ ಸಾಮಾಗ್ರಿಗಳನ್ನು ನೀಡಲು …
Read More »ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣ: ಚಿವ ರಮೇಶ ಜಾರಕಿಹೊಳಿ
ಬೆಳಗಾವಿ: ಕೊರೊನಾ ಸೋಂಕು ನಿರ್ಮೂಲನೆಗೆ ಹೆಜ್ಜೆ ಹಾಕುತ್ತಿರುವ ನಾವು ಏ.5ರಂದು ಪ್ರಧಾನಿ ನರೇಂದ್ರ ಮೋದಿಗೆ ಸಂದೇಶ ನೀಡಿದಂತೆ ದೀಪ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡೋಣವೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು,ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಂಡಿವೆ. ಈ ನಿಟ್ಟಿನಲ್ಲಿ ಜನರು ನಿಯಮಗಳನ್ನು ಪಾಲಿಸಬೇಕು ಎಂದರು. ಭಾರತವನ್ನು ಕೊರೊನಾ ಸೋಂಕು ಮುಕ್ತ ಮಾಡುವ ನಮ್ಮ ಸಂಕಲ್ಪ …
Read More »ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು: ಸಚಿವ ರಮೇಶ ಜಾರಕಿಹೊಳಿ
ಗೋಕಾಕ್: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದಾರೆ. ಆದ ಕಾರಣ ಎಲ್ಲ ಸಮುದಾಯದ ಜನರು ಸಹ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಜನರು ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳು ಹಾಗೂ ಸರ್ವ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಆದ ಕಾರಣ ಗೋಕಾಕ್ ತಾಲ್ಲೂಕಿನ …
Read More »ಒಟ್ಟು ಆರು ಮಾದರಿಗಳ ಪೈಕಿ ಎಲ್ಲ ಆರೂ ವರದಿಗಳು ನೆಗೆಟಿವ್ ಬಂದಿರುತ್ತವೆ : ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ
ಬೆಳಗಾವಿ, ಏ.೨(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಒಟ್ಟು ಆರು ಮಾದರಿಗಳ ಪೈಕಿ ಎಲ್ಲ ಆರೂ ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಿಂದ ಇದುವರೆಗೆ ಒಟ್ಟು ೨೭ ಮಾದರಿಗಳನ್ನು ಕಳಿಸಲಾಗಿತ್ತು. ಇಂದು ಬಂದಿರುವ ವರದಿಯ ಪ್ರಕಾರ ಎಲ್ಲ ೨೭ ಮಾದರಿಗಳು ನೆಗೆಟಿವ ಬಂದಿರುತ್ತವೆ ಎಂದು ತಿಳಿಸಿದ್ದಾರೆ. ಇದುವರೆಗೆ ೨೧ ಮಾದರಿಗಳ ವರದಿ …
Read More »ದುಬಾರಿ ಮದ್ಯ ಬಿಟ್ಟು ಕಡಿಮೆ ಬೆಲೆ ಬಿಯರ್, ಬ್ರ್ಯಾಂಡಿ ಕದ್ದೊಯ್ದ ಕಳ್ಳರು
ಗದಗ: ಕೊರೊನಾ ವೈರಸ್ ಅಟ್ಟಹಾಸಕ್ಕೆ ಇಡೀ ದೇಶವೇ ಲಾಕ್ಡೌನ್ ಆಗಿದೆ. ಇದರಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿದೆ. ಈ ಸಂದರ್ಭವನ್ನೇ ದುರುಪಯೋಗ ಮಾಡಿಕೊಂಡು ಕೆಲವರು ಮದ್ಯ ಕಳ್ಳತನಕ್ಕೆ ಮುಂದಾಗಿದ್ದಾರೆ. ಗದಗ ತಾಲೂಕಿನ ಕಳಸಾಪೂರ ಗ್ರಾಮದ ಹೊರವಲಯದ ನಾಗಾವಿ ರಸ್ತೆಯಲ್ಲಿರುವ ಎಂಎಸ್ಐಎಲ್ ಮದ್ಯದಂಗಡಿಯ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ವಿಚಿತ್ರ ಎಂದರೆ ಖದೀಮರು ತಮಗೆ ಇಷ್ಟವಾಗಿರುವ ಬಿಯರ್, ಬ್ರ್ಯಾಂಡಿ ಸೇರಿದಂತೆ ಇತರೆ ಕಡಿಮೆ ಬೆಲೆಯ ಮದ್ಯವನ್ನು ಮಾತ್ರ ಕಳ್ಳತನ ಮಾಡಿದ್ದಾರೆ. …
Read More »ಆಟೋ, ಕ್ಯಾಬ್ ಚಾಲಕರಿಗೆ 5 ಸಾವಿರ ರೂಪಾಯಿ ನೆರವು – ಕೇಜ್ರಿವಾಲ್ ಘೋಷಣೆ
ನವದೆಹಲಿ: ಲಾಕ್ಡೌನ್ ಹಿನ್ನೆಲೆ ಸಂಕಷ್ಟದಲ್ಲಿರುವ ಆಟೋ, ರಿಕ್ಷಾ, ಇ ರಿಕ್ಷಾ, ಕ್ಯಾಬ್ ಚಾಲಕರ ನೆರವಿಗೆ ನಿಂತಿರುವ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ರಿಕ್ಷಾ, ಆಟೋ, ಇ ರಿಕ್ಷಾ ಚಾಲಕರು, ಕ್ಯಾಬ್ ಚಾಲಕರಿಗೆ 5,000 ರೂಪಾಯಿಗಳ ನೆರವು ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಘೋಷಣೆ ಮಾಡಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಲಾಕ್ಡೌನ್ ಹಿನ್ನೆಲೆ ಆಟೋ ರಿಕ್ಷಾ ಚಾಲಕರಿಗೆ ಸಂಕಷ್ಟ …
Read More »ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಪಾಸಣೆಗೆ ಒಳಗಾಗಬೇಕು:ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು,ಏ.2-ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ. ಬೆಂಗಳೂರಿನ ಹೆಗಡೆನಗರದ ಬಳಿ ಬರುವ ಸಾಧಿಕ್ನಗರದಲ್ಲಿ ಆಶಾ ಕಾರ್ಯಕರ್ತೆಯರು ತಪಾಸಣೆ ಮಾಡುವ …
Read More »ರಾಮನವಮಿಗೆ ತಟ್ಟದ ಲಾಕ್ಡೌನ್ ಬಿಸಿ- ಮುಗಿಬಿದ್ದು ದರ್ಶನ ಪಡೆದ ರಾಮ ಭಕ್ತರು
ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆ ಇಡೀ ದೇಶವೇ ಲಾಕ್ಡೌನ್ ಆಗಿದೆ. ಎಲ್ಲಾ ದೇವಾಲಯಗಳು ಬಂದ್ ಆಗಿವೆ. ಆದರೆ ರಾಯಚೂರಿನಲ್ಲಿ ರಾಮನವಮಿಗೆ ಮಾತ್ರ ಲಾಕ್ಡೌನ್ ಬಿಸಿ ತಟ್ಟಲಿಲ್ಲ. ಬೆಳಗ್ಗೆಯಿಂದ ರಾಮ ಭಕ್ತರು ನಿರಂತರವಾಗಿ ದರ್ಶನ ಪಡೆದಿದ್ದಾರೆ. ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಮಮಂದಿರಲ್ಲಿ ಭಕ್ತರು ಯಾವ ಸಾಮಾಜಿಕ ಅಂತರವೂ ಕಾಯ್ದುಕೊಳ್ಳದೆ ಮುಗಿಬಿದ್ದು ದರ್ಶನ ಪಡೆದಿದ್ದಾರೆ. ಮಂದಿರದ ಮುಖ್ಯದ್ವಾರಕ್ಕೆ ಬೀಗ ಹಾಕಿದ್ದರೂ ಪಕ್ಕದ ಚಿಕ್ಕ ದ್ವಾರದಿಂದ ಭಕ್ತರ ಪ್ರವೇಶಕ್ಕೆ ಅರ್ಚಕರು ಅನುವು ಮಾಡಿಕೊಟ್ಟಿದ್ದಾರೆ …
Read More »ದೆಹಲಿಯ ಜಮಾತ್ ಸಭೆಯಿಂದ ದೇಶಾದ್ಯಂತ ಕೊರೊನಾ ಹರಡಿದ್ದು ಹೇಗೆ?
ತಬ್ಲಿಘಿ ಸಭೆಗೆ ಹಾಜರಾಗಿದ್ದ ತಮಿಳುನಾಡಿನ 264 ಮಂದಿಗೆ ಕೊರೊನಾ ನವದೆಹಲಿ: ದೇಶದ ಒಟ್ಟು ಕೊರೊನಾ ಸೋಂಕಿತರಲ್ಲಿ ಶೇ.20 ರಷ್ಟು ಜನರು ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದರವೇ ಆಗಿರುವುದು ಆಂತಕಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 19 ಮಂದಿ ವಿವಿಧ ರಾಜ್ಯಗಳಲ್ಲಿ ಸಾವನ್ನಪ್ಪಿದ್ದಾರೆ. ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ ಮೊದಲ ವಾರದಿಂದ ನಡೆದ ಸಭೆಯಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿ ಬಳಿಕ ಊರುಗಳಿಗೆ ತೆರಳಿದ್ದರು. …
Read More »