Breaking News
Home / 2021 / ಜನವರಿ / 01 (page 2)

Daily Archives: ಜನವರಿ 1, 2021

ಕೊಪ್ಪಳದ ಶಾಲೆಯಲ್ಲಿ ಹೂಮಳೆ ಸುರಿಸಿ ವಿದ್ಯಾರ್ಥಿಗಳಿಗೆ ಸ್ವಾಗತ

ಕೊಪ್ಪಳ: ಕೊರೊನಾ ಮಹಾಮಾರಿ ಶಾಲಾ ಮಕ್ಕಳಿಗೆ ಶಾಲೆಯ ಮುಖ ನೋಡದಂತೆ ಮಾಡಿತ್ತು. ಇದೀಗ ವೈರಸ್‌ನ ಅಬ್ಬರ ಕಡಿಮೆಯಾಗಿದ್ದು ಮಕ್ಕಳು ಸಂತಸದಿಂದ ಶಾಲೆಗೆ ಮರಳಿದ್ದಾರೆ. ಆದರೂ ಕೊರೊನಾ ಗುಮ್ಮ ಇನ್ನೂ ಇರುವುದರಿಂದ ಎಲ್ಲ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಳೆದ 10 ತಿಂಗಳಿಂದ ಬಂದ್ ಆಗಿದ್ದ ಶಾಲಾ ಕಾಲೇಜುಗಳು ಹೊಸ ವರ್ಷಕ್ಕೆ ಆರಂಭವಾದ ಹಿನ್ನೆಲೆಯಲ್ಲಿ ಒಂದಡೆ ಶಾಲೆಗಳಿಗೆ ತಳಿರು ತೋರಣಗಳಿಂದ ಶೃಂಗಾರಗೊಳಿಸುವ ಮೂಲಕ   ಸಾಮಾಜಿಕ ಅಂತರ ಪಾಲನೆ, ಥರ್ಮಲ್ ಸ್ಕ್ರೀನಿಂಗ್ ಸೇರಿ ಕೋವಿಡ್ …

Read More »

ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಈ ಮಾರ್ಗದ ರೈಲು ಸಂಚಾರ ಸ್ಥಗಿತ

ಶಿವಮೊಗ್ಗ: ಬೆಂಗಳೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಈ ಮಾರ್ಗದ ರೈಲು ಸಂಚಾರ ಸ್ಥಗಿತಗೊಂಡಿದೆ. ಹೊಸನಗರ ತಾಲೂಕಿನ ಅರಸಾಳು ಸಮೀಪ ರೈಲು ಹಳಿ ತಪ್ಪಿದೆ. ತಿರುವಿನಲ್ಲಿ ರೈಲು ನಿಧಾನವಾಗಿ ಚಲಿಸುತ್ತಿದ್ದ ಕಾರಣ ಸಂಭವನೀಯ ಅನಾಹುತ ತಪ್ಪಿದೆ. ಡ್ರಿಲ್ ಮೆಲ್ಟ್ ಕಟ್ ಆಗಿದ್ದೇ ಘಟನೆಗೆ ಕಾರಣವಾಗಿದ್ದು, ರೈಲ್ವೆ ಇಂಜಿನ್ ಗಾಲಿ ಹಳಿಯಿಂದ ಜಾರಿದೆ. ಪ್ರಯಾಣಿಕರಿಗೆ ರೈಲ್ವೆ ಇಲಕಹೆ ಪರ್ಯಾಯ ವ್ಯವಸ್ಥೆ ಮಾಡಿದೆ.

Read More »

ಸಾಮಾಜಿಕ ಜಾಲತಾಣದಲ್ಲಿ ನಾಡಧ್ವಜ ಅಭಿಯಾನಕ್ಕೆ ಭರ್ಜರಿ ಬೆಂಬಲ.!

ಬೆಳಗಾವಿ(ಡಿಸೆಂಬರ್​. ಮಹಾನಗರ ಪಾಲಿಕೆ ಮುಂದೆ ಕನ್ನಡ ಬಾವುಟ ಹಾರಾಟ ವಿಚಾರ ಈಗ ದೇಶ್ಯಾದ್ಯಂತ ಚರ್ಚೆ ಗೆ ಕಾರಣವಾಗಿದೆ. ಕನ್ನಡದ ಕಟ್ಟಾಳುಗಳು ದಶಕಗಳ ಕನ್ನಡಿಗರ ಕನಸನ್ನು ಸಾಕಾರಗೊಳಿಸಿದ್ದಾರೆ. ಹೀಗಿರುವಾಗ ನಾಡದ್ರೋಹಿಗಳು ಬೆಳಗಾವಿ ಪಾಲಿಕೆ ಮುಂದಿನ ಹಳದಿ ಕೆಂಪು ಧ್ವಜ ತೆರವು ಗೊಳಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದರು‌. ಎಂಇಎಸ್ ಪುಂಡರು ಒನ್ ನೇಷನ್ಸ್ ಒನ್ ಫ್ಲ್ಯಾಗ್ ಅಭಿಯಾನಕ್ಕೆ ಟ್ವಿಟರ್ ಅಭಿಯಾನಕ್ಕೆ ಈಗ ಕನ್ನಡಿಗರು ಗುದ್ದು ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರ ಅಭಿಯಾನಕ್ಕೆ …

Read More »

ಶಾಲಾ- ಕಾಲೇಜುಗಳ ಪುನರಾರಂಭ ಭರ್ಜರಿ ತಯಾರಿ

ಧಾರವಾಡ (ಜನವರಿ 1); ಎಸ್​ಎಸ್​ಎಲ್​ಸಿ  ಹಾಗೂ ದ್ವಿತೀಯ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಹಾಗೂ 6 ರಿಂದ 9 ನೇಯ ತರಗತಿ ಮಕ್ಕಳಿಗೆ ವಿದ್ಯಾಗಮ 2 ರ ಪ್ರಾರಂಭಕ್ಕೆ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ ,ಕಾಲೇಜುಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಅವರು ಶಹರ ಹಾಗೂ ಗ್ರಾಮೀಣ ಪ್ರದೇಶದ ಅನೇಕ ಶಾಲೆ,ಕಾಲೇಜುಗಳಿಗೆ ಭೇಟಿ ನೀಡಿ ಕೋವಿಡ್ 19 ರ ತಡೆಗೆ …

Read More »

ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಹೊಸ ವರ್ಷದ ಶುಭಕೋರಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಹೊಸ ವರ್ಷದ ಶುಭಕೋರಿದ್ದಾರೆ. ರಾಷ್ಟ್ರಪತಿ ಕೋವಿಂದ್‌, ‘ಎಲ್ಲರಿಗೂ ಹೊಸವರ್ಷದ ಶುಭಾಶಯಗಳು. ಹೊಸ ಆರಂಭ ಮಾಡಲು, ವೈಯಕ್ತಿಕ ಮತ್ತು ಸಾಮೂಹಿಕ ಅಭಿವೃದ್ಧಿಗೆ ನೆರವಾಗಲು ಹೊಸವರ್ಷವು ಅವಕಾಶ ಮಾಡಿಕೊಡುತ್ತದೆ. ಕೋವಿಡ್-19 ಸನ್ನಿವೇಶದಲ್ಲಿ ಎದುರಾದ ಸವಾಲುಗಳು, ಒಗ್ಗಟ್ಟಿನೊಂದಿಗೆ ಮುನ್ನಡೆಯುವ ನಮ್ಮ ಸಂಕಲ್ಪವನ್ನು ಬಲಪಡಿಸಿವೆ’ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. ‘ನಿಮಗೆ 2021ರ ಶುಭಾಶಯಗಳು! ಈ ವರ್ಷ ಉತ್ತಮ ಆರೋಗ್ಯ, ಸಂತಸ ಮತ್ತು ಸಮೃದ್ಧಿ …

Read More »

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ

ಬೆಂಗಳೂರು,ಜ.1-ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ವದಂತಿ, ಶಾಸಕರ ಅಸಮಾಧಾನ, ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಹೀಗೆ ಹತ್ತು ಹಲವು ಗೊಂದಲಗಳ ನಡುವೆಯೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಆಗಮಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದರೂ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳನ್ನು ಹೇಗೆ ನಿವಾರಿಸುತ್ತಾರೆ ಎಂಬುದುಯಕ್ಷ ಪ್ರಶ್ನೆಯಾಗಿದೆ. ಇಂದು ಸಂಜೆ ದೆಹಲಿಯಿಂದ ಆಗಮಿಸಲಿರುವ ಅರುಣ್ ಸಿಂಗ್ ಶಾಸಕರು, ಸಂಸದರು ಹಾಗೂ ಪದಾಧಿಕಾರಿಗಳನ್ನು ಭೇಟಿಯಾಗಿ …

Read More »

2021ನೇ ಇಸವಿಯ ಬ್ಯಾಂಕ್ ಗಳ ರಜಾ ದಿನದ ಪಟ್ಟಿ ಬಿಡುಗಡೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ (RBI) 2021ನೇ ಇಸವಿಯ ಬ್ಯಾಂಕ್ ಗಳ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಎಲ್ಲ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ ಗಳಿಗೆ ಭಾನುವಾರ ಹಾಗೂ ಪ್ರತಿ ತಿಂಗಳ ಎರಡು ಮತ್ತು ನಾಲ್ಕನೇ ಶನಿವಾರ ರಜಾ ಇರುತ್ತದೆ. ಹೊಸ ವರ್ಷದ ಪ್ರಯುಕ್ತ ಜನವರಿ 1, 2021ರಂದು ಚೆನ್ನೈ, ಐಜ್ವಾಲ್, ಗ್ಯಾಂಗ್ಟಕ್, ಇಂಫಾಲ್ ಮತ್ತು ಶಿಲ್ಲಾಂಗ್ ನಲ್ಲಿ ಬ್ಯಾಂಕ್ ಗಳಿಗೆ ರಜಾ ಇದೆ. ಉಳಿದ ಪ್ರಮುಖ ನಗರಗಳಲ್ಲಿ …

Read More »

ದೇಶಾದ್ಯಂತ ಕೋವಿಡ್-19 ಸೋಂಕಿನ ಚೇತರಿಕೆ ಪ್ರಮಾಣ ಶೇಕಡ 98.83ಕ್ಕೆ ಏರಿದೆ.

ನವದೆಹಲಿ: ದೇಶಾದ್ಯಂತ ಕೋವಿಡ್-19 ಸೋಂಕಿನ ಚೇತರಿಕೆ ಪ್ರಮಾಣ ಶೇಕಡ 98.83ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 23 ಸಾವಿರಕ್ಕಿಂತ ಅಧಿಕ ಸೋಂಕಿತರು ಗುಣಮುಖರಾಗಿ, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 98 ಲಕ್ಷದ 83 ಸಾವಿರಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 23,181 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯೊಂಡಿದ್ದು, ಇದರೊಂದಿಗೆ ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷದ …

Read More »

ಕರ್ನಾಟಕದಲ್ಲಿ ಉದ್ಯೋಗಾವಕಾಶಗಳ ಹೆಚ್ಚಿಸಲಿದೆ ತುಮಕೂರು ಕೈಗಾರಿಕಾ ನೋಡ್ ‌: ಜಗದೀಶ್‌ ಶೆಟ್ಟರ್

ಬೆಂಗಳೂರು : ಕರ್ನಾಟಕವನ್ನು ವಿಶ್ವದರ್ಜೆಯ ಔದ್ಯಮಿಕ ಜಾಲವಾಗಿ ಅಭಿವೃದ್ಧಿ ಪಡಿಸಲು ಚೆನೈ – ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನ ಭಾಗವಾಗಿ ತುಮಕೂರಿನಲ್ಲಿ ಕೈಗಾರಿಕಾ ನೋಡ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 1,701.81 ಕೋಟಿ ರೂ. ಮೀಸಲಿರಿಸಿದ್ದು, ಇದರಿಂದ ಅಂದಾಜು 88,500 ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡಿದ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌, ಪ್ರಧಾನಿ ನರೇಂದ್ರ ಮೋದಿ …

Read More »

ಹೊಸ ವರ್ಷದ ಮೊದಲ ಚಿತ್ರವಾಗಿ ತೆರೆಗಪ್ಪಳಿಸಲಿದೆ ‘ರಾಜತಂತ್ರ’

ಹೊಸ ವರ್ಷದ ಮೊದಲ ಚಿತ್ರವಾಗಿ ರಾಜತಂತ್ರ ಬೆಳ್ಳಿ ಪರದೆ ಮೇಲೆ ರಾರಾಜಿಸಲಿದೆ. ಕೊರೊನಾ ಹಾವಳಿಯಿಂದ ಇಡೀ ಚಿತ್ರೋದ್ಯಮವೇ ಕಂಗಾಲಾಗಿದ್ದು , ಈಗಷ್ಟೆ ಕೆಲವು ಹೊಸಬರ ಚಿತ್ರಗಳು ಬಿಡುಗಡೆಗೊಳ್ಳುತ್ತಿವೆ. ಸ್ಟಾರ್ ನಟರಗಳ ಚಿತ್ರ ನಿರೀಕ್ಷೆಯಲ್ಲಿ ಅಭಿಮಾನಿಗಳು ಕಾಯುತ್ತಿದ್ದಾರೆ.  ಇದೆ ಹುಮ್ಮಸ್ಸಿನೊಂದಿಗೆ ರಾಜ್ಯ ಪ್ರಶಸ್ತಿ ವಿಜೇತ ರಾಘವೇಂದ್ರ ರಾಜಕುಮಾರ್ ನಟಿಸಿರುವ ರಾಜತಂತ್ರ ಸಿನಿಮಾ ಇದೀಗ ರಾಜ್ಯಾದ್ಯಂತ ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆP್ಸï ಗಳಲ್ಲಿ ಬಿಡುಗಡೆಗೊಳ್ಳುತ್ತಿದೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು …

Read More »