Breaking News
Home / 2021 / ಜನವರಿ / 03 (page 2)

Daily Archives: ಜನವರಿ 3, 2021

ಚಾಮರಾಜನಗರಕ್ಕೆ ಸಿಎಂ ಭೇಟಿ ನೀಡದಿದ್ದರೆ ಹೈಕೋರ್ಟ್​ನಲ್ಲಿ ದಾವೆ: ವಾಟಾಳ್ ನಾಗರಾಜ್ ಎಚ್ಚರಿಕೆ

ಚಾಮರಾಜನಗರ (ಜನವರಿ 02); ಚಾಮರಾಜನಗರಕ್ಕೆ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ಭೇಟಿ ನೀಡದಿದ್ದಲ್ಲಿ ಅವರ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡುವುದಾಗಿ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರಕ್ಕೆ ಮುಖ್ಯಮಂತ್ರಿ ಭೇಟಿ ನೀಡಬೇಕು ಎಂದು ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ  ವಾಟಾಳ್ ನಾಗರಾಜ್  ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ಕೆಲ ಕಾಲ ಬಸ್ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಶಿವಮೊಗ್ಗಕ್ಕೆ ಲೆಕ್ಕವಿಲದಷ್ಟು ಬಾರಿ ಹೋಗಿದ್ದಾರೆ. ಬೇರೆ …

Read More »

ಸರಿಗಮಪ ಚೆನ್ನಪ್ಪ ಹುದ್ದಾರ್ ಎಲ್ಲಿ ಕಾಣೆಯಾಗಿದ್ದಾರೆ?

ಸರಿಗಮಪ ಚೆನ್ನಪ್ಪ ಹುದ್ದಾರ್ ಎಲ್ಲಿ ಕಾಣೆಯಾಗಿದ್ದಾರೆ? ಜೀ ಕನ್ನಡ ಸಿರಿಗಮಪ ಸೀಸನ್‌ 11ರ ವಿಜೇತ ಚನ್ನಪ್ಪ ಹುದ್ದಾರ್ ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ ಮಾಡಿದ ನಂತರ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ ಎಂಬುದು ನೆಟ್ಟಿಗರ ಆರೋಪ. ಚನ್ನಪ್ಪ ಏನು ಮಾಡುತ್ತಿದ್ದಾರೆ ಎಂಬುದಕ್ಕೆ ಕ್ಲಾರಿಟಿ ಇಲ್ಲಿದೆ ನೋಡಿ. ಚೆನ್ನಪ್ಪ ಹುದ್ದಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಹಿನ್ನೆಲೆ ಗಾಯಕ. ಇವರು ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಸರಿಗಮಪ ಕಾರ್ಯಕ್ರಮದ 11 ನೇ ಸೀಸನ್ ನ ವಿಜೇತರು. ಈ …

Read More »

ಖ್ಯಾತ ಗಾಯಕಿ ಅನನ್ಯಾ ಭಟ್ ಹೊಸ ಸಿನಿಮಾವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲು ಸಜ್ಜಾಗಿದ್ದಾರೆ.

ತಮ್ಮ ಮಧುರವಾದ ಧ್ವನಿಯಿಂದ ಸಾಕಷ್ಟು ಜನಪ್ರಿಯತೆ ಪಡೆದಿರುವ ‘ಸೋಜುಗಾದ ಸೂಜು ಮಲ್ಲಿಗೆ’ ಖ್ಯಾತಿಯ ಗಾಯಕಿ ಅನನ್ಯಾ ಭಟ್ ಹೊಸ ಸಿನಿಮಾವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ ‘ಸೇನಾಪುರ’ ಎಂಬ ಟೈಟಲ್ ಇಟ್ಟಿದ್ದು, ಈ ಚಿತ್ರದಲ್ಲಿ ಅನನ್ಯಾ ಭಟ್ ಸೇರಿದಂತೆ ಗಿರಿರಾಜ್, ದಿನೇಶ್ ಮಂಗಳೂರು, ಪವನ್ ಕುಮಾರ್, ಶೇಖರ್, ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಗುರು ಸವನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಅಮಿತ್ ಕುಮಾರ್ ಹಾಗೂ ರಾಹುಲ್ …

Read More »

4 ಕೆಜಿ ಚಿನ್ನವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ): 2.25 ಕೋಟಿ ರೂ. ಮೊತ್ತದ 4 ಕೆಜಿ ಚಿನ್ನವನ್ನು ಕಳ್ಳತನ ಮಾಡಿದ್ದ ಅಂತರ್ ರಾಜ್ಯ ಕಳ್ಳರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ, ದೆಹಲಿ, ಹರಿಯಾಣಗಳಿಂದ ಕರ್ನಾಟಕಕ್ಕೆ ಬಂದು ಸರಣಿ ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ ಸಿಸಿಬಿ ಪೊಲೀಸರು 4 ಕೆ.ಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಫಯೂಮ್ ಹಾಗೂ ಮುರಸಲೀಂ ಮೊಹಮದ್ ಬಂಧಿತ ಆರೋಪಿಗಳಾಗಿದ್ದಾರೆ. ಉತ್ತರ ಪ್ರದೇಶ, ದೆಹಲಿ, ಹರಿಯಾಣ …

Read More »

ಯುವಕನೋರ್ವ ಹಲ್ಲುಜ್ಜುತ್ತಾ ಟೂಥ್ ಬ್ರಶ್ ನುಂಗಿರುವ ವಿಚಿತ್ರ ಘಟನೆ

ಮುಂಬೈ: ಯುವಕನೋರ್ವ ಹಲ್ಲುಜ್ಜುತ್ತಾ ಟೂಥ್ ಬ್ರಶ್ ನುಂಗಿರುವ ವಿಚಿತ್ರ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದೆ. ವಿಜಯ್ ಜನಾರ್ಧನ್ ಬ್ರಶ್ ನುಂಗಿದ ಯುವಕ. ಡಿಸೆಂಬರ್ 26ರಂದು ಬೆಳಗ್ಗೆ ಹಲ್ಲುಜ್ಜುವಾಗ ಬ್ರಶ್ ನುಂಗಿದ್ದಾನೆ. ಕೆಲ ಸಮಯದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಾಗ ವಿಜಯ್ ನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ಮಾಡಿದಾಗ ಅವರಿಗೂ ಗೊತ್ತಾಗಿಲ್ಲ. ಸಿಟಿ ಸ್ಕ್ಯಾನ್ ಮಾಡಿದಾಗ ಟೂಥ್‍ಬ್ರಶ್ ಕಂಡಿದ್ದು, ತಡಮಾಡದೇ ಶಸ್ತ್ರಚಿಕಿತ್ಸೆ ನಡೆಸಿ ಯುವಕನ ಜೀವ …

Read More »

ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವದೃಢವಾದ ಹೆಜ್ಜೆಯನ್ನು ಇರಿಸಿದೆ ರಂಗಾಯಣ:B.S.Y.

ಶಿವಮೊಗ್ಗ, : ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಕಳೆದ 10 ವರ್ಷಗಳಲ್ಲಿ ದೃಢವಾದ ಹೆಜ್ಜೆಯನ್ನು ಇರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಶನಿವಾರ ಶಿವಮೊಗ್ಗ ರಂಗಾಯಣದ ನೂತನ ವೆಬ್‍ಸೈಟ್ ಅನಾವರಣಗೊಳಿಸಿ ಅವರು ಮಾತನಾಡಿದರು. ಶಿವಮೊಗ್ಗ ರಂಗಾಯಣ ನಿರಂತರ ರಂಗ ಚಟುವಟಿಕೆಗಳ ಮೂಲಕ ರಂಗಾಸಕ್ತರನ್ನು ಸೆಳೆಯುತ್ತಿದೆ. ರಂಗಸಂಕ್ರಾಂತಿ ರಾಷ್ಟ್ರೀಯ ನಾಟಕೋತ್ಸವ, ವಿಶ್ವಮಾನವ ಅಂತಾರಾಷ್ಟ್ರೀಯ ರಂಗೋತ್ಸವ, ವಿಶ್ವರಂಗಭೂಮಿ ದಿನಾಚರಣೆ, ರೆಪರ್ಟರಿಯ ಹಲವಾರು ನಾಟಕಗಳನ್ನು ರಂಗತೇರು ಹೆಸರಿನಲ್ಲಿ ರಾಜ್ಯದಾದ್ಯಂತ ಪ್ರದರ್ಶನ …

Read More »

ಸಚಿವ ಜಗದೀಶ್ ಶೆಟ್ಟರ್ ಭಾರಿ ಅಪಾಯವೊಂದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.

ಹುಬ್ಬಳ್ಳಿ – ಮಾಜಿ ಮುಖ್ಯಮಂತ್ರಿ, ಹಾಲಿ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಭಾರಿ ಅಪಾಯವೊಂದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ವಿವಿಧ ಕಾಮಗಾರಿಗಳ ವೀಕ್ಷಣೆ ವೇಳೆ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ರೈಲ್ವೆ ಕೆಳ ಸೇತುವೆ ಕಾಮಗಾರಿ ವೀಕ್ಷಿಸಲು ಜಗದೀಶ ಶೆಟ್ಟರ್ ತೆರಳಿದ್ದರು. ಅವರು ವೀಕ್ಷಣೆ ಮಾಡಿ ಹೊರಬಂದ ತಕ್ಷಣ ಅಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಜಗದೀಶ್ ಶೆಟ್ಟರ್ ಹಾಗೂ ಅವರ ಜೊತೆಯಲ್ಲಿದ್ದವರೆಲ್ಲ ಸ್ವಲ್ಪದರಲ್ಲಿ ಈ ಅವಘಡದಿಂದ ಪಾರಾಗಿದ್ದಾರೆ. …

Read More »