Breaking News

Daily Archives: ಜನವರಿ 5, 2021

ಬೇಟೆಗೆ ಕಾಯ್ತಿದ್ದಾನೆ ರಣ ಬೇಟೆಗಾರ

ಬೆಂಗಳೂರು: ಕೆಜಿಎಫ್ ಮೊದಲ ಭಾಗ ನೋಡಿದವರು ಹಲವು ಪ್ರಶ್ನೆಗಳ ಜೊತೆ ಸಿನಿಮಾ ಮಂದಿರದಿಂದ ಹೊರ ಬಂದಿರ್ತಾರೆ. ಆ ಪ್ರಶ್ನೆಗಳ ಉತ್ತರ ಕಂಡುಕೊಳ್ಳಲು ಕೆಜಿಎಫ್-2ರ ನೋಡುವ ತವಕಲ್ಲಿದೆ ಅಭಿಮಾನಿ ಬಳಗ. ಜನವರಿ 8ರಂದು ಅಂದ್ರೆ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನ ಕೆಜಿಎಫ್ ಚಾಪ್ಟರ್ 2ರ ಟೀಸರ್ ಅನಾವರಣಗೊಳ್ಳಲಿದೆ. ಟೀಸರ್ ನಲ್ಲಿ ಕೆಲ ಪ್ರಶ್ನೆಗಳಿಗೆ ಉತ್ತರ ಸಿಗಬಹುದು ಎಂಬ ಸಣ್ಣದಾದ ಸುಳಿವನ್ನ ನಿರ್ದೇಶಕ ಪ್ರಶಾಂತ್ ನೀಲ್ ನೀಡಿದ್ದಾರೆ. ಪ್ರಶಾಂತ್ ನೀಲ್ ಕಲ್ಪನೆಯ …

Read More »

ಮಲಗಿದ್ದ ಪತಿಯ ಕತ್ತು ಹಿಸುಕಿ ಕೊಂದು ಮೂರು ಮಕ್ಕಳನ್ನ ಬಾವಿಗೆ ತಳ್ಳಿ ಮಹಿಳೆ ಆತ್ಮಹತ್ಯೆಗೆ ಯತ್ನ

ರಾಯ್ಪುರ: ಮಲಗಿದ್ದ ಪತಿಯ ಕತ್ತು ಹಿಸುಕಿ ಕೊಂದು ಮೂರು ಮಕ್ಕಳನ್ನ ಬಾವಿಗೆ ತಳ್ಳಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಛತ್ತೀಸಗಢದ ಗೌರ್ಲಾ-ಪೆಂಡ್ರಾ-ಮರವಾಹಿಯಲ್ಲಿ ನಡೆದಿದೆ. ಮಕ್ಕಳು ಬಾವಿಗೆ ತಳ್ಳಿದ ನಂತರ ತಾನು ಜಿಗಿದಿದ್ದಾಳೆ. ಮಕ್ಕಳು ಮತ್ತು ಮಹಿಳೆಯ ಧ್ವನಿ ಕೇಳಿದ ಸ್ಥಳೀಯರು ನಾಲ್ವರನ್ನ ರಕ್ಷಿಸಿದ್ದಾರೆ. ವಿದ್ಯಾ ಪೈಕರಾ (32) ಪತಿಯನ್ನ ಕೊಂದ ಮಹಿಳೆ. ಅಮಾಮಡಂಡಾ ನಿವಾಸಿಯಾಗಿರುವ ಮಹಿಳೆ ಪತಿ ಅನರೂಪ್ ಸಿಂಗ್ (35) ಮಲಗಿದ್ದ ವೇಳೆ ಬಟ್ಟೆಯಿಂದ ಆತನ ಕತ್ತು ಹಿಸುಕಿ …

Read More »

ಬಿಎಸ್‍ವೈ ವಿರುದ್ಧ ತನಿಖೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದ್ದು, ಯಡಿಯೂರಪ್ಪ ಅವರಿಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು,ಜ.5- ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಎಫ್‍ಐಆರ್ ರದ್ದುಪಡಿಸಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 2015ರಲ್ಲಿ ಮಠದ ಬಳಿ 1.1 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್‍ಐಆರ್‍ನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.ಬಿಎಸ್‍ವೈ …

Read More »

ನಟ ಸಲ್ಮಾನ್‍ಖಾನ್ ಸೋದರರ ಮೇಲೆ ಎಫ್‍ಐಆರ್

ಮುಂಬೈ, ಜ.5- ಬಾಲಿವುಡ್‍ನ ಖ್ಯಾತ ನಟ  ಸಲ್ಮಾನ್‍ಖಾನ್ ಸಹೋದರರ ಮೇಲೆ ಮುಂಬೈ ಪಾಲಿಕೆ ವತಿಯಿಂದ ಎಫ್‍ಐಆರ್ ದಾಖಲು ಮಾಡಲಾಗಿದೆ. ರೂಪಾಂತರ ಕೊರೊನಾದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಲ್ಲು ಸಹೋದರರು ದುಬೈನಿಂದ ಬಂದಿದ್ದರಿಂದ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು. ಸಲ್ಲು ಸಹೋದರರಾದ ಸೊಹೈಲ್‍ಖಾನ್, ಅರ್ಬಾಜ್‍ಖಾನ್ ಹಾಗೂ ಅರ್ಬಾಜ್ ಪುತ್ರ ಅಬ್ರಹಾಂ ಅವರನ್ನು ಮುಂಬೈನ ಹೊಟೇಲ್ ಒಂದರಲ್ಲಿ ಕ್ವಾರಂಟೈನ್ ಮಾಡಲು ಮುಂಬೈ ಪಾಲಿಕೆ ಸೂಚಿಸಿತ್ತು. ಆದರೆ ಡಿಸೆಂಬರ್ 25 ರಂದು ಅವರು …

Read More »

ಸಚಿವ ಭೈರತಿ ಬಸವರಾಜ ಬೆಳಗಾವಿಗೆ

ಬೆಂಗಳೂರು – ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಮಹಾನಗರಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಬುಧವಾರ, ಗುರುವಾರ ಮತ್ತು ಶುಕ್ರವಾರ ಅವರು ತುಮಕೂರು, ಹುಬ್ಬಳ್ಳಿ -ಧಾರವಾಡ ಹಾಗೂ ಬೆಳಗಾವಿ ಮಹಾನಗರದ ಸ್ಮಾರ್ಟ್ ಸಿಟಿ ಕಾಮಗಾರಿ, ಮಹಾನಗರ ಪಾಲಿಕೆ ಅಭಿವೃದ್ಧಿ ಯೋಜನೆಗಳು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಪರಿಶೀಲನೆ ನಡೆಸುವರು. ಬುಧವಾರ ಬೆಳಗ್ಗೆ 10.30ರಿಂದ 2 ಗಂಟೆಯವರೆಗೆ ತುಮಕೂರು ನಗರದ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ನಂತರ ಮಗರಾಭಿವೃದ್ಧಿ …

Read More »

ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ

ಬೆಳಗಾವಿ – ​ರಸ್ತೆ ಸೇರಿದಂತೆ ಯಾವುದೇ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಎಲ್ಲ ಕಾಮಗಾರಿಗಳೂ ಸಮರ್ಪಕವಾಗಿ ನಡೆಯಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ. ​ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಣ್ಣೂರ, ಉಚಗಾಂವ ಹಾಗೂ ಗೋಜಗಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿ ನಿರ್ಮಾಣದ ಕಾಮಗಾರಿಗಳನ್ನು ಖುದ್ದಾಗಿ ಪರಿಶೀ​ಲಿ​​ಸಿ​ದ ಅವರು, ಕಾಮಗಾರಿಯ ಗುಣಮಟ್ಟ​ದ ಬಗ್ಗೆ​ ಚರ್ಚಿಸಿ​,​ ನಿಗದಿತ ಸಮಯದಲ್ಲಿ ಪೂರ್ಣಗೊಳಿಸು​ವಂ​​ತೆ ಸೂಚನೆಯನ್ನು ನೀಡಿ​ದರು.   ​ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ. ನಿಗದಿತ ಗುರಿ …

Read More »

ಬೆಳಗಾವಿ ಜಿಲ್ಲೆ ಮತ್ತು ಇಡೀ ರಾಜ್ಯದಲ್ಲಿ ಈಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯೇ ಬಿಜೆಪಿಯಲ್ಲಿ ಪವರ್ ಫುಲ್ ಲೀಡರ್.

ಬೆಳಗಾವಿ – ಬೆಳಗಾವಿ ಜಿಲ್ಲೆ ಮತ್ತು ಇಡೀ ರಾಜ್ಯದಲ್ಲಿ ಈಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯೇ ಬಿಜೆಪಿಯಲ್ಲಿ ಪವರ್ ಫುಲ್ ಲೀಡರ್. ಬೆಳಗಾವಿ ಜಿಲ್ಲೆಯ ಎರಡು ಕಡೆ ಸೇರಿದಂತೆ ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಜನಸೇವಕ ಸಮಾವೇಶವೂ ಸೇರಿದಂತೆ ಇತ್ತೀಚಿನ ಹಲವು ಬೆಳವಣಿಗೆಗಳು ಇದಕ್ಕೆ ಪುಷ್ಠಿ ನೀಡುತ್ತವೆ. ರಮೇಶ್ ಜಾರಕಿಹೊಳಿ ಮುಂದೆ ಬಿಜೆಪಿಯ ಇತರ ನಾಯಕರೆಲ್ಲ ಈಗ ಗೌಣರಾಗುತ್ತಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ …

Read More »

ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಬೆಂಗಳೂರು: ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ನೇತೃತ್ವದಲ್ಲಿ ಜ.20ರ ನಂತರ ಉಚಿತ ನೇತ್ರ ತಪಾಸಣೆ ಮತ್ತು ಕನ್ನಡ ವಿತರಣೆ ನಡೆಯಲಿದೆ. ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿದೋಷ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಈ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ವಿದ್ಯಾಗಮ ತರಗತಿಗಳಿಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. 6-10ನೇ ತರಗತಿ ಮಕ್ಕಳು ವಯೋಸಹಜ …

Read More »

ಬೆಳಗಾವಿ, ಚಿಕ್ಕೋಡಿಯಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ದೃಢ

ಬೆಳಗಾವಿ: ಶಾಲೆ-ಕಾಲೇಜು ಪುನರಾರಂಭದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಬೆಳಗಾವಿ, ಚಿಕ್ಕೋಡಿಯಲ್ಲಿ 20ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ಗ್ರಾಮೀಣ ಭಾಗದ 9, ಬೆಳಗಾವಿ ನಗರ ವಲಯದ 4 , ಕಿತ್ತೂರು 1, ರಾಮದುರ್ಗದಲ್ಲಿ 3 ಶಿಕ್ಷಕರಿಗೆ  ಸೇರಿದಂತೆ ಒಟ್ಟು 18 ಶಿಕ್ಷಕರಿಗೆ ಕೋವೀಡ್ ಸೊಂಕು  ದೃಢವಾಗಿದೆ. ಹುಕ್ಕೇರಿಯ 2 , ರಾಯಬಾಗದ 2 ಶಿಕ್ಷಕರಿಗೆ ಸೊಂಕು ತಗುಲಿದ್ದು ಒಟ್ಟಾರೆ ಬೆಳಗಾವಿ ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು …

Read More »

ಕರ್ನಾಟಕದಲ್ಲಿ ಜ. 8ರವರೆಗೆ ಮಳೆ; ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಹಳದಿ ಅಲರ್ಟ್​

ಬೆಂಗಳೂರು (ಜ. 5): ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಇನ್ನೇನು 2 ತಿಂಗಳು ಕಳೆದರೆ ಬೇಸಿಗೆಯೂ ಶುರುವಾಗಲಿದೆ. ಆದರೂ ಕರ್ನಾಟಕದಲ್ಲಿ ಮಳೆ ಮಾತ್ರ ನಿಂತಿಲ್ಲ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ 2 ದಿನಗಳ ಹಿಂದೆ ಭಾರೀ ಮಳೆಯಾಗಿ, ಅವಾಂತರಗಳನ್ನು ಸೃಷ್ಟಿಸಿತ್ತು. ಇದೀಗ ಮತ್ತೆ ರಾಜ್ಯಾದ್ಯಂತ 3 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆಯಲ್ಲಿ ಜ. 8ರವರೆಗೆ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಹಳದಿ …

Read More »