Breaking News

Daily Archives: ಜನವರಿ 14, 2021

ಮಕರ ಸಂಕ್ರಾಂತಿ’ಯು ‘ಉತ್ತರಾಯಣ ಪುಣ್ಯಕಾಲ’ವೇ.? ಇಲ್ಲಿದೆ ನಿಮ್ಮ ಅನುಮಾನಕ್ಕೆ ಉತ್ತರ.!

ಈ ಪ್ರಶ್ನೆಗೆ ‘ಅಲ್ಲ’ ಎಂದವರನ್ನು ‘ಅವಿವೇಕಿಗಳು’ ‘ಹುಚ್ಚರು’ ಎಂದು ಕರೆಯುವ ಕಾಲಘಟ್ಟದಲ್ಲಿ ನಾವಿಂದು ಬದುಕುತ್ತಿದ್ದೇವೆ ಎಂಬುದು ಸುಳ್ಳಲ್ಲ. ಆದರೆ ಬಹಳಷ್ಟು ಜನ ‘ಅವಿವೇಕ’ ‘ಹುಚ್ಚು’ ಎಂದ ಮಾತ್ರಕ್ಕೆ ಒಂದು ಸಂಗತಿ ಅವಿವೇಕದ್ದಾಗುವುದಿಲ್ಲ ಮತ್ತು ಅದನ್ನು ಪ್ರತಿಪಾದಿಸುವವನು ಅವಿವೇಕಿ ಆಗುವುದಿಲ್ಲ ಎಂಬುದೂ ಸುಳ್ಳಲ್ಲ. ಮಕರ ಸಂಕ್ರಾಂತಿಯನ್ನು ಉತ್ತರಾಯಣ ಪುಣ್ಯಕಾಲವೆಂದು ಸಂಭ್ರಮಿಸುವ ಘಟನೆಯ ವಿಶ್ಲೇಷಣೆಗೆ ತೊಡಗುವ ಮುನ್ನ ಇಂಥದ್ದೊಂದು ತಿಳಿವಳಿಕೆ ನಮಗಿರಬೇಕೆಂಬ ಕಾರಣದಿಂದ ಈ ಪ್ರಸ್ತಾಪಮಾಡಿದೆನಷ್ಟೆ. ಪ್ರತಿವರ್ಷದಂತೆ ಇವತ್ತು ಜನವರಿ ಹದಿನಾಲ್ಕು. ಮಕರ …

Read More »

53 ವರ್ಷಗಳ ಅನುಭವದಲ್ಲಿ ಇದೇ ಮೊದಲು; ಮೋಡ ಅಡ್ಡ ಬಂದಿದ್ದರಿಂದ ಯುದ್ಧಕಾಂಡ ನಡೆಯಬಹುದು’

ಬೆಂಗಳೂರು: ಗವಿಗಂಗಾಧರೇಶ್ವರನ ಸೂರ್ಯ ರಶ್ಮಿ ಸ್ಪರ್ಶಕ್ಕೆ ಮೋಡ ಅಡ್ಡವಾಗಿದೆ. ಭಾಸ್ಕರನು ಅಗೋಚರವಾಗಿ ಲಿಂಗ ಸ್ಪರ್ಶಿಸಿ ಹಾದುಹೋಗಿದ್ದಾನೆ. ಈ ಬಗ್ಗೆ, ಗವಿಗಂಗಾಧರೇಶ್ವರ ದೇಗುಲದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಮಾಹಿತಿ ನೀಡಿದ್ದಾರೆ. ದೈವ ನಿರ್ಣಯ ದೇವರಿಗೆ ಮಾತ್ರ ಗೊತ್ತಿರುತ್ತದೆ. ನನ್ನ 53 ವರ್ಷಗಳ ಅನುಭವದಲ್ಲಿ ಇದೇ ಮೊದಲ ಬಾರಿ ಹೀಗಾಗುತ್ತಿದೆ. ಕಳೆದ ವರ್ಷ ಈಶ್ವರನ ಮೇಲೆ 2.36 ನಿಮಿಷ ಸೂರ್ಯ ಕಿರಣವಿತ್ತು. ಹಾಗಾಗಿ, ಕಳೆದ ವರ್ಷ ಕೊರೊನಾ ಇಡೀ ವಿಶ್ವವನ್ನು ಕಾಡಿತ್ತು. …

Read More »

ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ: ಪುಳಕಗೊಂಡ ಭಕ್ತಸಾಗರ

ಶಬರಿಮಲೆ : ಪ್ರತಿವರ್ಷದಂತೆ ಸಂಕ್ರಾಂತಿಯಂದು ಮಕರ ಜ್ಯೋತಿ ದರ್ಶನ ಶಬರಿಮಲೆಯಲ್ಲಿ ಇಂದು ಆಗಿದೆ. ಕೇವಲ 5 ಸಾವಿರ ಭಕ್ತರಿಗೆ ಮಾತ್ರವೇ ಅವಕಾಶವಿದ್ದ ನಡುವೆಯೂ ಶಬರಿಮಲೆಯಲ್ಲಿ ಅಯ್ಯಪ್ಪನ ಭಕ್ತರು ಮಕರ ಜ್ಯೋತಿಯ ದರ್ಶನವನ್ನು ಪಡೆದರು. ಶಬರಿಮಲೆಯಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳ ಮೂಲಕ ಕೇವಲ 5 ಸಾವಿರ ಅಯ್ಯಪ್ಪನ ಭಕ್ತರಿಗೆ ಮಾತ್ರವೇ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇಂದು ಸಂಕ್ರಾಂತಿಯ ದಿನವಾದ್ದರಿಂದ ಅಯ್ಯಪ್ಪನ ಭಕ್ತರು ಶಬರಿಮಲೆಗೆ ಆಗಮಿಸಿದ್ದರು. ಇಂತಹ ಭಕ್ತರಿಗೆ ಮೂರು ಬಾರಿ …

Read More »

ಡ್ರಗ್ಸ್ ಪ್ರಕರಣ ಕೌಶಲಾಭಿವೃದ್ಧಿ ಸಚಿವ ಸೋದರಳಿಯ ನನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಕೌಶಲಾಭಿವೃದ್ಧಿ ಸಚಿವ ನವಾಬ್ ಮಲ್ಲಿಕ್ ಸೋದರಳಿಯ ಸಮೀರ್ ಖಾನ್ ನನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಸಮೀರ್ ಖಾನ್ ಬ್ರಿಟಿಷ್ ಮೂಲದ ಕರಣ್ ಸಜ್ನಾನಿ ಎಂಬಾತನ ಜೊತೆ ಡ್ರಗ್ಸ್ ಗೆ ಸಂಬಂಧಿಸಿದಂತೆ ವ್ಯವಹಾರ ನಡೆಸಿರುವ ಬಗ್ಗೆ ಎನ್ ಸಿಬಿ ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಸಮೀರ್ ಬಂಧನವಾಗಿದೆ. ಕಳೆದ ವಾರವಷ್ಟೇ ಕರಣ್ ಹಾಗೂ ಇಬ್ಬರು ಮಹಿಳೆಯರನ್ನು ಎನ್ ಸಿಬಿ ವಶಕ್ಕೆ ಪಡೆದುಕೊಂಡಿತ್ತು. …

Read More »

ನೋಡಲು ಆಗದಂತಹ ಸಿಡಿಗಳೂ ಇವೆ : ಯತ್ನಾಳ್

ಬಾಗಲಕೋಟೆ: ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಶಾಸಕರ ಅಸಮಾಧಾನ ಭುಗಿಲೆದ್ದಿದ್ದು, ಸಿಡಿ ವಿಚಾರನ್ನಿಟ್ಟುಕೊಂಡು ಸಿಎಂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಸ್ವಪಕ್ಷೀಯ ಶಾಸಕರೇ ಒಂದರ ಮೇಲೊಂದರಂತೆ ಆರೋಪಗಳನ್ನು ಮಾಡುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆ ಕೂಡಲಸಂಗಮದಲ್ಲಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪನವರ ಭ್ರಷ್ಟಾಚಾರ ಸಿಡಿ ಮಾತ್ರವಲ್ಲ, ನೋಡಲು ಆಗದಂತಹ ಸಿಡಿಗಳೂ ಇವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ನನ್ನ ಬಳಿ ಬಂದಿದ್ದ 3 ಶಾಸಕರ ಬಳಿ ಆ ಸಿಡಿಗಳಿವೆ. ಆದರೆ ನಾನು ಅಂಥಹ …

Read More »

ಯತ್ನಾಳ್ ಸೇರಿದಂತೆ ಹಲವರ ಬಳಿ ಸಿಡಿ ಇದೆ : ಸಂಕ್ರಾಂತಿಯ ಬಳಿಕ ಒಬ್ಬೊಬ್ಬರಾಗಿ ಸಿಡಿ ಬಿಡುಗಡೆ – ಹೆಚ್ ವಿಶ್ವನಾಥ್ ಹೊಸ ಬಾಂಬ್

ರಾಯಚೂರು : ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರ ಬಳಿ ಸಿಡಿ ಇದೆ. ಸಂಕ್ರಾಂತಿ ಬಳಿಕ ಒಬ್ಬೊಬ್ಬರಾಗಿ ಸಿಡಿ ಬಿಡುಗಡೆ ಮಾಡ್ತಾರೆ ಎಂಬುದಾಗಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಎಂ.ಎಲ್.ಸಿ ಹೆಚ್.ವಿಶ್ವನಾಥ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿ ಸಿಡಿ ಇದೆ. ಸಂಕ್ರಾಂತಿ ಬಳಿಕ ಸಿಡಿ ಬಿಡುಗಡೆ ಆಗುತ್ತೆ. ಯತ್ನಾಳ್ ಸೇರಿ ಹಲವರ ಬಳಿ ಸಿಡಿ ಇದೆ. ಒಬ್ಬೊಬ್ಬರಾಗಿ …

Read More »

ಐವರಿಗೆ ಜೀವದಾನ ಮಾಡಿ ‘ಸಾವಿನ ಬಳಿಕ ಮರು ಜನ್ಮ ಪಡೆದ ’20 ತಿಂಗಳ ಕಂದಮ್ಮ’.! ಭಾರತದ ಅತ್ಯಂತ ಕಿರಿಯ ಅಂಗಾಗ ದಾನಿ ಈ ಮಗು

ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದ 20 ತಿಂಗಳ ಮಗು ಧನಿಷ್ಠಾ ಎಂಬ ಹೆಸರಿನ ಈ ಮಗು ಈಗ ಹೆಚ್ಚು ಸುದ್ದಿಯಲ್ಲಿದೆ . ಆಕೆ ಅತ್ಯಂತ ಕಿರಿಯ ಅಂಗಾಗ ದಾನಿಯಾಗಿ ಈಗ ಗುರುತಿಸಿಕೊಂಡಿದ್ದಾರೆ. ಧನಿಷ್ಠಾ ತನ್ನ ಸಾವಿನ ತರುವಾಯ ಬಹು ಅಂಗಾಂಗಗಳನ್ನು ದಾನ ವಾಗಿ ನೀಡಿ ಸಾವಿನ ಬಳಿಕ ಕೂಡ ಇತರರಲ್ಲಿ ಮರು ಜನ್ಮ ಪಡೆದುಕೊಂಡಿದೆ. ಧನಿಷ್ಠಾ ಐದು ರೋಗಿಗಳಿಗೆ ಹೊಸ ಜೀವದಾನ ವನ್ನು ನೀಡಿದ್ದಾರೆ. ಆಕೆಯ ಹೃದಯ, ಯಕೃತ್ತು, ಮೂತ್ರಪಿಂಡಗಳು …

Read More »

ಸಿಡಿ ವಿವಾದವು ಬಿಜೆಪಿ ಮುಕ್ತ ರಾಜ್ಯಕ್ಕೆ ಮುನ್ನುಡಿ ಬರೆದಿದೆ | ಭವಿಷ್ಯ ನುಡಿದ ಪ್ರಿಯಾಂಕ್ ಖರ್ಗೆ

  ಕಲಬುರಗಿ: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಿಡಿ ವಿವಾದ ಸೃಷ್ಟಿಯಾಗಿದ್ದು, ಇದು ಬಿಜೆಪಿ ಮುಕ್ತ ಕರ್ನಾಟಕಕ್ಕೆ ನಾಂದಿ ಹಾಡಲಿದೆ ಎಂದು ಚಿತ್ತಾಪುರ ಕ್ಷೇತ್ರದ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಎದ್ದಿರುವ ಸಿಎಂ ಯಡಿಯೂರಪ್ಪನವರ ಸಿಡಿ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೇವಲ ಬಿಎಸ್ ವೈ ಮುಕ್ತ ಬಿಜೆಪಿ ಮಾತ್ರವಲ್ಲ, ಬಿಜೆಪಿ ಮುಕ್ತ ರಾಜ್ಯ ಆಗುವ ಮುನ್ನುಡಿ …

Read More »

ದಡ್ಡಿ, ಮಜತಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ

  ಬೆಳಗಾವಿ: ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯ ದಡ್ಡಿ, ಮಜತಿ ಹಾಗೂ ಚಿಕ್ಕಲದಿನ್ನಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಗುರುವಾರ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯ ಸುಮಾರು 45 ಲಕ್ಷ ರೂ. ಅನುದಾನದಲ್ಲಿ ದಡ್ಡಿ, ಮಜತಿ, ಮಾವನೂರು, ಕುರ್ಣಿ, ಚಿಕ್ಕಲದಿನ್ನಿ ಗ್ರಾಮದಲ್ಲಿನ ಎಸ್, ಸಿ ಕಾಲೋನಿಗಳಲ್ಲಿನ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ರಮೇಶ ಪಾಟೀಲ್, ಸುರೇಶ ಬೆನ್ನಿ, ಮಾಲಿಂಗ ಶಿರಗುಪ್ಪಿ, …

Read More »

ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೀಕ್ಷಿಸಿದ ರಾಹುಲ್ ಗಾಂಧಿ

    ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು. ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ …

Read More »