Breaking News
Home / 2021 / ಜನವರಿ / 14 (page 2)

Daily Archives: ಜನವರಿ 14, 2021

ನಮ್ಮೆಲ್ಲರಂತೆ ಮಂಗಳಮುಖಿಯರು ಸಮಾಜದಲ್ಲಿ ಬದುಕಲು ಅರ್ಹರು: ಸಚಿವೆ ಶಶಿಕಲಾ ಜೊಲ್ಲೆ

    ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಕಲ್ಲಹಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯ ಸಾಧಿಸಿದ ಮಂಗಳಮುಖಿ ಸುಧಾ ಜೋಗತಿ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅಭಿನಂದಿಸಿ, ಅವರ ಯಶಸ್ಸು, ಪರಿಶ್ರಮವನ್ನು ಶ್ಲಾಘಿಸಿದರು. ಹೊಸಪೇಟೆಯ ಖಾಸಗಿ ಹೋಟೆಲ್‍ನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿದ ಕಲ್ಲಹಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜಯ ಸಾಧಿಸಿದ ಮಂಗಳಮುಖಿ ಸುಧಾ ಜೋಗತಿ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ …

Read More »

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎತ್ತುಗಳಿಗೆ ಪೂಜೆ ಮಾಡಿರೋದು ಸಾಕಷ್ಟು ಕುತೂಹಲ ಮೂಡಿಸಿರೋದು ಸುಳ್ಳಲ್ಲ

ಬೆಂಗಳೂರು: ಮಕರ ಸಂಕ್ರಾಂತಿಯ ಪ್ರಯುಕ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಧರ್ಮಪತ್ನಿ ಉಷಾ ಶಿವಕುಮಾರ್ ಜೊತೆಗೂಡಿ ಇಂದು ತಮ್ಮ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ವಿಶೇಷ ಅಂದ್ರೆ ಒಂದೆಡೆ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಗೋಮಾಂಸದ ಕುರಿತು ದಿನಕ್ಕೊಂದು ಹೇಳಿಕೆ ನೀಡುತ್ತಾ ವಿವಾದ ಮೈ ಮೇಲೆ ಎಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ನನಗೆ ಯಾರೂ ಬೆಂಬಲ ನೀಡುತ್ತಿಲ್ಲ.. ಜನರೇ ನನ್ನನ್ನು ಕಾಪಾಡಬೇಕು ಅಂತಾ ಅಲವತ್ತುಕೊಳ್ಳುತ್ತಿದ್ದಾರೆ. ಈನಡುವೆ ಇನ್ನೊಂದೆಡೆ ಕೆಪಿಸಿಸಿ …

Read More »

ದೇಶಾದ್ಯಂತ ಜನವರಿ 31ರಂದು ಪಲ್ಸ್‌ಪೋಲಿಯೋ ಕಾರ್ಯಕ್ರಮ ನಿಗದಿ

ನವದೆಹಲಿ : ದೇಶದಲ್ಲಿ ಜನವರಿ 31ರಂದು ಪಲ್ಸ್‌ಪೋಲಿಯೋ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ನಿರ್ಧಾರ ಪ್ರಕಟಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನವರಿ 30ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯಾ ಲಸಿಕೆ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ …

Read More »

ಮೊದಲ ಹಂತದಲ್ಲಿ 2,934 ಸ್ಥಳಗಳಲ್ಲಿ ಸುಮಾರು 3 ಲಕ್ಷ ಫ್ರಂಟ್ ಲೈನ್ ವರ್ಕರ್ಸ್ ಕೊರೋನಾ ಲಸಿಕೆ

ಬೆಂಗಳೂರು : ಜನವರಿ 16ರ ಮೊದಲ ದಿನ ದೇಶಾದ್ಯಂತ 2,934 ಸ್ಥಳಗಳಲ್ಲಿ ಸುಮಾರು 3 ಲಕ್ಷ ಫ್ರಂಟ್ ಲೈನ್ ಹೆಲ್ತ್ ಕೇರ್ ಕಾರ್ಮಿಕರಿಗೆ ಲಸಿಕೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. ಪ್ರತಿ ಸೈಟ್ ಗೆ ದಿನಕ್ಕೆ ಅಸಮಂಜಸ ಸಂಖ್ಯೆಯ ಲಸಿಕೆಗಳನ್ನು ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದ್ದು, ಪ್ರತಿ ಲಸಿಕೆ ಯ ಅಧಿವೇಶನವು ಗರಿಷ್ಠ 100 ಫಲಾನುಭವಿಗಳಿಗೆ ಸೇವೆ ನೀಡಲಿದೆ ಎಂದು ಹೇಳಿದೆ. ಪ್ರತಿ ಅಧಿವೇಶನದಲ್ಲಿ ಪ್ರತಿ …

Read More »

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ

ಬೆಂಗಳೂರು, ಜ.14- ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಅಡಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕೂಡಲ ಸಂಗಮದಿಂದ ಬೆಂಗಳೂರಿನವರೆಗೆ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಇಂದು ಬೃಹತ್ ಪಾದಯಾತ್ರೆ ಪ್ರಾರಂಭಿಸಲಾಯಿತು. ಪಂಚಮಸಾಲಿ ಸಮಾಜದ ಪಂಚಲಕ್ಷ ಹೆಜ್ಜೆಗಳು ಎಂಬ ಶೀರ್ಷಿಕೆಯಡಿ ಕೈಗೊಂಡಿರುವ ಈ ಪಾದಯಾತ್ರೆಯನ್ನು ಬಸವಣ್ಣನವರ ಐಕ್ಯ ಮಂಟಪ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಹಮ್ಮಿಕೊಂಡಿದ್ದು, ಪಂಚಮಸಾಲಿ ರಾಷ್ಟ್ರೀಯ ಘಟಕ, ರಾಜ್ಯ ಯುವ ಘಟಕ, ರಾಜ್ಯದ ವಿವಿಧ ಘಟಕಗಳ ಸಹಸ್ರಾರು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. …

Read More »

ಯಡಿಯೂರಪ್ಪ ಒಬ್ಬ ದುರ್ಬಲ ಸಿಎಂ : ಸಿದ್ದರಾಮಯ್ಯ

ಮೈಸೂರು,ಜ.14- ಸಿಡಿಯನ್ನು ಮುಂದಿಟ್ಟುಕೊಂಡು ಬ್ಲಾಕ್‍ಮೇಲ್ ಮಾಡುತ್ತಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ದುರ್ಬಲರಾಗಿರುತ್ತಾರೋ ಅವರನ್ನೇ ಬ್ಲಾಕ್‍ಮೇಲ್ ಮಾಡಲು ಸಾಧ್ಯ. ಯಡಿಯೂರಪ್ಪನವರು ದುರ್ಬಲರಾಗಿದ್ದಾರೆ. ಹಾಗಾಗಿ ಬ್ಲಾಕ್‍ಮೇಲ್ ಮಾಡಲಾಗುತ್ತಿದೆ. ಬ್ಲಾಕ್‍ಮೇಲ್ ಮಾಡುವವರ ವಿರುದ್ಧ ದೂರು ನೀಡಬೇಕು. ಕ್ರಿಮಿನಲ್ ಕೇಸು ಹಾಕಿಸಬೇಕು. ಜತೆಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.ಸಿಡಿ ಮುಂದಿಟ್ಟುಕೊಂಡು ಬ್ಲಾಕ್‍ಮೇಲ್ ಮಾಡುತ್ತಿರುವವರು ಬಿಜೆಪಿಯ …

Read More »

ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ ಮಾತನಾಡುವುದು ಬೇಡ. B.S.Y.

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ 7 ಸಚಿವರ ಸೇರ್ಪಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವಾಕಾಂಕ್ಷಿಗಳು ವರಿಷ್ಠರಿಗೆ ದೂರು ನೀಡಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಸಮಾಧಾನಗೊಂಡಿರುವ ಶಾಸಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆ ಬಗ್ಗೆ ಶಾಸಕರಿಗೆ ಅಸಮಾಧಾನ, ವಿರೋಧವಿದ್ದರೆ ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಿ. ಇದಕ್ಕೆ ನನ್ನದೇನೂ ಅಭ್ಯಂತರವಿಲ್ಲ ಎಂದಿದ್ದಾರೆ. ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ …

Read More »

ಸಿ.ಪಿ.ಯೋಗೇಶ್ವರ್ ಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಾಗಿದೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ಸಿ.ಪಿ.ಯೋಗೇಶ್ವರ್ ಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಾಗಿದೆ ಎಂದು ಯೋಗೇಶ್ವರ್ ಪರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ, ಬಿಜೆಪಿ ಸರ್ಕಾರ ರಚನೆಯಲ್ಲಿ ಯೋಗೇಶ್ವರ್ ಪಾತ್ರ ಪ್ರಮುಖವಾಗಿದೆ. ವಲಸೆ ಬಂದ ಶಾಸಕರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಯೋಗೇಶ್ವರ್ ತನ್ನ ಮನೆಯ ಮೇಲೆ 9 ಕೋಟಿ ರೂ ಸಾಲ ಮಾಡಿ ನಮ್ಮನ್ನು ರಕ್ಷಿಸಿದ್ದರು. ಎಂಟಿಬಿ ನಾಗರಾಜ್ ಅವರಿಂದ ಸಾಲ …

Read More »

ವಿವಾಹೇತರ ಸಂಬಂಧ ಬಯಲಿಗೆ ಬರುತ್ತಿದ್ದಂತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜತೆ ಆತ್ಮಹತ್ಯೆ

ಕಾಚಿಗುಡ: ವಿವಾಹೇತರ ಸಂಬಂಧ ಬಯಲಿಗೆ ಬರುತ್ತಿದ್ದಂತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನ ಕಾಚಿಗುಡದಲ್ಲಿ ನಡೆದಿದೆ. ಕಾಚಿಗುಡದ ಚಪ್ಪಲ್​​ ಬಜಾರ್​ನಲ್ಲಿ ವಾಸವಿದ್ದ ಕರ್ನಾಟಕ ಮೂಲದ ಆಟೋ ಚಾಲಕ ಹನಮಂತು (23) ಮತ್ತು ಅದೇ ಏರಿಯಾದಲ್ಲಿ ವಾಸವಿದ್ದ ಮಹಾರಾಷ್ಟ್ರದ ಲಾತುರ್​ ಮೂಲದ 23 ವರ್ಷದ ಮಹಿಳೆ ಮೃತ ದುರ್ದೈವಿಗಳು.ಕೆಲವು ದಿನಗಳಿಂದ ಹನುಮಂತು ಜತೆ ಮಹಿಳೆ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಚಾರ ಮಹಿಳೆಯ ಪತಿಗೆ ತಿಳಿದು ಇಬ್ಬರ ನಡುವೆ …

Read More »

ಚಿನ್ನದ ಅಂಗಡಿಯ ಮಾಲೀಕನ ಪುತ್ರನನ್ನು ಅವರ ಮನೆಯಲ್ಲಿಯೇ ಕೊಲೆ

ಹುಣಸಗಿ: ಪಟ್ಟಣದಲ್ಲಿ ಮಧ್ಯಾಹ್ನ ಚಿನ್ನದ ಅಂಗಡಿಯ ಮಾಲೀಕನ ಪುತ್ರನನ್ನು ಅವರ ಮನೆಯಲ್ಲಿಯೇ ಕೊಲೆ ಮಾಡಿದ ಘಟನೆ ಬುಧವಾರ ನಡೆದಿದೆ. ಕೊಲೆಯಾದ ಯುವಕನನ್ನು ನರೇಂದ್ರ ಶಿರೂರಿ (22) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಮನೆಗೆ ಊಟಕ್ಕೆ ಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪಟ್ಟಣ ಸೇರಿದಂತೆ ತಾಲ್ಲೂಕಿನೆಲ್ಲೆಡೆ ಜನ ಭಯಭೀತರಾಗಿದ್ದು, ಜನ ತಂಡೋಪತಂಡವಾಗಿ ಕೊಲೆಯಾದ ಸ್ಥಳದತ್ತ ಆಗಮಿಸುತ್ತಿದ್ದರು. ‘ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಿಶೋರ ಕಣ್ಮರೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಮೃತ …

Read More »