Breaking News

Daily Archives: ಜನವರಿ 16, 2021

ಪುರುಷರಲ್ಲಿ ಹೆಚ್ಚುತ್ತಿರುವ ಲೈಂಗಿಕ ಸಮಸ್ಯೆ, ಪರಿಹಾರವೇನು?

ಇತ್ತೀಚೆಗೆ ಪುರುಷರಲ್ಲಿ ಲೈಂಗಿಕ ಸಮಸ್ಯೆ ಹೆಚ್ಚಾಗುತ್ತಿದ್ದು ಇದಕ್ಕೆ ಪ್ರಮುಖ ಕಾರಣ ಜೀವನಶೈಲಿಯಾಗಿದೆ. ಒತ್ತಡ, ಖಿನ್ನತೆ, ದೈಹಿಕ ವ್ಯಾಯಾಮ ಇಲ್ಲದಿರುವುದು ಈ ಇತ್ತೀಚೆಗೆ ಪುರುಷರಲ್ಲಿ ಲೈಂಗಿಕ ಸಮಸ್ಯೆ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈ ಸಂಬಂಧ ಲೈಂಗಿಕ ತಜ್ಞರನ್ನು ಸಂಪರ್ಕಿಸುವವರ ಪ್ರಮಾಣ ಹೆಚ್ಚುತ್ತಿದೆ. ಲೈಂಗಿಕ ಸಮಸ್ಯೆಯಲ್ಲಿ ಎರೆಕ್ಟೈಲ್‌ ಡಿಸ್‌ಫಂಕ್ಷ ನ್‌ ಅಥವಾ ಶಿಶ್ನ ನಿಮಿರುವಿಕೆಯ ಸಮಸ್ಯೆ ಮುಖ್ಯವಾದದ್ದು. ಲೈಂಗಿಕವಾಗಿ ಸಕ್ರಿಯರಾಗಿದ್ದಲ್ಲಿ ವಿವಾಹ ಪೂರ್ವದಲ್ಲಿಯೇ ಈ ತೊಂದರೆ ಕಾಣಿಸಬಹುದು ಅಥವಾ ವಿವಾಹದ ನಂತರ ಲೈಂಗಿಕ …

Read More »

ರಾಜ್ಯ ಹೈಕೋರ್ಟ್ ಮಹತ್ವದ ಆದೇಶ: ʼRTI ವ್ಯಾಪ್ತಿʼಗೆ ಬರುತ್ತೆ ಬೆಂಗಳೂರು ʼಟರ್ಫ್‌ ಕ್ಲಬ್‌ʼ..!

ಬೆಂಗಳೂರು: ರಾಜ್ಯ ಹೈಕೋರ್ಟ್, ಬೆಂಗಳೂರು ಟರ್ಫ್ ಕ್ಲಬ್, ಲೆಡೀಸ್ ಕ್ಲಬ್, ಮೈಸೂರು ರೇಸ್ ಕ್ಲಬ್ ಹಾಗೂ ಇನ್​​ಸ್ಟಿಟ್ಯೂಟ್‌ ಆಫ್ ಇಂಜಿನಿಯರ್ ಸಂಸ್ಥೆಗಳ ಅರ್ಜಿ ವಜಾಗೊಳಸಿದ್ದು, ನಗರದ ಟರ್ಫ್‌ ಕ್ಲಬ್‌ RTI ವ್ಯಾಪ್ತಿಗೆ ಬರುತ್ತದೆ ಎಂದು ಮಹತ್ವದ ತೀರ್ಪ ನೀಡಿದೆ. ನ್ಯಾ.ಪಿ.ಬಿ.ಬಜಂತ್ರಿರವರಿದ್ದ ಏಕಸದಸ್ಯ ಪೀಠ, ‘ರಾಜ್ಯ ಸರ್ಕಾರ ಪರೋಕ್ಷವಾಗಿ ರಿಯಾಯಿತಿ ದರದಲ್ಲಿ ಇವುಗಳಿಗೆ ಭೂಮಿ ಗುತ್ತಿಗೆ ನೀಡಿದ್ದು, ಮಾರುಕಟ್ಟೆ ಮೌಲ್ಯಕ್ಕೆ ಹೋಲಿಸಿದ್ರೆ ಕೋಟ್ಯಾಂತರ ರೂಪಾಯಿ ಮೊತ್ತದ ರಿಯಾಯಿತಿ ನೀಡಿದೆ. ಹಾಗಾಗಿ, ರಾಜ್ಯ …

Read More »

ದೇಶದ ಪ್ರಮುಖ ನಗರಗಳಲ್ಲಿ ಜನವರಿ 16ರ ಪೆಟ್ರೋಲ್, ಡೀಸೆಲ್ ದರ

ನವದೆಹಲಿ, ಜನವರಿ 16: ಸರ್ಕಾರಿ ತೈಲ ಕಂಪನಿಗಳು ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 84.70 ರೂ. ಮತ್ತು ಡೀಸೆಲ್ ಲೀಟರ್‌ಗೆ 74.88 ರೂ. ನಿಗದಿಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ …

Read More »

ಐಆರ್‌ಬಿ ಆಡಳಿತ ಭವನ ಉದ್ಘಾಟನೆಗೆ ಕ್ಷಣಗಣನೆ

ವಿಜಯಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಸಂಜೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿರುವ ವರ್ಚ್ಯುವೆಲ್ ವೇದಿಕೆ ಮೂಲಕ, ವಿಜಯಪುರ ಸಮೀಪದ ಅರಕೇರಿಯಲ್ಲಿ ನಿರ್ಮಿಸಲಾಗಿರುವ ಇಂಡಿಯನ್ ರಿಸರ್ವ್ ಬಟಾಲಿಯನ್ನ (ಐಆರ್‌ಬಿ) ಆಡಳಿತ ಭವನದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಐಆರ್‌ಬಿ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. 2010ರಲ್ಲಿ ಆರಂಭವಾದ ರಾಜ್ಯದ ಎರಡನೇ ಐಆರ್ ಬಿ ಸೆಂಟರ್‌ ಇದಾಗಿದ್ದು, 100 ಎಕರೆ …

Read More »

ಬಿಜೆಪಿಯ ಡಾ.ಶರ್ಮಾ, ಟಿಎಂಸಿಯ ಆರ್‌.ಚಟರ್ಜಿ ಲಸಿಕೆ ಪಡೆದ ಮೊದಲ ರಾಜಕಾರಣಿಗಳು

ನವದೆಹಲಿ: ಉತ್ತರ ಪ್ರದೇಶದ ಬಿಜೆಪಿ ಸಂಸದ ಡಾ.ಮಹೇಶ್ ಶರ್ಮಾ ಹಾಗೂ ಪಶ್ಚಿಮ ಬಂಗಾಳದ ಟಿಎಂಸಿ ಶಾಸಕ ರವೀಂದ್ರನಾಥ್‌ ಚಟರ್ಜಿ ಅವರು ಕೋವಿಡ್‌ ಲಸಿಕೆ ಪಡೆದ ಮೊದಲ ರಾಜಕಾರಣಿಗಳಾಗಿದ್ದಾರೆ. ತರಬೇತಿ ಪಡೆದ ವೈದ್ಯರೂ ಆಗಿರುವ ಡಾ.ಶರ್ಮಾ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ನೋಯ್ಡಾ ಸೆಕ್ಟರ್ 27ರ ಆಸ್ಪತ್ರೆಯೊಂದರಲ್ಲಿ ಲಸಿಕೆ ಹಾಕಿಸಿಕೊಂಡರು. ಬಳಿಕ ಅರ್ಧ ಗಂಟೆ ಅವರ ಆಸ್ಪತ್ರೆ ವೈದ್ಯರ ನಿಗಾದಲ್ಲಿ ಇದ್ದರು ಎಂದು ವರದಿಯಾಗಿದೆ. ‘ಒಬ್ಬ ವೈದ್ಯನಾಗಿ ಕೊರೊನಾ ವೈರಸ್ …

Read More »

ಬಿಜೆಪಿ ಜನಸೇವಕ ಸಮಾವೇಶದ ವಿರುದ್ಧ ನ್ಯಾಯಾಲಯಕ್ಕೆ ಹೋಗುವೆ’

ಬೆಳಗಾವಿ: ಕೋವಿಡ್-19 ನಡುವೆಯೂ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿಯಿಂದ ಆಯೋಜಿಸಿರುವ ‘ಜನಸೇವಕ ಸಮಾವೇಶ ಸಮಾರೋಪ’ ರದ್ದುಪಡಿಸಬೇಕು ಎಂದು ಆಗ್ರಹಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಮತ್ತು ಜೆಡಿಎಸ್ ಮುಖಂಡ ಭೀಮಪ್ಪ ಗಡಾದ ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ‘ಸಮಾವೇಶ ರದ್ದುಪಡಿಸಬೇಕು ಅಥವಾ ಕೋವಿಡ್ ಮಾರ್ಗಸೂಚಿ ಹಿಂಪಡೆಯಬೇಕು ಎಂದು ಆಗ್ರಹಿಸಿ ಈಚೆಗೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆ. ಆದರೆ, ಈವರೆಗೂ ಸರ್ಕಾರದಿಂದ ಯಾವುದೇ ಕ್ರಮ ಆಗಿಲ್ಲ. …

Read More »

ಕೊರೊನಾ ಲಸಿಕೆ ವಿತರಣೆಗೆ ಸಜ್ಜಾದ ಆಸ್ಪತ್ರೆಯ ಸಿಬ್ಬಂದಿ ರಂಗೋಲಿ ಹಾಕಿ ಜನರನ್ನು ಸ್ವಾಗತಿಸಿದ್ದಾರೆ.

ಪುಣೆ: ಕೊರೊನಾ ಲಸಿಕೆ ವಿತರಣೆಗೆ ಸಜ್ಜಾದ ಆಸ್ಪತ್ರೆಯ ಸಿಬ್ಬಂದಿ ರಂಗೋಲಿ ಹಾಕಿ ಜನರನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಹಬ್ಬದ ವಾತಾವರಣ ಸೃಷ್ಟಿಸಿ ಲಸಿಕೆಗಾಗಿ ಬರುವ ಜನರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಭಾರತವು ಅತೀ ದೊಡ್ಡ ಲಸಿಕಾ ದಿನವನ್ನು ಆಚರಿಸಲು ಮುಂದಾಗುತ್ತಿದ್ದಂತೆ ಪುಣೆಯ ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯ ಮುಂಭಾಗ ನೀಲಿ ಮತ್ತು ಬಿಳಿ ಬಣ್ಣದ ಹೂವಿನ ರಂಗೋಲಿ ಬಿಡಿಸಿ ಮಧ್ಯದಲ್ಲಿ ಸ್ವಾಗತ ಎಂದು ಬರೆದು ಲಸಿಕೆ ಹಾಕಿಸಿಕೊಳ್ಳಲು ಬರುವ ಎಲ್ಲರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. …

Read More »

ರಾಮ ಮಂದಿರ ನಿರ್ಮಾಣಕ್ಕೆ ಆನಂದ್ ಸಿಂಗ್ ಕುಟುಂಬದಿಂದ ದೇಣಿಗೆ ಸಂಗ್ರಹ

ಬಳ್ಳಾರಿ: ರಾಮ ಮಂದಿರ ನಿರ್ಮಾಣಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಕುಟುಂಬದವರು ದೇಣಿಗೆ ಸಂಗ್ರಹ ಕಾರ್ಯವನ್ನು ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಭವ್ಯವಾದ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ಇದಕ್ಕಾಗಿ ಸರ್ವರೂ ಸಮರ್ಪಣಾ ಭಾವದಿಂದ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಎಂದು ಆನಂದ್ ಸಿಂಗ್ ಮನವಿ ಮಾಡಿದ್ದಾರೆ. ಇಂದು ಬೆಳಗ್ಗಿನಿಂದಲೇ ಸಚಿವರು ಸೇರಿದಂತೆ ಅವರ ಸಂಪೂರ್ಣ ಕುಟುಂಬ ಸದಸ್ಯರು ಈ ಜಾಥಾದಲ್ಲಿ ಪಾಲ್ಗೊಂಡು ನಿಧಿ ಸಂಗ್ರಹಣೆ ಮಾಡಿದ್ದಾರೆ. ನಗರದೆಲ್ಲೆಡೆ ದೇಣಿಗೆ ಸಂಗ್ರಹಿಸಿದ ಬಳಿಕ …

Read More »

ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಪೊಲೀಸರಿಗೆ ಸಮಯದ ಮಿತಿಯೆಂಬುದೇ ಇರುವುದಿಲ್ಲ: ಅಮಿತ್ ಶಾ

ಶಿವಮೊಗ್ಗ: ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಪೊಲೀಸರಿಗೆ ಸಮಯದ ಮಿತಿಯೆಂಬುದೇ ಇರುವುದಿಲ್ಲ. ಸರ್ಕಾರಿ ಉದ್ಯೋಗಿಗಳ ಪೈಕಿ ಪೊಲೀಸರ ಕೆಲಸ ಕಠಿಣವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬುಳ್ಳಾಪುರದಲ್ಲಿ 97ನೇ ಆರ್ ಎಎಫ್ ಬೆಟಾಲಿಯನ್ ತರಬೇತಿ ಘಟಕ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅಮಿತ್ ಶಾ, ಸಿಆರ್ ಪಿ ಎಫ್ ನಮ್ಮ ಶಕ್ತಿ. ದೇಶದ ಮೂಲೆ ಮೂಲೆಗೂ ಸಿಆರ್ ಪಿ ಎಫ್ ಹೋಗುತ್ತದೆ …

Read More »

ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದ BSY

ಬೆಂಗಳೂರು: ಎರಡು ದಿನಗಳ ಕಾರ್ಯಕ್ರಮ ಮೇರೆಗೆ ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಆತ್ಮೀಯವಾಗಿ ಬರಮಾಡಿಕೊಂಡರು. ವಿಶೇಷ ವಿಮಾನದಲ್ಲಿ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅಮಿತ್ ಶಾ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು, ಈ ವೇಳೆ ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ ಹಾಗೂ ಸಿ.ಟಿ ರವಿ ಮತ್ತಿತರು ಸಿಎಂಗೆ ಸಾಥ್ …

Read More »