Breaking News
Home / 2021 / ಜನವರಿ / 16 (page 3)

Daily Archives: ಜನವರಿ 16, 2021

ಸಿಡಿ ಬೆದರಿಕೆ ಸರಿಯಲ್ಲ” : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ಜ.16- ಸಿಡಿ ವಿಚಾರ ಇಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹೆದರಿಸುವುದು ಸರಿಯಲ್ಲ. ಅವರಲ್ಲಿ ಸಿಡಿ ಇಲ್ಲ. ಸುಖಾಸುಮ್ಮನೆ ಬೆದರಿಕೆ ಹಾಕುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಸ್ಥಾನ ಸಿಗದೆ ಇರುವವರು ತಮ್ಮ ಅಭಿಪ್ರಾಯವನ್ನು ಪಕ್ಷದ ಉಸ್ತುವಾರಿ, ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಬಹುದು. ಇದನ್ನು ಸಿಎಂ ಕೂಡ ಸ್ಪಷ್ಟಪಡಿಸಿದ್ದಾರೆ ಎಂದರು. ಸಿಡಿ ಎಂಬುದು ಇಲ್ಲವೇ …

Read More »

ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. ಈ …

Read More »

BIG NEWS : ವಿಶ್ವಾದ್ಯಂತ ಕೊರೊನಾ ಮಹಾಮಾರಿಗೆ 20ಲಕ್ಷ ಮಂದಿ ಬಲಿ..!

ಮೇರಿಲ್ಯಾಂಡ್, ಜ.16- ವಿಶ್ವದಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಒಂದು ಸಣ್ಣ ದೇಶದ ಜನಸಂಖ್ಯೆಗೆ ಸಮಾನವಾಗಿದೆ ಎಂಬ ಅಂಶ ಇದೀಗ ಬೆಚ್ಚಿ ಬೀಳಿಸಿದೆ. ಇದುವರೆಗೂ ಕೊರೊನಾ ಸೋಂಕಿಗೆ 20 ಲಕ್ಷಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಇದು ಬ್ರಸೆಲ್ಸ್, ಮೆಕ್ಕಾ ಹಾಗೂ ವಿಯೆನ್ನಾದಂತಹ ಸಣ್ಣ ರಾಷ್ಟ್ರದ ಜನಸಂಖ್ಯೆಗೆ ಸಮನಾಗಿದೆ ಎಂದು ಜಾನ್ಸ್ ಅಬ್‍ಕಿನ್ಸ್ ವಿಶ್ವವಿದ್ಯಾಲಯದ ವರದಿ ಬಹಿರಂಗಗೊಳಿಸಿದೆ. ಸದ್ಯ ವಿಶ್ವದಾದ್ಯಂತ ಅಂದಾಜು 10 ಕೋಟಿಯಷ್ಟು ಮಂದಿ ಕೊರೊನಾ ಸೋಂಕಿಗೆ ಗುರಿಯಾಗುತ್ತಿದ್ದು , …

Read More »

ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಪ್ರವಾಸ: ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು, ಜ. 16: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡುತ್ತಿದ್ದಾರೆ. ಇಂದು (ಜ. 16) ಬೆಂಗಳೂರಿಗೆ ಆಗಮಿಸುವ ಅಮಿತ್ ಶಾ ಅವರು, ಬೆಂಗಳೂರು, ಭದ್ರಾವತಿ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡುವ ಕೇಂದ್ರ ಗೃಹ ಸಚಿವರಿಗೆ ಅದ್ದೂರಿ ಸ್ವಾಗತ ಕೋರಲು ರಾಜ್ಯ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಇಂದು …

Read More »

BREAKING : ರಾಜ್ಯದಲ್ಲಿ ಮೊದಲ ‘ಕೊರೋನಾ ಲಸಿಕೆ’ ಪಡೆದ ‘ಡಿ.ಗ್ರೂಪ್ ನೌಕರ ಚಂದ್ರಶೇಖರ್’

ಬೆಂಗಳೂರು : ದೇಶಾದ್ಯಂತ ಇಂದಿನಿಂದ ಕೊರೋನಾ ಸೋಂಕಿನ ಲಸಿಕಾ ವಿತರಣೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ, ರಾಜ್ಯದಲ್ಲೂ ಲಸಿಕಾ ಅಭಿಯಾನ ಆರಂಭಗೊಂಡಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ನೀಡಿದೆ ಆರಂಭಗೊಂಡಿದ್ದು, ರಾಜ್ಯದಲ್ಲೇ ಮೊದಲ ಲಸಿಕೆಯನ್ನು ಕೆಸಿ ಜನರಲ್ ಆಸ್ಪತ್ರೆಯ ಡಿ.ಗ್ರೂಪ್ ನೌಕರ ಚಂದ್ರಶೇಖರ್ ಪಡೆಯುವ ಮೂಲಕ ಆರಂಭಗೊಂಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತಿದೊಡ್ಡ ಕೊರೋನಾ ಲಸಿಕಾ ಅಭಿಯಾನಕ್ಕೆ …

Read More »

ಉಮೇಶ ಕತ್ತಿ ರಾಜ್ಯದ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಹೊಂದಿದ್ದಾರೆ -ನಿಡಸೋಸಿ ಶ್ರೀ

ಸಂಕೇಶ್ವರ : ರಾಜ್ಯದ ಜನರ ಬಗೆಗೆ ಅಪಾರ ಕಾಳಜಿ ಹೊಂದಿರುವ ಸಚಿವ ಉಮೇಶ ಕತ್ತಿ ಅವರು ಭವಿಷ್ಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಹೊಂದಿದ್ದಾರೆ ಎಂದು ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು. ಇಲ್ಲಿಗೆ ಸಮೀಪದ ನಿಡಸೋಸಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿದ ಸಚಿವ ಉಮೇಶ ಕತ್ತಿ ಅವರನ್ನು ಆಶೀರ್ವದಿಸಿ ಮಾತನಾಡಿದ ಅವರು, ಎಂಟು ಬಾರಿ ಹುಕ್ಕೇರಿ ಮತಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಕತ್ತಿ ರಾಜ್ಯದ ಅತ್ಯಂತ ಹಿರಿಯ ಶಾಸಕರಾಗಿದ್ದು, ರಾಜಕೀಯ, …

Read More »

ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಕನ್ನಡದ ‘ರುದ್ರಿ’ಗೆ ಎರಡು ಪ್ರಶಸ್ತಿ

ಕನ್ನಡ ಸಿನಿಮಾ ‘ರುದ್ರಿ’ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು. ವಿಂದ್ಯಾ ಸಿನಿಮಾ ಉತ್ಸವದಲ್ಲಿ ‘ರುದ್ರಿ’ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ ‘ರುದ್ರಿ’ ಭಾಜನವಾಗಿದೆ. 46 …

Read More »

‘ಕೆಜಿಎಫ್-2’ ಟೀಸರ್; 150 ಮಿಲಿಯನ್ ವೀಕ್ಷಣೆ ಕಂಡ ಸಂತಸದಲ್ಲಿ ಚಿತ್ರತಂಡ

ಜನವರಿ 7 ಯಶ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾದ ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾದ ಟೀಸರ್ ದಾಖಲೆಯ ವೀಕ್ಷಣೆ ಕಂಡು ಇಡೀ ವಿಶ್ವವೇ ದಂಗಾಗಿದೆ. ವರ್ಲ್ಡ ವೈಸ್ ಸದ್ದು ಮಾಡುತ್ತಿರುವ ಕೆಜಿಎಫ್ -2 ಟೀಸರ್ ಸದ್ಯ ನಂ.1 ಟ್ರೆಂಡಿಂಗ್ ನಲ್ಲಿದೆ. ಈಗಾಗಲೇ ಕೆಜಿಎಫ್-2 ಟೀಸರ್ ಯೂಟ್ಯೂಬ್ ನಲ್ಲಿ 150 ಮಿಲಿಯನ್ ಗೂ ಅಧಿಕ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ. ಈ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಜೊತೆಗೆ ಎಲ್ಲರಿಗೂ …

Read More »

ಹರ ಜಾತ್ರೆಯಲ್ಲಿ ಪುನೀತ್ ರಾಜ್‌ಕುಮಾರ್: ಅಭಿಮಾನಿಗಳ ನೂಕು-ನುಗ್ಗಲು

ನಟ ಪುನೀತ್ ರಾಜ್‌ಕುಮಾರ್ ಅವರು ಇಂದು ದಾವಣಗೆರೆಯ ಪ್ರಸಿದ್ಧ ಹರಜಾತ್ರೆ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪುನೀತ್ ಅವರನ್ನು ನೋಡಲು ಜನಸಾಗರವೇ ಹರಿಬಂದಿತ್ತು. ಶಾಸಕ, ನಿರ್ಮಾಪಕ ಮುನಿರತ್ನ ಅವರೊಟ್ಟಿಗೆ ಪುನೀತ್ ರಾಜ್‌ಕುಮಾರ್ ಅವರು ದಾವಣಗೆರೆಗೆ ತೆರಳಿದ್ದರು. ಪುನೀತ್ ಬರುತ್ತಿರುವ ವಿಷಯ ತಿಳಿದು ಕಾಲೇಜು ಯುವಕ-ಯುವತಿಯರು ನೂರಾರು ಮಂದಿ ಹೆಲಿಪ್ಯಾಡ್‌ಗೆ ಆಗಮಿಸಿದ್ದರು. ಅಲ್ಲಿಂದ ಕಾರ್ಯಕ್ರಮಕ್ಕೆ ತೆರಳಿದ ಪುನೀತ್ ವಚನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಾತ್ರೆ ಕಾರ್ಯಕ್ರಮಕ್ಕೆ …

Read More »

ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ!

ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ …

Read More »