Breaking News
Home / 2021 / ಜನವರಿ / 17 (page 2)

Daily Archives: ಜನವರಿ 17, 2021

ಚೆನ್ನಾಗಿ ಬೇಯಿಸಿದ ಕೋಳಿ ಸುರಕ್ಷಿತ : ಕೋಳಿ ಮಾರಾಟ ನಿಷೇಧವನ್ನು ಪರಿಶೀಲಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ:ಚೆನ್ನಾಗಿ ಬೇಯಿಸಿದ ಕೋಳಿ ಮನುಷ್ಯರ ಸೇವನೆಗೆ ಸುರಕ್ಷಿತ , ಆದುದರಿಂದ ಹಕ್ಕಿ ಜ್ವರ ಭೀತಿಯಲ್ಲಿ ಕೋಳಿ ಮಾರಾಟ ನಿಷೇಧ ಹೇರಿರುವುದನ್ನು ಪುನರ್ ಪರಿಶೀಲನೆ ಮಾಡಬೇಕೆಂದು ಆಯಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕೋಳಿ ಮಾರಾಟ ನಿಷೇಧವನ್ನು ಪುನರ್​ ಪರಿಶೀಲಿಸಿ ಮತ್ತು ಸೋಂಕಿತವಲ್ಲದ ಪ್ರದೇಶಗಳಿಂದ ಕೋಳಿ ಉತ್ಪನ್ನಗಳ ಮಾರಾಟ ಸಂಬಂಧ ನಿರ್ಧಾರ ಕೈಗೊಳ್ಳುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ತಿಳಿಸಿದೆ. ಹಕ್ಕಿಜ್ವರ ಹರಡುವಿಕೆ ಸಂಬಂಧಿಸಿದ ಅವೈಜ್ಞಾನಿಕ ವದಂತಿಗಳಿಗೆ ಗ್ರಾಹಕರು ಕಿವಿಗೊಡಬಾರದು …

Read More »

ಕನ್ನಡತಿಯ ಹೊಸ ಅವಸ್ಥಾಂತರ: ರಂಜನಿ-ವಿಜಯ್ ಹೊಸ ಸಂಚಾರ

ಬೆಂಗಳೂರು: ಲಾಕ್​ಡೌನ್ ನಂತರ ‘ಕನ್ನಡತಿ’ ರಂಜನಿ ರಾಘವನ್ ಬಹಳ ಬ್ಯುಸಿಯಾಗಿದ್ದಾರೆ. ಒಂದು ಕಡೆ ಕಿರುತೆರೆಯ ಧಾರಾವಾಹಿಯಾದರೆ, ಇನ್ನೊಂದು ಕಡೆ ಸಿನಿಮಾಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ರಂಜನಿ, ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣ ಇಲ್ಲ’ ಎಂಬ ದಿಗಂತ್ ಅಭಿನಯದ ಚಿತ್ರ ಮುಗಿಸಿದ್ದಾರೆ. ಇದೀಗ ಅವರು ಸಂಚಾರಿ ವಿಜಯ್ ಜತೆಗೆ ‘ಅವಸ್ಥಾಂತರ’ ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಸಂಚಾರಿ ವಿಜಯ್​ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ‘ಅವಸ್ಥಾಂತರ’ ಚಿತ್ರವು ಈಗಾಗಲೇ ಪ್ರಾರಂಭವಾಗಿದ್ದು, ಈ ಚಿತ್ರದಲ್ಲಿ ಪ್ರೀತಿ ಎಂಬ …

Read More »

ಪತ್ನಿಯ ಅಶ್ಲೀಲ, ಫೋಟೋ ವಿಡಿಯೋ ತೆಗೆದು ಕಿರುಕುಳ

ಬೆಂಗಳೂರು: ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ತೆಗೆದು ಕಿರುಕುಳ ನೀಡಿ ಬೆದರಿಕೆ ಹಾಕುತ್ತಿದ್ದ ಗಂಡನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಫ್ರೆಜರ್ ಟೌನ್ ನಿವಾಸಿಯಾಗಿರುವ 39 ವರ್ಷದ ಮಹಿಳೆ ದೂರು ನೀಡಿದ್ದು, ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 2019 ರಲ್ಲಿ ದಂಪತಿಗೆ ಮದುವೆಯಾಗಿದ್ದು ಆರಂಭದಲ್ಲಿ ಅನ್ಯೋನ್ಯವಾಗಿದ್ದ ಪತಿರಾಯ ನಂತರದಲ್ಲಿ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಹಲ್ಲೆ ಮಾಡುತ್ತಿದ್ದ ಆರೋಪಿ ಪತ್ನಿ ಅಕ್ರಮ ಸಂಬಂಧ …

Read More »

ತೆರೆಮೇಲೆ ಬರಲು ಸಜ್ಜಾದ ‘ಇನ್ಸ್ ಪೆಕ್ಟರ್ ವಿಕ್ರಂ’

ಶ್ರೀ ನರಸಿಂಹ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರವನ್ನು ಫೆಬ್ರವರಿ ತಿಂಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ಚಿತ್ರದಲ್ಲಿ ಭಾವನಾ ರಾವ್ ನಾಯಕಿಯಾಗಿ ನಟಿಸಿದ್ದು, ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ನಲ್ಲಿ ಎ.ಆರ್. ವಿಖ್ಯಾತ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.

Read More »

ಜುಲೈ ಅಥವಾ ಆಗಸ್ಟ್‌ನಲ್ಲಿ ಚಾರ್ಲಿ ದರ್ಶನ ಗ್ಯಾರೆಂಟಿ

ಅವನೇ ಶ್ರೀಮನ್ನಾರಾಯಣ’ ಚಿತ್ರದ ನಂತರ ನಟ ರಕ್ಷಿತ್‌ ಶೆಟ್ಟಿ, “777 ಚಾರ್ಲಿ’ ಚಿತ್ರದಲ್ಲಿ ಬಿಝಿಯಾಗಿದ್ದಾರೆ. ಇದರ ನಡುವೆ “ಸಪ್ತಸಾಗರದಾಚೆ ಎಲ್ಲೋ’, “ಪುಣ್ಯಕೋಟಿ’ ಹೀಗೆ ಮೂರ್‍ನಾಲ್ಕು ಚಿತ್ರಗಳು ರಕ್ಷಿತ್‌ ಶೆಟ್ಟಿ ಕೈಯಲ್ಲಿದೆ. ಸದ್ಯಕ್ಕೆ ರಕ್ಷಿತ್‌ ಶೆಟ್ಟಿ ಗಮನ “777 ಚಾರ್ಲಿ’ಯ ಕಡೆಗಿರುವುದರಿಂದ, ಸುಮಾರು ಒಂದೂವರೆ ವರ್ಷದಿಂದ ರಕ್ಷಿತ್‌ ಶೆಟ್ಟಿ ಆಯಂಡ್‌ ಟೀಮ್‌ “777 ಚಾರ್ಲಿ’ಯ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಆದರೆ ಹಗಲಿರುಳು “777 ಚಾರ್ಲಿ’ಯ ಕೆಲಸಗಳು ನಡೆಯುತ್ತಿದ್ದರೂ, ಈ ಚಿತ್ರ ತೆರೆಗೆ ಯಾವಾಗ …

Read More »

ಪಕ್ಷ ಪುನರ್ರಚನೆ, ಬಲವರ್ಧನೆಗಾಗಿ ಜ.18ಕ್ಕೆ ಜೆಡಿಎಸ್ ಸಭೆ

ಬೆಂಗಳೂರು: ಜೆಡಿಎಸ್ ಸ್ಥಾನ ಕೆಳಗಿರಬಹುದು ಆದರೆ ಎಂದಿಗೂ ಹೊರಗುಳಿಯುವಿದಿಲ್ಲ ಎನ್ನುವುದನ್ನು ಖಚಿತವಾಗಿಸಲು ಸೋಮವಾರ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ 35 ಉನ್ನತ ಮುಖಂಡರು ಒಟ್ಟಾಗಿ ಪಕ್ಷದ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌ಡಿ ದೇವೇಗೌಡ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ವಿಧಾನಸಭೆಯಉಪಾಧ್ಯಕ್ಷ ಬಂಡೆಪ್ಪ ಕಾಶಂಪೂರ್, ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ, ಮಾಜಿ ಶಾಸಕ ಮತ್ತು ವಕ್ತಾರ ವೈಎಸ್‌ವಿ ದತ್ತ, ಎಂಎಲ್‌ಸಿ ಬಸವರಾಜ್ ಹೊರಟ್ಟಿ ಮತ್ತಿತರ ಶಾಸಕರು, ಎಂಎಲ್‌ಸಿಗಳು ಮತ್ತು …

Read More »

ಇಂದು ಬಾಗಲಕೋಟೆ, ಬೆಳಗಾವಿಯಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಅಮಿತ್ ಶಾ ಭಾಷಣ

ಬಾಗಲಕೋಟೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಎರಡು ದಿನಗಳ ರಾಜ್ಯಕ್ಕೆ ಭೇಟಿ ನೀಡಿದ ಎರಡನೇ ದಿನವಾದ (ಇಂದು) ಭಾನುವಾರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು (ಜೆಎನ್ ಎಂಸಿ) ಮೈದಾನದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕರಕಲ್ಮಟ್ಟಿ ಗ್ರಾಮದಲ್ಲಿರುವ ಕೇದಾರನಾಥ ಶುಗರ್ ಅಂಡ್ ಅಗ್ರೋ ಪ್ರಾಡಕ್ಟ್ಸ್ ಲಿಮಿಟೆಡ್ ನ ಎಥೆನಾಲ್ ಯೋಜನೆಗೆ ಅಮಿತ್‌ ಶಾ ಅವರು ಇಂಧು ಬೆಳಗ್ಗೆ 11 …

Read More »

ಇಂದು ಬಾಗಲಕೋಟೆಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಪ್ರವಾಸ; ಗೋ ಬ್ಯಾಕ್ ಅಭಿಯಾನ ಹಿಂಪಡೆದ ರೈತರು!

ಬಾಗಲಕೋಟೆ (ಜ.17); ಬಿಜೆಪಿ ಚಾಣಕ್ಯ ಎಂದೇ ಹೆಸರುವಾಸಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಾಗಲಕೋಟೆ ಜಿಲ್ಲೆಗೆ ಆಗಮಿಸಲಿದ್ದಾರೆ. ನೂತನ ಸಚಿವ ಮುರುಗೇಶ್ ನಿರಾಣಿ ಒಡೆತನದ ಎಂಆರ್​ಎನ್ (ನಿರಾಣಿ) ಉದ್ದಿಮೆ ಸಮೂಹ ಸಂಸ್ಥೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಏಷಿಯಾದಲ್ಲೇ ಅತಿ ದೊಡ್ಡ ಎಥಿನಾಲ್ ಉತ್ಪಾದನೆಗೆ ಸಚಿವ ಮುರುಗೇಶ ನಿರಾಣಿ ಅವರ ನಿರಾಣಿ ಸಮೂಹ ಸಂಸ್ಥೆ ಮುಂದಾಗಿದೆ. ಇದರ ಜೊತೆಗೆ ನಿರಾಣಿ ಅವರ ವಿವಿಧ ಉದ್ಯಮಗಳ ಹಲವು …

Read More »

ಗದಗ ಜಿಲ್ಲೆಯಲ್ಲಿ ವಿಚಿತ್ರ ರೋಗ ಬಾಧೆ, ಕಾಯಿಲೆಯಿಂದ ಮಲಗಿರುವ ರೋಗಿಗಳು; ಆತಂಕಗೊಂಡ ಗ್ರಾಮಸ್ಥರು

ಗದಗ: ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಕಳೆದ 15 ದಿನಗಳಿಂದ ನಿಗೂಢವಾದ ಕಾಯಿಲೆ ಇಲ್ಲಿನ ಜನರ ನಿದ್ದೆಗೆಡಿಸಿದೆ. ಸುಮಾರು 200ಕ್ಕೂ ಹೆಚ್ಚು ಜನರು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದಾರೆ. ಒಂದೊಂದು ಮನೆಯಲ್ಲಿ ಇಬ್ಬರು, ಮೂವರು ಹಾಸಿಗೆ ಹಿಡಿದಿದ್ದಾರೆ. ಕೈಕಾಲು ಬೇನೆ, ತಲೆ ಸುತ್ತು, ಪ್ರಜ್ಞಾಹೀನತೆ, ಕಣ್ಣು ಉರಿ, ಜ್ವರ ನೆಗಡಿ, ಹೊಟ್ಟೆಯಲ್ಲಿ ಸಂಕಟವಾಗುವುದು ಹೀಗೆ ನಾನಾ ರೀತಿಯ ಸಮಸ್ಯೆಯಿಂದ ಜನರು ಬಳಲುತ್ತಿದ್ದಾರೆ. ಒಂದೊಂದು ಮನೆಯಲ್ಲಿ 10 ರಿಂದ 12 …

Read More »

ಹಿಂದೂಗಳನ್ನು ನಾಶ ಮಾಡುತ್ತೇನೆ ಎನ್ನುವವರಿಗೆ ಹೆಚ್ಚು ಅನುದಾನ; ಹಿಂದೂ ರಕ್ಷಕರಿಗೆ ಭದ್ರತೆ ಹಿಂದಕ್ಕೆ; ಸಿಎಂ ವಿರುದ್ಧ ಮತ್ತೆ ಯತ್ನಾಳ ಕಿಡಿ

ವಿಜಯಪುರ; ತಮಗೆ ನೀಡಲಾಗಿದ್ದ ಭದ್ರತೆ ಹಿಂಪಡೆದ ವಿಚಾರವಾಗಿ ಯತ್ನಾಳ ಅವರು ಸಿಎಂ ಯಡಿಯೂರಪ್ಪ ವಿರುದ್ಧ ಫುಲ್ ಗರಂ ಆಗಿದ್ದಾರೆ. ವಿಜಯಪುರ ನಗರದ ಹೊರವಲಯದಲ್ಲಿ ಭೂತನಾಳ ಕೆರೆಯ ಪಕ್ಕದಲ್ಲಿರುವ ಕುಡಿಯುವ ನೀರಿನ ನೂತನ ಘಟಕ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಅಭಿವೃದ್ದಿ ಬಗ್ಗೆ ಮಾತನಾಡಿದ್ದಕ್ಕೆ ನನಗೆ ನೀಡಿದ್ದ ಭದ್ರತೆ ಹಿಂಪಡೆದಿದ್ದಾರೆ. ನಾವು ಕೇಳಿದರೆ ಹಣ ಇಲ್ಲ ಅಂತಾರೆ. ಆದರೆ, ಜಮೀರ ಅಹ್ಮದ್ ಖಾನ್ ಕೇಳಿದರ ಹಣ ನೀಡುತ್ತಾರೆ. ನಾಲ್ಕೈದು ಜನ …

Read More »