ಬೆಂಗಳೂರು: ಹೊಸ ಸಚಿವರಿಗೆ ಖಾತೆ ಹಂಚಿಕೆ ಕಸರತ್ತಿನ ಹೊತ್ತಲ್ಲೇ ಇಡೀ ಸಂಪುಟವನ್ನೇ ವಿಸರ್ಜಿಸಿ, ಹೊಸದಾಗಿ ಸಂಪುಟ ರಚಿಸಿ ಅನ್ನೋ ಕೂಗು ಎದ್ದಿದೆ. ಸಂಪುಟ ಪುನಾರಚನೆ ಮಾಡುವುದು ಒಳ್ಳೆಯದು. ಹಳಬರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು. ಆಗ ಮುಂದೆ 150 ಸೀಟು ಬರೋಕೆ ಸಾಧ್ಯ. ಉತ್ತಮ ಆಡಳಿತ ಕೊಡೋಕೆ ಸಾಧ್ಯ ಅಂತ ಶಾಸಕ ತಿಪ್ಪಾರೆಡ್ಡಿ ಆಗ್ರಹಿಸಿದ್ದಾರೆ.ಸಚಿವರಾಗಿ 20 ತಿಂಗಳು ಪೂರೈಸಿದವರನ್ನು ಕೈ ಬಿಡಿ. 32 ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಿ ಅಂತ …
Read More »Daily Archives: ಜನವರಿ 20, 2021
35 ಲಕ್ಷ ಲೂಟಿ ಮಾಡಿದ್ದ ಆರೋಪಿಗಳು ಅಂದರ್
ಹುಬ್ಬಳ್ಳಿ: ಎರಡು ವರ್ಷದ ಹಿಂದೆ ಪ್ರಯಾಣಿಕರೊಬ್ಬರ ಜೊತೆ ಗಲಾಟೆ ಮಾಡಿ 35 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಹಿಡಿಯುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. 2019 ರಲ್ಲಿ ಕಾರವಾರದ ಅಡಿಕೆ ಗೋದಾಮಿನ ನೌಕರ ಅಹ್ಮದ್ ತಮ್ಮ ಮಾಲೀಕ ಹೇಳಿದ ಹಾಗೇ ಹುಬ್ಬಳ್ಳಿಯ ದುರ್ಗದ ಬೈಲಿನ ಬಂಗಾರದ ಅಂಗಡಿಯಲ್ಲಿ 35 ಲಕ್ಷ ಹಣವನ್ನು ಪಡೆದು ತಮ್ಮ ಊರಿಗೆ ಬಸ್ ನಲ್ಲಿ ಪ್ರಯಾಣವನ್ನು ಮಾಡುತ್ತಿದ್ದರು. ಈ ವೇಳೆ ಆರೋಪಿಗಳು …
Read More »ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ: ಡಿ.ವಿ.ಸದಾನಂದ ಗೌಡ
ಮಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದ ಸಂದರ್ಭದಲ್ಲೂ ಯತ್ನಾಳ್ ಇದೇ ರೀತಿ ಹೇಳಿಕೆ ನೀಡುತ್ತಿದ್ದರು. ಹಲವು ಎಚ್ಚರಿಕೆಯ ಬಳಿಕವೂ ಅವರು ತಮ್ಮ ವರ್ತನೆ ಸರಿಪಡಿಸಿಕೊಳ್ಳದ ಕಾರಣ ನಾನೇ ಅವರನ್ನು 6 …
Read More »ಪ್ರಾಣ ಉಳಿಸೋ ಸಂಜೀವಿನಿ, ಜೀವಾಮೃತ ಅಂತೆಲ್ಲಾ ಕರೆಸಿಕೊಳ್ತಿದ್ದ ವ್ಯಾಕ್ಸಿನ್ಗೆ ಡಿಮ್ಯಾಂಡೇ ಇಲ್ಲ.
ಬೆಂಗಳೂರು: ಆಬಾಲ ವೃದ್ಧರಾದಿಯಾಗಿ ಎಲ್ಲರನ್ನೂ ಹಿಂಡಿ ಹಿಪ್ಪೆ ಮಾಡಿರೋ ‘ಚೀನಿ ವೈರಸ್’ ಕೊರೊನಾಗೆ ಇಷ್ಟು ದಿನ ವ್ಯಾಕ್ಸಿನ್ ಬಂದ್ರೆ ಸಾಕಪ್ಪಾ ಅಂತ ಜನ ಕಾಯುತ್ತಿದ್ದರು. ಆದ್ರೆ ಕೊವಿಶೀಲ್ಡ್ ವ್ಯಾಕ್ಸಿನ್ ವಿತರಣೆಯ ಮಹಾಯಜ್ಞಕ್ಕೆ ಚಾಲನೆ ಸಿಕ್ಕು ನಾಲ್ಕನೇ ದಿನ ಆದರೂ ಟಾರ್ಗೆಟ್ ರೀಚ್ ಆಗೋಕೆ ಒದ್ದಾಡುವಂತಾಗಿದೆ. ಪ್ರಾಣ ಉಳಿಸೋ ಸಂಜೀವಿನಿ, ಜೀವಾಮೃತ ಅಂತೆಲ್ಲಾ ಕರೆಸಿಕೊಳ್ತಿದ್ದ ವ್ಯಾಕ್ಸಿನ್ಗೆ ಡಿಮ್ಯಾಂಡೇ ಇಲ್ಲ. ರಾಜ್ಯವೂ ಸೇರಿದಂತೆ ದೇಶಾದ್ಯಂತ ಮೊದಲ ಹಂತದ ಕೊರೋನಾ ವಾರಿಯರ್ಸ್ ವ್ಯಾಕ್ಸಿನೇಷನ್ಗೆ ನಿರೀಕ್ಷಿತ …
Read More »ಸ್ಮಶಾನಕ್ಕಾಗಿ ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ
ಮಂಡ್ಯ: ಸ್ಮಶಾನಕ್ಕಾಗಿ ಆಗ್ರಹಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ. ಕಾರೇಕುರ ಗ್ರಾಮದ ಪುಟ್ಟಮ್ಮ ಎಂಬವರು ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮೃತಪಟ್ಟಿದ್ದರು. ಐದಾರು ದಶಕಗಳಿಂದ ಅಂತ್ಯಸಂಸ್ಕಾರ ನಡೆಸುತ್ತಿದ್ದ ಬೆಳಗೋಳ ಗ್ರಾಮ ವ್ಯಾಪ್ತಿಯ ಸರ್ವೆ ನಂ. 342ರ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದಾಗ ಥಾಮಸ್ ಮ್ಯಾಥ್ಯೂ ಎಂಬವರು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಶವವನ್ನು ಶ್ರೀರಂಗಪಟ್ಟಣ ತಹಶೀಲ್ದಾರ್ ಕಚೇರಿ …
Read More »