Breaking News
Home / 2021 / ಜನವರಿ / 27 (page 2)

Daily Archives: ಜನವರಿ 27, 2021

ಕೇಂದ್ರದಿಂದ 18 ರಾಜ್ಯಗಳಿಗೆ 12,351 ಕೋಟಿ ಅನುದಾನ ಬಿಡುಗಡೆ : ಕರ್ನಾಟಕಕ್ಕೆ 2,412 ಕೋಟಿ

ಬೆಂಗಳೂರು : ಕೇಂದ್ರ ಸರಕಾರ 18 ರಾಜ್ಯಗಳಿಗೆ 2020-21ನೇ ಸಾಲಿನ 2 ನೇ ಕಂತಿನ 12,351 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ (ಆರ್ ಎಲ್ ಬಿ) 2ನೇ ಕಂತಿನ 2412.75 ಕೋಟಿ ರೂಪಾಯಿ ಅನುದಾನವನ್ನ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಹಳ್ಳಿ, ತಾಲೂಕುಗಳಾದ್ಯಂತ ಸಂಪನ್ಮೂಲಗಳನ್ನು ಸಂಗ್ರಹಿಸಲು ಅನುವು ಮಾಡಿಕೊಡಲು ಪಂಚಾಯತ್ ರಾಜ್ ವ್ಯವಸ್ಥೆಯ ಎಲ್ಲಾ ಮೂರು ಹಂತಗಳಿಗೆ ಅಂದರೆ ಗ್ರಾಮ, ತಾಲೂಕು ಹಾಗೂ ಜಿಲ್ಲೆಗಳಿಗೆ …

Read More »

ಅಧಿವೇಶನ ಹಿನ್ನೆಲೆ ವಿಧಾನಸಭೆ ಸುತ್ತಮುತ್ತಲ 2 ಕೀ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಬೆಂಗಳೂರು:ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದ ಎರಡು ಕಿಲೋಮೀಟರ್‌ ವ್ಯಾಪ್ತಿಯಲ್ಲಿ ಜ.28ರಿಂದ ಫೆ. 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಆದೇಶ ಹೊರಡಿಸಿದ್ದಾರೆ. ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ, ವಿಧಾನಸೌಧ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ. ಇದರಿಂದ ಅಧಿವೇಶದ ಕಾರ್ಯಕಲಾಪಗಳಿಗೆ ತೊಂದರೆ ಆಗಬಹುದು. ಸುಗಮ ಸಂಚಾರ ವ್ಯವಸ್ಥೆಗೂ ಅಡ್ಡಿಉಂಟಾಗಲಿದೆ. ಈ ನಿಟ್ಟಿನಲ್ಲಿ ಜ.28ರಿಂದ ಫೆ.5ರವರೆಗೆ ಅಧಿವೇಶನಗಳು ನಡೆಯುವ ದಿನಗಳಂದು ಬೆಳಿಗ್ಗೆ ಆರರಿಂದ ರಾತ್ರಿ ಹನ್ನೆರಡು …

Read More »

ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ

ಗಜೇಂದ್ರಗಡ(ಗದಗ): ಭಾರತ -ಪಾಕ್ ಗಡಿಯಲ್ಲಿ ಪಾಕಿಸ್ತಾನ ಹೇಗೆ ನಡೆದುಕೊಳ್ಳುತ್ತಿಯೋ ಅದೇ ರೀತಿಯಲ್ಲಿ ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ನಡೆದುಕೊಳ್ಳುತ್ತಿದೆ. ವಿನಾಕಾರಣ ಕನ್ನಡಿಗರನ್ನು ಕೆಣಕಿದರೆ, ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಗುಡುಗಿದರು. ಪಟ್ಟಣದಲ್ಲಿ ಬೆಳಗಾವಿ ವಿಭಾಗ ಮಟ್ಟದ ಕರವೇ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ ದ ಅವರು, ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಾಜ್ಯಗಳನ್ನು ರಚಿಸಿ, ಅಖಂಡ ಭಾರತವನ್ನು ಸ್ಥಾಪಿಸಲಾಗಿದೆ. ಆದರೆ, ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಗಡಿ …

Read More »

ಆಟೋ ಚಾಲಕನ ಎಡವಟ್ಟಿನಿಂದ ನಡೀತು ಭೀಕರ ಸರಣಿ ಅಪಘಾತ

ಬೆಂಗಳೂರು: ಬೆಂಗಳೂರು: ಆಟೋ ಚಾಲಕ ಮಾಡಿದ ಎಡವಟ್ಟಿನಿಂದಾಗಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, , ಆಟೋ, ಫ್ಯಾಸಿನೋ ಮತ್ತು ಬೈಕ್​ ನಡುವೆ ಅಪಘಾತವಾಗಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರವಾಗಿ ಗಾಯವಾಗಿದ್ದು, ಮೂರು ವಾಹನ ನುಜ್ಜುಗುಜ್ಜಾಗಿವೆ. ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಅಂತ ತಿಳಿದು ಬಂದಿದೆ. https://www.facebook.com/105350550949710/posts/255497042601726/

Read More »

ಸಿಎಂ ಬಿಎಸ್​ವೈ, ನಿರಾಣಿ ವಿರುದ್ಧದ ಡಿನೋಟಿಫೈ ಪ್ರಕರಣ ತನಿಖೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: 2010-11ರಲ್ಲಿ ನಡೆದಿದ್ದ ಡಿನೋಟಿಫೈ ಪ್ರಕರಣ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ವಿರುದ್ಧ ದೂರು ದಾಖಲಾಗಿತ್ತು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಕ್ರಮ ಡಿನೋಟಿಫಿಕೇಷನ್ ಪ್ರಕರಣವನ್ನು ತನಿಖೆಗೆ ವಹಿಸಿ ಹೈಕೋರ್ಟ್​ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ನ ​ ಮುಖ್ಯ ನ್ಯಾಯಮೂರ್ತಿ ಎಸ್​ಎ ಬೋಬ್ಡೆ, …

Read More »

ನಾಳೆಯಿಂದ ವಿಧಾನಮಂಡಲ ಅಧಿವೇಶನ; ಈ ಬಾರಿ 11 ವಿಧೇಯಕ ಮಂಡನೆ; ಸ್ಪೀಕರ್​ ಕಾಗೇರಿ

ಬೆಂಗಳೂರು (ಜ. 27): ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ನಾಳೆಯಿಂದ ಅಂದರೆ ಜ. 28ರಿಂದ ಪ್ರಾರಂಭವಾಗಲಿದೆ. ಫೆ. 5ರವರೆಗೆ ಏಳು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಈ ಬಾರಿ 11 ವಿಧೇಯಕಗಳು ಮಂಡನೆಯಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಅಧಿವೇಶನ ಹಿನ್ನಲೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿವೇಶನಕ್ಕೆ ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವಂತೆ ರಾಜ್ಯಪಾಲರರಾದ ವಾಜೂಭಾಯಿ ಅವರನ್ನು …

Read More »

ಲೀಕಾಸುರರ ವಿರುದ್ಧ ಮುಲಾಜಿಲ್ಲದೆ ಕ್ರಮ : ಬೊಮ್ಮಾಯಿ

ಬೆಂಗಳೂರು,ಜ.27-ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ)ದ ಪ್ರಥಮ ದರ್ಜೆ ಸಹಾಯಕ(ಎಫ್‍ಡಿಎ) ಹುದ್ದೆಯ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಅವರ ವಿರುದ್ದ ಕ್ರಮ ಜರುಗಿಸಲು ಸಿಸಿಬಿ ಪೊಲೀಸರಿಗೆ ಸೂಚನೆ ಕೊಟ್ಟಿರುವುದಾಗಿ ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಗೋವಿಂದಪುರ ನೂತನ ಪೊಲೀಸ್ ಠಾಣೆಯನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಮೇಯವೇ ಇಲ್ಲ. ಯಾರೇ …

Read More »

ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೆಎಂಎಫ್‍ಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವಸತಿ ನಿಲಯವನ್ನು ನಿರ್ಮಿಸಿಕೊಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಏರ್ಪಡಿಸಿದ್ದ ಕೃತಕ ಗರ್ಭಧಾರಣಾ ಕಾರ್ಯಕರ್ತರಿಗೆ ಇನಾಫ್ ತಂತ್ರಾಂಶವನ್ನು ಒಳಗೊಂಡ ಟ್ಯಾಬ್ ಮತ್ತು ಒಕ್ಕೂಟದ ಕಲ್ಯಾಣ ನಿಧಿಯಿಂದ ಫಲಾನುಭವಿಗಳಿಗೆ ಚೆಕ್‍ಗಳನ್ನು ವಿತರಿಸಿ …

Read More »

ಪ್ರಚೋದನಕಾರಿ ಹೇಳಿಕೆ: ಮಹಾ ಸಿಎಂಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು

ಬೆಳಗಾವಿ: ಗಡಿ ವಿಚಾರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವರಿಗೆ ಸಚಿವ ಶ್ರೀಮಂತ ಪಾಟೀಲ್ ತಿರುಗೇಟು ನೀಡಿದ್ದಾರೆ. ಎಂಇಎಸ್ ಉದ್ಧಟತನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಎಂಇಎಸ್ ನಿಷೇಧಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುವುದಾಗಿ ಹೇಳಿದ್ದಾರೆ. ಅವರಿಗೆ ಒಳ್ಳೆಯದನ್ನು ಬರೆಯಲು ಬರುವುದಿಲ್ಲ. ಅದಕ್ಕಾಗಿ ಈ ರೀತಿಯ ಕೆಲಸ ಮಾಡ್ತಿದ್ದಾರೆ. ಮಹಾರಾಷ್ಟ್ರ ಸಿಎಂಗೆ ಮಾಡಲು ಕೆಲಸವೇ ಇಲ್ಲ. ಯಾವಾಗಲೂ ಗಡಿ ವಿವಾದದ ಬಗ್ಗೆ ಮಾತನಾಡುತ್ತಿರುತ್ತಾರೆ. ಆಗದ ವಿಷಯ, ವಿಚಾರಗಳ …

Read More »

ಪೊಲೀಸರಿಗೆ ಶರಣಾದ 24 ನಕ್ಸಲರು

ದಂತೇವಾಡ: ಛತ್ತೀಸಗಡ ರಾಜ್ಯದ ದಕ್ಷಿಣ ಬಸ್ತಾರ್ ವಲಯದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ 24 ಮಂದಿ ಬಂಡುಕೋರರು ಗಣರಾಜ್ಯೋತ್ಸವದಂದು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸ್ಥಳೀಯ ಪೊಲೀಸರಿಗೆ ಶರಣಾಗಿದ್ದಾರೆ. ಜಿಲ್ಲಾ ಪೊಲೀಸರು ಕರೆ ನೀಡಿರುವ ಮನೆ ಮತ್ತು ಗ್ರಾಮ ವಾಪಸಾತಿಯ (ಲೊನ್ ವರತ್ತು ಪುನರ್ವಸತಿ) ಅಭಿಯಾನದಿಂದ ಪ್ರೇರಿತರಾಗಿ ಶರಣಾಗಿದ್ದಾರೆ ಎಂದು ದಂತೇವಾಡ ಎಸ್ಪಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ. ಶರಣಾದ ನಕ್ಸಲ್ ನಾಯಕರಲ್ಲಿ ಮಾವೋವಾದಿ ಚಿಕ್ಪಾಲ್-ಜಂಗಲೆಪಾರ ದಂಡಕಾರಣ್ಯ ಆದಿವಾಸಿ ಕಿಸಾನ್ ಮಜ್ದೂರ್‍ನ ಮುಖ್ಯಸ್ಥ ಆಯ್ತು ಮುಚಾಕಿ …

Read More »