Breaking News
Home / 2021 / ಜನವರಿ (page 10)

Monthly Archives: ಜನವರಿ 2021

ವಿಧಾನಪರಿಷತ್‍ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು, ಜ.28- ವಿಧಾನಪರಿಷತ್‍ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಗ್ಗೆ 9.30ಕ್ಕೆ ಪಕ್ಷದ ಮುಖಂಡರೊಂದಿಗೆ ಆಗಮಿಸಿದ ಪ್ರಾಣೇಶ್ ಅವರು ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ …

Read More »

ಉದ್ಧವ್ ಠಾಕ್ರೆ ಒಬ್ಬ ‘ಮಹಾ’ ಹುಚ್ಚ : ಸಾ.ರಾ.ಗೋವಿಂದು

ಬೆಂಗಳೂರು, ಜ.28- ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಒಬ್ಬ ಅರೆಹುಚ್ಚ ಎಂದುಕೊಂಡಿದ್ದೆವು. ಪೂರ್ತಿ ಹುಚ್ಚ ಎಂಬುದು ಅವರ ಹೇಳಿಕೆಯಿಂದ ಸಾಬೀತಾಗಿದೆ ಎಂದು ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಕಿಡಿಕಾರಿದ್ದಾರೆ. ಮರಾಠಿ ಮಾತನಾಡುವವರು ಇರುವ ಕರ್ನಾಟಕದ ಗಡಿ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶ ಎಂಬುದಾಗಿ ಘೋಷಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು ರಾಜಕೀಯ ಅಸ್ತಿತ್ವಕ್ಕಾಗಿ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡಿರುವ ಉದ್ಧವ್ ಠಾಕ್ರೆ ಅವರಿಗೆ …

Read More »

ದರೋಡೆಗೆ ಹೋದ ಮನೆಯಲ್ಲಿ ಸೇಬು ತಿಂದು ಸಿಕ್ಕಿಬಿತ್ತು ಕಳ್ಳರ ಗ್ಯಾಂಗ್!

ಬೆಂಗಳೂರು (ಜ. 28): ಥೇಟ್ ಸಿನಿಮಾ ಶೈಲಿಯಲ್ಲಿ ಸ್ಕೆಚ್ ಹಾಕುತ್ತಿದ್ದ ಆ ಗ್ಯಾಂಗ್ ದೊಡ್ಡ ದೊಡ್ಡ ಮನೆಗಳನ್ನು ನೋಡಿ ಟಾರ್ಗೆಟ್ ಮಾಡುತ್ತಿತ್ತು. ಅವರು ಇಟ್ಟ ಗುರಿ ಯಾವತ್ತೂ ಮಿಸ್ ಆಗೇ ಇಲ್ಲ. ಆ ಗ್ಯಾಂಗ್‌ನ ಲೀಡರ್ ಮಾಡಿರೋ ಕೃತ್ಯಗಳು ಒಂದೆರಡಲ್ಲ. ಬರೋಬ್ಬರಿ 50ಕ್ಕೂ ಹೆಚ್ಚು ಪ್ಲಾನ್‌ ಮಾಡುತ್ತಿದ್ದ ಆ ಗ್ಯಾಂಗ್ ಕಂಬಿಯ ಹಿಂದೆ ಹೋಗಿದೆ. ಆ ಕಳ್ಳರ ಗ್ಯಾಂಗನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸಲಾಗಿದೆ. ಕದಿಯಲು ಹೋದ ಮನೆಯ ಅಡುಗೆ ಮನೆಯಲ್ಲಿ ಸೇಬು …

Read More »

ವಿಧಾನಮಂಡಲ ಅಧಿವೇಶನ ಪ್ರಾರಂಭ; ರಾಜ್ಯಪಾಲರ ಭಾಷಣದ ಹೈಲೈಟ್ಸ್

ಬೆಂಗಳೂರು(ಜ. 28): ಇಂದಿನಿಂದ ಏಳು ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಅಧಿವೇಶನ ಪ್ರಾರಂಭವಾಯಿತು. ಫೆ. 5ರವರೆಗೆ ನಡೆಯುವ ಈ ಅಧಿವೇಶನದಲ್ಲಿ ತೀವ್ರ ರಾಜಕೀಯ ಜಟಾಪಟಿ ನಡೆಯುವುದು ನಿಶ್ಚಿತವಾಗಿದೆ. ಈ ಮಧ್ಯೆ 11 ಮಸೂದೆಗಳು ಮಂಡನೆಗೆ ಸಿದ್ಧವಾಗಿವೆ. ಇವುಗಳ ಪೈಕಿ 2-3 ಮಸೂದೆಗಳ ಸುಗ್ರೀವಾಜ್ಞೆ ಕೂಡ ಆಗಲಿದೆ. ವಿಧಾನಪರಿಷತ್​ನಲ್ಲಿ ಸಭಾಪತಿ ಸ್ಥಾನಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮಧ್ಯೆ ಒಪ್ಪಂದ ಆಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. …

Read More »

ನಾವು ಮುಂಬೈ ಪಡದೇ ತಿರುತ್ತೇವೆ : ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು : ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು. ಅಲ್ಲಿಯವರೆಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಕ್ಷೇತ್ರದ ಮೊದಲ ಶಾಸಕ ಮುಂಬೈ ವಿಧಾನಸಭೆಗೆ ಹೋಗಿದ್ದರು. ಮುಂಬೈನಲ್ಲಿ ನಮ್ಮ ಆಸ್ತಿ ಇದೆ. ನಾವು ಮುಂಬೈಯನ್ನು ಕರ್ನಾಟಕದ ಭಾಗ ಎಂದು ತೀರ್ಮಾನಿಸಿದ್ದೇವೆ. ಹಾಗಾಗಿ ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಿ ಎಂದಿದ್ದಾರೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಸಂಬಂಧ ಮಹಾಜನ್​ …

Read More »

ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದ್ರೆ ನಾವು ಕೈಕಟ್ಟಿ ಕೂರುವುದಿಲ್ಲ : ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ರಾಜ್ಯದಲ್ಲಿ ಪಕ್ಷಾತೀತ ವಿರೋಧ ವ್ಯಕ್ತವಾಗಿದ್ದು, ಎಲ್ಲ ಪಕ್ಷದ ನಾಯಕರು ಕಿಡಿ ಕಾರಿದ್ಧಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯೂ ಸಹ ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಬೇಕು ಎಂದಿದ್ದಾರೆ. ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದರೆ ನಾವು ಕೈಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಅವರು ಹಾಗೆ ಕೇಳಿದರೆ ನಾವೂ ಸೊಲ್ಲಾಪುರ, ಮುಂಬೈಯನ್ನು ಕೇಳ ಬೇಕಾಗುತ್ತದೆ. ನಾವು ವಿವಿಧತೆಯಲ್ಲಿ ಏಕತೆ …

Read More »

ಸಿಂದಗಿ ಶಾಸಕ ಎಂ.ಸಿ. ಮನಗೂಳಿ ನಿಧನ

ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದ ಹಿರಿಯ ಶಾಸಕ ಎಂ. ಸಿ ಮನಗೂಳಿ (85) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜನವರಿ 9 ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು. ಕೋವಿಡ್ ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶಾಸಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಸಿಂದಗಿ‌ ಪಟ್ಟಣದ ಅವರ …

Read More »

ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು : ವಿಧಾನಪರಿಷತ್ ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಪಕ್ಷದ ಮುಖಂಡರೊಂದಿಗೆ ಆಗಮಿಸಿ, ಇಂದು ಬೆಳಗ್ಗೆ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಪ್ರಾಣೇಶ್ ಅವರ ಆಯ್ಕೆಗೆ …

Read More »

ವಿಧಾನಮಂಡಲ ಅಧಿವೇಶನ ಆರಂಭ : ಭಿತ್ತಿಪತ್ರ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಭಿತ್ರಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆಯೂ ಸಹ ರಾಜ್ಯಪಾಲರು ಭಾಷಣ ಆರಂಭಿಸಿದರು. ಕೊರೊನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಸರ್ಕಾರದ ನಿಯಮವನ್ನು ಜನರು ಅಚ್ಚುಕಟ್ಟಾಗಿ ಪಾಲಿಸಿದ್ದು, ಕೊರೊನಾ ವಾರಿಯರ್ಸ್ ಗೆ ಧನ್ಯವಾದಗಳು ಎಂದರು. ಕೊರೊನಾಗೆ ಬಲಿಯಾದ …

Read More »

ಆರೋಗ್ಯಾಧಿಕಾರಿ ವ್ಯವಸ್ಥಾಪಕ ಅಧಿಕಾರಿ ಲಂಚ ಸ್ವೀಕರಿಸುವ ವೇಳೆಯಲ್ಲಿ ACB ರೇಡ್…!

ವಿಜಯಪುರ : ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚದ ಬೇಡಿಕೆ ಇಟ್ಟಿದ ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು ದಂತ ಸಹಾಯಕ ಹುದ್ದೆ ನೇಮಕಾತಿ ಮಾಡಿಸುವುದಾಗಿ ಬೇಡಿಕೆ ಇಟ್ಟಿದ್ದ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಮನೋಹರ್ ಪಾಟೀಲ್ ಮೂವತ್ತು ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿ ತನಿಖೆ ಮುಂದುವರೆಸಿದ್ದಾರೆ, ಪ್ರಕರಣ ಕುರಿತು ವಿಜಯಪುರ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »