Home / 2021 / ಜನವರಿ (page 3)

Monthly Archives: ಜನವರಿ 2021

ಡಬಲ್ ಮರ್ಡರ್ ಕೇಸ್ – ಮಗಳ ನಾಲಗೆಯನ್ನು ತುಂಡರಿಸಿ ತಿಂದಳು ತಾಯಿ

ತಿರುಪತಿ: ಆಂಧ್ರದ ಮದನಪಲ್ಲಿಯಲ್ಲಿ ಜನವರಿ 24ರಂದು ಹೆತ್ತವರೇ ಇಬ್ಬರು ಮಕ್ಕಳನ್ನು ಕೊಂದ ಪ್ರಕರಣದಲ್ಲಿ ಬೆಚ್ಚಿಬೀಳುವ ವಿಚಾರಗಳು ಬೆಳಕಿಗೆ ಬರುತ್ತಿವೆ. ತನ್ನನ್ನು ತಾಯಿ ಕಾಳಿಯ ಅಪರಾವತಾರ ಎಂದು ಭಾವಿಸಿಕೊಂಡ ನನ್ನ ಪತ್ನಿ ಪದ್ಮಜ, ದೊಡ್ಡ ಮಗಳು ಅಲೇಖ್ಯಾಳನ್ನು ಕೊಂದ ನಂತರ, ನಾಲಗೆಯನ್ನು ಕಟ್ ಮಾಡಿಕೊಂಡು ತಿಂದುಬಿಟ್ಟಳು’ ಎಂದು ಪುರುಷೋತ್ತಮ ನಾಯ್ಡು ಕಣ್ಣೀರಿಡುತ್ತಾ ವೈದ್ಯರ ಮುಂದೆ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಈ ವಿಚಾರದಲ್ಲಿ ಸ್ಪಷ್ಟತೆ ಸಿಗುವ …

Read More »

ದೆಹಲಿ ಗಡಿಯಲ್ಲಿ ಇಂಟರ್‌ನೆಟ್‌ ಸೇವೆ ಬಂದ್‌

ನವದೆಹಲಿ/ ಬೆಂಗಳೂರು: ದೆಹಲಿ ಗಡಿಗಳಲ್ಲಿ ಹೈಡ್ರಾಮಾ ಮುಂದುವರಿದಿದೆ. ಮೊನ್ನೆ ಘಾಜಿಪುರ ಗಡಿಯಲ್ಲಿ ಕರೆಂಟ್, ನೀರು ಕಡಿತಗೊಳಿಸಿದ್ದ ಸರ್ಕಾರ ಈಗ ರೈತರು ಪ್ರತಿಭಟನೆ ನಡೆಸುತ್ತಿರುವ ಎಲ್ಲ ಗಡಿಗಳಲ್ಲಿ ಇಂಟರ್‌ನೆಟ್‌ ಸೇವೆಯನ್ನು ಇದ್ದಕ್ಕಿದ್ದಂತೆ ಬಂದ್ ಮಾಡಿದೆ. ಸಿಂಘು, ಟಿಕ್ರಿ, ಗಾಜಿಪುರ್ ಗಡಿಯಲ್ಲಿ ಜ.31ರ ರಾತ್ರಿ 11 ಗಂಟೆಯವರೆಗೆ ತಾತ್ಕಾಲಿಕವಾಗಿ ಇಂಟರ್‌ನೆಟ್‌ ಸೇವೆ ಸ್ಥಗಿತಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ನಡೆಯುತ್ತಿರುವ ರೈತರ ಪ್ರತಿಭಟನೆಯ ಮಧ್ಯೆ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ …

Read More »

ಬೆಳಗಾವಿ ಕೃಷ್ಣಾ ಪಾಟೀಲ್ ಎಂಬುವವರ ಹೋರಿಯನ್ನು 4ಲಕ್ಷ 55 ಸಾವಿರ ರೂಪಾಯಿ ಕೊಟ್ಟು ಖರೀದಿ

ಧಾರವಾಡ: ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಬಸಪ್ಪ ಅವರಿಗೆ ಸೇರಿದ ಹೋರಿಯೊಂದು 4.55 ಲಕ್ಷ ರೂ.ಗೆ ಬಿಕಾರಿಯಾಗಿ ಎಲ್ಲರ ಹುಬ್ಬೆರುವಂತೆ ಮಾಡಿದೆ. ಬೆಳಗಾವಿ ಜಿಲ್ಲೆಯ ಬೆಳಗುಂದಿಯ ಕೃಷ್ಣಾ ಪಾಟೀಲ್ ಎಂಬುವವರು ಈ ಹೋರಿಯನ್ನು ಹುಡುಕಿಕೊಂಡು ಬಂದು, 4ಲಕ್ಷ 55 ಸಾವಿರ ರೂಪಾಯಿ ಕೊಟ್ಟು ಖರೀದಿ ಮಾಡಿದ್ದಾರೆ. ಹೋರಿಯ ಮಾಲೀಕ ಬಸಪ್ಪ ಅವರ ತಂದೆ ಭೀಮಪ್ಪ ಕಳೆದ ನಾಲ್ಕು ವರ್ಷಗಳ ಹಿಂದೆ ರಾಣೆಬೆನ್ನೂರ ತಾಲೂಕು ದೇವರಗುಡ್ಡದಲ್ಲಿ 30 ಸಾವಿರ ರೂಪಾಯಿಗೆ ಜೋಡಿ ಹೋರಿ …

Read More »

ಮಹಿಳೆಯರ ಭಾವನೆಗೆ ಧಕ್ಕೆ – ಮಿಂತ್ರಾದಿಂದ ಲೋಗೋ ಬದಲಾವಣೆ

ಮುಂಬೈ: ಬಟ್ಟೆಗಳನ್ನು ಮಾರಾಟ ಮಾಡುತ್ತಿರುವ ಖ್ಯಾತ ಆನ್‌ಲೈನ್‌ ಶಾಪಿಂಗ್‌ ತಾಣ ಮಿಂತ್ರಾ ಮಹಿಳೆಯೊಬ್ಬರ ದೂರಿನ ಹಿನ್ನೆಲೆಯಲ್ಲಿ ತನ್ನ ಲೋಗೋವನ್ನು ಬದಲಾಯಿಸಿದೆ. ಸರ್ಕಾರೇತರ ಸಂಸ್ಥೆ ಅವೆಸ್ಟಾ ಫೌಂಡೇಶನಿನ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ನಾಜ್​ ಪಟೇಲ್​ ಎಂಬುವವರು ಕಳೆದ ಡಿಸೆಂಬರ್​ನಲ್ಲಿ ಸೈಬರ್​ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಲೋಗೋ ಬದಲಾವಣೆ ಮಾಡದೇ ಇದ್ದರೆ ಮುಂಬೈ ಮೂಲದ ಕಂಪನಿ ವಿರುದ್ಧ ಕಾನೂನು ಸಮರ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ಮಿಂತ್ರಾ ಲೋಗೋ ಬೆತ್ತಲೆ …

Read More »

ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ರಾಜ್ಯ ವಿಧಾನಸಭಾ ಚುನಾವಣೆ: ಸಿಎಂ ಇಬ್ರಾಹಿಂ

ರಾಯಚೂರು: ಮುಖ್ಯಮಂತ್ರಿ ಯಡಿಯೂರಪ್ಪನವರದ್ದು ಸಫಲತೆಗಿಂತ ವಿಫಲತೆನೆ ಜಾಸ್ತಿ. ಕ್ಯಾಬಿನೆಟ್ ಮಾಡುವುದರಲ್ಲೇ ಅವರ ಸಮಯ ಹೋಗುತ್ತಿದೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ವಿಧಾನಸಭೆ ಚುನಾವಣೆ ಬಂದರೂ ನಾವು ಅಚ್ಚರಿ ಪಡಬೇಕಿಲ್ಲ ಅಂತ ಮಾಜಿ ಸಚಿವ ಸಿಎಂ ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ, ಈ ಹಿಂದೆ ಡಿಸೆಂಬರ್‍ನಲ್ಲಿ ರಾಜಕೀಯ ಕೋಲಾಹಲವಾಗುತ್ತೆ ಅಂತ ಹೇಳಿದ್ದೆ ಅದು ನಿಜವಾಗಿದೆ ಎಂದರು. ಕೂಡಲೇ ಚುನಾವಣೆ ಮಾಡಬೇಕು ಅನ್ನೋದು ಬಿಜೆಪಿ ವರಿಷ್ಠರಲ್ಲೂ ಚಿಂತನೆ ಶುರುವಾಗಿದೆ. …

Read More »

ಚಿನ್ನದ ಒಡೆವೆಗಳನ್ನು ತೊಳೆದುಕೊಡುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಕಳ್ಳರು ವಂಚನೆ

ಹುಬ್ಬಳ್ಳಿ/ಧಾರವಾಡ: ಚಿನ್ನದ ಒಡೆವೆಗಳನ್ನು ತೊಳೆದುಕೊಡುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಕಳ್ಳರು ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ಚೆನ್ನಪೇಟೆಯ ಸರ್ಕಾರಿ ಶಾಲೆಯ ಹಿಂಬಾಗದಲ್ಲಿ ನಡೆದಿದೆ. ವಿಷ್ಣುಸಾ ಪವಾರ ಎಂಬವರ ಮನೆಯಲ್ಲಿ ಸರೋಜಾ ಹಾಗೂ ಸೊಸೆ ಅನಿತಾ ಮೋಸಕ್ಕೆ ಒಳಗಾಗಿದ್ದು, ಆರು ಬಳೆ ಮತ್ತು ಮಂಗಳಸೂತ್ರ ತೊಳೆಯುವುದಾಗಿ ಹೇಳಿದ್ದಾರೆ. ಕುಕ್ಕರಿನಲ್ಲಿ ಬಂಗಾರ ತೊಳೆಯುವ ನೆಪ ಮಾಡಿ, ಅತ್ತೆಯನ್ನು ಕುಕ್ಕರ್ ಮುಚ್ಚಳ ತೆಗೆಯಲು ಹೇಳಿ ಒಳಗಡೆ ಕಳಿಸಿದ್ದಾರೆ. ಇದೇ ವೇಳೆ ತಮ್ಮ ಕೈ ಚಳಕ …

Read More »

ಮಕ್ಕಳನ್ನು ದತ್ತು ನೀಡಲಿಲ್ಲ ಎಂದು ಅಣ್ಣನ ಕೊಲೆ ಮಾಡಿದ ತಮ್ಮ

ಕೋಲಾರ (ಜ. 31):  ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮಲ್ಲೆಂಗುರ್ಕಿ ರೈಲ್ವೆ ಅಂಡರ್ ಪಾಸ್ ಬಳಿ ಕಳೆದ ಜ. 23 ರಂದು  ಸುಟ್ಟು ಕರಕಲಾದ ಸ್ಥಿತಿಯಲ್ಲಿ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ಪ್ರಕರಣವನ್ನು ಭೇದಿಸಿದ ಪೊಲೀಸರಿಗೆ ತಮ್ಮನ್ನೇ ಅಣ್ಣನನ್ನು ಕೊಲೆ ಮಾಡಿರುವುದು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಬಂಗಾರಪೇಟೆ ನಿವಾಸಿ ರಮೇಶ್ ಕೊಲೆಯಾಗಿದ್ದು, ಆತನ ತಮ್ಮ ರಾಜೇಶ್​ ಈ ಕೃತ್ಯ ಎಸಗಿದವನು. ಮಕ್ಕಳನ್ನು ದತ್ತು ನೀಡದ ಹಿನ್ನಲೆ ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬಯಲಾಗಿದೆ. …

Read More »

ನಾಳೆ ಪೋಲಿಯೋ ಲಸಿಕೆ ಅಭಿಯಾನ; ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿಗೆ ಈ ಆಪ್ ಬಳಸಿ

ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ.

Read More »

ಗೋಕಾಕ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಗೋಕಾಕ ಆಯ್ಕೆ

ಗೋಕಾಕ: ಇಲ್ಲಿನ ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಕುತ್ಬುದ್ಧೀನ್ ಗೋಕಾಕ ಶನಿವಾರ ಆಯ್ಕೆಯಾಗಿದ್ದಾರೆ. ಕುತ್ಬುದ್ಧೀನ್ ಅವರು ಮೂರು ಬಾರಿ ನಗರಸಭೆಗೆ ಆಯ್ಕೆಯಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಮುಖಂಡರಾದ ಲಖನ್ ಜಾರಕಿಹೊಳಿ ಹಾಗೂ ಅಂಬಿರಾವ್ ಪಾಟೀಲ ಅವರ ಸೂಚನೆಯ ಮೇರೆಗೆ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಂಚ್ಯಾಳ, ನಗರ ಸೇವಕರಾದ ಅಬ್ಬಾಸ ದೇಸಾಯಿ, ಸಂತೋಷ …

Read More »

ಕರ್ತವ್ಯದ ಸಮಯದಲ್ಲಿ ಕ್ರಿಮಿನಲ್ ಜತೆಗೆ ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ

ಮಂಗಳೂರು : ಕರ್ತವ್ಯದ ವೇಳೆಯಲ್ಲಿ ಬಾರಿನಲ್ಲಿ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಯೊಬ್ಬನೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪುಲ್ ವೈರಲ್ ಆಗಿದೆ. ಮಂಗಳೂರು ಸಿಸಿಬಿ ವಿಭಾಗದ ಎಂಟು ಮಂದಿ ಪೊಲೀಸರು ಮಂಗಳೂರು ಹೊರವಲಯದ ಕುತ್ತಾರು ಬಳಿಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಬಾರ್ ಹೊರಗೆ ಸರಕಾರಿ ಟಿ.ಟಿ ವಾಹನ ನಿಲ್ಲಿಸಿ ಪಾರ್ಟಿ ನಡೆಸುತ್ತಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ …

Read More »