ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಉದ್ಧಟತನ ಮೆರೆಯುತ್ತಿದ್ದು, ಪಾಲಿಕೆ ಮುಂದೆ ಭಗವ ಧ್ವಜಾ ಹಾರಿಸುತ್ತೇವೆ ಎಂದು ಕ್ಯಾತೆ ತೆಗೆದಿದ್ದಾರೆ. ಮಹಾರಾಷ್ಟ್ರದಿಂದ ಶಿವಸೇನೆ ಪುಂಡರು ಬೆಳಗಾವಿ ಗಡಿ ಪ್ರವೇಶಿಸಲು ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ. ಇನ್ನು ಶಿವಸೇನೆ ಪುಂಡರನ್ನ ತಡೆ ಹಿಡದ ಕರ್ನಾಟಕ ಪೊಲೀಸರು ಲಾಠಿ ಚಾರ್ಜ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ಬಗ್ಗೆ ಬೆಳಗಾವಿ ಪ್ರತಿನಿಧಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಸಿದ್ದು, ಶಿವಸೇನೆ ಪುಂಡರ …
Read More »Monthly Archives: ಜನವರಿ 2021
ಬೆಳಗಾವಿಯಲ್ಲಿ ಪುಂಡಾಟ ಮೆರೆದ ‘ಶಿವಸೇನೆ ಪುಂಡ’ರನ್ನು ಬಂಧಿಸಿ – ವಾಟಾಳ್ ನಾಗರಾಜ್
ಬೆಂಗಳೂರು : ಬೆಳಗಾವಿಯಲ್ಲಿ ಭಗವಾ ಧ್ವಜ ಸ್ತಂಭ ನೆಡಲು ಶಿವಸೇನೆ ಯತ್ನಿಸಿದ್ದು ಖಂಡನೀಯ. ಇದಕ್ಕೆಲ್ಲಾ ಕಾರಣ ಬೆಳಗಾವಿ ಜಿಲ್ಲೆ ರಾಜಕಾರಣಿಗಳು. ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಶಿವಸೇನೆ ಪುಂಡರನ್ನು ಬಂಧಿಸುವಂತೆ ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನ ನಡೆಸುವುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಶಿವಸೇನೆ ಪುಂಡರನ್ನು ಬಂಧಿಸಬೇಕು. ಇದಕ್ಕೆಲ್ಲಾ ಬೆಳಗಾವಿ ಜಿಲ್ಲೆ ರಾಜಕಾರಣಿಗಳೇ ಕಾರಣ. …
Read More »ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ.
ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಉದ್ಧಟತನ ಮೆರೆಯುತ್ತಿದ್ದು, ಪಾಲಿಕೆ ಮುಂದೆ ಹಾರಿಸಿರುವ ಕನ್ನಡ ಧ್ವಜಾವನ್ನ ತೆರವುಗೊಳಿಸಿ, ಭಗವ ಧ್ವಜಾ ಹಾರಿಸುತ್ತೇವೆ ಎಂದು ಕ್ಯಾತೆ ತೆಗೆದಿದ್ದಾರೆ. ಹಾಗಾಗಿ ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಪುಂಡರನ್ನ ಪೊಲೀಸರು ತಡೆದಿದ್ದಾರೆ. ಬೆಳಗಾಮಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗುತ್ತಿದ್ದು, ಶಿವಸೇನಾ ಪುಂಡರನ್ನ ಬೆಳಗಾವಿ ಗಡಿ ಪ್ರವೇಶಿಸದಂತೆ ಪೊಲೀಸರು ತಡೆಯಿಡಿದ್ದಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯ …
Read More »ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ : ರಾಜೇಶ್ವರಿ ಹಿರೇಮಠ
ಬೆಟಗೇರಿ : ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ …
Read More »ಕನ್ನಡ ಧ್ವಜದ ಬಗ್ಗೆ ಪ್ರಶ್ನಿಸಲು ನಾಡದ್ರೋಹಿ, ಎಂಇಎಸ್-ಶಿವಸೇನೆ ಯಾವೂರ ದೊಣ್ಣೆ ನಾಯಕರು..ಮಾಜಿ ಸಿಎಂ ಎಚ್ಡಿಕೆ ಗರಂ..!
ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು. ಸರಣಿ ಟ್ವೀಟ್ ಮೂಲಕ ನಾಡದ್ರೋಹಿಗಳ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ನೆಲ, ನಮ್ಮ ಭಾಷಾ , ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ …
Read More »ಒಬ್ಬರನ್ನ ಬಲಿ ಪಡಿದು ಸತ್ತ ಶ್ವಾನ
ಚಲಿಸುತ್ತಿದ್ದ ಬೈಕ್ಗೆ ಶ್ವಾನವೊಂದು ಅಡ್ಡಬಂದ ಪರಿಣಾಮ ಡಿಕ್ಕಿ ಸಂಭವಿಸಿ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ. ಧಾರವಾಡದ ಬೆನಕಟ್ಟಿ ಗ್ರಾಮದ ದಿಲ್ ಶಾದ್ ಬಿಸ್ಮಿಲ್ಲಾ ಚಪ್ಪರಬಂಧ್ (43) ಮೃತ ಮಹಿಳೆ. ನಿಗದಿ ಗ್ರಾಮದಿಂದ ಪ್ರಕಾಶ ಎಂಬುವರ ಬೈಕ್ನಲ್ಲಿ ಧಾರವಾಡಕ್ಕೆ ಮನೆಗೆಲಸಕ್ಕೆಂದು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಬೈಕ್ ಡಿಕ್ಕಿ ಹೊಡೆದ …
Read More »ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಗೃಹ ಸಚಿವ ಬೊಮ್ಮಾಯಿ – ಮಾಜಿ ಸಿಎಂ ಹೆಚ್ಡಿಕೆ ಭೇಟಿ
ಬೆಂಗಳೂರು : ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಆರ್.ಟಿ. ನಗರದ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿ, ಅರ್ಧ ಗಂಟೆಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದ್ದಾರೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನನ್ನ ಕ್ಷೇತ್ರದ ಕೆಲ ಪೋಸ್ಟಿಂಗ್ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ರಾಜಕೀಯ ಬೆಳವಣಿಗೆ ಬಗ್ಗೆ …
Read More »ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ
ಧಾರವಾಡ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲೇ ಗತಿ ಎನ್ನುವಂತಾಗಿದೆ. ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿತ್ತು. ಇಂತಹ ಮಾಜಿ ಸಚಿವ …
Read More »ಪಡಿತರ ಚೀಟಿದಾರರಿಗೆ ಜೋಳ, ರಾಗಿ ದೊರೆಯುವಂತೆ ಮಾಡುತ್ತೇನೆ : ಸಚಿವ ಉಮೇಶ್ ಕತ್ತಿ
ಬೆಂಗಳೂರು :ಖಾತೆ ಹಂಚಿಕೆ ಬೆನ್ನಲ್ಲೇ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ರಾಜ್ಯದ ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿದಾರರಿಗೆ ಜೋಳ, ರಾಗಿ ದೊರೆಯುವಂತೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ರಾಜ್ಯದ ಮಂತ್ರಿಯಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ಬಿಪಿಎಲ್ ಪಡಿತರದಾರರಿಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತೇನೆ. ಪಡಿತರ ಚೀಟಿ ದಾರರಿಗೆ ಜೋಳ, ರಾಗಿ, ದೊರೆಯುವಂತೆಯೂ ಮಾಡುತ್ತೇನೆ ಎಂದು ಹೇಳಿದ್ದಾರೆ. …
Read More »ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್
ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಮುಂಬೈ ಪೊಲೀಸರು ವಿಚಾರಣೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ, ಖ್ಯಾತ ಗೀತ ರಚನೆಕಾರ ಜಾವೇದ್ ಅಖ್ತರ್ ಕುಟುಂಬದ ವಿರುದ್ಧ ಹೇಳಿಕೆ ನಿಡಿದ್ದರು. ಈ ಹಿನ್ನೆಲೆಯಲ್ಲಿ ಅಖ್ತರ್ ಕಂಗನಾ ವಿರುದ್ಧ ಅಂಧೇರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಕಂಗನಾ ರಣಾವತ್ …
Read More »