Breaking News
Home / 2021 / ಜನವರಿ (page 34)

Monthly Archives: ಜನವರಿ 2021

ರಾಗಿಣಿಗೆ 140 ದಿನಗಳ ಸೆರೆವಾಸದ ಬಳಿಕ ಬಿಡುಗಡೆ ಭಾಗ್ಯ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ಯಾಂಡಲ್ ವು ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆ.4, 2021ರಂದು ಬಂಧಿಸಿದ್ದರು. ಸೆ.14ರಂದು ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಹಲವುಬಾರಿ ಹೈಕೋರ್ಟ್ ಗೆ ನಟಿ ರಾಗಿಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಜಾಮೀನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ರಾಗಿಣಿ ಪರ …

Read More »

ಉದ್ಧವ್ ಠಾಕ್ರೆ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಕನ್ನಡ ಒಕ್ಕೂಟ

ಬೆಂಗಳೂರು, ಜ.20- ಮರಾಠಿ ಭಾಷಿಗರ ಬಾಹುಳ್ಯ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಬೇಕೆಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿರುವ ಕನ್ನಡ ಒಕ್ಕೂಟ ಇಂದು ಮಹತ್ವದ ಸಭೆ ನಡೆಸಿತು. ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆಯ ಕೆ.ಆರ್.ಕುಮಾರ್, ಕನ್ನಡ ಅಭಿವೃದ್ಧಿ ಪ್ರಾಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿಚಂದ್ರು, ಮಂಜುನಾಥ್ ದೇವು, ಗಿರೀಶ್ ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ ಮಹಾರಾಷ್ಟ್ರ ಮುಖ್ಯಮಂತ್ರಿ …

Read More »

ಖಾತೆ ಅದಲು-ಬದಲು ಮಾಡಿ ಶಾಕ್ ಕೊಟ್ಟ ಸಿಎಂ,ಅನೇಕಸಚಿವರು ಅಸಮಾಧಾನ “ಜೆ.ಸಿ.ಮಾಧುಸ್ವಾಮಿ ಸಚಿವ ಸ್ಥಾನಕ್ಕೇ ರಾಜೀನಾಮೆ”?

ಬೆಂಗಳೂರು, ಜ.21- ನಿರೀಕ್ಷಿತ ಖಾತೆಗಳು ಸಿಗದಿರುವುದು ಹಾಗೂ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಚಿವರು ಅತೃಪ್ತಗೊಂಡಿದ್ದು, ಭಿನ್ನಮತ ಸೋಟಗೊಂಡಿದೆ. ಬಿಜೆಪಿ ಸರ್ಕಾರದಲ್ಲಿ ಟ್ರಬಲ್ ಶೂಟರ್ ಎಂದೇ ಹೇಳಲಾಗಿರುವ ಜೆ.ಸಿ.ಮಾಧುಸ್ವಾಮಿ ತಮ್ಮ ಬಳಿ ಇದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಬದಲಾಯಿಸಿದಕ್ಕೆ ಸಚಿವ ಸ್ಥಾನಕ್ಕೇ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಇದೀಗ ಅವರನ್ನು ಮನವೊಲಿಸುವ ಪ್ರಯತ್ನ ಮುಂದುವರೆದಿದ್ದು, ಶಾಸಕರಾದ ಬಿ.ಸಿ.ನಾಗೇಶ್, ಜ್ಯೋತಿಗಣೇಶ್, ಮಸಾಲೆ …

Read More »

ಖಾತೆ ಅದಲು ಬದಲು, ಯಾರಿಗೆ ಯಾವ ಖಾತೆ..? ಇಲ್ಲಿದೆ ಕಂಪ್ಲೀಟ್ ಲಿಸ್ಟ್

ಬೆಂಗಳೂರು, ಜ.21- ಸಚಿವ ಸಂಪುಟ ವಿಸ್ತರಣೆಯಾಗಿ ಒಂದು ವಾರ ಕಳೆದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ನೂತನ ಸಚಿವರಿಗೆ ನೀಡಿರುವ ಖಾತೆಗಳಲ್ಲಿ ಕೆಲವರಿಗೆ ಬಂಪರ್ ಹೊಡೆದಿದ್ದರೆ, ಇನ್ನು ಕೆಲವರಿಗೆ ನಿರೀಕ್ಷೆಗೂ ಊಹೆ ಮಾಡದ ರೀತಿಯಲ್ಲಿ ಹಿನ್ನಡೆಯಾಗಿದೆ. ಕಳೆದವಾರ ಪ್ರಮಾಣವಚನ ಸ್ವೀಕರಿಸಿದ 7 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಹಾಲಿ 10 ಸಚಿವರ ಖಾತೆಗಳೂ ಕೂಡ ಅದಲು-ಬದಲಾಗಿವೆ. ತೀವ್ರ ಪೈಪೋಟಿ ಕಂಡು …

Read More »

ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ

ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಂಡನೆ ಉಡುಪಿ; ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್‌ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬಿಜೆಪಿ‌ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಸಚಿವ ಕೋಟ ಈ …

Read More »

ಬಜೆಟ್ 2021: ಆನ್‌ಲೈನ್ ಶಿಕ್ಷಣದ ನಿರೀಕ್ಷೆಗಳೇನು?

ನವದೆಹಲಿ, ಜನವರಿ 20: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಭಾರೀ ಆರ್ಥಿಕ ಹಾನಿ ಎದುರಿಸಿರುವ ಭಾರತದಲ್ಲಿ ಈ ಬಾರಿ ಕೇಂದ್ರ ಬಜೆಟ್‌ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಕೇಂದ್ರ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಪ್ರತಿಯೊಂದು ಕ್ಷೇತ್ರವು ಬೆಟ್ಟದಷ್ಟು ನಿರೀಕ್ಷೆಗಳನ್ನು ಹೊತ್ತು ಕಾಯುತ್ತಿದೆ. ಅದರಲ್ಲೂ ಕೋವಿಡ್-19 ಸಾಂಕ್ರಾಮಿಕದಿಂದ ಹೆಚ್ಚು ಬದಲಾದ ಕ್ಷೇತ್ರಗಳಲ್ಲಿ ಒಂದು ಶಿಕ್ಷಣ ಕ್ಷೇತ್ರ. ಇದೀಗ …

Read More »

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಆರಂಭ: ಸ್ಮಾರ್ಟ್ ಪೋನ್ ಗಳಿಗೆ 40% ಡಿಸ್ಕೌಂಟ್ !

ನವದೆಹಲಿ: ದೇಶದ ಬೃಹತ್ ಆನ್ ಲೈನ್ ಮಾರುಕಟ್ಟೆ ಮಳಿಗೆಯಾಗಿರುವ ಅಮೆಜಾನ್ ಗಣರಾಜ್ಯೋತ್ಸವದ ಸಂಭ್ರಮಾಚರಣೆಯ ತಯಾರಿಯಲ್ಲಿರುವ ತನ್ನ ಭಾರತೀಯ ಗ್ರಾಹಕರಿಗಾಗಿ ‘ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಅನ್ನು ಪ್ರಾರಂಭಿಸಿದೆ. ಆ ಮೂಲಕ ಸ್ಮಾರ್ಟ್ ಪೋನ್ ಗಳನ್ನು ಒಳಗೊಂಡಂತೆ ಹಲವು ಇಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಭಾರಿ ಆಫರ್ ನೀಡಲು ಮುಂದಾಗಿದೆ. ಈಗಾಗಲೇ ಅಮೆಜಾನ್ ಪ್ರೈಮ್ ಬಳಕೆದಾರರಿಗೆ ಈ ಆಫರ್ ಗಳು ಲ‍ಭ್ಯವಿದ್ದು, ಇಂದಿನಿಂದ ಆರಂಭಗೊಂಡು ಜನವರಿ 23 ರ ವರೆಗೆ ಎಲ್ಲಾ …

Read More »

ಜನರ ಆಕ್ರೋಶಕ್ಕೆ ಮಣಿದ ‘ತಾಂಡವ್’ ತಂಡ: ವಿವಾದಿತ ದೃಶ್ಯಕ್ಕೆ ಕತ್ತರಿ ಪ್ರಯೋಗ

ನವದೆಹಲಿ: ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳೊಂದಿಗೆ ನಡೆದ 2ನೇ ಸುತ್ತಿನ ಮಾತುಕತೆಯ ನಂತರ ‘ತಾಂಡವ್’ ವೆಬ್ ಸೀರೀಸ್ ತಂಡ ಕೊನೆಗೂ ವಿವಾದದ ಕಿಡಿ ಹೊತ್ತಿಸಿದ ದೃಶ್ಯವನ್ನು ತೆಗೆದುಹಾಕಿದೆ. ಹಿಂದೂಗಳ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಎದುರಿಸಿ, ಬಾಲಿವುಡ್ ನಟ ಸೈಫ್ ಆಲಿಖಾನ್ ಅಭಿನಯದ ತಾಂಡವ್ ವೆಬ್ ಸೀರೀಸ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತಾಗಿ ತಾಂಡವ್ ತಂಡ ಕೂಡ ಬಹಿರಂಗವಾಗಿ ಕ್ಷಮೆಯಾಚಿಸಿತ್ತು. ಇದೀಗ ವಿವಾದದ ಕಿಡಿ ಹೊತ್ತಿಸಿದ ದೃಶ್ಯವನ್ನು …

Read More »

ಕಾಂಗ್ರೆಸ್ ಶಾಸಕಿ ಕೀಳುಮಟ್ಟದ ವರ್ತನೆ ಖಂಡನೀಯ – ಕ್ಯಾಪ್ಟನ್ ಕಾರ್ಣಿಕ್ ಖಂಡನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ರಾಮಲಿಂಗಾರೆಡ್ಡಿ ಅವರ ಮಗಳು, ಶಾಸಕಿ ಸೌಮ್ಯ ರೆಡ್ಡಿ, ಇವತ್ತು ನಡೆದ ಕಾಂಗ್ರೆಸ್ ಪಕ್ಷದ ನಾಟಕೀಯ ಪ್ರತಿಭಟನೆ ಸಂದರ್ಭದಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಸುವ ಕೀಳು ಮಟ್ಟದ ವರ್ತನೆಯನ್ನು ತೋರಿದ್ದಾರೆ. ಇದು ಖಂಡನೀಯ ವಿಷಯ ಎಂದು, ಭಾರತೀಯ ಜನತಾ ಪಕ್ಷದ ರಾಜ್ಯ ವಕ್ತಾರರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರೂ ಆದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಮಲ್ಲೇಶ್ವರಂನ ಬಿಜೆಪಿ ಕಾರ್ಯಾಲಯ …

Read More »

ಅಂತರ್‌ರಾಜ್ಯ ಕಾರ್‌ ಲೋನ್‌ ಜಾಲ ಬೇಧಿಸಿದ ಪೊಲೀಸ್‌

ಮುಂಬೈ: ಅಂತರ್‌ ರಾಜ್ಯ ಕಾರ್‌ ಲೋನ್‌ ವಂಚನೆ ಜಾಲವನ್ನು ಮುಂಬೈ ಕ್ರೈ ಬ್ರ್ಯಾಂಚ್‌ ಬೇಧಿಸಿದ್ದು, 19 ಲಕ್ಷುರಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಬ್ಯಾಂಕ್‌ ಒಂದರ ಮಾಜಿ ಲೋನ್‌ ಎಕ್ಸಿಕ್ಯೂಟಿವ್‌ ಕೂಡ ಸೇರಿದ್ದಾನೆ. ಆರೋಪಿಗಳು ಈ ಕಾರುಗಳನ್ನು ಮುಂಬೈ ಅಲ್ಲದೆ ಬೆಂಗಳೂರು, ಅಹ್ಮದಾಬಾದ್‌ನಲ್ಲಿ ಅಡ ಇಟ್ಟಿರುವ ಸಂಗತಿ ಕೂಡ ಬೆಳಕಿಗೆ ಬಂದಿದೆ. ಮರ್ಸಿಡಿಸ್‌ ಬೆನ್ ‌l, ಆಡಿ, ಟೊಯೊಟಾ ಇನ್ನೋವಾ, ಫಾರ್ಚೂನರ್‌, ಫೋರ್ಡ್‌, ಮಿನಿಕೂಪರ್‌ನಂಥ …

Read More »