Breaking News

Monthly Archives: ಜನವರಿ 2021

ಪೊಲೀಸರು ತಡೆದರೆ ರಸ್ತೆ ಬಂದ್ ಮಾಡಿ: ಕಾಂಗ್ರೆಸ್ ಕಾರ್ಯಕರ್ತರು, ರೈತರಿಗೆ ಡಿಕೆಶಿ ಕರೆ

ಬೆಂಗಳೂರು: ‘ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಜನರ ಪ್ರತಿಭಟನೆ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ ‘ರಾಜಭವನ ಚಲೋ’ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಿನ್ನೆ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ. ಆ ಮೂಲಕ ರಾಜ್ಯ …

Read More »

ಉತ್ತಮ ಸಂಸದೀಯ ಪಟು ಗುರುತಿಸಲು ಸಮಿತಿ ರಚನೆ

ಬೆಂಗಳೂರು : ರಾಜ್ಯ ವಿಧಾನಸಭೆಯ ಸದಸ್ಯರೊಬ್ಬರಿಗೆ ಪ್ರತಿ ವರ್ಷ ಅತ್ಯುತ್ತಮ ಸಂಸದೀಯ ಪಟು ಅಥವಾ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಲು ವಿಧಾನಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ. ಸಮಿತಿಯಲ್ಲಿ ಉಪಸಭಾಧ್ಯಕ್ಷರು, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು, ಸಭಾಧ್ಯಕ್ಷರು ನಾಮ ನಿರ್ದೇಶನ ಮಾಡುವ ಒಬ್ಬರು ಸದಸ್ಯರಾಗಿ ರುತ್ತಾರೆ. ಸಮಿತಿಯ ಶಿಫಾರಸ್ಸಿನ ಮೇಲೆ ಪ್ರಶಸ್ತಿಗೆ ಆಯ್ಕೆಯಾದ ಶಾಸಕರ ಒಪ್ಪಿಗೆಯನ್ನು ಪಡೆಯಬೇಕು. ಒಬ್ಬ ಶಾಸಕರಿಗೆ …

Read More »

ಇನ್ನು ಮುಂದೆ ಉಚಿತವಾಗಿ ಸಿಗಲ್ಲ ಅನ್ನಭಾಗ್ಯದ ಅಕ್ಕಿ

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಈವರೆಗೂ ನೀಡಲಾಗುತ್ತಿದ್ದ ಉಚಿತ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಅನ್ನಭಾಗ್ಯ ಯೋಜನೆಯಿಂದ ಸರಕಾರಕ್ಕೆ ಪ್ರತಿ ತಿಂಗಳು 120 ಕೋಟಿ ರೂ. ವೆಚ್ಚವಾಗುತ್ತಿದೆ. ಆದರೆ ಇಷ್ಟೆಲ್ಲಾ ವೆಚ್ಚ ಮಾಡಿದರೂ ಯೋಜನೆ ದುರ್ಬಳಕೆ ಆಗುತ್ತಿದ್ದು, ಅಕ್ಕಿ ದರ ವಿಧಿಸಿ ಪ್ರಯೋಗಿಸಿದರೆ ಹೇಗೆ ಎಂಬ ಚಿಂತನೆಯಲ್ಲಿ ತೊಡಗಿದೆ. ಈಗಾಗಲೇ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆಸಲಾಗಿದ್ದು, ಅಂತಿಮವಾಗಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರು …

Read More »

ಗಣರಾಜ್ಯೋತ್ಸವ ಪರೇಡ್‌ಗೆ ಮೊದಲ ಮಹಿಳಾ ಫೈಟರ್‌ ಪೈಲಟ್‌!

ಹೊಸದಿಲ್ಲಿ: ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಪಾಲ್ಗೊಳ್ಳುತ್ತಿರುವ “ಪ್ರಪ್ರಥಮ ಮಹಿಳಾ ಫೈಟರ್‌ ಪೈಲಟ್‌’ ಎಂಬ ಹೆಗ್ಗಳಿಕೆಗೆ ಫ್ಲೈಟ್‌ ಲೆಫ್ಟಿನೆಂಟ್‌ ಭಾವನಾ ಕಾಂತ್‌ ಪಾತ್ರರಾಗಿದ್ದಾರೆ. ಜ. 26ರಂದು ಐಎಎಫ್ನ ಟ್ಯಾಬ್ಲೊ ಜತೆ ಅವರು ಸಂಚರಿಸಲಿದ್ದಾರೆ. ಹಗುರ ಯುದ್ಧವಿಮಾನ, ಹಗುರ ಯುದ್ಧ ಹೆಲಿಕಾಪ್ಟರ್‌ ಮತ್ತು ಸುಖೋಯ್‌-30 ಯುದ್ಧ ವಿಮಾನಗಳ ಅಣಕು ಸ್ತಬ್ಧಚಿತ್ರದೊಂದಿಗೆ ಭಾವನಾ ಪರೇಡ್‌ ನಡೆಸಲಿದ್ದಾರೆ. ಪ್ರಸ್ತುತ ಇವರು ರಾಜಸ್ಥಾನದ ವಾಯುನೆಲೆಯೊಂದರಲ್ಲಿ ಮಿಗ್‌-21 ಬೈಸನ್‌ ಫೈಟರ್‌ ಪ್ಲೇನ್‌ಗೆ ಪೈಲಟ್‌. 2016ರಲ್ಲಿ ವಾಯುಪಡೆಗೆ ಆಯ್ಕೆಯಾದ “ಮೊದಲ ಫೈಟರ್‌ …

Read More »

ನನಗೆ ಅಭಿನವ್ ಶುಕ್ಲಾ ಸ್ಪರ್ಮ್ ದಾನ ಕೊಡಲಿ.:ರಾಖಿ ಸಾವಂತ್

ಮುಂಬೈ: ನನಗೆ ಅಭಿನವ್ ಶುಕ್ಲಾ ಸ್ಪರ್ಮ್ ದಾನ ಕೊಡಲಿ. ಬಿಗ್‍ಬಾಸ್ ಮನೆಯಿಂದ ಹೊರ ಹೋದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಬಾಲಿವುಡ್ ನಟಿ ರಾಖಿ ಸಾವಂತ್ ಹೇಳಿದ್ದಾರೆ. ಈ ಬಾರಿ ಬಿಗ್‍ಬಾಸ್ ಮನೆಗೆ ರಾಖಿ ಸಾವಂತ್ ಎಂಟ್ರಿ ನೀಡಿದಾಗಿನಿಂದ ಶೋಗೆ ಹೊಸ ಲುಕ್ ಬಂದಿದೆ. ರಾಖಿಯ ಜಗಳ, ಫನ್ನಿ ಮಾತುಗಳು, ಡ್ಯಾನ್ಸ್ ನೋಡುಗರನ್ನ ಸೆಳೆಯುವಲ್ಲಿ ಯಶಸ್ವಿಯಾಗಿವೆ. ವಾಹಿನಿ ಸಹ ರಾಖಿಯ ಮಾತುಗಳನ್ನ ಕೇಂದ್ರಿಕರಿಸಿ ಸಂಚಿಕೆಯ ಪ್ರೋಮೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ …

Read More »

ಸಚಿವರಾಗಿ 20 ತಿಂಗಳು ಪೂರೈಸಿದವರನ್ನು ಕೈ ಬಿಡಿ. 32 ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಿ

ಬೆಂಗಳೂರು: ಹೊಸ ಸಚಿವರಿಗೆ ಖಾತೆ ಹಂಚಿಕೆ ಕಸರತ್ತಿನ ಹೊತ್ತಲ್ಲೇ ಇಡೀ ಸಂಪುಟವನ್ನೇ ವಿಸರ್ಜಿಸಿ, ಹೊಸದಾಗಿ ಸಂಪುಟ ರಚಿಸಿ ಅನ್ನೋ ಕೂಗು ಎದ್ದಿದೆ. ಸಂಪುಟ ಪುನಾರಚನೆ ಮಾಡುವುದು ಒಳ್ಳೆಯದು. ಹಳಬರನ್ನ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು. ಆಗ ಮುಂದೆ 150 ಸೀಟು ಬರೋಕೆ ಸಾಧ್ಯ. ಉತ್ತಮ ಆಡಳಿತ ಕೊಡೋಕೆ ಸಾಧ್ಯ ಅಂತ ಶಾಸಕ ತಿಪ್ಪಾರೆಡ್ಡಿ ಆಗ್ರಹಿಸಿದ್ದಾರೆ.ಸಚಿವರಾಗಿ 20 ತಿಂಗಳು ಪೂರೈಸಿದವರನ್ನು ಕೈ ಬಿಡಿ. 32 ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಿ ಅಂತ …

Read More »

35 ಲಕ್ಷ ಲೂಟಿ ಮಾಡಿದ್ದ ಆರೋಪಿಗಳು ಅಂದರ್

ಹುಬ್ಬಳ್ಳಿ: ಎರಡು ವರ್ಷದ ಹಿಂದೆ ಪ್ರಯಾಣಿಕರೊಬ್ಬರ ಜೊತೆ ಗಲಾಟೆ ಮಾಡಿ 35 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಹಿಡಿಯುವಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. 2019 ರಲ್ಲಿ ಕಾರವಾರದ ಅಡಿಕೆ ಗೋದಾಮಿನ ನೌಕರ ಅಹ್ಮದ್ ತಮ್ಮ ಮಾಲೀಕ ಹೇಳಿದ ಹಾಗೇ ಹುಬ್ಬಳ್ಳಿಯ ದುರ್ಗದ ಬೈಲಿನ ಬಂಗಾರದ ಅಂಗಡಿಯಲ್ಲಿ 35 ಲಕ್ಷ ಹಣವನ್ನು ಪಡೆದು ತಮ್ಮ ಊರಿಗೆ ಬಸ್ ನಲ್ಲಿ ಪ್ರಯಾಣವನ್ನು ಮಾಡುತ್ತಿದ್ದರು. ಈ ವೇಳೆ ಆರೋಪಿಗಳು …

Read More »

ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ: ಡಿ.ವಿ.ಸದಾನಂದ ಗೌಡ

ಮಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದ ಸಂದರ್ಭದಲ್ಲೂ ಯತ್ನಾಳ್ ಇದೇ ರೀತಿ ಹೇಳಿಕೆ ನೀಡುತ್ತಿದ್ದರು. ಹಲವು ಎಚ್ಚರಿಕೆಯ ಬಳಿಕವೂ ಅವರು ತಮ್ಮ ವರ್ತನೆ ಸರಿಪಡಿಸಿಕೊಳ್ಳದ ಕಾರಣ ನಾನೇ ಅವರನ್ನು 6 …

Read More »

ಪ್ರಾಣ ಉಳಿಸೋ ಸಂಜೀವಿನಿ, ಜೀವಾಮೃತ ಅಂತೆಲ್ಲಾ ಕರೆಸಿಕೊಳ್ತಿದ್ದ ವ್ಯಾಕ್ಸಿನ್‍ಗೆ ಡಿಮ್ಯಾಂಡೇ ಇಲ್ಲ.

ಬೆಂಗಳೂರು: ಆಬಾಲ ವೃದ್ಧರಾದಿಯಾಗಿ ಎಲ್ಲರನ್ನೂ ಹಿಂಡಿ ಹಿಪ್ಪೆ ಮಾಡಿರೋ ‘ಚೀನಿ ವೈರಸ್’ ಕೊರೊನಾಗೆ ಇಷ್ಟು ದಿನ ವ್ಯಾಕ್ಸಿನ್ ಬಂದ್ರೆ ಸಾಕಪ್ಪಾ ಅಂತ ಜನ ಕಾಯುತ್ತಿದ್ದರು. ಆದ್ರೆ ಕೊವಿಶೀಲ್ಡ್ ವ್ಯಾಕ್ಸಿನ್ ವಿತರಣೆಯ ಮಹಾಯಜ್ಞಕ್ಕೆ ಚಾಲನೆ ಸಿಕ್ಕು ನಾಲ್ಕನೇ ದಿನ ಆದರೂ ಟಾರ್ಗೆಟ್ ರೀಚ್ ಆಗೋಕೆ ಒದ್ದಾಡುವಂತಾಗಿದೆ. ಪ್ರಾಣ ಉಳಿಸೋ ಸಂಜೀವಿನಿ, ಜೀವಾಮೃತ ಅಂತೆಲ್ಲಾ ಕರೆಸಿಕೊಳ್ತಿದ್ದ ವ್ಯಾಕ್ಸಿನ್‍ಗೆ ಡಿಮ್ಯಾಂಡೇ ಇಲ್ಲ. ರಾಜ್ಯವೂ ಸೇರಿದಂತೆ ದೇಶಾದ್ಯಂತ ಮೊದಲ ಹಂತದ ಕೊರೋನಾ ವಾರಿಯರ್ಸ್ ವ್ಯಾಕ್ಸಿನೇಷನ್‍ಗೆ ನಿರೀಕ್ಷಿತ …

Read More »

ಸ್ಮಶಾನಕ್ಕಾಗಿ ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

ಮಂಡ್ಯ: ಸ್ಮಶಾನಕ್ಕಾಗಿ ಆಗ್ರಹಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ. ಕಾರೇಕುರ ಗ್ರಾಮದ ಪುಟ್ಟಮ್ಮ ಎಂಬವರು ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮೃತಪಟ್ಟಿದ್ದರು. ಐದಾರು ದಶಕಗಳಿಂದ ಅಂತ್ಯಸಂಸ್ಕಾರ ನಡೆಸುತ್ತಿದ್ದ ಬೆಳಗೋಳ ಗ್ರಾಮ ವ್ಯಾಪ್ತಿಯ ಸರ್ವೆ ನಂ. 342ರ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಲು ಮುಂದಾದಾಗ ಥಾಮಸ್ ಮ್ಯಾಥ್ಯೂ ಎಂಬವರು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಶವವನ್ನು ಶ್ರೀರಂಗಪಟ್ಟಣ ತಹಶೀಲ್ದಾರ್ ಕಚೇರಿ …

Read More »