Breaking News

Daily Archives: ಫೆಬ್ರವರಿ 5, 2021

ಫೆಬ್ರುವರಿ 6 ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ* 6 ನೇ ತಾರೀಕು 12ಗಂಟೆಯಿಂದ 2ಗಂಟೆ ವರೆಗೆ *

ದೆಹಲಿ ಸಂಯುಕ್ತ ಕಿಸಾನ ಮೋರ್ಚ ಸಂದೇಶ ಆತ್ಮೀಯ ರೈತ ಮುಖಂಡರೇ, ರೈತ, ದಲಿತ,ಕಾರ್ಮಿಕ, ಐಕ್ಯ ಹೋರಾಟದ ಸಂದೇಶ* ರಾಜ್ಯ ಜಿಲ್ಲಾ, ತಾಲೂಕು, ಗ್ರಾಮ ಘಟಕ ಪದಾಧಿಕಾರಿಗಳೇ* , ದಿಲ್ಲಿಯಲ್ಲಿ ರೈತರ ಹೋರಾಟ ಬೆಂಬಲಿಸಿ, ರೈತರ ಬೇಡಿಕೆಗಳನ್ನು ಈಡೇರಿಸಲು ಮತ್ತು ಹೋರಾಟ ನಿರತ ರೈತರ ಮೇಲಿನ ದೌರ್ಜನ್ಯ ಖಂಡಿಸುತ್ತಾ ದೆಹಲಿಯ ಸಂಯುಕ್ತ ಕಿಸಾನ ಮೋರ್ಚಾ ಕರೆ ಮೇರೆಗೆ ದಿನಾಂಕ ಪೆಬ್ರುವರಿ 6, ರಂದು 12 ಗಂಟೆಯಿಂದ 2ಗಂಟೆ ತನಕ ಬೆಳಗಾವಿಯ ಹಿರೇಬಾಗೇವಾಡಿ …

Read More »

ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ: ಫೆಬ್ರವರಿ 10ರವರೆಗೆ ವಿಧಾನಪರಿಷತ್ ಕಲಾಪ ವಿಸ್ತರಣೆ

ಬೆಂಗಳೂರು: ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿಯವರು ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಸಭಾಪತಿ ಆಯ್ಕೆ ಮಾಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಕಲಾಪವನ್ನು ಫೆ.10ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂರು ದಿನಗಳ ಕಾಲ ಪರಿಷತ್ ಕಲಾಪವನ್ನು ವಿಸ್ತರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ, ಈ ನಿರ್ಧಾರವನ್ನು ರಾಜ್ಯಪಾಲರಿಗೆ ರವಾನೆ ಮಾಡಿರುವ ಸರ್ಕಾರ, ಅನುಮತಿ ನೀಡುವಂತೆ …

Read More »

ಕೋವಿಡ್‌ ಸಂದರ್ಭದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ: ಎಚ್‌.ಕೆ. ಪಾಟೀಲ

ಬೆಂಗಳೂರು: ಕೋವಿಡ್‌-19 ಸಂದರ್ಭದಲ್ಲಿ ‘ನಂಬರ್‌ 1 ಭ್ರಷ್ಟ ರಾಜ್ಯ’ ಎಂಬ ಅಪಕೀರ್ತಿಗೆ ಕರ್ನಾಟಕ ಒಳಗಾಗಿದೆ. ಶೇ 63 ರಷ್ಟು ಜನ ಸರ್ಕಾರಿ ಸೇವೆಗೆ ಲಂಚ ನೀಡಬೇಕಾಗಿ ಬಂತು ಎಂದು ಸಮೀಕ್ಷೆಯೊಂದರಿಂದ ಬಯಲಿಗೆ ಬಂದಿದೆ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್‌.ಕೆ.ಪಾಟೀಲ ವಿಧಾನಸಭೆಯಲ್ಲಿ ಹೇಳಿದರು. ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪಾಟೀಲ, ಒಂದು ವರ್ಷದ ಹಿಂದೆ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ ಎನ್ನುವವರ ಸಂಖ್ಯೆ ಶೇ 43 ಇತ್ತು. ಕೇವಲ ಒಂದು …

Read More »

ಎತ್ತಿನಹೊಳೆ ಯೋಜನೆಗೆ ₹ 7,721 ಕೋಟಿ ವೆಚ್ಚ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ 2020ರ ಡಿಸೆಂಬರ್‌ ಅಂತ್ಯದವರೆಗೆ ₹ 7,721.65 ಕೋಟಿ ವೆಚ್ಚ ಮಾಡಲಾಗಿದೆ ಎಂದು ಗೃಹ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುರುವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಪ್ರಶ್ನೆಗೆ ಜಲ ಸಂಪನ್ಮೂಲ ಸಚಿವರ ಪರವಾಗಿ ಉತ್ತರ ನೀಡಿದ ಅವರು, ‘2023ಕ್ಕೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಇದೆ. ಕೆಲವು ಸ್ಥಳಗಳಲ್ಲಿ ರೈತರ ಅಸಹಕಾರದಿಂದ ಭೂಸ್ವಾಧೀನ ಪ್ರಕ್ರಿಯೆ …

Read More »

ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ: ಬಸವರಾಜ ಹೊರಟ್ಟಿ

ಬೆಂಗಳೂರು: ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ. ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದು ಜೆಡಿಎಸ್‌ನ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ವಿಧಾನಪರಿಷತ್ ಕಲಾಪ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಫೆ. 8ರಿಂದ 19ರವರೆಗೆ ಮೂರು ದಿನಗಳ ಕಾಲ ವಿಧಾನಪರಿಷತ್ ಕಲಾಪ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. ಕಾರ್ಯಕಲಾಪ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ. ಜೊತೆಗೆ ಸಭಾಪತಿ ಚುನಾವಣೆ ಪ್ರಕ್ರಿಯೆ ಕೂಡ ನಡೆಯಬೇಕಿದೆ. …

Read More »

ಐಎಂಎ ಹಗರಣದ ಮನ್ಸೂರ್ ಖಾನ್ ಗೆ ಜಾಮೀನು

ಬೆಂಗಳೂರು: ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿದೆ. ಮನ್ಸೂರ್ ಖಾನ್ ಜುಲೈ19,2019ರಿಂದ ಜೈಲಿನಲ್ಲಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ. ಫೆ. 12ರಂದು ಜಾಮೀನಿನ ಮೇಲೆ ಬಿಡುಗಡೆ ಆಗಬಹುದಾಗಿದೆ. ಫೆ.12ಕ್ಕೆ ಮೊದಲು ಸಿಬಿಐ ತಂಡವು ತನ್ನ ಎಲ್ಲಾ ತನಿಖೆಗಳನ್ನು ಪೂರೈಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.

Read More »

ಉಪಚುನಾವಣೆಯಲ್ಲೂ ಗೆಲುವು ನಮ್ಮದೇ : ಮತ್ತೊಮ್ಮೆ ಚಾಲೆಂಜ್ ಹಾಕಿದ ಸಿಎಂ

ಬೆಂಗಳೂರು,ಫೆ.5- ಬೆಂಗೂರು,ಫೆ.5- ಮುಂಬರುವ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ. ಇದನ್ನು ಇದಂದೇ ಬರೆದಿಟ್ಟುಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು. ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದೇ ಗೆಲ್ಲುತ್ತದೆ. ಯಾವುದೇ ಕಾರಣಕ್ಕೂ ಕಾಂಗ್ರೆಸಿಗರು ಗೆಲ್ಲುವುದಿಲ್ಲ. ಇದನ್ನು ಈ ಸದನದಲ್ಲಿ ನಾನು ಹೇಳುತ್ತೇನೆ ಎಂದರು. ಜನರ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಮುಂದೆ ಯಾವ ಚುನಾವಣೆಯನ್ನು …

Read More »

ಎಲ್ಲಾ ಧರ್ಮಗಳ ವಿವಾಹಗಳ ನೋಂದಣಿ ಕಡ್ಡಾಯ

ಬೆಂಗಳೂರು, ಫೆ.5- ಬಾಲ್ಯ ವಿವಾಹ, ಬಲವಂತದ ಮದುವೆಗಳನ್ನು ತಪ್ಪಿಸಲು ಪ್ರತಿಯೊಂದು ಮದುವೆಯನ್ನು ಕಡ್ಡಾಯವಾಗಿ ನೋಂದಣಿ ಮಾಡುವ ಬೇಡಿಕೆಯ ಬಗ್ಗೆ ಪರಿಶೀಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‍ನ ಶಾಸಕ ಕೆ.ಎ.ತಿಪ್ಪೇಸ್ವಾಮಿ ಅವರು, ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲಾ ಧರ್ಮಗಳಲ್ಲಿರುವ ವಿವಾಹ ಕಾಯ್ದೆಯನ್ನು ತಿದ್ದುಪಡಿ ಮಾಡಿ ಪ್ರತಿಯೊಂದು ಮದುವೆಯನ್ನು ನೋಂದಣಿ ಮಾಡಿಸಬೇಕು. ಆಗ ಬಾಲ್ಯವಿವಾಹ ಮತ್ತು ಬಲವಂತದ ಮದುವೆಗಳು …

Read More »

ವಕಿಲರನ್ನು ಅವಾಚ್ಯ ಶಬ್ಧಗಳೀಂದ ನಿಂದಿಸಿದ್ದ ಸಿಪಿಐ ವಕೀಲರ ಸಂಘದ ಮುಖಂಡರು ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋಗಿದ್ದ ವಕೀಲರನ್ನು ಸಿಪಿಐ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದನ್ನು ಖಂಡಿಸಿ ಬೆಳಗಾವಿ ವಕೀಲರ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು. ಕೋರ್ಟ್ ಬಳಿ ಬ್ಯಾರಿಕೇಡ್ ಗಳನ್ನು ಹಾಕಿ, ರಸ್ತೆ ತಡೆ ನಡೆಸಿ ಸಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಕ್ಷಿದಾರರೊಬ್ಬರ ಪರ ದೂರು ದಾಖಲಿಸಲೆಂದು ಠಾಣೆಗೆ ಹೋಗಿದ್ದ ವಕೀಲ ಚೇತನ ಈರಣ್ಣ ಗೆ ಸಿಪಿಐ …

Read More »

ಕಾರವಾರದ ಈ ಇಬ್ಬರು PUC ವಿದ್ಯಾರ್ಥಿಗಳ ಸ್ಮಾರ್ಟ್ ಐಡಿಯಾ ಎಲ್ಲಾ ಕಡೆ ಸಖತ್ ವೈರಲ್..

ಮಾನವ ತನ್ನ ಸ್ಮಾರ್ಟ್ ಬುದ್ದಿಯನ್ನು ಉಪಯೋಗಿಸಿಕೊಂಡು ಹೊಸ ಹೊಸ ಅವಿಷ್ಕಾರ ಐಡಿಯಾಗಳನ್ನ ಮಾಡಿ ಈಗ ಎಲ್ಲವನ್ನೂ ಸುಲಲಿತವಾಗಿ ಮಾಡಿಕೊಂಡಿದ್ದಾನೆ.. ಅಮೇರಿಕಾವನ್ನು ಕೂಡ ಪಕ್ಕದವರು ಅನ್ನುವಷ್ಟು ಹತ್ತಿರ ಮಾಡಿಕೊಂಡಿದ್ದಾನೆ. ಈ ಪಿ.ಯು.ಸಿ ವಿದ್ಯಾರ್ಥಿಗಳು ಕೂಡ ಎಲ್ಲರಂತೆ ಎನಾದ್ರೂ ಓದಿ ಒಂದಷ್ಟು ಅಂಕ ಪಡೆದುಕೊಂಡು ಮುಂದೆ ಹೋಗೋಣ ಎಂದು ಆಲೋಚಿಸದೆ ತಮ್ಮ ಬುದ್ದಿವಂತಿಕೆಗೆ ಕೈ ಹಾಕಿ ಒಂದು ಸ್ಮಾರ್ಟ್ ಐಡಿಯಾ ಮಾಡಿ ಇವತ್ತು ಇವರ ಐಡಿಯಾ ಈಗ ಎಲ್ಲಾ ಕಡೆ ವೈರಲ್ ಆಗುವಂತೆ …

Read More »