Daily Archives: ಫೆಬ್ರವರಿ 8, 2021

ಮೇ.9ರಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ/ ಜಿಲ್ಲಾ/ ಗಡಿನಾಡು ಘಟಕ ಅಧ್ಯಕ್ಷರ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೇ.9ರಂದು ಮತದಾನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಿಳಿಸಿದೆ. ಈ ಬಾರಿ ಹೊಸ ಕ.ಸಾ.ಪ ನಿಬಂಧನೆಗಳ ಅನ್ವಯ 28 ವಿಧಾನಸಭಾ ಕ್ಷೇತ್ರಗಳಲ್ಲೂ, ಪ್ರತಿ ತಾಲೂಕು ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಆಯಾ ಕ್ಷೇತ್ರಕ್ಕೆ ಗುರುತಿಸಲಾಗುವ ಚುನಾವಣಾ ಮತಕ್ಷೇತ್ರಕ್ಕೆ ಅಧಿಸೂಚನೆ ಹಾಗೂ ಕರಡು ಮತದಾನ ಪಟ್ಟಿ ಪ್ರಕಟಿಸಲಾಗುತ್ತದೆ.

Read More »

ನಿರ್ಮಿತ ಮಾಧ್ಯಮಿಕ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ

ಬೆಳಗಾವಿ – ಜಾಂಬೋಟಿಯಲ್ಲಿ ಜನಕಲ್ಯಾಣ ಸಮಿತಿಯ ವಿದ್ಯಾ ವಿಕಾಸ ಸಮಿತಿಯಿಂದ ಪುನರ್ ನಿರ್ಮಿತ ಮಾಧ್ಯಮಿಕ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಸೋಮವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ. ಶಿಕ್ಷಣ ಸಚಿವ ಸುರೇಶ ಕುಮಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ, ವಿಟಿಯು ಕುಲಪತಿ ಕರಿಸಿದ್ದಪ್ಪ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

Read More »