Breaking News

Daily Archives: ಫೆಬ್ರವರಿ 9, 2021

ಶಾಲೆಗಳ ಬೇಸಗೆ ರಜೆ ಮೊಟಕುಗೊಳಿಸಲಾಗಿದೆ: ಸುರೇಶ್ ಕುಮಾರ್

ಬೆಂಗಳೂರು: ಈ ವರ್ಷದ ಬೇಸಗೆ ರಜೆಯನ್ನು ಮೊಟಕುಗೊಳಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದರು. 2020ರಲ್ಲಿ ಬೇಸಗೆ ರಜೆಯನ್ನು ಕೋವಿಡ್-19ನಿಂದಾಗಿ ಮುಂದೂಡಲಾಯಿತು. ಇದರಿಂದ ಶೈಕ್ಷಣಿಕ ವರ್ಷದ ಮೇಲೆ ತುಂಬಾ ಪರಿಣಾಮ ಬೀರಿದೆ. ಶಾಲೆಗಳು ದೀರ್ಘ ಅವಧಿಯಿಂದ ಮುಚ್ಚಲ್ಪಟ್ಟಿದೆ. ಇದರಿಂದಾಗಿ ಬೇಸಗೆ ರಜೆ ಮೊಟಕುಗೊಳಿಸಲು ನಿರ್ಧರಿಸಿದ್ದೇವೆ ಎಂದರು. ಶಾಲೆ ಮುಚ್ಚಿರುವುದರಿಂದ ತುಂಬಾ ಸಮಸ್ಯೆಗಳು ಎದುರಾಗಿದೆ ಮತ್ತು ಆದಷ್ಟು ಬೇಗ ತರಗತಿಗಳನ್ನು ತೆರೆಯುವ ಅಗತ್ಯವಿದೆ ಎಂದು …

Read More »

ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೆ

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆಯು ಪ್ರತೀ ಲೀಟರ್ ಗೆ 35 ಪೈಸೆಯಷ್ಟು ಹೆಚ್ಚಾಗಿದ್ದು, ದಾಖಲೆ ಏರಿಕೆ ಕಂಡಿದೆ. ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆಯು 87.30, ಮುಂಬಯಿಯಲ್ಲಿ 93.83 ರೂ. ಆಗಿದೆ. ದೆಹಲಿಯಲ್ಲಿ ಡೀಸೆಲ್ ಪ್ರತೀ ಲೀಟರ್ ಗೆ 77.48 ರೂ. ಮತ್ತು ಮುಂಬಯಿಯಲ್ಲಿ 84.36 ರೂ. ಆಗಿದೆ. ಸೋಮವಾರ ಕಚ್ಚಾ ತೈಲವು ಪ್ರತೀ ಬ್ಯಾರಲ್ ಗೆ 60 ಡಾಲರ್ ಆಗಿದ್ದು, ಇದು ಈ ವರ್ಷದ ಗರಿಷ್ಠ ಬೆಲೆಯಾಗಿದ್ದು, ಇದರಿಂದಾಗಿ …

Read More »

OLX ನಲ್ಲಿ ಸೋಫಾ ಮಾರಲು ಹೋಗಿ ಹಣ ಕಳೆದುಕೊಂಡ ಕೇಜ್ರಿವಾಲ್‌ ಪುತ್ರಿ

ಓಎಲ್‌ಎಕ್ಸ್ ನಲ್ಲಿ ಹಳೆಯ ಸೋಫಾ ಮಾರಲು ಹೋಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪುತ್ರಿ ಮೋಸ ಹೋದ ಪ್ರಸಂಗ ನಡೆದಿದೆ. ಆನ್ ಲೈನ್ ವಂಚನೆ ವಿರುದ್ಧ ದೂರೂ ದಾಖಲಾಗಿದೆ. ಹರ್ಷಿತಾ ಕೇಜ್ರಿವಾಲ್ ಅವರು ಒಎಲ್‌ಎಕ್ಸ್ ನಲ್ಲಿ ಹಳೆಯ ಸೋಫಾ ಒಂದನ್ನು ಮಾರಾಟಕ್ಕಿಟ್ಟಿದ್ದರು. ಇದನ್ನು ಗಮನಿಸಿದ ವ್ಯಕ್ತಿಯೊಬ್ಬ ವ್ಯವಹಾರ ಕುದುರಿಸಿದ್ದಾನೆ. ಕ್ಯುಆರ್ ಕೋಡ್ ಕಳುಹಿಸಿದ ಆತ, ಸ್ಕ್ಯಾನ್ ಮಾಡಿದರೆ ಹಣ ಜಮೆಯಾಗುತ್ತದೆ ಎಂದಿದ್ದಾನೆ. ಇದನ್ನು ನಂಬಿದ ಹರ್ಷಿತಾ ಅದನ್ನು ಸ್ಕ್ಯಾನ್ ಮಾಡಿದ್ದಾರೆ. …

Read More »

BIG NEWS: ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ, ನಟ ದೀಪ್ ಸಿಧು ಅರೆಸ್ಟ್

ನವದೆಹಲಿ: ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಪ್ರಕರಣ ಹಾಗೂ ಕೆಂಪುಕೋಟೆ ಮೇಲೆ ಧ್ವಜ ಹಾರಿಸಲು ಪ್ರೇರಣೆ ನೀಡಿದ ಪ್ರಕರಣ ಸಂಬಂಧ ಪಂಜಾಬಿ ನಟ ದೀಪ್ ಸಿಧುರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಜನವರಿ 26ರಂದು ರೈತರು ದೆಹಲಿಯಲ್ಲಿ ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿತ್ತು. ಅಲ್ಲದೇ ಕೆಂಪುಕೋಟೆಯ ಮೇಲೆ ಧಾರ್ಮಿಕ ಧ್ವಜ ಹಾರಿಸುವ ಮೂಲಕ ದೀಪ್ ಸಿಧು ವಿವಾದಕ್ಕೆ ಕಾರಣರಾಗಿದ್ದರು. ರೈತರಿಗೆ ಬೆಂಬಲ ನೀಡುವ ಹೆಸರಲ್ಲಿ ಹಿಂಸಾಚಾರಕ್ಕೆ ಪ್ರೇರಣೆ …

Read More »

ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ : ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು,ಫೆ.9-ಸಾರಿಗೆ ನೌಕರರ ವೇತನ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಅವರ ವೇತನದಲ್ಲಿ ಯಾವುದೇ ತೊಂದರೆ ಮಾಡುವುದಿಲ್ಲ. ನಾಳೆ ಬಸ್ ಸಂಚಾರದಲ್ಲಿಯೂ ವ್ಯತ್ಯಯವಾಗುವುದಿಲ್ಲ ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ಸ್ಪಷ್ಟಪಡಿಸಿದ್ದಾರೆ.ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಸಂಷ್ಟದಿಂದ ವೇತನದಲ್ಲಿ ಕೊಂಚ ಏರುಪೇರಾಗಿತ್ತು. ಈಗ ಸಾರಿಗೆ ನೌಕರರ ವೇತನವನ್ನು ನೀಡಲಾಗುವುದು. ಡಿಸೆಂಬರ್‍ನಲ್ಲಿ ನೌಕರರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದರು. ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಪರಮಾರ್ಶೆ ಮಾಡುತ್ತಿದೆ. ಕೆಲವು ಕಾರ್ಯಸಾಧು ಬೇಡಿಕೆಗಳನ್ನು ಈಡೇರಿಸಿದೆ. …

Read More »

ಸಭಾಪತಿ ಸ್ಥಾನಕ್ಕೆ ಮುಸ್ಲಿಂ ಅಭ್ಯರ್ಥಿ : ಸಿ.ಎಂ.ಇಬ್ರಾಹಿಂ ಅಸಮಾಧಾನ

ಬೆಂಗಳೂರು, ಫೆ.9- ನಾನು ಕಾಂಗ್ರೆಸಿಗ, ಪಕ್ಷ ಏನು ಹೇಳುತ್ತದೋ ಅದಕ್ಕೆ ನಾನು ಬದ್ಧ. ಇತರ ಪಕ್ಷಗಳ ರಾಜಕೀಯ ಮುಖಂಡರೊಂದಿಗಿನ ಸಂಬಂಧ ನನ್ನ ವೈಯಕ್ತಿಕ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಕಳೆದ ತಿಂಗಳು ಜೆಡಿಎಸ್‍ನ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದ ಇಬ್ರಾಹಿಂ ಅವರು ಜೆಡಿಎಸ್ ಪಕ್ಷ ಸೇರಿದಲಿದ್ದಾರೆ ಎಂಬ ಮಾಹಿತಿಗಳು ಹರಿದಾಡಿದ್ದವು. ಈ ಬಗ್ಗೆ ಕೆಲವು ನಾಯಕರು ಹೇಳಿಕೆ …

Read More »

ರಾಜ್ಯ ಚುನಾವಣೆ ಆಯುಕ್ತ ಸಂಜೀವ ಕುಮಾರ ಬೆಳಗಾವಿಗೆ,ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣೆ ಆಯುಕ್ತ ಸಂಜೀವ ಕುಮಾರ ಬೆಳಗಾವಿಗೆ ಆಗಮಿಸಿದ್ದು, ಚುನಾವಣೆ ಸಿದ್ಧತೆಯ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ. ಸುರೇಶ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಯಾವುದೇ ಕ್ಷಣದಲ್ಲಿ ಉಪಚುನಾವಣೆ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಇಲ್ಲಿ ಆಗಿರುವ ಸಿದ್ಧತೆಗಳನ್ನು ಪರಿಶೀಲಿಸಲು ಸಂಜೀವಕುಮಾರ ಆಗಮಿಸಿದ್ದಾರೆ. ಅಧಿಕಾರಿಗಳ ಸಭೆ ಕರೆದಿದ್ದು, ಎಲ್ಲ ಮಾಹಿತಿ ಕಲೆಹಾಕುತ್ತಿದ್ದಾರೆ. ಸಭೆ ಬಳಿಕ ಸಂಜೀವಕುಮಾರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

Read More »

ಹಸಿವಿನ ಮೇಲೆ ವ್ಯಾಪಾರ ಮಾಡಲು ಬಿಡುವುದಿಲ್ಲ: ಮೋದಿಗೆ ಟಿಕಾಯತ್ ತಿರುಗೇಟು

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಇರುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಘೋಷಣೆಗೆ ಪ್ರತಿಕ್ರಿಯೆ ನೀಡಿರುವ ರೈತ ಮುಖಂಡ ರಾಕೇಶ್ ಟಿಕಾಯತ್, ಹಸಿವಿನ ಮೇಲೆ ವ್ಯವಹಾರ ನಡೆಸುವುದಕ್ಕೆ ದೇಶದಲ್ಲಿ ಅವಕಾಶ ನೀಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸುವಂತೆ ಆಗ್ರಹಿಸಿದ್ದಾರೆ. ಮೂರು ಕೃಷಿ ಮಸೂದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು, ಎಂಎಸ್‌ಪಿ ಕುರಿತು ಕಾನೂನು ತರುವಂತೆ ಮಾಡುತ್ತಿರುವ ಒತ್ತಾಯವನ್ನು ಕೈಬಿಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ …

Read More »

ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ

ಹೊಸದಿಲ್ಲಿ: ಪ್ರಧಾನಿ ಮೋದಿ ಅವರನ್ನು ಟೀಕಿಸಿದ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪಕ್ಷದ ಮೂಲಗಳು ಹೇಳಿವೆ. ಸೋಮವಾರವಷ್ಟೇ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಖರ್ಗೆಯವರು, ಮೋದಿ ಭಾಷಣವನ್ನು ಟೀಕಿಸಿದ್ದರು. ಇದಾದ ಬಳಿಕ ವ್ಯಕ್ತಿಯೊಬ್ಬ ಖರ್ಗೆ ಅವರಿಗೆ ಕರೆ ಮಾಡಿ, “ನೀವೇಕೆ ಮೋದಿ ಅವರನ್ನು ಟೀಕಿಸುತ್ತಿದ್ದೀರಿ’ ಎಂದು ಬೆದರಿಕೆ ಹಾಕಿದ್ದಾನೆ ಎಂದು ಕಾಂಗ್ರೆಸ್‌ ಮೂಲಗಳು …

Read More »

ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜೆಡಿಎಸ್‌ನ ಬಸವರಾಜ ಹೊರಟ್ಟಿ

ಬೆಂಗಳೂರು : ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜೆಡಿಎಸ್‌ನ ಬಸವರಾಜ ಹೊರಟ್ಟಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಸೀರ್‌ ಅಹಮದ್‌ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಚುನಾವಣೆ ನಡೆಯಲಿದೆ. ಸಂಖ್ಯಾಬಲದ ಪ್ರಕಾರ ಬಸವರಾಜ ಹೊರಟ್ಟಿ ಗೆಲುವು ಖಚಿತ. ಆದರೆ “ಮುಸ್ಲಿಂ ಅಭ್ಯರ್ಥಿ ಕಣದಲ್ಲಿದ್ದರೂ ಜೆಡಿಎಸ್‌ ಬಿಜೆಪಿಗೆ ಬೆಂಬಲ ನೀಡಿತು’ ಎಂಬ ಅಸ್ತ್ರ ಬಳಸಿಕೊಳ್ಳಲು ಕಾಂಗ್ರೆಸ್‌ ಅಹಮದ್‌ ಅವರನ್ನು ಕಣಕ್ಕೆ ಇಳಿಸಿದೆ. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಂ.ಟಿ.ಬಿ. …

Read More »