Breaking News

Daily Archives: ಫೆಬ್ರವರಿ 12, 2021

ರಾಜ್ಯದ ಪ್ರೌಢಶಾಲೆಗಳಲ್ಲಿ 3473 ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿಗೆ ಅಸ್ತು.!

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ರಾಜ್ಯದ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. 3473 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಶಾಲೆಗಳಿಗೆ ಅಗತ್ಯವಿರುವ ಶಿಕ್ಷಕರ ಹುದ್ದೆಗೆ ಶಾಲಾವಾರು ವೃಂದ ಮಂಜೂತಿ ಜಿಲ್ಲಾ ಹಂತದಲ್ಲಿ ನಿಯಮಾನುಸಾರ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ಖಾಲಿ ಹುದ್ದೆಗಳು ಇವೆಯೋ ಅಂತಹ ಸ್ಥಳದಲ್ಲಿ ದೈಹಿಕ ಮತ್ತು ವೃತ್ತಿ …

Read More »

ಮಾ. 1ರಿಂದ ಎಲ್ಲರಿಗೂ ಶಾಲೆ? 6-8 ನೇರ ತರಗತಿ ಆರಂಭ ಇಂದು ನಿರ್ಧಾರ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಎಲ್ಲ ತರಗತಿಗಳು ಮಾ. 1ರಿಂದ ಆರಂಭ ವಾಗುವ ಸಾಧ್ಯತೆ ನಿಚ್ಚಳವಾಗಿದೆ. ಈ ಸಂಬಂಧ ಫೆ. 12ರಂದು ಬೆಂಗಳೂರಿನಲ್ಲಿ ನಡೆಯುವ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗಳ ಟಾಸ್ಕ್ಫೋರ್ಸ್‌ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಇದರೊಂದಿಗೆ 6ರಿಂದ 8ರ ವಿದ್ಯಾರ್ಥಿಗಳಿಗೆ ಮಾ. 1ಕ್ಕಿಂತ ಮುನ್ನವೇ ತರಗತಿ ಆರಂಭಿಸಬೇಕೇ ಬೇಡವೇ ಎಂಬುದರ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಯಿದೆ. ಪದವಿ, ಪದವಿಪೂರ್ವ, ಎಸೆಸೆಲ್ಸಿ ಮತ್ತು 9ನೇ ವಿದ್ಯಾರ್ಥಿಗಳಿಗೆ ಈಗಾಗಲೇ ನೇರ ತರಗತಿ …

Read More »

ತ್ವರಿತವಾಗಿ ಸಾಲ ವಿತರಣೆ ಮಾಡದಿದ್ದರೆ ಕ್ರಮ: ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್‌ ಮತ್ತು ಸ್ವನಿಧಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಣೆ ಮಾಡದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ವಸತಿ ಮತ್ತು ಸ್ವೋದ್ಯೋಗ ಯೋಜನೆಗಳ ಫ‌ಲಾನುಭವಿಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್‌ಗಳು ವಿಳಂಬ ಧೋರಣೆ ತಾಳುತ್ತಿರುವುದು ಸರಿಯಲ್ಲ. ಇದರಿಂದ ಬಡವರಿಗೆ ಸೂರು ಕಲ್ಪಿಸುವ ಉದ್ದೇಶ ಸಕಾಲದಲ್ಲಿ ಅನುಷ್ಠಾನವಾಗದು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ …

Read More »

ಇನ್ನು ಮುಂದೆ ರೈಲಿನ ಮಹಿಳೆಯರ ಕಂಪಾರ್ಟ್ ಮೆಂಟ್ ನಲ್ಲಿ ಸಿಸಿ ಟಿವಿ

ನವ ದೆಹಲಿ : ಇನ್ನು ಮುಂದೆ ರೈಲಿನ ಮಹಿಳೆಯರ ಕಂಪಾರ್ಟ್ ಮೆಂಟ್ ನಲ್ಲಿ ಸಿಸಿ ಟಿವಿಗಳನ್ನು ಅಳವಡಿಸಲಾಗುವುದು ಎಂದು ರೈಲ್ವೇ ಸಚಿವ ಪಿಯೂಶ್ ಗೊಯಲ್ ಹೇಳಿದ್ದಾರೆ.   ಮಹಿಳೆಯರ ಸುರಕ್ಷತಾ ಕ್ರಮವಾಗಿ ರೈಲುಗಳಿಗೆ ಹೈ ಟೆಕ್ ಟಚ್ ನೀಡಲಾಗುತ್ತಿದೆ. ಮಹಿಳೆಯರ ಕಂಪಾರ್ಟ್ ಮೆಂಟ್ ನಲ್ಲಿ ಸಿಸಿ ಟಿವಿ ಅಳವಡಿಸುವುದರ ಜೊತೆಗೆ ಟಾಕ್ ಬ್ಯಾಕ್ ಸಿಸ್ಟಮನ್ನು ಕೂಡ ಹಾಕಲಾಗುತ್ತದೆ. ಇಲ್ಲಿಯ ತನಕ 2391 ಹೊಸ ಬೋಗಿ ಮತ್ತು 668 ರೈಲ್ವೆ ನಿಲ್ದಾಣಗಳಲ್ಲಿ …

Read More »

EPFO ಚಂದಾದಾರರಿಗೆ ಭರ್ಜರಿ ಗುಡ್‌ ನ್ಯೂಸ್: ಮನೆ ಬಾಗಿಲಲ್ಲೇ ಸಿಗಲಿದೆ ಜೀವನ ಪ್ರಮಾಣ ಪತ್ರ

ಜೀವನ ಪ್ರಮಾಣ ಪತ್ರ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು ಫೆಬ್ರವರಿ 28ಕ್ಕೆ ವಿಸ್ತರಿಸಿದ್ದು, ಆ ದಿನವೂ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಪಿಂಚಣಿದಾರರಿಗೆ ಹೆಚ್ಚು ಸಮಯವೇ ಉಳಿದಿಲ್ಲ. ಆದರೆ ಪಿಂಚಣಿದಾರರಿಗೆ ನೆಮ್ಮದಿ ಕೊಡುವ ನಡೆಯೊಂದರಲ್ಲಿ, ಜೀವನ ಪ್ರಮಾಣ ಪತ್ರವನ್ನು (ಡಿಎಲ್‌ಸಿ) ಡಿಜಿಟಲ್‌ ಆಗಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಇಪಿಎಫ್‌ಓ. ಆಧಾರ್‌ ಚಾಲಿತ ಬಯೋಮೆಟ್ರಿಕ್ ಅಥೆಂಟಿಕೇಶನ್‌ ಮೂಲಕ ಡಿಎಲ್‌ಸಿ ಜನರೇಟ್ ಮಾಡಬಹುದಾಗಿದೆ. ಬಯೋಮೆಟ್ರಿಕ್ ಆಧರಿತ ಡಿಜಿಟಲ್ ಸೇವೆಯಾದ ಡಿಎಲ್‌ಸಿ ಬಳಸಿಕೊಂಡು ಕೇಂದ್ರ ಹಾಗೂ ರಾಜ್ಯ …

Read More »

ಮಗುವನ್ನು ಅಪಹರಿಸಿದ್ದ ಖತರನಾಕ್ ಗ್ಯಾಂಗ್ ನ್ನು ನಾಲ್ಕೇ ದಿನದಲ್ಲಿ ಪೊಲೀಸರು ಪತ್ತೆ ಮಾಡಿ ಮಗುವನ್ನು ರಕ್ಷಿಸಿದ್ದಾರೆ. 

ಬೆಳಗಾವಿ – ಅಥಣಿ ತಾಲೂಕಿನ ಸಂಕೋನಟ್ಟಿಯಲ್ಲಿ 2 ವರ್ಷದ ಮಗುವನ್ನು ಅಪಹರಿಸಿದ್ದ ಖತರನಾಕ್ ಗ್ಯಾಂಗ್ ನ್ನು ನಾಲ್ಕೇ ದಿನದಲ್ಲಿ ಪೊಲೀಸರು ಪತ್ತೆ ಮಾಡಿ ಮಗುವನ್ನು ರಕ್ಷಿಸಿದ್ದಾರೆ. ಮಗುವನ್ನು ಅಪಹರಿಸಿದ ಕಾರಣವೇ ವಿಚಿತ್ರವಾಗಿದೆ. ಸಂಕೋನಟ್ಟಿಯ ಸದಾಶಿವ ಪಾರ್ಕ್ ಹತ್ತಿರ ಜೋಪಡಿಪಟ್ಟಿಯಲ್ಲಿ ವಾಸಿಸುತ್ತಿರುವ ಹುಸೇನವ್ವ ಚಿನ್ನಪ್ಪ ಬಹುರೂಪಿ ಅಲಿಯಾಸ ಬಾದಗಿ ಎನ್ನುವವರ 2 ವರ್ಷದ ಮಗು ಕಾಣೆಯಾಗಿರುವ ಕುರಿತು ಫೆ.6ರಂದು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿ …

Read More »