ಪತಂಜಲಿ ಸಂಸ್ಥೆಯು ಕೊರೊನಾ ವೈರಸ್ ಸೋಂಕು ನಿಗ್ರಹಕ್ಕೆಂದು ಹೊರತಂದಿರುವ ಕೊರೊನಿಲ್ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ನೀಡಿದೆ ಎಂಬ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆಯುರ್ವೇದ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ವಿಶ್ವ ಆರೋಗ್ಯ ಸಂಸ್ಥೆ ಕೊರೊನಿಲ್ಗೆ ಮಾನ್ಯತೆ ನೀಡಿದೆ ಎಂದು ವೈರಲ್ ಪೋಸ್ಟ್ ನಲ್ಲಿ ಹೇಳಲಾಗಿದೆ. ಕೋವಿಡ್-19 ತಡೆಯಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೊರೊನಿಲ್ ಸಹಕಾರಿ ಎಂದು ಪತಂಜಲಿ ಸಂಸ್ಥೆ ಹೇಳಿತ್ತು. ಇದಕ್ಕೆ ಆಯುಷ್ …
Read More »Daily Archives: ಫೆಬ್ರವರಿ 22, 2021
ಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ :ಎಚ್ಚರಿಕೆ ನೀಡಿದ ಮಹಾ ಸಿಎಂ
ಮುಂಬೈ : ಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಕರೋನವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ. ಅಗತ್ಯ ಇರುವ ಕಡೆಗಳಲ್ಲಿ ನಾಳೆ ಸಂಜೆಯಿಂದಲೇ ಲಾಕ್ ಡೌನ್ ಮಾಡಲಾಗುವುದು ಎಂದು ತಿಳಿಸಿದರು. ‘ಲಾಕ್ ಡೌನ್ ಇದ್ದಕ್ಕಿದ್ದಂತೆ ಪ್ರಾರಂಭವಾಗುವುದಿಲ್ಲ. ನಾವು ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ತಡೆ ಹಾಕುತ್ತಿಲ್ಲ. ನಾಳೆ ಸಂಜೆಯಿಂದಲೇ ಅಗತ್ಯವಿರುವೆಡೆ ಲಾಕ್ …
Read More »ಗಡಿ, ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಕರ್ನಾಕದ ಜೊತೆ ಕ್ಯಾತೆ
ಬೆಳಗಾವಿ: ಗಡಿ, ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಕರ್ನಾಕದ ಜೊತೆ ಕ್ಯಾತೆ ತೆಗೆಯುತ್ತಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ರಸ್ತೆ ಸಾರಿಗೆ ನಿಗಮ ಕೂಡ ಕರ್ನಾಟಕದ ವಾಯುವ್ಯ ರಸ್ತೆ ಸಾರಿಗೆ ನಿಗಮಕ್ಕೆ ಧಮ್ಕಿ ಹಾಕಿ ಪತ್ರವೊಂದನ್ನು ರವಾನಿಸಿದೆ. ಮಿರಜದ ಶಾಸ್ತ್ರಿ ವೃತ್ತದಲ್ಲಿ ಬಸ್ಸುಗಳ ನಿಲುಗಡೆಯೇ ಇಲ್ಲ. ಅಲ್ಲಿಗೆ ಬರುವ ಕರ್ನಾಟಕದ ” ಪರ್ಮಿಟ್ ಇಲ್ಲದ” ಬಸ್ಸುಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತವೆ. ಇದರಿಂದಾಗಿ ಮಹಾರಾಷ್ಟ್ರದ ರಸ್ತೆ ಸಾರಿಗೆ ನಿಗಮಕ್ಕೆ …
Read More »ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರಕ್ಕೆ ಒತ್ತಾಯ
ಬೆಳಗಾವಿ: ಆರ್ಥಿಕವಾಗಿ ಹಾಗೂ ಶೈಕ್ಷಣೀಕವಾಗಿ ಹಿಂದುಳಿದ ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಅಖಿಲ ಭಾರತ ಜಂಗಮ ಮಹಾಸಭಾದ ರಾಜ್ಯಾಧ್ಯಕ್ಷ ಅರುಣಕುಮಾರ ಜಡಿಮಠ ಎಚ್ಚರಿಕೆ ನೀಡಿದ್ದಾರೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದ್ದ ಅಖಿಲ ಭಾರತ ಜಂಗಮ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕದ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಲವು ದಶಕಗಳಿಂದ …
Read More »