Breaking News

Daily Archives: ಫೆಬ್ರವರಿ 24, 2021

ಸರ್ಕಾರಿ ನೌಕರರ ವಿರುದ್ಧ ದೂರು ನೀಡುವವರು ತಮ್ಮ ಮಾಹಿತಿ ನೀಡಲೇಬೇಕು

ಬೆಂಗಳೂರು,ಫೆ.24- ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರುಗಳು ಕೇಳಿಬಂದಲ್ಲಿ, ದೂರು ನೀಡಿದವರ ಹೆಸರು ಮತ್ತು ಪೂರ್ಣ ವಿಳಾಸವನ್ನೊಳಗೊಂಡ ದಾಖಲೆಗಳಿದ್ದರೆ ಮಾತ್ರ ತನಿಖೆ ನಡೆಸಲು ಅನುವಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ಕೊಟ್ಟಿದ್ದಾರೆ. ದೂರು ನೀಡುವ ವ್ಯಕ್ತಿಗಳ ಪೂರ್ಣ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಂಡು ಪೂರಕ ದಾಖಲೆಗಳನ್ನು ಒದಗಿಸಿದ ನಂತರ ತನಿಖೆಗೆ ಮುಂದಾಗಬೇಕು. ಈ ಬಗ್ಗೆ ಸುತ್ತೋಲೆ ಹೊರಡಿಸುವಂತೆ ಸೂಚಿಸಿದ್ದಾರೆ. ಈ ಸಂಬಂಧ …

Read More »

ಶಾರದಾ ಚಿಟ್ ಫಂಡ್ ಹಗರಣ: ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ವಿಚಾರಣೆ 2 ವಾರ ಮುಂದೂಡಿದ ಸುಪ್ರೀಂ ಕೋರ್ಟ್

ದೆಹಲಿ: ಇಡೀ ದೇಶದ ಗಮನವನ್ನು ಸೆಳೆದಿದ್ದ ಶಾರದಾ ಚಿಟ್ ಫಂಡ್ ಹಗರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೋಲಿಸ್ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರೆ ಆರೋಪಿಗಳ ವಿಚಾರಣೆಯನ್ನು ಎರಡು ವಾರ ಕಾಲ ಮುಂದೂಡಿದೆ. ಸಿಬಿಐ ಸಲ್ಲಿಸಿದ್ದ ಮನವಿ ಆಧರಿಸಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸರ್ವೋಚ್ಛ ನ್ಯಾಯಾಲಯ ಈ ಹಗರಣದ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ. ಅತಿ ಹೆಚ್ಚು ಬಡ್ಡಿ ದರ ನೀಡುವ ಆಮಿಷವೊಡ್ಡಿ ನಡೆಯುತ್ತಿದ್ದ ಹಗರಣ 2013 …

Read More »

ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದು, ಮಂದಿರ ನಿರ್ಮಾಣಕ್ಕೆ 2 ಲಕ್ಷ ರು. ನೀಡಿದ್ದೇನೆ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ರಮೇಶ್ ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದೇವೆ. ಮಂತ್ರಿ ಮಾಡುವಂತೆ ನಾವೇ ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದೇವೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಗೆಲ್ಲಿಸಿದ್ದು ನಾನೇ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದ್ವೇಷದ ರಾಜಕಾರಣ ಯಾರಿಗೂ ಶೋಭೆ ತರುವುದಿಲ್ಲ. ಅಭಿವೃದ್ಧಿ ಪರ ರಾಜಕಾರಣ ಬೆಂಬಲಿಸಬೇಕು. ದೇವರು ಅವರಿಗೆ ಒಳ್ಳೆಯದನ್ನ ಮಾಡಲಿ ಎಂದು ಹೇಳಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್​ನ ಬಸ್ ನಿಲ್ದಾಣದಲ್ಲಿ ಹುಡುಕಬೇಕಾಗುತ್ತೆ ಎಂಬ ರಮೇಶ್ …

Read More »

ʼವರ್ಕ್‌ ಫ್ರಮ್‌ ಹೋಂʼ ಬಿಟ್ಟು ಕಛೇರಿಗೆ ಹೋಗಲು ಯುವತಿಯ ತಕರಾರುನಾನು ಮನೆಯಲ್ಲಿ ಪೈಜಾಮಾ ಧರಿಸಿ ಕೆಲಸ ಮಾಡೋದ್ರಲ್ಲೇ ಆರಾಮಾಗಿದ್ದೆ. ಇನ್ನು ಜೀನ್ಸ್ ಧರಿಸಬೇಕೆ

ಕಳೆದ ವರ್ಷ ಕೊರೊನಾ ವೈರಸ್ ​ನ್ನು ನಿಯಂತ್ರಣ ಮಾಡಲು ಲಾಕ್​ಡೌನ್​ ಹೇರಿಕೆ ಮಾಡಿದ ಬಳಿಕ ʼವರ್ಕ್​ ಫ್ರಮ್​ ಹೋಂʼಗೆ ಸೂಚನೆ ನೀಡಲಾಗಿತ್ತು. ಇದಾದ ಬಳಿಕ ಸರಿ ಸುಮಾರು ಒಂದು ವರ್ಷಗಳ ಕಾಲ ಅನೇಕ ಮಂದಿ ವರ್ಕಿಂಗ್​ ಫ್ರಮ್ ಹೋಂ ಮೂಲಕವೇ ಆಫೀಸ್​ ಕೆಲಸ ಮಾಡಿದ್ದಾರೆ. ಆದರೆ ಈಗ ಕೊರೊನಾ ವಿರುದ್ಧ ಲಸಿಕೆ ಪ್ರಯೋಗ ಶುರುವಾಗಿದ್ದು, ಅನೇಕ ಕಂಪನಿಗಳು ತಮ್ಮ ಸಿಬ್ಬಂದಿಯನ್ನ ವಾಪಸ್​ ಕರೆಯಿಸಿಕೊಳ್ತಿವೆ, ಆದರೆ ಇಷ್ಟು ದಿನ ಮನೆಯಲ್ಲೇ ಹಾಸಿಗೆಯ …

Read More »

ಅಪ್ಪ ಮಗ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡ್ತಿದ್ದಾರೆ : ಯತ್ನಾಳ್

ನವದೆಹಲಿ : ರವಿವಾರ ದೆಹಲಿಗೆ ತೆರಳಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅಲ್ಲಿಂದಲೇ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇಂದು ( ಫೆ.23) ತಮ್ಮ ಫೇಸ್ ಬುಕ್ ನಲ್ಲಿ ದೆಹಲಿ ಪ್ರವಾಸದ ಕಾರಣ ಹೇಳಿಕೊಂಡಿರುವ ಯತ್ನಾಳ್, ಮಾಧ್ಯಮಗಳಲ್ಲಿ ತಂದೆ ಮತ್ತು ಮಗ ಸುಳ್ಳು ಸುದ್ದಿ ಮಾಡಿಸಿ, ಬಲ್ಲ ಮೂಲಗಳಿಂದ ಎಂದು ಹೇಳಿಸಿ ಮತ್ತು ಬರೆಸಿ ರಾಜ್ಯದ ಜನರಲ್ಲಿ ಪಕ್ಷದ …

Read More »

ಅಧಿಕಾರಿಗಳ ಕಿರುಕುಳ : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪೌರಕಾರ್ಮಿಕ

ಮಂಡ್ಯ: ಬಲವಂತವಾಗಿ ಮ್ಯಾನ್ ಹೋಲ್ ಗಿಳಿಸಿ ಮಲ ಸ್ವಚ್ಛಗೊಳಿಸಿದ್ದ ಪ್ರಕರಣದಲ್ಲಿ ಬಲಿಪಶುವಾಗಿದ್ದ ಪೌರಕಾರ್ಮಿಕ ನಾರಾಯಣ ಪುರಸಭೆ ಅಧಿಕಾರಿಗಳ ಕಿರುಕುಳ ತಾಳಲಾರದೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಪೌರಕಾರ್ಮಿಕ ನಾರಾಯಣನನ್ನು ಮದ್ದೂರು ಪುರಸಭೆಯ ಮುಖ್ಯಾಧಿಕಾರಿ ಮುರುಗೇಶ್, ಆರೋಗ್ಯ ನಿರೀಕ್ಷಕ ಝಾಸಿಂಖಾನ್, ಪುರಸಭೆ ಅಧ್ಯಕ್ಷ ಸುರೇಶ್ ಕುಮಾರ್ ಬಲವಂತವಾಗಿ ಮ್ಯಾನ್ ಹೋಲ್‌ಗಿಳಿಸಿ ಬರಿಗೈಯ್ಯಲ್ಲಿ ಮಲ ಸ್ವಚ್ಛಗೊಳಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ಮಾದ್ಯಮಗಳಲ್ಲಿ ಸೋರಿಕೆಯಾಗಲು …

Read More »

ಅವಧಿ ಮೀರಿದ ಔಷಧ ಮಾರಾಟ : ಇಬ್ಬರ ಬಂಧನ, 4 ಲಕ್ಷ ‌ಮೌಲ್ಯದ ಔಷಧ ವಶ

ವಿಜಯಪುರ : ಅವಧಿ ಮೀರಿದ ಕಾಫ್ ಸಿರಪ್ ಔಷಧಿ ಬಾಟಲಿಯ ದಿನಾಂಕ ತಿದ್ದಿ, ಅಕ್ರಮವಾಗಿ ಮಾರಾಟಕ್ಕೆ ಮುಂದಾದ ಇಬ್ಬರನ್ನು ಬಂಧಿಸಿರುವ ಜಿಲ್ಲೆಯ ಅಪರಾಧ ವಿಭಾಗದ ವಿಶೇಷ ದಳದ ಪೊಲೀಸರು 4 ಲಕ್ಷ ರೂ. ಮೌಲ್ಯದ ಔಷಧಿಯನ್ನು ವಶಕ್ಕೆ ಪಡೆದಿದ್ದಾರೆ. ನಗರದ ಪುಲಕೇಶಿ ನಗರದ ನಿರ್ಜನ ಪ್ರದೇಶದಲ್ಲಿ ಅವಧಿ ಮೀರಿದ ಔಷಧಿ ಮಾರಾಟದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಬಾಟಲ್ ಗಳನ್ನು ಸ್ಯಾನಿಟೈಸರ್ ಬಳಸಿ ಅವಧಿ ಮೀರಿದ ದಿನಾಂಕ ಅಳಿಸಿ …

Read More »

ಕೋವಿಡ್ ನೆಗೆಟಿವ್ ವರದಿ ಇಲ್ಲದೇ ಬರುವ ಜನರು ಪರದಾಡುವಂತೆ ಆಗಿದೆ.

ಕಲಬುರಗಿ: ಕೋವಿಡ್ ಸೋಂಕಿನ ಎರಡನೇ ಅಲೆಯ ನಿಯಂತ್ರಣಕ್ಕಾಗಿ ರಾಜ್ಯದ ಮಹಾರಾಷ್ಟ್ರ ಗಡಿ ಭಾಗದಲ್ಲಿ ಮಂಗಳವಾರ ಬಿಗಿ ಕ್ರಮ ವಹಿಸಲಾಗಿದ್ದು, ಕೋವಿಡ್ ನೆಗೆಟಿವ್ ವರದಿ ಇಲ್ಲದೇ ಬರುವ ಜನರು ಪರದಾಡುವಂತೆ ಆಗಿದೆ. ತಮ್ಮನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದ ಮಹಿಳೆಯೊಬ್ಬರಿಗೆ ಗಡಿ ಪ್ರದೇಶಿಸಲು ಅವಕಾಶ ನೀಡದೆ ತಡೆದ ಘಟನೆ ಜಿಲ್ಲೆಯ ಬಳ್ಳೂರ್ಗಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಮಹಾರಾಷ್ಟ್ರದಿಂದ ಅಫಜಲಪುರ ತಾಲೂಕಿನ ಬಳ್ಳೂರ್ಗಿ ಮಾರ್ಗವಾಗಿ ಮಹಿಳೆಯೊಬ್ಬರು, ವಿಜಯಪುರ ಜಿಲ್ಲೆಯ ಮೋರಟಗಿ ಗ್ರಾಮದಲ್ಲಿ ರಸ್ತೆ …

Read More »

ಆಸ್ಪತ್ರೆಯಲ್ಲಿ ಯಾರೂ ಇಲ್ಲದ ವೇಳೆ ಮೈಮುಟ್ಟಿ ಕಿರುಕುಳ

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಗುತ್ತಿಗೆ ಕಾರ್ಮಿಕರಾಗಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿರುವ 33 ವರ್ಷದ ಮಹಿಳೆಗೆ ಆಸ್ಪತ್ರೆಯಲ್ಲಿ ಎಕ್ಸರೇ ಟೆಕ್ನಿಷಿಯನ್ ಆಗಿರುವ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದೆ. ಹಾನಗಲ್ ಠಾಣೆ ಪೊಲೀಸರಿಗೆ ದೂರು ನೀಡಲಾಗಿದ್ದು, ಆಸ್ಪತ್ರೆಯಲ್ಲಿ ಯಾರೂ ಇಲ್ಲದ ವೇಳೆ ಮೈಮುಟ್ಟಿ ಕಿರುಕುಳ ನೀಡಲಾಗಿದೆ ಎಂದು ಹೇಳಲಾಗಿದೆ. ಮೊಬೈಲ್ನಲ್ಲಿ ಆತ …

Read More »

ಚಿಕ್ಕೋಡಿಯ ಈ ಆಸ್ಪತ್ರೆಯಲ್ಲಿ ಹಿತ್ತಲ ಗಿಡ ‘ಮದ್ದು’

ಚಿಕ್ಕೋಡಿ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಆಯುಷ್ ವೈದ್ಯಾಧಿಕಾರಿ ಒಬ್ಬರು ರೋಗಿಗಳ ಆರೋಗ್ಯ ಸೇವೆಯೊಂದಿಗೆ ಆಸ್ಪತ್ರೆ ಆವರಣದಲ್ಲಿ ಆಯುರ್ವೇದ ಸಸ್ಯೋದ್ಯಾನ ಅಭಿವೃದ್ಧಿಪಡಿಸಿ, ಆಯುರ್ವೇದ ಔಷಧಿ ಕುರಿತು ಜನಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ವೈದ್ಯಾಧಿಕಾರಿಯಾಗಿರುವ ಡಾ.ಲಕ್ಷ್ಮೀಕಾಂತ ಕಡ್ಲೆಪ್ಪಗೋಳ ಅವರು ಆಸ್ಪತ್ರೆ ಆವರಣ ಖಾಲಿ ಜಾಗದಲ್ಲಿ ಆಯುರ್ವೇದದ ಸಸಿಗಳನ್ನು ಬೆಳೆಸಿದ್ದಾರೆ. ಡಾ.ಕಡ್ಲೆಪ್ಪಗೋಳ ಅವರು ಸರ್ಕಾರ ಜಾರಿಗೊಳಿಸಿದ್ದ ‘ಕಾಯಕಲ್ಪ’ ಯೋಜನೆಯನ್ನು ಬಳಸಿಕೊಂಡು ಆಸ್ಪತ್ರೆಯ ಆವರಣದ ಮೂಲೆಯೊಂದರಲ್ಲಿ ಪಾಳು ಬಿದ್ದಿದ್ದ …

Read More »