Breaking News

Daily Archives: ಫೆಬ್ರವರಿ 25, 2021

ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!

ಗೋಕಾಕ್: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಫೆ.೨೭ ರಿಂದ ಮಾ.೨ ರ ವರಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.೨೭ ರಂದು ೧೦ ಗಂಟೆಗೆ ನಗರದ ಎನ್‌ಇಎಸ್ ಶಾಲಾ ಆವರಣದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು, ಸಂಜೆ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ.೨೮ ರಂದು ಗೋಕಾಕ ತಾಲೂಕಿನ ಜಮನಾಳ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಹತ್ತಿರ ಆಣೆಕಟ್ಟು ಸ್ಥಳ …

Read More »

ಮಠದ ಆಸ್ತಿ ಕಬಳಿಸಲು ಹುನ್ನಾರ: ವಿದ್ಯಾರಣ್ಯ ಭಾರತೀ ಸ್ವಾಮೀಜಿ ಆರೋಪ

ಚಿತ್ರದುರ್ಗ: ಶಿವಮೊಗ್ಗ ಜಿಲ್ಲೆಯ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನಕ್ಕೆ ಸೇರಿದ ಆಸ್ತಿಯನ್ನು ಕಬಳಿಸಲು ಗುಂಪೊಂದು ಹುನ್ನಾರ ನಡೆಸಿದೆ ಎಂದು ಮಹಾಸಂಸ್ಥಾನದ ಪೀಠಾಧಿಪತಿ ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಸ್ವಾಮೀಜಿ ಆರೋಪ ಮಾಡಿದರು. ‘ಈಚೆಗೆ ಮಠದೊಳಗೆ ಏಕಾಏಕಿ ನುಗ್ಗಿದ ಗುಂಪೊಂದು ಶಿಷ್ಯರ ಮೇಲೆ ಹಲ್ಲೆ ಮಾಡಿದೆ. ಈ ಕುರಿತು ಪ್ರಕರಣ ದಾಖಲಿಸಿದ್ದೇವೆ. ಅದೇ ಊರಿನವರೇ ಇದರಲ್ಲಿ ಭಾಗಿಯಾಗಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ‘ಮಹಾಸಂಸ್ಥಾನಕ್ಕೆ ಐತಿಹಾಸಿಕ ಹಿನ್ನೆಲೆ ಇದೆ. ಬೆಂಗಳೂರು ಸೇರಿ ರಾಜ್ಯದ …

Read More »

ಒಡಿಶಾದಲ್ಲಿ 45 ಕೆ.ಜಿ. ಆನೆ ದಂತ ವಶ, ಇಬ್ಬರ ಬಂಧನ

ಬಾರಿಪಾದ (ಒಡಿಶಾ), ಫೆ.25 (ಪಿಟಿಐ)- ರಾಜ್ಯದ ಮಯೂರ್‍ಭಾನ್ಜ ಜಿಲ್ಲೆಯಲ್ಲಿ 45 ಕಿಲೋ ಗ್ರಾಂ ತೂಕವುಳ್ಳ ಎಂಟು ಆನೆ ದಂತಗಳನ್ನು ವಶಪಡಿಸಿಕೊಂಡು, ಇದಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಸಲಾಗಿದೆ ಎಂದು ಒಡಿಶಾ ಅರಣ್ಯ ಇಲಾಖೆ ಅಕಾರಿಗಳು ತಿಳಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಉದಾಲಾ ವಲಯದ ಅರಣ್ಯ ಸಿಬ್ಬಂದಿ ಸಿಮಿಲ್ಪಾಲ್ ರಾಷ್ಟ್ರೀಯ ಉದ್ಯಾನವನ ತಪ್ಪಲಿನ ಅಂಗರ್ಪಾದ ಗ್ರಾಮಕ್ಕೆ ಭೇಟಿ ನೀಡಿ, ಆನೆ ದಂತ ಖರೀದಿದಾರರಂತೆ ನಟಿಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ದಂತಗಳನ್ನು ವಶಕ್ಕೆ …

Read More »

ಕಾಡಿನಲ್ಲಿ ಕಳೆದುಹೋಗಿ 35 ಕೆಜಿ ಉಣ್ಣೆ ಬೆಳೆಸಿಕೊಂಡಿದ್ದ ಕುರಿ: ವಿಡಿಯೋ ಸಖತ್ ವೈರಲ್!

ಆಸ್ಟ್ರೇಲಿಯಾದ ಕಾಡೊಂದರಲ್ಲಿ ಸಿಕ್ಕಿರುವ ವಯಸ್ಸಾದ ಕುರಿಯೊಂದನ್ನು ರಕ್ಷಿಸಲಾಗಿದ್ದು, ಅದರ ಮೈಮೇಲೆ ಬೆಳೆದಿದ್ದ ಸುಮಾರು 35 ಕೆಜಿಯಷ್ಟು ಉಣ್ಣೆಯನ್ನು ತೆಗೆದು ಅದರ ದೇಹದ ಭಾರವನ್ನು ಇಳಿಸಲಾಗಿದೆ. ಈ ಕುರಿಗೆ ‘ಬರಾಕ್’ ಎಂದು ಹೆಸರು ಇಡಲಾಗಿದೆ. ಹೌದು, ಕುರಿಗಳು ಉಣ್ಣೆಗೆ ಪ್ರಸಿದ್ಧಿ. ಆದರೆ ಈ ಕುರಿ ಮೈಮೇಲೆ ಬೆಳೆದಿದ್ದ ಉಣ್ಣೆಯನ್ನು ನೋಡಿ ಸ್ವತಃ ಅದನ್ನು ರಕ್ಷಿಸಿದ ಜನರೇ ಬೆಚ್ಚಿಬಿದ್ದಿದ್ದಾರೆ. ತನ್ನ ಮೈಮೇಲೆಲ್ಲಾ ಉಣ್ಣೆ ಬೆಳೆಸಿಕೊಂಡಿರುವ ಈ ಕುರಿ ನೋಡಲು ಬೇರೆ ಪ್ರಾಣಿ ರೀತಿ …

Read More »

ಅರಣ್ಯ ಸಿಬ್ಬಂದಿಗೆ ಇಂಧನ ಭತ್ಯೆ ಅಗತ್ಯ: ಲಿಂಬಾವಳಿ

ಬೆಂಗಳೂರು: ಅರಣ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ ಅರಣ್ಯ ಇಲಾಖೆಯ ಕೆಳಹಂತದ ಸಿಬ್ಬಂದಿಗೆ ಇಂಧನ ಭತ್ಯೆ ನೀಡಬೇಕಾದ ಅಗತ್ಯವಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಅರಣ್ಯ ಭವನದಲ್ಲಿ ಬುಧವಾರ ನಡೆದ ಹಿರಿಯ ಐಎಫ್‌ಎಸ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಇಲಾಖೆಯ ಕೆಳಹಂತದ ಸಿಬ್ಬಂದಿಗೆ ವಾಹನ ಸೌಲಭ್ಯ ನೀಡಿಲ್ಲ. ಅರಣ್ಯ ರಕ್ಷಣೆಗಾಗಿ ಅವರು ಸ್ವಂತ ವಾಹನವನ್ನೇ ಬಳಕೆ ಮಾಡುತ್ತಿದ್ದಾರೆ. ಅಂತಹ ಸಿಬ್ಬಂದಿಗೆ ಇಂಧನ ಭತ್ಯೆಯನ್ನಾದರೂ ನೀಡಬೇಕಿದೆ’ ಎಂದರು. ಕಾಡು ಪ್ರಾಣಿಗಳ …

Read More »

ಮೈಸೂರು ಮೇಯರ್‌ ಆಯ್ಕೆ ಹಿಂದೆ ಚಾಮುಂಡೇಶ್ವರಿ ಪರ್ಯಾಯ ನಾಯಕತ್ವದ ಲೆಕ್ಕಾಚಾರ?

ಮೈಸೂರು: ಮೇಯರ್‌ ಸ್ಥಾನಕ್ಕೆ ಜೆಡಿಎಸ್‌ನಲ್ಲಿ ಆರು ಜನರು ಆಕಾಂಕ್ಷಿಗಳಿದ್ದರೂ; ರುಕ್ಮಿಣಿ ಅವರನ್ನೇ ಕುಮಾರಸ್ವಾಮಿ ಆಯ್ಕೆ ಮಾಡಿದ್ದರ ಹಿಂದೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಬಲವರ್ಧನೆಗೊಳಿಸುವ ತಂತ್ರಗಾರಿಕೆ ಇದೆ ಎನ್ನಲಾಗಿದೆ. ರುಕ್ಮಿಣಿ ಪತಿ ಮಾದೇಗೌಡ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀರಾಮಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಜೆಡಿಎಸ್‌ ಸದಸ್ಯರು. ಶಾಸಕ ಜಿ.ಟಿ.ದೇವೇಗೌಡ, ಜಿಲ್ಲಾ ಪಂಚಾಯಿತಿ ಚುನಾವಣೆ ಸಂದರ್ಭ ಮಾದೇಗೌಡರಿಗೆ ಟಿಕೆಟ್‌ ನಿರಾಕರಿಸಿದ್ದರು. ಮಾದೇಗೌಡ, ಕುಮಾರಸ್ವಾಮಿ ಬಳಿಗೆ ತೆರಳಿ ಮಾತುಕತೆ ನಡೆಸಿ ಪಕ್ಷದ ‘ಬಿ’ …

Read More »

ಖಾಸಗಿ ಶಾಲೆ ಮಾಲೀಕ ಆತ್ಮಹತ್ಯೆ! ಸಾವಿಗೂ ಮುನ್ನ ಬರೆದ ಡೆತ್​ನೋಟ್​ನಲ್ಲಿದೆ ನೋವು

ಕಲಬುರಗಿ: ವಿಷ ಸೇವಿಸಿ ಖಾಸಗಿ ಶಾಲೆಯ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಕಲಬುರಗಿಯ ವಿವೇಕಾನಂದ್ ನಗರದ ನಿವಾಸಿ ಶಂಕರ್ ಬಿರಾದರ್(43) ಮೃತ ದುರ್ದೈವಿ. ಸೇಡಂ ತಾಲೂಕಿನಲ್ಲಿ ಖಾಸಗಿ ಶಾಲೆ ಹೊಂದಿರುವ ಶಂಕರ್ ಬಿರಾದರ್, ಡೆತ್​ನೋಟ್ ಬರೆದಿಟ್ಟು ಮನೆಯಲ್ಲೇ ವಿಷ ಕುಡಿದು ಸತ್ತಿದ್ದಾರೆ. ಸಾಲಭಾದೆ ಮತ್ತು ಸಾಲಗಾರರ ಕಿರುಳಕ್ಕೆ ಬೇಸತ್ತ ಶಂಕರ್ ಬಿರಾದಾರ್ ಸಾವಿನ ಮನೆಯ ಕದ ತಟ್ಟಿದ್ದಾರೆ. ಖಾಸಗಿ ಶಾಲೆ ನಡೆಸಲು ಸಾಲ ಮಾಡಿಕೊಂಡಿದ್ದರು. ಸಾಲ ಪಾವತಿಸಿಲ್ಲ ಎಂದು …

Read More »

ಬೋಧನಾ ಶುಲ್ಕ ಕಡಿತ: ಹೈಕೋರ್ಟ್‌ ನೋಟಿಸ್

ಬೆಂಗಳೂರು: ಬೋಧನಾ ಶುಲ್ಕ ಶೇ 70ರಷ್ಟು ಮಾತ್ರ ಪಡೆಯಬೇಕು ಎಂದು ಸರ್ಕಾರ ಹೊರಡಿಸಿದ್ದ ಸುತ್ತೋಲೆ ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ‘ಶೇ 70ರಷ್ಟು ಶುಲ್ಕ ಸಂಗ್ರಹಿಸಬೇಕು ಮತ್ತು ಶುಲ್ಕದ ವಿವರ ಒಳಗೊಂಡ ಪಟ್ಟಿ ಪ್ರಕಟಿಸಬೇಕು. ಲೆಕ್ಕಪರಿಶೋಧನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸುತ್ತೋಲೆ ಹೊರಡಿಸಿ ಸರಿಯಲ್ಲ’ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ನಿರ್ವಹಣಾ ಒಕ್ಕೂಟ …

Read More »

ಭಾರತೀಯ ರೈಲ್ವೆಯಿಂದ ಹೊಸ ಸೇವೆ ಆರಂಭ: ಪ್ರಯಾಣಿಕರಿಗೆ ʼಹೈಟೆಕ್ ಅನುಭವʼ ನೀಡಲು ʼವಿಸ್ಟಾಡೋಮ್ ಬೋಗಿʼಗಳ ಪರಿಚಯ

ನವದೆಹಲಿ: ಭಾರತೀಯ ರೈಲ್ವೆ ತನ್ನ ಪ್ರಯಾಣಿಕರ ಪ್ರಯಾಣದ ಅನುಭವವನ್ನ ಸ್ಮರಣೀಯ ಮತ್ತು ಆರಾಮದಾಯಕ ಆಗಿಸೋಕೆ ಕಾಲಕಾಲಕ್ಕೆ ಹೊಸ ಸೌಲಭ್ಯಗಳನ್ನ ತರುತ್ತಿದೆ. ಸಧ್ಯ ರೈಲ್ವೇ ವಿಸ್ಟಾಡೋಮ್ ಬೋಗಿಗಳನ್ನ ಪರಿಚಯಿಸಿದ್ದು, ಇದು ಯುರೋಪಿಯನ್ ಶೈಲಿಯಲ್ಲಿ ತಯಾರಾಗಿದೆ. ಇದರಲ್ಲಿ ಪ್ರಯಾಣಿಕರು ಆರಾಮದಾಯಕವಷ್ಟೇ ಅಲ್ಲ ಹೈಟೆಕ್ ಪ್ರಯಾಣವನ್ನೂ ಆನಂದಿಸ್ಬೋದು. ಹೊಸ ವಿಸ್ಟಾಡೊಮ್ʼನ್ನ ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ನಿರ್ಮಿಸಿದ್ದು, ವಿಸ್ಟಾಡೊಮ್ ಪ್ರವಾಸಿ ತರಬೇತುದಾರರು ಯುರೋಪಿಯನ್ ಶೈಲಿಯ ತರಬೇತುದಾರರಾಗಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ತಾಂತ್ರಿಕವಾಗಿ ಸುಧಾರಿತ ಸೌಲಭ್ಯಗಳನ್ನ …

Read More »

ಧಾರವಾಡ; ಮಾಸ್ಕ್ ಹಾಕದಿದ್ದರೆ ಮತ್ತೆ ದಂಡ ಕಟ್ಟಲು ಸಿದ್ಧರಾಗಿ

ಧಾರವಾಡ, ಫೆಬ್ರವರಿ 25: “ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಿಂದ ರಸ್ತೆ, ರೈಲು ಮತ್ತು ವಿಮಾನದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ವರದಿಯನ್ನು ಹೊಂದಿರಬೇಕೆಂದು” ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು. ಕೊರೊನಾ ನಿಯಂತ್ರಣ, ಮಾಸ್ಕ್ ಧರಿಸದವರಿಂದ ದಂಡ ಸಂಗ್ರಹ ಮತ್ತು ಮದುವೆ, ಸಭೆ, ಸಮಾರಂಭಗಳಿಗೆ ಮಾರ್ಷಲ್‍ಗಳ ನೇಮಕಾತಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿನಿತ್ಯ ಮಹಾರಾಷ್ಟ್ರ ರಾಜ್ಯದಿಂದ ಬಸ್, ರೈಲು, ಲಾರಿ ಮೂಲಕ ಹಾಗೂ …

Read More »